Homeಮುಖಪುಟದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

ದೆಹಲಿ ಅಬಕಾರಿ ನೀತಿ ಹಗರಣದ ಆರೋಪಿಯ ತಂದೆಗೆ ಎನ್‌ಡಿಎ ಟಿಕೆಟ್‌

- Advertisement -
- Advertisement -

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ಕಾರಣವಾದ ದೆಹಲಿ ಅಬಕಾರಿ ನೀತಿ ಪ್ರಕರಣದ ಆರೋಪಿ, ಬಳಿಕ ಅನುಮೋದಕನಾಗಿದ್ದ ರಾಘವ ಮಾಗುಂಟ ರೆಡ್ಡಿಯ ತಂದೆ ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ ಎನ್‌ಡಿಎ ಟಿಕೆಟ್‌ ನೀಡಲಾಗಿದೆ.

ಮಾಗುಂಟ ಶ್ರೀನಿವಾಸುಲು ರೆಡ್ಡಿ ಆಂಧ್ರಪ್ರದೇಶದ ಪ್ರಮುಖ ಬಿಜೆಪಿ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷದಿಂದ  ಶುಕ್ರವಾರ ಲೋಕಸಭೆ ಟಿಕೆಟ್ ಪಡೆದಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದಂತೆ, ಫೆಬ್ರವರಿ 28ರಂದು ತಂದೆ-ಮಗ ಇಬ್ಬರೂ ವೈಎಸ್‌ಆರ್ ಕಾಂಗ್ರೆಸ್ ಪಕ್ಷದಿಂದ ಟಿಡಿಪಿಗೆ ಸೇರಿದ ನಂತರ ಕ್ಷೇತ್ರದಲ್ಲಿ ಪ್ರಚಾರದಲ್ಲಿ ನಿರತರಾಗಿದ್ದರು. ಒಂಗೋಲ್‌ನಿಂದ ನಾಲ್ಕು ಬಾರಿ ಸಂಸದರಾಗಿರುವ ಶ್ರೀನಿವಾಸುಲು ಈ ಬಾರಿ ತಮ್ಮ ಮಗನಿಗೆ ಟಿಕೆಟ್ ನೀಡಬೇಕೆಂದು ಬಯಸಿದ್ದರು. ಆದರೆ ಅಬಕಾರಿ ನೀತಿ ಪ್ರಕರಣದ ಕರಿ ನೆರಳು ಟಿಡಿಪಿ ನಿರ್ಧಾರವನ್ನು ಪ್ರೇರೇಪಿಸಿತು ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದಲ್ಲಿ ಟಿಡಿಪಿ, ಜನಸೇನಾ ಪಕ್ಷ ಮತ್ತು ಬಿಜೆಪಿ ಒಳಗೊಂಡಿರುವ ಎನ್‌ಡಿಎ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮೇ 13ರಂದು ಆಂಧ್ರಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಏಕಕಾಲದಲ್ಲಿ ನಡೆಯಲಿದೆ.

ಗುರುವಾರ ದೆಹಲಿ ನ್ಯಾಯಾಲಯದಲ್ಲಿ ಕೇಜ್ರಿವಾಲ್ ಅವರು ಹೇಳಿಕೆಯಲ್ಲಿ ತಂದೆ-ಮಗ ಇಬ್ಬರ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ಅಲ್ಲಿ ಶ್ರೀನಿವಾಸುಲು ತನ್ನ ಮಗನನ್ನು ಫೆಬ್ರವರಿ 2023ರಲ್ಲಿ ಬಂಧಿಸಿದಾಗ ನನ್ನ ವಿರುದ್ಧ ಬಲವಂತವಾಗಿ ಹೇಳಿಕೆ ನೀಡಿದ್ದಾರೆ. ಆ ಬಳಿಕ ರಾಘವ ಅವರು ಅಕ್ಟೋಬರ್ 2023ರಲ್ಲಿ ಪ್ರಕರಣದಲ್ಲಿ ಅನುಮೋದಕರಾದ ನಂತರ ಅವರಿಗೆ ಜಾಮೀನು ನೀಡಲಾಗಿದೆ.

ಇದರ ನಂತರ ಕೆ.ಕವಿತಾ ಅವರು ಮಾಗುಂಟ ಶ್ರೀನಿವಾಸುಲು ರೆಡ್ಡಿಗೆ 19 ಮಾರ್ಚ್ 2021ರಂದು ಕರೆ ಮಾಡಿ ಅವರನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದಾರೆ. ಮರುದಿನ, ಶ್ರೀನಿವಾಸಲು ರೆಡ್ಡಿ ಹೈದರಾಬಾದ್‌ನಲ್ಲಿರುವ ಅವರ ನಿವಾಸಕ್ಕೆ ಕವಿತಾ ಅವರನ್ನು ಭೇಟಿಯಾಗಲು ಹೋಗಿದ್ದಾರೆ. ಆ ಸಭೆಯಲ್ಲಿ ಕೆ.ಕವಿತಾ ಅವರು ಅರವಿಂದ್ ಕೇಜ್ರಿವಾಲ್ ತಮ್ಮೊಂದಿಗೆ ಮಾತನಾಡಿ 100 ಕೋಟಿ ನೀಡುವಂತೆ ಕೇಳಿದ್ದಾರೆ ಎಂದು ಹೇಳಿದ್ದಾರೆ. ಅದರಂತೆ ಶ್ರೀನಿವಾಸಲು ರೆಡ್ಡಿ ಅವರಿಗೆ 50 ಕೋಟಿ ರೂ. ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ ಎಂದು ಇಡಿ ಆರೋಪಿಸಿದೆ. ರಾಘವ ರೆಡ್ಡಿ ಅವರು ತಮ್ಮ ತಂದೆ ಮತ್ತು ಕೆ. ಕವಿತಾ ಅವರ ನಡುವಿನ ಒಪ್ಪಂದದ ಪ್ರಕಾರ ಕವಿತಾ ಅವರ ಸಹಚರರಿಗೆ 25 ಕೋಟಿ ರೂಪಾಯಿ ನಗದು ಪಾವತಿಸಿದ್ದಾರೆ ಎಂದು ಇಡಿಗೆ ತಿಳಿಸಿದ್ದಾರೆ.

ಇದನ್ನು ಓದಿ: ಅಬಕಾರಿ ನೀತಿ ಹಗರಣ: ದೆಹಲಿಯ ಮತ್ತೋರ್ವ ಸಚಿವರಿಗೆ ED ಸಮನ್ಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...