Homeಮುಖಪುಟದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

ದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

- Advertisement -
- Advertisement -

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಕಾರಣವಾದ ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿ, ಬಳಿಕ ಅನುಮೋದಕನಾಗಿದ್ದ ರಾಘವ ಮಾಗುಂಟ ರೆಡ್ಡಿಯ ತಂದೆ ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ ಎನ್‌ಡಿಎ ಟಿಕೆಟ್‌ ನೀಡಲಾಗಿದೆ.

ಮಾಗುಂಟ ಶ್ರೀನಿವಾಸುಲು ರೆಡ್ಡಿ ಆಂಧ್ರಪ್ರದೇಶದ ಪ್ರಮುಖ ಬಿಜೆಪಿ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷದಿಂದ  ಶುಕ್ರವಾರ ಲೋಕಸಭೆ ಟಿಕೆಟ್ ಪಡೆದಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದಂತೆ, ಫೆಬ್ರವರಿ 28ರಂದು ತಂದೆ-ಮಗ ಇಬ್ಬರೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದಿಂದ ಟಿಡಿಪಿಗೆ ಸೇರಿದ ನಂತರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ನಿರತರಾಗಿದ್ದರು. ಒಂಗೋಲ್‌ನಿಂದ ನಾಲ್ಕು ಬಾರಿ ಸಂಸದರಾಗಿರುವ ಶ್ರೀನಿವಾಸುಲು ಈ ಬಾರಿ ತಮ್ಮ ಮಗನಿಗೆ ಟಿಕೆಟ್ ನೀಡಬೇಕೆಂದು ಬಯಸಿದ್ದರು. ಆದರೆ ಅಬಕಾರಿ ನೀತಿ ಪ್ರಕರಣದ ಕರಿ ನೆರಳು ಟಿಡಿಪಿ ನಿರ್ಧಾರವನ್ನು ಪ್ರೇರೇಪಿಸಿತು ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಳಗೊಂಡಿರುವ ಎನ್‌ಡಿಎ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮೇ 13ರಂದು ಆಂಧ್ರಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ.

ಗುರುವಾರ ದೆಹಲಿ ನ್ಯಾಯಾಲಯದಲ್ಲಿ ಕೇಜ್ರಿವಾಲ್ ಅವರು ಹೇಳಿಕೆಯಲ್ಲಿ ತಂದೆ-ಮಗ ಇಬ್ಬರ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಅಲ್ಲಿ ಶ್ರೀನಿವಾಸುಲು ತನ್ನ ಮಗನನ್ನು ಫೆಬ್ರವರಿ 2023ರಲ್ಲಿ ಬಂಧಿಸಿದಾಗ ನನ್ನ ವಿರುದ್ಧ ಬಲವಂತವಾಗಿ ಹೇಳಿಕೆ ನೀಡಿದ್ದಾರೆ. ಆ ಬಳಿಕ ರಾಘವ ಅವರು ಅಕ್ಟೋಬರ್ 2023ರಲ್ಲಿ ಪ್ರಕರಣದಲ್ಲಿ ಅನುಮೋದಕರಾದ ನಂತರ ಅವರಿಗೆ ಜಾಮೀನು ನೀಡಲಾಗಿದೆ.

ಇದರ ನಂತರ ಕೆ.ಕವಿತಾ ಅವರು ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ 19 ಮಾರ್ಚ್ 2021ರಂದು ಕರೆ ಮಾಡಿ ಅವರನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದಾರೆ. ಮರುದಿನ, ಶ್ರೀನಿವಾಸಲು ರೆಡ್ಡಿ ಹೈದರಾಬಾದ್‌ನಲ್ಲಿರುವ ಅವರ ನಿವಾಸಕ್ಕೆ ಕವಿತಾ ಅವರನ್ನು ಭೇಟಿಯಾಗಲು ಹೋಗಿದ್ದಾರೆ. ಆ ಸಭೆಯಲ್ಲಿ ಕೆ.ಕವಿತಾ ಅವರು ಅರವಿಂದ್ ಕೇಜ್ರಿವಾಲ್ ತಮ್ಮೊಂದಿಗೆ ಮಾತನಾಡಿ 100 ಕೋಟಿ ನೀಡುವಂತೆ ಕೇಳಿದ್ದಾರೆ ಎಂದು ಹೇಳಿದ್ದಾರೆ. ಅದರಂತೆ ಶ್ರೀನಿವಾಸಲು ರೆಡ್ಡಿ ಅವರಿಗೆ 50 ಕೋಟಿ ರೂ. ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ ಎಂದು ಇಡಿ ಆರೋಪಿಸಿದೆ. ರಾಘವ ರೆಡ್ಡಿ ಅವರು ತಮ್ಮ ತಂದೆ ಮತ್ತು ಕೆ. ಕವಿತಾ ಅವರ ನಡುವಿನ ಒಪ್ಪಂದದ ಪ್ರಕಾರ ಕವಿತಾ ಅವರ ಸಹಚರರಿಗೆ 25 ಕೋಟಿ ರೂಪಾಯಿ ನಗದು ಪಾವತಿಸಿದ್ದಾರೆ ಎಂದು ಇಡಿಗೆ ತಿಳಿಸಿದ್ದಾರೆ.

ಇದನ್ನು ಓದಿ: ಅಬಕಾರಿ ನೀತಿ ಹಗರಣ: ದೆಹಲಿಯ ಮತ್ತೋರ್ವ ಸಚಿವರಿಗೆ ED ಸಮನ್ಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...