Homeಕರ್ನಾಟಕಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

ಮತಗಳ್ಳತನ| ಕಾನೂನು ಇಲಾಖೆ ಶಿಫಾರಸಿನಂತೆ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆಗೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆಯೇ ಎಂಬ ಶ್ನೆಗೆ ಸಿಎಂ ಉತ್ತರಿಸಿದರು.

ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು. ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಎಂದರು.

ಮೂರು ಸಾವಿರ ಮತ ಖರೀದಿ ಬಗ್ಗೆ ತಿಳಿದಿಲ್ಲ: ಸಿದ್ದರಾಮಯ್ಯ  ಬಾದಾಮಿ ಕ್ಷೇತ್ರದಲ್ಲಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದಿದ್ದರು ಎಂಬ ಮಾಜಿ ಸಚಿವ ಸಿ.ಎಂ ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ ಸಲ್ಲಿಸಲು ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1,600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.

ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ

ಕಾಂಗ್ರೆಸ್ ಈಗ ಮತಗಳ ಸ್ಥಾನದ ಬಗ್ಗೆ ಪ್ರಸ್ತಾಪಿಸಿರುವುದು ಏಕೆ ಎಂದು ಬಿಜೆಪಿಯವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವುದು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು. ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು. ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ ವಿಷಯ ತಿಳಿದಿದೆ ಎಂದರು.

ಚುನಾವಣೆಗಳಲ್ಲಿ ಕೈವಾಡ

ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸವನ್ನು ಮೂಡಿಸಲು ಮತಗಳ್ಳತನದ ಬಗ್ಗೆ ನ್ಯಾಯಾಂಗ ಸ್ವಯಂ ಪ್ರೇರಿತವಾಗಿ ಮಧ್ಯಪ್ರವೇಶ ಮಾಡಬೇಕೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಸಿಎಂ, “ಚುನಾವಣೆಗಳಲ್ಲಿ, ಇವಿಎಂಗಳಲ್ಲಿ, ಮತದಾರರ ಪಟ್ಟಿಗಳಲ್ಲಿ ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ನನ್ನ ಪ್ರಕಾರ ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ” ಎಂದರು.

ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ಹೊಣೆ

ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಸಿಎಂ ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಒಂದು ವೇಳೆ ಸತ್ತವರು ಮತ ಹಾಕಿದ್ದರೆ ಅದಕ್ಕೆ ಯಾರು ಜವಾಬ್ದಾರರು? ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆ” ಎಂದರು.

‘ಹಿಂದೂಗಳು ನಮಗಾಗಿ ಮತ ಹಾಕಿದರೆ ಅದು ವಂಚನೆಯೇ?’: ಮಹಾದೇವಪುರದಲ್ಲಿ ಮತ ಕಳ್ಳತನ ಆರೋಪಕ್ಕೆ ಸಂಸದ ಪಿ.ಸಿ. ಮೋಹನ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...