Homeಮುಖಪುಟಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ; ಕೇಂದ್ರ ಸರ್ಕಾರ ಅಧಿಸೂಚನೆ

ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ; ಕೇಂದ್ರ ಸರ್ಕಾರ ಅಧಿಸೂಚನೆ

- Advertisement -
- Advertisement -

ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ಅವರ ನೇಮಕಾತಿಯೊಂದಿಗೆ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಮೇಲ್ದರ್ಜೆಗೇರಿದ ನ್ಯಾಯಮೂರ್ತಿಗಳು:

ಜಸ್ಟಿಸ್ ಪಂಕಜ್ ಮಿಥಾಲ್, ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ
ಜಸ್ಟಿಸ್ ಸಂಜಯ್ ಕರೋಲ್, ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ
ಜಸ್ಟಿಸ್ ಪಿವಿ ಸಂಜಯ್ ಕುಮಾರ್, ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ
ಜಸ್ಟಿಸ್ ಅಹ್ಸಾನುದ್ದೀನ್ ಅಮಾನುಲ್ಲಾ, ಪಾಟ್ನಾ ಹೈಕೋರ್ಟ್‌ನ ನ್ಯಾಯಾಧೀಶರು
ಜಸ್ಟಿಸ್ ಮನೋಜ್ ಮಿಶ್ರಾ, ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರು

ಸುಪ್ರೀಂ ಕೋರ್ಟ್‌‌ನ ಕೊಲಿಜಿಯಂ ಡಿಸೆಂಬರ್ 13 ರಂದು ಈ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿತ್ತು. ನೇಮಕಾತಿಯಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡ ಒಂದು ದಿನದ ನಂತರ ಅಧಿಸೂಚನೆ ಹೊರಬಿದ್ದಿದೆ.

“ನೇಮಕಾತಿಗಳನ್ನು ಶೀಘ್ರದಲ್ಲಿಯೇ ಮಾಡಲಾಗುತ್ತದೆ” ಎಂದು ಅಟಾರ್ನಿ ಜನರಲ್ ಎನ್ ವೆಂಕಟರಮಣಿ ಅವರು ಹೇಳಿದ ನಂತರ ನ್ಯಾಯಾಲಯವು ನೇಮಕಾತಿ ಪ್ರಕ್ರಿಯೆ ಅಂತಿಮಗೊಳಿಸಲು ಕೇಂದ್ರಕ್ಕೆ 10 ದಿನಗಳ ಕಾಲಾವಕಾಶ ನೀಡಿತ್ತು.

ಇತ್ತೀಚಿನ ದಿನಗಳಲ್ಲಿ ಸುಪ್ರೀಂಕೋರ್ಟ್‌ನ ಕೊಲಿಜಿಯಂ ವ್ಯವಸ್ಥೆಯ ಕುರಿತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಟೀಕಾಪ್ರಹಾರ ಮಾಡಿದ್ದರು. ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ಚರ್ಚೆಗಳು ಕಾವು ಪಡೆದಿದ್ದವು.

’ಈ ಕೊಲಿಜಿಯಂನ ಕಾರ್ಯವಿಧಾನ ಪಾರದರ್ಶಕವಾಗಿಲ್ಲ ಮತ್ತು ಉತ್ತರದಾಯಿತ್ವವಾಗಿಲ್ಲ; ಮುಖ್ಯ ನ್ಯಾಯಮೂರ್ತಿಗಳ ಸಮಯ ನೇಮಕಾತಿಯಲ್ಲಿಯೇ ಪೋಲಾಗುತ್ತಿದೆ’ ಎಂಬ ಕಾರಣಗಳನ್ನು ನೀಡಿ 2015ರಲ್ಲಿ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ (ಎನ್‌ಜೆಎಸಿ) ಕಾಯ್ದೆಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಆ ಕಾಯ್ದೆಯನ್ನು ರದ್ದುಪಡಿಸಿ ಹಾಲಿ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ಎತ್ತಿಹಿಡಿದಿತ್ತು. ಜೊತೆಗೆ ಹಾಲಿ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರುವುದಕ್ಕಾಗಿ ಸಾರ್ವಜನಿಕರಿಂದ ಸಲಹೆ ಕೇಳಿ ಪಾರದರ್ಶಕತೆಯನ್ನು ಹೆಚ್ಚಿಸುವುದಕ್ಕಾಗಿ ನಾಲ್ಕು ಅಂಶಗಳಲ್ಲಿ ಸುಧಾರಣೆಗೆ ಮುಂದಾಗಿತ್ತು.

ಹಾಲಿ ಕೇಂದ್ರ ಸರ್ಕಾರ ಮತ್ತೆ ನ್ಯಾಯಾಧೀಶರ ನೇಮಕದ ಅಧಿಕಾರವನ್ನು ತನ್ನ ಕೈಗೆ ತೆಗೆದುಕೊಳ್ಳಲು ಯತ್ನಿಸುತ್ತಿರುವಂತೆ ಭಾಸವಾಗುತ್ತಿದೆ. ಕೇಂದ್ರ ಸರ್ಕಾರದ ಕಾನೂನು ಸಚಿವ ಕಿರಣ್ ರಿಜಿಜು ಬಹಿರಂಗವಾಗಿ ಕೊಲಿಜಿಯಂ ವ್ಯವಸ್ಥೆ ವಿರುದ್ಧ ಕಿಡಿಕಾರುತ್ತಿದ್ದು, “ಸರ್ಕಾರವು ಕೈಕಟ್ಟಿ ಕುಳಿತಿಲ್ಲ, ಪರ್ಯಾಯ ವ್ಯವಸ್ಥೆ ತರಲು ಯೋಚಿಸುತ್ತಿದೆ” ಎಂಬ ಹೇಳಿಕೆ ನೀಡಿದ್ದರು.

“ಅಷ್ಟು ಮಾತ್ರವಲ್ಲದೇ ಕೊಲಿಜಿಯಂ ಶಿಫಾರಸ್ಸು ಮಾಡಿದ ನ್ಯಾಯಾಧೀಶರ ಹೆಸರು ಅಂತಿಮಗೊಳಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ. ಇದು ಸ್ವೀಕಾರಾರ್ಹವಲ್ಲ” ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸುತ್ತಲೇ ಬಂದಿದೆ.

“ನ್ಯಾಯಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಪ್ರತ್ಯೇಕಿಸುವ ಸಂವಿಧಾನದ ಮೂಲ ರಚನೆಯ ಸಿದ್ಧಾಂತವು ದಿಕ್ಕು ತೋರಿಸುವ ಧ್ರುವ ನಕ್ಷತ್ರದಂತೆ” ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಇತ್ತೀಚೆಗೆ ಹೇಳಿದ್ದರು.

1973ರ ಕೇಶವಾನಂದ ಭಾರತಿ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಮಹತ್ವದ ತೀರ್ಪನ್ನು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಟೀಕಿಸಿದ ಕೆಲವು ದಿನಗಳ ನಂತರ ಚಂದ್ರಚೂಡ್ ಅವರ ಹೇಳಿಕೆಗಳು ಹೊರಬಿದ್ದಿದ್ದವು.

7-6 ಬಹುಮತದೊಂದಿಗೆ 13 ನ್ಯಾಯಾಧೀಶರ ಪೀಠವು, “ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ ಅದರ ಮೂಲ ರಚನೆಯನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದಿದ್ದು ಐತಿಹಾಸಿಕ ತೀರ್ಪಾಗಿದೆ.

ಜನವರಿ 11ರಂದು ಧಂಕರ್ ಮಾತನಾಡುತ್ತಾ, “ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವು ಬೇರೆ ಯಾವುದೇ ಸಂಸ್ಥೆಯ ಮೇಲೆ ಅವಲಂಬಿತವಾಗಿದೆಯೇ? ಇದಕ್ಕೆ ನಮ್ಮ ಸ್ಟಾಂಪ್ ಬೇಕು ಎಂದು ಯಾವುದೇ ಸಂಘಟನೆ ಅಥವಾ ಸಂಸ್ಥೆ ಹೇಳಬಹುದೇ?” ಎಂದು ಪ್ರಶ್ನಿಸಿದ್ದರು.

ಕೇಶವಾನಂದ ಭಾರತಿಯವರನ್ನು ಪ್ರತಿನಿಧಿಸಿದ ವಕೀಲ ನಾನಿ ಪಾಲ್ಖಿವಾಲಾ ಅವರನ್ನು ಚಂದ್ರಚೂಡ್ ಅವರು ಸ್ಮರಿಸಿದ್ದರು. ಕೇರಳದ 1969ರ ಭೂ ಸುಧಾರಣೆಗಳನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದಾಗ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

“ನಮ್ಮ ಸಂವಿಧಾನದ ಮೂಲ ರಚನೆಯು ಧ್ರುವ ನಕ್ಷತ್ರದಂತೆ, ಸಂವಿಧಾನದ ವ್ಯಾಖ್ಯಾನಕಾರರು ಮತ್ತು ಅನುಷ್ಠಾನಕಾರರಿಗೆ ಮಾರ್ಗದರ್ಶನ ನೀಡುತ್ತದೆ, ನಿರ್ದಿಷ್ಟ ನಿರ್ದೇಶನವನ್ನು ನೀಡುತ್ತದೆ” ಎಂದು ಚಂದ್ರಚೂಡ್ ಹೇಳಿದ್ದರು.

“ನಮ್ಮ ಸಂವಿಧಾನದ ಮೂಲ ರಚನೆ ಅಥವಾ ತತ್ವವು ಸಂವಿಧಾನದ ಶ್ರೇಷ್ಠತೆ, ಕಾನೂನಿನ ನಿಯಮ, ಅಧಿಕಾರಗಳ ಪ್ರತ್ಯೇಕತೆ, ನ್ಯಾಯಾಂಗ ವಿಮರ್ಶೆ, ಜಾತ್ಯತೀತತೆ, ಫೆಡರಲಿಸಂ, ಸ್ವಾತಂತ್ರ್ಯ, ವ್ಯಕ್ತಿಯ ಘನತೆ, ರಾಷ್ಟ್ರದ ಏಕತೆ, ಸಮಗ್ರತೆಯ ಮೇಲೆ ಆಧಾರಿತವಾಗಿದೆ” ಎಂದಿದ್ದರು.

“ಸಂವಿಧಾನದ ಆತ್ಮವನ್ನು ಹಾಗೇ ಇಟ್ಟುಕೊಂಡು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ಪಠ್ಯವನ್ನು ವ್ಯಾಖ್ಯಾನಿಸುವುದರಲ್ಲಿ ನ್ಯಾಯಾಧೀಶರ ಕುಶಲತೆ ಅಡಗಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...