Homeಮುಖಪುಟಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: 'ಪ್ರಜಾಪ್ರಭುತ್ವದ ಅಪಹಾಸ್ಯ' ಎಂದ ವಿಪಕ್ಷಗಳು

ಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: ‘ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದ ವಿಪಕ್ಷಗಳು

- Advertisement -
- Advertisement -

ಬಿಜೆಪಿ ಮಾಜಿ ವಕ್ತಾರೆ ವಕೀಲೆ ಆರತಿ ಸಾಥೆ ಅವರನ್ನು ಬಾಂಬೆ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸನ್ನು ಮಹಾರಾಷ್ಟ್ರದ ವಿರೋಧ ಪಕ್ಷಗಳು ಮಂಗಳವಾರ (ಆ.5) ಟೀಕಿಸಿವೆ.

ಈ ಬೆಳವಣಿಗೆಯನ್ನು ‘ನಾಚಿಕೆಗೇಡಿನ ಪರಮಾವಧಿ’ ಎಂದು ಬಣ್ಣಿಸಿರುವ ಕಾಂಗ್ರೆಸ್ ಮಹಾರಾಷ್ಟ್ರ ಘಟಕ, ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿದೆ ಎಂದು ಹೇಳಿದೆ.

ಸಾಥೆ ಅವರನ್ನು ಫೆಬ್ರವರಿ 2023ರಲ್ಲಿ ಮಹಾರಾಷ್ಟ್ರ ಬಿಜೆಪಿಯ ವಕ್ತಾರರನ್ನಾಗಿ ನೇಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅವರು 2024ರ ಜನವರಿಯಲ್ಲಿ ತಮ್ಮ ಹುದ್ದೆಗೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 28ರಂದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಆರತಿ ಸಾಥೆ, ಅಜಿತ್ ಕಡೆತಂಕರ್ ಮತ್ತು ಸುಶಿಲ್ ಘೋಡೇಶ್ವರ್ ಅವರನ್ನು ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಅನುಮೋದಿಸಿದೆ. ಈ ಕುರಿತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದೆ. ಸಚಿವಾಲಯ ಇದನ್ನು ಪ್ರಧಾನ ಮಂತ್ರಿ ಮುಂದೆ ಇಡುತ್ತದೆ, ಅವರು ನೇಮಕಾತಿಯ ಬಗ್ಗೆ ರಾಷ್ಟ್ರಪತಿಗೆ ಸಲಹೆ ನೀಡುತ್ತಾರೆ.

ಸಾಥೆ ಅವರ ಹೆಸರು ಶಿಫಾರಸ್ಸು ಮಾಡಿರುವ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿರುವ ಎನ್‌ಸಿಪಿ(ಎಸ್‌ಪಿ) ಶಾಸಕ ರೋಹಿತ್ ಪವಾರ್, “ಹೈಕೋರ್ಟ್ ನ್ಯಾಯಾಧೀಶರಾಗುವ ಮೊದಲು ಸಾಥೆ ಬಿಜೆಪಿಗೆ ರಾಜೀನಾಮೆ ನೀಡುವ ಮೂಲಕ ಕಾನೂನು ಅವಶ್ಯಕತೆಗಳನ್ನು ಪೂರೈಸಿರಬಹುದು. ಆದರೆ, ನ್ಯಾಯಾಂಗದ ಸದಸ್ಯರಾಗಿ ಹಿಂದುತ್ವ ಪಕ್ಷದ ವಿರುದ್ಧ ಅವರು ಹೇಗೆ ತೀರ್ಪು ನೀಡಲು ಸಾಧ್ಯ ಎಂಬುದು ಪ್ರಶ್ನಾರ್ಹವಾಗಿದೆ” ಎಂದಿದ್ದಾರೆ.

ಈ ವಿಷಯದ ಬಗ್ಗೆ ನಮ್ಮ ಪಕ್ಷವು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಸಂಪರ್ಕಿಸಿದೆ ಮತ್ತು ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಪವಾರ್ ಹೇಳಿದ್ದಾರೆ.

ಈ ನಡುವೆ, ಬಿಜೆಪಿ ಮಾಧ್ಯಮ ವಿಭಾಗದ ಉಸ್ತುವಾರಿ ನವನಾಥ್ ಬಾನ್ ಅವರು ಸುಳ್ಳು ಆರೋಪಗಳನ್ನು ಮಾಡಬೇಡಿ, ಮಾತನಾಡುವ ಮೊದಲು ಸತ್ಯ ತಿಳಿದುಕೊಳ್ಳಿ ಎಂದು ರೋಹಿತ್ ಪವಾರ್ ಅವರಿಗೆ ಹೇಳಿದ್ದಾರೆ. ಆರತಿ ಸಾಥೆ ಜನವರಿ 6, 2024 ರಂದು ಬಿಜೆಪಿ ವಕ್ತಾರೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದಿದ್ದಾರೆ.

20 ವರ್ಷಗಳಿಂದ ವಕೀಲರಾಗಿರುವ ಸಾಥೆ, ಪ್ರಾಥಮಿಕವಾಗಿ ತೆರಿಗೆ ವಿವಾದಗಳು, ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ, ಭದ್ರತಾ ಮೇಲ್ಮನವಿ ನ್ಯಾಯಮಂಡಳಿ, ಕಸ್ಟಮ್ಸ್, ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಮತ್ತು ವೈವಾಹಿಕ ವಿವಾದಗಳ ಮುಂದಿರುವ ಪ್ರಕರಣಗಳನ್ನು ನಿರ್ವಹಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಕೆಯ ತಂದೆ ಅರುಣ್ ಸಾಥೆ ಕೂಡ ವಕೀಲರಾಗಿದ್ದು, ಬಿಜೆಪಿ ಮತ್ತು ಅದರ ಮಾತೃ ಸಂಸ್ಥೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಜೊತೆ ಸಂಬಂಧ ಹೊಂದಿದ್ದಾರೆ. ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...