Homeಮುಖಪುಟಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: 'ಪ್ರಜಾಪ್ರಭುತ್ವದ ಅಪಹಾಸ್ಯ' ಎಂದ ವಿಪಕ್ಷಗಳು

ಬಿಜೆಪಿ ಮಾಜಿ ವಕ್ತಾರೆ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ: ‘ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದ ವಿಪಕ್ಷಗಳು

- Advertisement -
- Advertisement -

ಬಿಜೆಪಿ ಮಾಜಿ ವಕ್ತಾರೆ ವಕೀಲೆ ಆರತಿ ಸಾಥೆ ಅವರನ್ನು ಬಾಂಬೆ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸನ್ನು ಮಹಾರಾಷ್ಟ್ರದ ವಿರೋಧ ಪಕ್ಷಗಳು ಮಂಗಳವಾರ (ಆ.5) ಟೀಕಿಸಿವೆ.

ಈ ಬೆಳವಣಿಗೆಯನ್ನು ‘ನಾಚಿಕೆಗೇಡಿನ ಪರಮಾವಧಿ’ ಎಂದು ಬಣ್ಣಿಸಿರುವ ಕಾಂಗ್ರೆಸ್ ಮಹಾರಾಷ್ಟ್ರ ಘಟಕ, ಬಿಜೆಪಿ ಪ್ರಜಾಪ್ರಭುತ್ವವನ್ನು ಅಣಕಿಸಿದೆ ಎಂದು ಹೇಳಿದೆ.

ಸಾಥೆ ಅವರನ್ನು ಫೆಬ್ರವರಿ 2023ರಲ್ಲಿ ಮಹಾರಾಷ್ಟ್ರ ಬಿಜೆಪಿಯ ವಕ್ತಾರರನ್ನಾಗಿ ನೇಮಿಸಲಾಗಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಅವರು 2024ರ ಜನವರಿಯಲ್ಲಿ ತಮ್ಮ ಹುದ್ದೆಗೆ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಜುಲೈ 28ರಂದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಆರತಿ ಸಾಥೆ, ಅಜಿತ್ ಕಡೆತಂಕರ್ ಮತ್ತು ಸುಶಿಲ್ ಘೋಡೇಶ್ವರ್ ಅವರನ್ನು ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಿಸುವ ಪ್ರಸ್ತಾವನೆಯನ್ನು ಅನುಮೋದಿಸಿದೆ. ಈ ಕುರಿತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿದೆ. ಸಚಿವಾಲಯ ಇದನ್ನು ಪ್ರಧಾನ ಮಂತ್ರಿ ಮುಂದೆ ಇಡುತ್ತದೆ, ಅವರು ನೇಮಕಾತಿಯ ಬಗ್ಗೆ ರಾಷ್ಟ್ರಪತಿಗೆ ಸಲಹೆ ನೀಡುತ್ತಾರೆ.

ಸಾಥೆ ಅವರ ಹೆಸರು ಶಿಫಾರಸ್ಸು ಮಾಡಿರುವ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿರುವ ಎನ್‌ಸಿಪಿ(ಎಸ್‌ಪಿ) ಶಾಸಕ ರೋಹಿತ್ ಪವಾರ್, “ಹೈಕೋರ್ಟ್ ನ್ಯಾಯಾಧೀಶರಾಗುವ ಮೊದಲು ಸಾಥೆ ಬಿಜೆಪಿಗೆ ರಾಜೀನಾಮೆ ನೀಡುವ ಮೂಲಕ ಕಾನೂನು ಅವಶ್ಯಕತೆಗಳನ್ನು ಪೂರೈಸಿರಬಹುದು. ಆದರೆ, ನ್ಯಾಯಾಂಗದ ಸದಸ್ಯರಾಗಿ ಹಿಂದುತ್ವ ಪಕ್ಷದ ವಿರುದ್ಧ ಅವರು ಹೇಗೆ ತೀರ್ಪು ನೀಡಲು ಸಾಧ್ಯ ಎಂಬುದು ಪ್ರಶ್ನಾರ್ಹವಾಗಿದೆ” ಎಂದಿದ್ದಾರೆ.

ಈ ವಿಷಯದ ಬಗ್ಗೆ ನಮ್ಮ ಪಕ್ಷವು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಸಂಪರ್ಕಿಸಿದೆ ಮತ್ತು ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಪವಾರ್ ಹೇಳಿದ್ದಾರೆ.

ಈ ನಡುವೆ, ಬಿಜೆಪಿ ಮಾಧ್ಯಮ ವಿಭಾಗದ ಉಸ್ತುವಾರಿ ನವನಾಥ್ ಬಾನ್ ಅವರು ಸುಳ್ಳು ಆರೋಪಗಳನ್ನು ಮಾಡಬೇಡಿ, ಮಾತನಾಡುವ ಮೊದಲು ಸತ್ಯ ತಿಳಿದುಕೊಳ್ಳಿ ಎಂದು ರೋಹಿತ್ ಪವಾರ್ ಅವರಿಗೆ ಹೇಳಿದ್ದಾರೆ. ಆರತಿ ಸಾಥೆ ಜನವರಿ 6, 2024 ರಂದು ಬಿಜೆಪಿ ವಕ್ತಾರೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದಿದ್ದಾರೆ.

20 ವರ್ಷಗಳಿಂದ ವಕೀಲರಾಗಿರುವ ಸಾಥೆ, ಪ್ರಾಥಮಿಕವಾಗಿ ತೆರಿಗೆ ವಿವಾದಗಳು, ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ, ಭದ್ರತಾ ಮೇಲ್ಮನವಿ ನ್ಯಾಯಮಂಡಳಿ, ಕಸ್ಟಮ್ಸ್, ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಮತ್ತು ವೈವಾಹಿಕ ವಿವಾದಗಳ ಮುಂದಿರುವ ಪ್ರಕರಣಗಳನ್ನು ನಿರ್ವಹಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಕೆಯ ತಂದೆ ಅರುಣ್ ಸಾಥೆ ಕೂಡ ವಕೀಲರಾಗಿದ್ದು, ಬಿಜೆಪಿ ಮತ್ತು ಅದರ ಮಾತೃ ಸಂಸ್ಥೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಜೊತೆ ಸಂಬಂಧ ಹೊಂದಿದ್ದಾರೆ. ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿವೆ: ಲೋಕಸಭೆಗೆ ಅಮಿತ್ ಶಾ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...