Homeಮುಖಪುಟಪಕ್ಷ ವಿರೋಧ ಹೇಳಿಕೆ ಮುಂದುವರಿದರೆ ಸೂಕ್ತ ಕ್ರಮ: ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ

ಪಕ್ಷ ವಿರೋಧ ಹೇಳಿಕೆ ಮುಂದುವರಿದರೆ ಸೂಕ್ತ ಕ್ರಮ: ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ

- Advertisement -
- Advertisement -

ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಯಾರು ಆ ರೀತಿ ಮಾತನಾಡಿದ್ದಾರೋ ಅವರ ಜೊತೆ ಚರ್ಚಿಸಿ ಮುಂದೆ ಇಂಥ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುತ್ತೇವೆ. ಇದು ಮುಂದುವರಿದರೆ ಸೂಕ್ತ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಮಾತನಾಡಿ “ಚುನಾವಣೆಯಲ್ಲಿ ಬಿಜೆಪಿ ಯಾಕೆ ಸೋತಿದೆ ಎಂದು ಕೆಲವರು ಬಹಿರಂಗ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ, ಪಕ್ಷದ ವಿರುದ್ಧ ಹೇಳಿಕೆ ನೀಡಿರುವ ಆಡಿಯೋ ವಿಡಿಯೋ ಮುಂದಿಟ್ಟುಕೊಂಡು ಸಭೆ ಮಾಡಲಾಗಿದೆ. ಪಕ್ಷದ ವಿರುದ್ಧ ಹೇಳಿಕೆ ನೀಡಿದವರನ್ನು ಸಭೆಗೆ ಕರೆಯಲಾಗಿತ್ತು. 11 ಜನ ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಾರೆ. ಸಭೆಗೆ 11 ಜನರಿಗೂ ಕರೆದಿದ್ವಿ, ಅದರಲ್ಲಿ 5 ಜನ ಸಭೆಗೆ ಬಂದಿಲ್ಲ” ಎಂದರು.

ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ‌ ಶಾಸಕ‌ರಾದ ಗೋವಿಂದ ಕಾರಜೋಳ, ಎ ಎಸ್ ಪಾಟೀಲ್ ‌ನಡಹಳ್ಳಿ, ವೀರಣ್ಣ ಚರಂತಿಮಠ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು. ಆದರೆ ಪ್ರಭು ಚವ್ಹಾಣ್, ಮುರುಗೇಶ ನಿರಾಣಿ, ಈಶ್ವರ್ ಸಿಂಗ್ ಠಾಕೂರ್, ರಮೇಶ್ ಜಿಗಜಿಣಗಿ, ರೇಣುಕಾಚಾರ್ಯ ಇಂದಿನ ಸಭೆ ಮುಂದೆ ಬಂದಿಲ್ಲ. ಈ ವಾರದಲ್ಲಿ ಬಂದು ವಿವರಣೆ ಕೊಡ್ತೀವಿ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.

ಪಕ್ಷದ ಸೋಲಿನ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿರುವ ಕೆಲವು ನಾಯಕರನ್ನು ಒಟ್ಟಿಗೆ ಕರೆದು ಮಾತನಾಡಲಾಗುತ್ತಿದೆ. ಕೆಲವು ನಾಯಕರು ಸೋಲಿನಿಂದ ವಿಚಲಿತರಾಗಿದ್ದಾರೆ. ಅದಕ್ಕೆ ಹೀಗೆ ಮಾತನಾಡುತ್ತಿದ್ದಾರೆ. ಏನೇ ಹೇಳಿಕೆ ಇದ್ದರೂ ಅವರೆಲ್ಲರೂ ಪಕ್ಷದ ವೇದಿಕೆಯಲ್ಲಿ ಹೇಳಬೇಕು ಹೊರತು ಹೀಗೆ ಮಾಧ್ಯಮಗಳ ಮುಂದೆ ಬಂದು ಹೇಳುವುದು ಸರಿಯಲ್ಲ. ಸಾವಿರಾರು ಜನ ಬಿಜೆಪಿ ಕಾರ್ಯಕರ್ತರ ಮನಸ್ಸಿಗೆ ನೋವಾಗಿದೆ. ಈ ಬಗ್ಗೆ ಪಕ್ಷ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಹೊನ್ನಾಳಿ ಮಾಜಿ ಶಾಸಕ ರೇಣುಕಾಚಾರ್ಯರವರು ಮೂರು ದಿನದಿಂದ ಬಿಜೆಪಿ ಸೋಲಿಗೆ ನಮ್ಮ ಪಕ್ಷದ ಮುಖಂಡರೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಲ್ಲದೇ ತಾನೂ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಎಂದು ಘೋಷಿಸಿಕೊಂಡಿದ್ದಾರೆ.

ಇದನ್ನೂ ಓದಿ; ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...