Homeಮುಖಪುಟದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

ದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

- Advertisement -
- Advertisement -

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಕಾರಣವಾದ ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿ, ಬಳಿಕ ಅನುಮೋದಕನಾಗಿದ್ದ ರಾಘವ ಮಾಗುಂಟ ರೆಡ್ಡಿಯ ತಂದೆ ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ ಎನ್‌ಡಿಎ ಟಿಕೆಟ್‌ ನೀಡಲಾಗಿದೆ.

ಮಾಗುಂಟ ಶ್ರೀನಿವಾಸುಲು ರೆಡ್ಡಿ ಆಂಧ್ರಪ್ರದೇಶದ ಪ್ರಮುಖ ಬಿಜೆಪಿ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷದಿಂದ  ಶುಕ್ರವಾರ ಲೋಕಸಭೆ ಟಿಕೆಟ್ ಪಡೆದಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದಂತೆ, ಫೆಬ್ರವರಿ 28ರಂದು ತಂದೆ-ಮಗ ಇಬ್ಬರೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದಿಂದ ಟಿಡಿಪಿಗೆ ಸೇರಿದ ನಂತರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ನಿರತರಾಗಿದ್ದರು. ಒಂಗೋಲ್‌ನಿಂದ ನಾಲ್ಕು ಬಾರಿ ಸಂಸದರಾಗಿರುವ ಶ್ರೀನಿವಾಸುಲು ಈ ಬಾರಿ ತಮ್ಮ ಮಗನಿಗೆ ಟಿಕೆಟ್ ನೀಡಬೇಕೆಂದು ಬಯಸಿದ್ದರು. ಆದರೆ ಅಬಕಾರಿ ನೀತಿ ಪ್ರಕರಣದ ಕರಿ ನೆರಳು ಟಿಡಿಪಿ ನಿರ್ಧಾರವನ್ನು ಪ್ರೇರೇಪಿಸಿತು ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಳಗೊಂಡಿರುವ ಎನ್‌ಡಿಎ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮೇ 13ರಂದು ಆಂಧ್ರಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ.

ಗುರುವಾರ ದೆಹಲಿ ನ್ಯಾಯಾಲಯದಲ್ಲಿ ಕೇಜ್ರಿವಾಲ್ ಅವರು ಹೇಳಿಕೆಯಲ್ಲಿ ತಂದೆ-ಮಗ ಇಬ್ಬರ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಅಲ್ಲಿ ಶ್ರೀನಿವಾಸುಲು ತನ್ನ ಮಗನನ್ನು ಫೆಬ್ರವರಿ 2023ರಲ್ಲಿ ಬಂಧಿಸಿದಾಗ ನನ್ನ ವಿರುದ್ಧ ಬಲವಂತವಾಗಿ ಹೇಳಿಕೆ ನೀಡಿದ್ದಾರೆ. ಆ ಬಳಿಕ ರಾಘವ ಅವರು ಅಕ್ಟೋಬರ್ 2023ರಲ್ಲಿ ಪ್ರಕರಣದಲ್ಲಿ ಅನುಮೋದಕರಾದ ನಂತರ ಅವರಿಗೆ ಜಾಮೀನು ನೀಡಲಾಗಿದೆ.

ಇದರ ನಂತರ ಕೆ.ಕವಿತಾ ಅವರು ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ 19 ಮಾರ್ಚ್ 2021ರಂದು ಕರೆ ಮಾಡಿ ಅವರನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದಾರೆ. ಮರುದಿನ, ಶ್ರೀನಿವಾಸಲು ರೆಡ್ಡಿ ಹೈದರಾಬಾದ್‌ನಲ್ಲಿರುವ ಅವರ ನಿವಾಸಕ್ಕೆ ಕವಿತಾ ಅವರನ್ನು ಭೇಟಿಯಾಗಲು ಹೋಗಿದ್ದಾರೆ. ಆ ಸಭೆಯಲ್ಲಿ ಕೆ.ಕವಿತಾ ಅವರು ಅರವಿಂದ್ ಕೇಜ್ರಿವಾಲ್ ತಮ್ಮೊಂದಿಗೆ ಮಾತನಾಡಿ 100 ಕೋಟಿ ನೀಡುವಂತೆ ಕೇಳಿದ್ದಾರೆ ಎಂದು ಹೇಳಿದ್ದಾರೆ. ಅದರಂತೆ ಶ್ರೀನಿವಾಸಲು ರೆಡ್ಡಿ ಅವರಿಗೆ 50 ಕೋಟಿ ರೂ. ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ ಎಂದು ಇಡಿ ಆರೋಪಿಸಿದೆ. ರಾಘವ ರೆಡ್ಡಿ ಅವರು ತಮ್ಮ ತಂದೆ ಮತ್ತು ಕೆ. ಕವಿತಾ ಅವರ ನಡುವಿನ ಒಪ್ಪಂದದ ಪ್ರಕಾರ ಕವಿತಾ ಅವರ ಸಹಚರರಿಗೆ 25 ಕೋಟಿ ರೂಪಾಯಿ ನಗದು ಪಾವತಿಸಿದ್ದಾರೆ ಎಂದು ಇಡಿಗೆ ತಿಳಿಸಿದ್ದಾರೆ.

ಇದನ್ನು ಓದಿ: ಅಬಕಾರಿ ನೀತಿ ಹಗರಣ: ದೆಹಲಿಯ ಮತ್ತೋರ್ವ ಸಚಿವರಿಗೆ ED ಸಮನ್ಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...