Homeಮುಖಪುಟಜೆಕ್ ಕೋರ್ಟ್‌ ಮೊರೆ ಹೋಗಿ: ಪನ್ನುನ್ ಹತ್ಯೆ ಸಂಚು ಆರೋಪಿ ನಿಖಿಲ್ ಗುಪ್ತಾ ಕುಟುಂಬಕ್ಕೆ ಸುಪ್ರೀಂ...

ಜೆಕ್ ಕೋರ್ಟ್‌ ಮೊರೆ ಹೋಗಿ: ಪನ್ನುನ್ ಹತ್ಯೆ ಸಂಚು ಆರೋಪಿ ನಿಖಿಲ್ ಗುಪ್ತಾ ಕುಟುಂಬಕ್ಕೆ ಸುಪ್ರೀಂ ಸೂಚನೆ

- Advertisement -
- Advertisement -

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ (ಯುಎಸ್‌ಎ) ಆರೋಪಿಸಿರುವ ನಿಖಿಲ್ ಗುಪ್ತಾ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದ್ದು, ಜೆಕ್ ಗಣರಾಜ್ಯದಲ್ಲಿ ಬಂಧಿತರಾಗಿರುವ ಗುಪ್ತಾ ವಿಚಾರದಲ್ಲಿ ಭಾರತ ಸರ್ಕಾರ ಮಧ್ಯಪ್ರವೇಶಿಸಲು ನಿರ್ದೇಶನ ನೀಡುವಂತೆ ಕೋರಲಾಗಿದೆ.

ನಿಖಿಲ್‌ ಗುಪ್ತಾ ಕಾನೂನು ಪರಿಪಾಲಿಸುವ ವ್ಯಕ್ತಿಯಾಗಿದ್ದು, ಅಮೆರಿಕದ ಸೂಚನೆಯಂತೆ ಅವರನ್ನು ಜೆಕ್ ಗಣರಾಜ್ಯದ ಪ್ರಾಗ್‌ನಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ. ಅವರ ಜೀವಕ್ಕೆ ಅಪಾಯವಿದೆ ಎಂದು ನಿಖಿಲ್ ಗುಪ್ತಾ ಕುಟುಂಬ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ.

ಇಂದು (ಡಿಸೆಂಬರ್ 15) ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಜನವರಿ 4, 2024ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠವು ಆರಂಭದಲ್ಲಿ ಅರ್ಜಿಯನ್ನು ಪರಿಗಣಿಸಲು ನಿರಾಸಕ್ತಿ ವ್ಯಕ್ತಪಡಿಸಿತ್ತು. ಬಳಿಕ ಪ್ರಕರಣ ಸಂಬಂಧ ಜೆಕ್ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಗುಪ್ತಾ ಕುಟುಂಬಕ್ಕೆ ಸಲಹೆ ನೀಡಿದೆ.

ಗುಪ್ತಾ ಕುಟುಂಬದ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿಎ ಸುಂದರಂ, “ನಿಖಿಲ್ ಗುಪ್ತಾ ಭಾರತದ ಪ್ರಜೆಯಾಗಿದ್ದು ಜೆಕ್ ಗಣರಾಜ್ಯದ ಭಾರತೀಯ ದೂತವಾಸದ ಮೂಲಕ ಸಹಾಯ ಕೋರಿದ್ದಾರೆ. ಗುಪ್ತಾ ತನ್ನ ಕುಟುಂಬದ ಮೂಲಕ ಈ ಅರ್ಜಿ ಸಲ್ಲಿಸಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ, ನಾವು ಪರಿಹಾರವನ್ನು ಮಾತ್ರ ಸೂಚಿಸುತ್ತೇವೆ. ಯಾವುದೇ ಸಚಿವಾಲಯವು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಹುದು. ಆದರೆ, ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದೆ ಎಂದು ಹೇಳಿದ್ದಾರೆ.

ಕಡತ ತಡವಾಗಿ ಬಂದಿದ್ದರಿಂದ ಅದನ್ನು ವಿವರವಾಗಿ ಓದಲು ಪೀಠಕ್ಕೆ ಸಮಯವಿಲ್ಲ. ಚಳಿಗಾಲದ ರಜೆಯ ನಂತರ ವಿಷಯವನ್ನು ಪರಿಗಣಿಸಲಾಗುವುದು ಎಂದು ಹೇಳಿ ವಿಚಾರಣೆ ಮುಂದೂಡಿದ್ದಾರೆ.

ನಿಖಿಲ್ ಗುಪ್ತಾ ಅವರು ಭಾರತ ಸರ್ಕಾರದ ಅಧಿಕಾರಿಯೊಬ್ಬರ ಜೊತೆಗೂಡಿ ಯುಎಸ್ ಮೂಲದ ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್‌ ಪನ್ನುನ್ (ಯುಎಸ್ ಪ್ರಜೆ) ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ನವೆಂಬರ್ 29 ರಂದು ಯುಎಸ್‌ ನ್ಯಾಯಾಂಗ ಇಲಾಖೆಯು ಆರೋಪಿಸಿದೆ.

ಯುಎಸ್ ಮತ್ತು ಜೆಕ್ ಗಣರಾಜ್ಯದ ನಡುವಿನ ದ್ವಿಪಕ್ಷೀಯ ಹಸ್ತಾಂತರ ಒಪ್ಪಂದದ ಅನುಸಾರವಾಗಿ ಜೂನ್ 30, 2023 ರಂದು ಜೆಕ್ ಅಧಿಕಾರಿಗಳು ಗುಪ್ತಾರನ್ನು ಬಂಧಿಸಿದ್ದು, ಯುಎಸ್‌ಗೆ ಗಡಿಪಾರು ಮಾಡಲು ಮುಂದಾಗಿದ್ದಾರೆ. ಗುಪ್ತಾ ಅವರನ್ನು ಯುಎಸ್‌ಗೆ ಹಸ್ತಾಂತರಿಸಿದರೆ ಅವರ ಜೀವಕ್ಕೆ ಅಪಾಯವಿದೆ ಎಂದು ಕುಟುಂಬ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಭಾರತ ಸರ್ಕಾರ ಮಧ್ಯಪ್ರವೇಶಿಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಗುಪ್ತಾ ಕುಟುಂಬ ಜೆಕ್ ನ್ಯಾಯಾಲದ ಮೊರೆ ಹೋಗುವುದು ಉತ್ತಮ ಎಂದು ಸಲಹೆ ನೀಡಿದೆ.

ಇದನ್ನೂ ಓದಿ: ಜೀವನ ಕೊನೆಗೊಳಿಸಲು ಅನುಮತಿ ನೀಡಿ; ಲೈಂಗಿಕ ಕಿರುಕುಳದಿಂದ ನೊಂದು ಸಿಜೆಐಗೆ ಪತ್ರ ಬರೆದ ನ್ಯಾಯಾಧೀಶೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...