Homeಮುಖಪುಟಹೊಸ ಚುನಾವಣಾ ಆಯುಕ್ತರ ನೇಮಕ: ಅನುಮಾನಗಳಿಗೆ ಕಾರಣವಾದ ಮೋದಿ ಸರ್ಕಾರದ ನಡೆ

ಹೊಸ ಚುನಾವಣಾ ಆಯುಕ್ತರ ನೇಮಕ: ಅನುಮಾನಗಳಿಗೆ ಕಾರಣವಾದ ಮೋದಿ ಸರ್ಕಾರದ ನಡೆ

- Advertisement -
- Advertisement -

ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆ ಮತ್ತು ಅನುಪ್ ಚಂದ್ರ ಪಾಂಡೆ ಅವರ ನಿವೃತ್ತಿಯಿಂದ ಭಾರತೀಯ ಚುನಾವಣಾ ಆಯೋಗದಲ್ಲಿ ಎರಡು ಖಾಲಿ ಹುದ್ದೆಗಳು ಸೃಷ್ಟಿಯಾಗಿದ್ದು, ಮಾರ್ಚ್ 15 ರೊಳಗೆ ಈ ಹುದ್ದೆಗಳು ಭರ್ತಿಯಾಗುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.

ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಒಬ್ಬರು ಕೇಂದ್ರ ಸಚಿವರನ್ನು ಒಳಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಆಯ್ಕೆ ಸಮಿತಿಯು, ಮಾರ್ಚ್ 14 ರಂದು ಸಭೆ ಸೇರಿ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಿದೆ ಎನ್ನಲಾಗಿದೆ.

ಫೆಬ್ರವರಿ 14 ರಂದು ಚುನಾವಣಾ ಆಯುಕ್ತರಾದ ಅನುಪ್ ಚಂದ್ರ ಪಾಂಡೆ ನಿವೃತ್ತರಾಗಿದ್ದಾರೆ. ಈ ಹುದ್ದೆ ಭರ್ತಿ ಮಾಡಲು ಮಾರ್ಚ್ 15ರಂದು ಮೋದಿ ನೇತೃತ್ವದ ಸಮಿತಿ ಸಭೆ ಸೇರಲು ನಿರ್ಧರಿಸಿತ್ತು. ಈ ನಡುವೆ ಚುನಾವಣಾ ಆಯುಕ್ತ ಅರುಣ್ ಗೋಯಲ್ ಹಠಾತ್ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಚುನಾವಣಾ ಆಯೋಗದಲ್ಲಿ ಉಳಿದಿರುವುದು ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾತ್ರ. ಹಾಗಾಗಿ, ಮಾರ್ಚ್ 14ರಂದೇ ಪ್ರಧಾನಿ ನೇತೃತ್ವದ ಸಮಿತಿ ಸಭೆ ನಡೆಸಿ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

ಚುನಾವಣಾ ಆಯುಕ್ತರ ಆಯ್ಕೆ ಹಿಂದೆ ಹಲವು ಅನುಮಾನ:

ದೇಶ ಸಾರ್ವತ್ರಿಕ ಚುನಾವಣೆಯ ಹೊಸ್ತಿಲಲ್ಲಿರುವಾಗ ಚುನಾವಣಾ ಆಯುಕ್ತರು ದಿಢೀರ್ ರಾಜೀನಾಮೆ ನೀಡಿರುವುದೇ ಹಲವು ಪ್ರಶ್ನೆಗಳನ್ನು ಎತ್ತಿದೆ. ಈ ನಡುವೆ ಹೊಸ ಚುನಾವಣಾ ಆಯುಕ್ತರ ಆಯ್ಕೆಗೆ ಪ್ರಧಾನಿ ನೇತೃತ್ವದ ಸಮಿತಿ ನಡೆಸುತ್ತಿರುವ ಪ್ರಕ್ರಿಯೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಟಿಎಂಸಿ ಸಂಸದ ಸಾಕೇತ್ ಗೋಖಲೆ, “2023ರ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಅಂಗೀಕರಿಸಿದ ಹೊಸ ಕಾನೂನಿನ ಪ್ರಕಾರ, ಪ್ರತಿ ಚುನಾವಣಾ ಆಯುಕ್ತರನ್ನು ನೇಮಕ ಮಾಡಲು ಹುಡುಕಾಟ (ಸರ್ಚ್ ಕಮಿಟಿ) ಸಮಿತಿಯು ಐದು ಹೆಸರುಗಳ ಕಿರುಪಟ್ಟಿಯನ್ನು ಸಿದ್ಧಪಡಿಸಬೇಕು. ಅರುಣ್ ಗೋಯೆಲ್ ಅವರ ದಿಢೀರ್ ರಾಜೀನಾಮೆ ನಂತರ ಎರಡು ಚುನಾವಣಾ ಆಯುಕ್ತರ ಹುದ್ದೆಗಳು ಖಾಲಿ ಆಗಿರುವುದರಿಂದ 10 ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಬೇಕಾಗಿದೆ” ಎಂದಿದ್ದಾರೆ.

“10 ಹೆಸರುಗಳ ಈ ಶಾರ್ಟ್‌ಲಿಸ್ಟ್ ಅನ್ನು ಆಯ್ಕೆ ಸಮಿತಿಗೆ ನೀಡಬೇಕಾಗಿದೆ. ಅಲ್ಲಿ ಪ್ರಧಾನಿ ಮತ್ತು ಒಬ್ಬರು ಸಚಿವರನ್ನು ಒಳಗೊಂಡ ಸಮಿತಿ ಈ ಹೆಸರುಗಳಲ್ಲಿ ಇಬ್ಬರ ಹೆಸರು ಆಯ್ಕೆ ಮಾಡಲಿದ್ದಾರೆ. ಈ ಪ್ರಕ್ರಿಯೆ ನಡೆಯಲು ಹಲವು ದಿನಗಳು ಬೇಕು. ಆದರೆ, ಇಲ್ಲಿ ಕೇವಲ 4 ದಿನಗಳಲ್ಲಿ 10 ಮಂದಿಯ ಪಟ್ಟಿ ಸಿದ್ದಪಡಿಸಲಾಗಿದೆ. ಇದು ಹೇಗೆ ಸಾಧ್ಯ? ಅಂದರೆ 10 ಮಂದಿಯ ಹೆಸರು ಮೊದಲೇ ಸಿದ್ದಪಡಿಸಿ ಇಡಲಾಗಿತ್ತಾ?” ಎಂದು ಸಾಕೇತ್ ಗೋಖಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

“ಇದಂತು ಖಚಿತ, ಮೋದಿ ಮತ್ತು ಬಿಜೆಪಿ ಯಾರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಬೇಕೆಂದು ಮೊದಲೇ ನಿರ್ಧರಿಸದ್ದಾರೆ. ಈ ಕಾರಣಕ್ಕಾಗಿಯೇ ಅರುಣ್ ಗೋಯಲ್ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅವರನ್ನು ಬಲವಂತವಾಗಿ ಹುದ್ದೆಯಿಂದ ಕೆಳಗಿಸಿ, ಇಬ್ಬರು ಮೋದಿ ನಿಷ್ಠರನ್ನು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡುವ ನೇರ ಮಾರ್ಗ ಇದು” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಹೊರಕ್ಕೆ :

2023ರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ ಮಸೂದೆ- 2023 ಅಂಗೀಕಾರಗೊಂಡಿತ್ತು. ರಾಷ್ಟ್ರಪತಿ ಅಂಕಿತ ಹಾಕುವ ಮೂಲಕ ಈ ಮಸೂದೆ ಕಾಯ್ದೆಯಾಗಿ ಜಾರಿಯಾಗಿದೆ.

ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರು (EC)ಗಳ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಗುರಿಯನ್ನು ಹೊಸ ಕಾಯ್ದೆ ಹೊಂದಿದೆ. ಜೊತೆಗೆ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕಾರ್ಯವಿಧಾನವನ್ನು ಇದು ವಿವರಿಸುತ್ತದೆ.

ಪ್ರಧಾನ ಮಂತ್ರಿ, ಕೇಂದ್ರ ಸಂಪುಟ ಸಚಿವರು, ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳನ್ನು ನೇಮಿಸುವುದನ್ನು ಈ ಕಾಯ್ದೆ ಪ್ರತಿಪಾದಿಸುತ್ತದೆ.

ಗಮನಾರ್ಹವಾಗಿ, ಹೊಸ ಕಾಯ್ದೆ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಹೊರಗಿಟ್ಟಿದೆ. ಮಾರ್ಚ್‌ 2023ರಲ್ಲಿ, ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸಂಸತ್ತು ಕಾನೂನು ರೂಪಿಸುವವರೆಗೆ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ಚುನಾವಣಾ ಆಯುಕ್ತರ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಮಸೂದೆ ಮಂಡಿಸಿ ಕಾನೂನು ರೂಪಿಸಿದೆ. ಸುಪ್ರೀಂ ಮುಖ್ಯ ನ್ಯಾಯಮೂರ್ತಿಯನ್ನು ಸಮಿತಿಯಿಂದ ಹೊರಗಿಟ್ಟಿದೆ.

ಇದನ್ನೂ ಓದಿ : ಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...