Homeಮುಖಪುಟದೆಹಲಿ ಸೇವಾ ಮಸೂದೆಗೆ ಅನುಮೋದನೆ: ದೇಶದ ಇತಿಹಾಸದಲ್ಲೇ ಇದು ಕರಾಳ ದಿನ ಎಂದು ಕಿಡಿಕಾರಿದ ಕೇಜ್ರಿವಾಲ್

ದೆಹಲಿ ಸೇವಾ ಮಸೂದೆಗೆ ಅನುಮೋದನೆ: ದೇಶದ ಇತಿಹಾಸದಲ್ಲೇ ಇದು ಕರಾಳ ದಿನ ಎಂದು ಕಿಡಿಕಾರಿದ ಕೇಜ್ರಿವಾಲ್

- Advertisement -
- Advertisement -

ದೆಹಲಿ ಸೇವಾ ಮಸೂದೆಗೆ ರಾಜ್ಯಸಭೆಯಲ್ಲಿ ಸೋಮವಾರ ಅನುಮೋದನೆ ದೊರೆತಿರುವುದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ದೆಹಲಿ ಸೇವಾ ಮಸೂದೆಗೆ ಅನುಮೋದನೆ ದೊರೆತ ಬಳಿಕ ನಂತರ ಪತ್ರಿಕಾಗೋಷ್ಠಿ ನಡೆಸಿದ ಅವರು, ”ದೇಶದ ಇತಿಹಾಸದಲ್ಲಿ ಇಂದು ಕರಾಳ ದಿನ… ಸರ್ಕಾರಕ್ಕೆ ಕೆಲಸ ಮಾಡುವ ಅಧಿಕಾರವಿಲ್ಲ. ಸುಪ್ರೀಂ ಕೋರ್ಟ್‌ನಲ್ಲೂ ನನಗೆ ನಂಬಿಕೆ ಇಲ್ಲ ಎಂದು ಪ್ರಧಾನಿ ಹೇಳುತ್ತಿರುವುದು ಸ್ಪಷ್ಟವಾಗಿದೆ. ದೆಹಲಿ ಸರ್ಕಾರಿ ನೌಕರರ ಎಲ್ಲಾ ನೀತಿಗಳನ್ನು ಕೇಂದ್ರ ಸರ್ಕಾರ ರೂಪಿಸುತ್ತಿದೆ” ಎಂದು ಹೇಳಿದರು.

”ದೆಹಲಿ ಸರ್ಕಾರದ ಪ್ಯೂನ್ ಏನು ಮಾಡುತ್ತಾರೆ ಎಂಬುದನ್ನು ಪ್ರಧಾನಿ ಕುಳಿತು ನೋಡುತ್ತಾರೆ. ಅದಕ್ಕಾಗಿಯೇ ಅವರನ್ನು ಪ್ರಧಾನಿ ಮಾಡಲಾಯಿತು. ನೀವು ಕೇಂದ್ರ ಸರ್ಕಾರವನ್ನು ನಡೆಸುತ್ತೀರಿ. ನೀವು ದೆಹಲಿಯಲ್ಲಿ ಏಕೆ ಹಸ್ತಕ್ಷೇಪ ಮಾಡುತ್ತಿದ್ದೀರಿ?” ಎಂದು ಅವರು ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡಿದ್ದಾರೆ.

”ಅಮಿತ್ ಶಾ ಜೀ, ದೆಹಲಿಯ ಜನರ ಹಕ್ಕುಗಳನ್ನು ಕೊಲ್ಲಲು ನಿಮಗೆ ಅಧಿಕಾರ ನೀಡಲಿಲ್ಲ. ದೆಹಲಿ ಸರ್ಕಾರದ ಪ್ಯೂನ್‌ಗಳ ವರ್ಗಾವಣೆಯನ್ನೂ ಪ್ರಧಾನಿ ಮೋದಿ ಮಾಡುತ್ತಾರೆ” ಎಂದು ಕೇಜ್ರಿವಾಲ್ ಕಿಡಿಕಾರಿದರು.

ರಾಜ್ಯಸಭೆಯಲ್ಲಿ ಮಸೂದೆಯ ಪರವಾಗಿ 131 ಮತಗಳು ಹಾಗೂ ವಿರುದ್ಧವಾಗಿ 102 ಮತಗಳು ಚಲಾವಣೆಯಾಗಿದ್ದವು. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಮತ್ತು ವೈಎಸ್‌ಆರ್‌ಸಿಪಿ ಸದಸ್ಯರು ಮಸೂದೆ ಪರ ಮತ ಚಲಾಯಿಸಿದರು.

ಈ ಮಧ್ಯೆ, ದೆಹಲಿ ಸೇವಾ ಮಸೂದೆಯು ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಗುರಿಯನ್ನಷ್ಟೇ ಹೊಂದಿದೆಯೇ ವಿನಃ ಎಎಪಿ ಸರ್ಕಾರದ ಅಧಿಕಾರವನ್ನು ಅತಿಕ್ರಮಿಸುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಭರವಸೆ ನೀಡಿದ್ದಾರೆ.

”ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ಉತ್ತೇಜಿಸುವ ಪರಿಣಾಮಕಾರಿ ಮತ್ತು ಪಾರದರ್ಶಕ ಆಡಳಿತವನ್ನು ನೀಡುವುದು ಮಸೂದೆಯ ಉದ್ದೇಶವಾಗಿದೆ. ಕಾಂಗ್ರೆಸ್ ಆಡಳಿತದಿಂದಲೂ ಜಾರಿಯಲ್ಲಿರುವ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ” ಎಂದು ಶಾ ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹತೆ ರದ್ದು: ಇಂದಿನಿಂದ ಕಲಾಪದಲ್ಲಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...