Homeಮುಖಪುಟದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

ದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

- Advertisement -
- Advertisement -

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಕಾರಣವಾದ ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿ, ಬಳಿಕ ಅನುಮೋದಕನಾಗಿದ್ದ ರಾಘವ ಮಾಗುಂಟ ರೆಡ್ಡಿಯ ತಂದೆ ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ ಎನ್‌ಡಿಎ ಟಿಕೆಟ್‌ ನೀಡಲಾಗಿದೆ.

ಮಾಗುಂಟ ಶ್ರೀನಿವಾಸುಲು ರೆಡ್ಡಿ ಆಂಧ್ರಪ್ರದೇಶದ ಪ್ರಮುಖ ಬಿಜೆಪಿ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷದಿಂದ  ಶುಕ್ರವಾರ ಲೋಕಸಭೆ ಟಿಕೆಟ್ ಪಡೆದಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದಂತೆ, ಫೆಬ್ರವರಿ 28ರಂದು ತಂದೆ-ಮಗ ಇಬ್ಬರೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದಿಂದ ಟಿಡಿಪಿಗೆ ಸೇರಿದ ನಂತರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ನಿರತರಾಗಿದ್ದರು. ಒಂಗೋಲ್‌ನಿಂದ ನಾಲ್ಕು ಬಾರಿ ಸಂಸದರಾಗಿರುವ ಶ್ರೀನಿವಾಸುಲು ಈ ಬಾರಿ ತಮ್ಮ ಮಗನಿಗೆ ಟಿಕೆಟ್ ನೀಡಬೇಕೆಂದು ಬಯಸಿದ್ದರು. ಆದರೆ ಅಬಕಾರಿ ನೀತಿ ಪ್ರಕರಣದ ಕರಿ ನೆರಳು ಟಿಡಿಪಿ ನಿರ್ಧಾರವನ್ನು ಪ್ರೇರೇಪಿಸಿತು ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಳಗೊಂಡಿರುವ ಎನ್‌ಡಿಎ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮೇ 13ರಂದು ಆಂಧ್ರಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ.

ಗುರುವಾರ ದೆಹಲಿ ನ್ಯಾಯಾಲಯದಲ್ಲಿ ಕೇಜ್ರಿವಾಲ್ ಅವರು ಹೇಳಿಕೆಯಲ್ಲಿ ತಂದೆ-ಮಗ ಇಬ್ಬರ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಅಲ್ಲಿ ಶ್ರೀನಿವಾಸುಲು ತನ್ನ ಮಗನನ್ನು ಫೆಬ್ರವರಿ 2023ರಲ್ಲಿ ಬಂಧಿಸಿದಾಗ ನನ್ನ ವಿರುದ್ಧ ಬಲವಂತವಾಗಿ ಹೇಳಿಕೆ ನೀಡಿದ್ದಾರೆ. ಆ ಬಳಿಕ ರಾಘವ ಅವರು ಅಕ್ಟೋಬರ್ 2023ರಲ್ಲಿ ಪ್ರಕರಣದಲ್ಲಿ ಅನುಮೋದಕರಾದ ನಂತರ ಅವರಿಗೆ ಜಾಮೀನು ನೀಡಲಾಗಿದೆ.

ಇದರ ನಂತರ ಕೆ.ಕವಿತಾ ಅವರು ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ 19 ಮಾರ್ಚ್ 2021ರಂದು ಕರೆ ಮಾಡಿ ಅವರನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದಾರೆ. ಮರುದಿನ, ಶ್ರೀನಿವಾಸಲು ರೆಡ್ಡಿ ಹೈದರಾಬಾದ್‌ನಲ್ಲಿರುವ ಅವರ ನಿವಾಸಕ್ಕೆ ಕವಿತಾ ಅವರನ್ನು ಭೇಟಿಯಾಗಲು ಹೋಗಿದ್ದಾರೆ. ಆ ಸಭೆಯಲ್ಲಿ ಕೆ.ಕವಿತಾ ಅವರು ಅರವಿಂದ್ ಕೇಜ್ರಿವಾಲ್ ತಮ್ಮೊಂದಿಗೆ ಮಾತನಾಡಿ 100 ಕೋಟಿ ನೀಡುವಂತೆ ಕೇಳಿದ್ದಾರೆ ಎಂದು ಹೇಳಿದ್ದಾರೆ. ಅದರಂತೆ ಶ್ರೀನಿವಾಸಲು ರೆಡ್ಡಿ ಅವರಿಗೆ 50 ಕೋಟಿ ರೂ. ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ ಎಂದು ಇಡಿ ಆರೋಪಿಸಿದೆ. ರಾಘವ ರೆಡ್ಡಿ ಅವರು ತಮ್ಮ ತಂದೆ ಮತ್ತು ಕೆ. ಕವಿತಾ ಅವರ ನಡುವಿನ ಒಪ್ಪಂದದ ಪ್ರಕಾರ ಕವಿತಾ ಅವರ ಸಹಚರರಿಗೆ 25 ಕೋಟಿ ರೂಪಾಯಿ ನಗದು ಪಾವತಿಸಿದ್ದಾರೆ ಎಂದು ಇಡಿಗೆ ತಿಳಿಸಿದ್ದಾರೆ.

ಇದನ್ನು ಓದಿ: ಅಬಕಾರಿ ನೀತಿ ಹಗರಣ: ದೆಹಲಿಯ ಮತ್ತೋರ್ವ ಸಚಿವರಿಗೆ ED ಸಮನ್ಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...