Homeಮುಖಪುಟಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ; ಕೇಂದ್ರ ಸರ್ಕಾರ ಅಧಿಸೂಚನೆ

ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ; ಕೇಂದ್ರ ಸರ್ಕಾರ ಅಧಿಸೂಚನೆ

- Advertisement -
- Advertisement -

ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ. ಅವರ ನೇಮಕಾತಿಯೊಂದಿಗೆ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಮೇಲ್ದರ್ಜೆಗೇರಿದ ನ್ಯಾಯಮೂರ್ತಿಗಳು:

ಜಸ್ಟಿಸ್ ಪಂಕಜ್ ಮಿಥಾಲ್, ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ
ಜಸ್ಟಿಸ್ ಸಂಜಯ್ ಕರೋಲ್, ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ
ಜಸ್ಟಿಸ್ ಪಿವಿ ಸಂಜಯ್ ಕುಮಾರ್, ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ
ಜಸ್ಟಿಸ್ ಅಹ್ಸಾನುದ್ದೀನ್ ಅಮಾನುಲ್ಲಾ, ಪಾಟ್ನಾ ಹೈಕೋರ್ಟ್‌ನ ನ್ಯಾಯಾಧೀಶರು
ಜಸ್ಟಿಸ್ ಮನೋಜ್ ಮಿಶ್ರಾ, ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರು

ಸುಪ್ರೀಂ ಕೋರ್ಟ್‌‌ನ ಕೊಲಿಜಿಯಂ ಡಿಸೆಂಬರ್ 13 ರಂದು ಈ ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿತ್ತು. ನೇಮಕಾತಿಯಲ್ಲಿ ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡ ಒಂದು ದಿನದ ನಂತರ ಅಧಿಸೂಚನೆ ಹೊರಬಿದ್ದಿದೆ.

“ನೇಮಕಾತಿಗಳನ್ನು ಶೀಘ್ರದಲ್ಲಿಯೇ ಮಾಡಲಾಗುತ್ತದೆ” ಎಂದು ಅಟಾರ್ನಿ ಜನರಲ್ ಎನ್ ವೆಂಕಟರಮಣಿ ಅವರು ಹೇಳಿದ ನಂತರ ನ್ಯಾಯಾಲಯವು ನೇಮಕಾತಿ ಪ್ರಕ್ರಿಯೆ ಅಂತಿಮಗೊಳಿಸಲು ಕೇಂದ್ರಕ್ಕೆ 10 ದಿನಗಳ ಕಾಲಾವಕಾಶ ನೀಡಿತ್ತು.

ಇತ್ತೀಚಿನ ದಿನಗಳಲ್ಲಿ ಸುಪ್ರೀಂಕೋರ್ಟ್‌ನ ಕೊಲಿಜಿಯಂ ವ್ಯವಸ್ಥೆಯ ಕುರಿತು ಕೇಂದ್ರ ಸರ್ಕಾರದ ಪ್ರತಿನಿಧಿಗಳು ಟೀಕಾಪ್ರಹಾರ ಮಾಡಿದ್ದರು. ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ಚರ್ಚೆಗಳು ಕಾವು ಪಡೆದಿದ್ದವು.

’ಈ ಕೊಲಿಜಿಯಂನ ಕಾರ್ಯವಿಧಾನ ಪಾರದರ್ಶಕವಾಗಿಲ್ಲ ಮತ್ತು ಉತ್ತರದಾಯಿತ್ವವಾಗಿಲ್ಲ; ಮುಖ್ಯ ನ್ಯಾಯಮೂರ್ತಿಗಳ ಸಮಯ ನೇಮಕಾತಿಯಲ್ಲಿಯೇ ಪೋಲಾಗುತ್ತಿದೆ’ ಎಂಬ ಕಾರಣಗಳನ್ನು ನೀಡಿ 2015ರಲ್ಲಿ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ (ಎನ್‌ಜೆಎಸಿ) ಕಾಯ್ದೆಯನ್ನು ಕೇಂದ್ರ ಸರ್ಕಾರ ಮಂಡಿಸಿತ್ತು. ಆದರೆ ಸುಪ್ರೀಂ ಕೋರ್ಟ್ ಆ ಕಾಯ್ದೆಯನ್ನು ರದ್ದುಪಡಿಸಿ ಹಾಲಿ ಇರುವ ಕೊಲಿಜಿಯಂ ವ್ಯವಸ್ಥೆಯನ್ನು ಎತ್ತಿಹಿಡಿದಿತ್ತು. ಜೊತೆಗೆ ಹಾಲಿ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ತರುವುದಕ್ಕಾಗಿ ಸಾರ್ವಜನಿಕರಿಂದ ಸಲಹೆ ಕೇಳಿ ಪಾರದರ್ಶಕತೆಯನ್ನು ಹೆಚ್ಚಿಸುವುದಕ್ಕಾಗಿ ನಾಲ್ಕು ಅಂಶಗಳಲ್ಲಿ ಸುಧಾರಣೆಗೆ ಮುಂದಾಗಿತ್ತು.

ಹಾಲಿ ಕೇಂದ್ರ ಸರ್ಕಾರ ಮತ್ತೆ ನ್ಯಾಯಾಧೀಶರ ನೇಮಕದ ಅಧಿಕಾರವನ್ನು ತನ್ನ ಕೈಗೆ ತೆಗೆದುಕೊಳ್ಳಲು ಯತ್ನಿಸುತ್ತಿರುವಂತೆ ಭಾಸವಾಗುತ್ತಿದೆ. ಕೇಂದ್ರ ಸರ್ಕಾರದ ಕಾನೂನು ಸಚಿವ ಕಿರಣ್ ರಿಜಿಜು ಬಹಿರಂಗವಾಗಿ ಕೊಲಿಜಿಯಂ ವ್ಯವಸ್ಥೆ ವಿರುದ್ಧ ಕಿಡಿಕಾರುತ್ತಿದ್ದು, “ಸರ್ಕಾರವು ಕೈಕಟ್ಟಿ ಕುಳಿತಿಲ್ಲ, ಪರ್ಯಾಯ ವ್ಯವಸ್ಥೆ ತರಲು ಯೋಚಿಸುತ್ತಿದೆ” ಎಂಬ ಹೇಳಿಕೆ ನೀಡಿದ್ದರು.

“ಅಷ್ಟು ಮಾತ್ರವಲ್ಲದೇ ಕೊಲಿಜಿಯಂ ಶಿಫಾರಸ್ಸು ಮಾಡಿದ ನ್ಯಾಯಾಧೀಶರ ಹೆಸರು ಅಂತಿಮಗೊಳಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ. ಇದು ಸ್ವೀಕಾರಾರ್ಹವಲ್ಲ” ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸುತ್ತಲೇ ಬಂದಿದೆ.

“ನ್ಯಾಯಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಪ್ರತ್ಯೇಕಿಸುವ ಸಂವಿಧಾನದ ಮೂಲ ರಚನೆಯ ಸಿದ್ಧಾಂತವು ದಿಕ್ಕು ತೋರಿಸುವ ಧ್ರುವ ನಕ್ಷತ್ರದಂತೆ” ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಇತ್ತೀಚೆಗೆ ಹೇಳಿದ್ದರು.

1973ರ ಕೇಶವಾನಂದ ಭಾರತಿ ವರ್ಸಸ್ ಸ್ಟೇಟ್ ಆಫ್ ಕೇರಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ಮಹತ್ವದ ತೀರ್ಪನ್ನು ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಟೀಕಿಸಿದ ಕೆಲವು ದಿನಗಳ ನಂತರ ಚಂದ್ರಚೂಡ್ ಅವರ ಹೇಳಿಕೆಗಳು ಹೊರಬಿದ್ದಿದ್ದವು.

7-6 ಬಹುಮತದೊಂದಿಗೆ 13 ನ್ಯಾಯಾಧೀಶರ ಪೀಠವು, “ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿಗೆ ಅಧಿಕಾರವಿದೆ. ಆದರೆ ಅದರ ಮೂಲ ರಚನೆಯನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದಿದ್ದು ಐತಿಹಾಸಿಕ ತೀರ್ಪಾಗಿದೆ.

ಜನವರಿ 11ರಂದು ಧಂಕರ್ ಮಾತನಾಡುತ್ತಾ, “ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರವು ಬೇರೆ ಯಾವುದೇ ಸಂಸ್ಥೆಯ ಮೇಲೆ ಅವಲಂಬಿತವಾಗಿದೆಯೇ? ಇದಕ್ಕೆ ನಮ್ಮ ಸ್ಟಾಂಪ್ ಬೇಕು ಎಂದು ಯಾವುದೇ ಸಂಘಟನೆ ಅಥವಾ ಸಂಸ್ಥೆ ಹೇಳಬಹುದೇ?” ಎಂದು ಪ್ರಶ್ನಿಸಿದ್ದರು.

ಕೇಶವಾನಂದ ಭಾರತಿಯವರನ್ನು ಪ್ರತಿನಿಧಿಸಿದ ವಕೀಲ ನಾನಿ ಪಾಲ್ಖಿವಾಲಾ ಅವರನ್ನು ಚಂದ್ರಚೂಡ್ ಅವರು ಸ್ಮರಿಸಿದ್ದರು. ಕೇರಳದ 1969ರ ಭೂ ಸುಧಾರಣೆಗಳನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದಾಗ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

“ನಮ್ಮ ಸಂವಿಧಾನದ ಮೂಲ ರಚನೆಯು ಧ್ರುವ ನಕ್ಷತ್ರದಂತೆ, ಸಂವಿಧಾನದ ವ್ಯಾಖ್ಯಾನಕಾರರು ಮತ್ತು ಅನುಷ್ಠಾನಕಾರರಿಗೆ ಮಾರ್ಗದರ್ಶನ ನೀಡುತ್ತದೆ, ನಿರ್ದಿಷ್ಟ ನಿರ್ದೇಶನವನ್ನು ನೀಡುತ್ತದೆ” ಎಂದು ಚಂದ್ರಚೂಡ್ ಹೇಳಿದ್ದರು.

“ನಮ್ಮ ಸಂವಿಧಾನದ ಮೂಲ ರಚನೆ ಅಥವಾ ತತ್ವವು ಸಂವಿಧಾನದ ಶ್ರೇಷ್ಠತೆ, ಕಾನೂನಿನ ನಿಯಮ, ಅಧಿಕಾರಗಳ ಪ್ರತ್ಯೇಕತೆ, ನ್ಯಾಯಾಂಗ ವಿಮರ್ಶೆ, ಜಾತ್ಯತೀತತೆ, ಫೆಡರಲಿಸಂ, ಸ್ವಾತಂತ್ರ್ಯ, ವ್ಯಕ್ತಿಯ ಘನತೆ, ರಾಷ್ಟ್ರದ ಏಕತೆ, ಸಮಗ್ರತೆಯ ಮೇಲೆ ಆಧಾರಿತವಾಗಿದೆ” ಎಂದಿದ್ದರು.

“ಸಂವಿಧಾನದ ಆತ್ಮವನ್ನು ಹಾಗೇ ಇಟ್ಟುಕೊಂಡು ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ಪಠ್ಯವನ್ನು ವ್ಯಾಖ್ಯಾನಿಸುವುದರಲ್ಲಿ ನ್ಯಾಯಾಧೀಶರ ಕುಶಲತೆ ಅಡಗಿದೆ” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...