HomeUncategorizedಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್'

ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

- Advertisement -
- Advertisement -

“ರಿಯಲ್ ಲೆಜೆಂಡ್ ಪುನೀತ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದು, ಶಾಶ್ವತವಾಗಿ ನನ್ನ ನೆನಪಿನಲ್ಲಿ ಉಳಿಯುತ್ತದೆ. ಆಗ ನಾನು ಕೇವಲ ಡ್ಯಾನ್ಸರ್ ಅಷ್ಟೆ. ಒಂದು ಅವಾರ್ಡ್ ಕಾರ್ಯಕ್ರಮಕ್ಕೆ ನಾವು ಡ್ಯಾನ್ಸ್ ರಿಹರ್ಸಲ್ ಮಾಡುತ್ತಿದ್ದೆವು. ಊಟದ ನಂತರ ಪುನೀತ್ ಸರ್ ಅವರು ತಮ್ಮ ಡ್ಯಾನ್ಸ್ ರಿಹರ್ಸಲ್‌ಗೆ ಬಂದರು. ಅವರನ್ನು ಸ್ವಾಗತಿಸಲು ನಾವೆಲ್ಲರೂ ಎದ್ದು ನಿಂತೆವು. ವೇದಿಕೆಯ ಒಂದು ಭಾಗದಲ್ಲಿ ಸಿನಿಮಾ ನಟ, ನಟಿಯರು ಮತ್ತು ಕೊರಿಯೋಗ್ರಾಫರ್ಸ್ ನಿಂತಿದ್ದರು. ಮತ್ತೊಂದು ಕಡೆ ನಾವು ಡ್ಯಾನ್ಸರ್‌ಗಳು ನಿಂತಿದ್ದೆವು. ಅಲ್ಲಿಗೆ ಬಂದ ಕೂಡಲೇ ಅವರು ಮೊದಲು ನೋಡಿದ್ದು ಡ್ಯಾನ್ಸರ್‌ಗಳನ್ನು. ಬಳಿಕ ಎಲ್ಲರಿಗೂ ಹಲೋ ಹೇಗಿದ್ದೀರಾ ಎಂದು ಕೇಳಿದರು. ಡ್ಯಾನ್ಸ್ ಅಭ್ಯಾಸ ಮಾಡಿ ಮಾಡಿ ಸುಸ್ತಾಗಿತ್ತು, ಮೈಕೈ ನೋವು ಕೂಡ ಇತ್ತು. ಆದರೆ, ಪುನಿತ್ ಅವರ ಎನರ್ಜಿ ಮತ್ತು ಅವರ ನಗು ನೋಡಿ ನಮಗೆ ಮತ್ತೆ ರಿಹರ್ಸಲ್ ಮಾಡಬೇಕು ಅನಿಸುತ್ತಿತ್ತು. ಎಲ್ಲರಿಗೂ ಫುಲ್ ಉತ್ಸಾಹ ಬಂದಿತ್ತು. ಪುನೀತ್ ರಾಜಕುಮಾರ್‌ನಂತಹ ನಟ ಈ ರೀತಿ ಮಾಡುವ ಅಗತ್ಯವಿರಲಿಲ್ಲ. ಅವರು ಅಲ್ಲಿಗೆ ಬರುತ್ತಿದ್ದಂತೆ ಮತ್ತೊಂದು ಭಾಗದಲ್ಲಿದ್ದ ಸೆಲೆಬ್ರಿಟಿಗಳನ್ನು ಮಾತನಾಡಿಸಬಹುದಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ. ಅವರು ಪ್ರತಿಯೊಬ್ಬರಿಗೂ ಒಂದೇ ರೀತಿಯ ಪ್ರೀತಿ ಮತ್ತು ಗೌರವ ಕೊಡುತ್ತಿದ್ದರು” ಇದು ತಾವು ಡ್ಯಾನ್ಸರ್ ಆಗಿದ್ದಾಗ ನಡೆದ ಘಟನೆಯನ್ನು ನಟಿ ಶ್ರುತಿ ಹರಿಹರನ್ ಸಾಮಾಜಿಕ ಜಾಲತಾಣವೊಂದರ ತಮ್ಮ ಪೋಸ್ಟ್‌ನಲ್ಲಿ ನೆನಪಿಸಿಕೊಂಡ ರೀತಿ.

ಇದು ಡ್ಯಾನ್ಸ್ ಬಗ್ಗೆ, ಡ್ಯಾನ್ಸರ್‌ಗಳ ಬಗ್ಗೆ ನಟ ಪುನಿತ್ ರಾಜಕುಮಾರ್ ಅವರಿಗಿದ್ದ ಪ್ರೀತಿ. ಪುನೀತ್ ರಾಜಕುಮಾರ್ ಕನ್ನಡ ಸಿನಿ ಪ್ರೇಮಿಗಳಲ್ಲಿ ಡ್ಯಾನ್ಸ್ ಕ್ರೇಜ್ ಹುಟ್ಟಿಸಿದ ನಾಯಕ ನಟ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಕನ್ನಡದ ಮೈಕಲ್ ಜಾಕ್ಸನ್ ಎಂದು ಕೂಡ ಕರೆಸಿಕೊಳ್ಳುವ ಅಪ್ಪು ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಡ್ಯಾನ್ಸ್ ಹುಚ್ಚು ಹಿಡಿಸಿದವರು.

ಚಲಿಸುವ ಮೋಡಗಳು ಚಿತ್ರದ ’ಕಾಣದಂತೆ ಮಾಯವಾದನೋ’ ಹಾಡು, ಪರಶುರಾಮ ಚಿತ್ರದಲ್ಲಿನ ’ನಗುತಾ ನಗುತಾ ಬಾಳು ನೀನು ನೂರು ವರುಷ’ ಗೀತೆಯಲ್ಲಿ ಬರುವ ಕೆಲವೇ ಸ್ಟೆಪ್‌ಗಳಲ್ಲಿ ಬಾಲನಟ ಪುನೀತ್ ತಮ್ಮ ನೃತ್ಯ ಕಲೆಯ ಛಾಪನ್ನು ಪರಿಚಯಿಸಿದ್ದರು. ಇನ್ನು ನಾಯಕನಟನಾಗಿ ಅವರ ಮೊದಲ ಚಿತ್ರ ’ಅಪ್ಪುವಿನ ’ತಾಲಿಬಾನ್ ಅಲ್ಲ ಅಲ್ಲಾ ಹಾಡು ಕಾಲೇಜು ಯುವಕರಲ್ಲಿ ಹೊಸ ಉತ್ಸಾಹ ತುಂಬಿತ್ತು. ರಾಮ್ ಚಿತ್ರದ ’ಹೊಸ ಗಾನ ಬಜಾನ’, ಜಾಕಿ ಚಿತ್ರದ ’ಜಾಕಿ.. ಜಾಕಿ, ಶಿವ ಅಂತ ಹೋಗುತ್ತಿದ್ದೆ’ ಹಾಡುಗಳು, ಅಣ್ಣಾ ಬಾಂಡ್ ಚಿತ್ರದ ಟೈಟಲ್ ಟ್ರಾಕ್, ಪರಮಾತ್ಮ ಚಿತ್ರದ ’ಕತ್ಲಲ್ಲಿ ಕರಡಿಗೆ’ ಹಾಡುಗಳ ಡ್ಯಾನ್ಸ್ ಸ್ಟೆಪ್ಸ್ ಮಕ್ಕಳಲ್ಲಿ, ಟೀನೇಜ್ ಮತ್ತು ಯುವಕ ಯುವತಿಯರಲ್ಲಿ ಅಪ್ಪು ಬಗ್ಗೆ ವಿಪರೀತ ಪ್ರೀತಿ ಹುಟ್ಟಿಸಿದ್ದವು. ಇವುಗಳ ಕಾರಣಕ್ಕೆ ಹೆಚ್ಚು ಮಕ್ಕಳನ್ನು ಬಳಸಿಕೊಂಡು ರಾಜಕುಮಾರ ಚಿತ್ರದ ’ಡ್ಯಾನ್ಸ್, ಡ್ಯಾನ್ಸ್, ಡ್ಯಾನ್ಸ್ ಅಪ್ಪು ಡ್ಯಾನ್ಸ್’ ಹಾಡು ಚಿತ್ರೀಕರಿಸಲಾಗಿತ್ತು.

ಪುನೀತ್ ರಾಜಕುಮಾರ್ ಅವರ ಡ್ಯಾನ್ಸ್ ಬಗ್ಗೆ, ಡ್ಯಾನ್ಸ್ ಮಾಸ್ಟರ್ ಆಗಿ ಸಿನಿರಂಗಕ್ಕೆ ಬಂದು ನಿರ್ದೇಶಕರಾಗಿರುವ ಹರ್ಷ ಮಾಸ್ಟರ್ ನ್ಯಾಯಪಥ ಪತ್ರಿಕೆಯೊಂದಿಗೆ ನೆನಪಿಸಿಕೊಂಡಿದ್ದು ಹೀಗೆ, “ಅಪ್ಪು ಸಿನಿಮಾಗೂ ಮುಂಚೆಯೇ ನನಗೆ ಪುನೀತ್ ರಾಜಕುಮಾರ್ ಪರಿಚಯ. ಆ ಸಿನಿಮಾಗೂ ಮುಂಚೆಯೇ, ಅಣ್ಣಾವ್ರು ಮತ್ತು ಪಾರ್ವತಮ್ಮ ರಾಜಕುಮಾರ್ ಅವರು ಒಂದೆರಡು ತಿಂಗಳು ಪುನೀತ್ ಅವರಿಗೆ ಡ್ಯಾನ್ಸ್ ಟ್ರೇನಿಂಗ್ ಕೊಡಲು ಕರೆಸಿದ್ದರು. ಅವರ ಅಪ್ಪು ಚಿತ್ರದಿಂದ ಈಗ ಶೂಟಿಂಗ್ ನಡೆಯುತ್ತಿದ್ದ ಜೇಮ್ಸ್‌ವರೆಗೂ ಅವರ ಜೊತೆಗೆ ಇದ್ದೀನಿ. ಜೇಮ್ಸ್ ಸಿನಿಮಾದ ಒಂದು ಹಾಡಿಗೆ ಕಾಶ್ಮೀರಕ್ಕೆ ತೆರಳಿ ಕೊರಿಯೋಗ್ರಾಫ್ ಮಾಡಿ ಬಂದಿದ್ದಿನಿ. ಡ್ಯಾನ್ಸರ್ ಅಂತ ಬಂದಾಗ ಅವರು ಯಾವತ್ತೂ ಕೂಡ ಇದು ಕಷ್ಟ ಅಂತ ಹೇಳಲೇ ಇಲ್ಲ. ಕಷ್ಟ ಅನ್ನೋ ಪದವನ್ನು ನಾನು ಅವರಿಂದ ಕೇಳಲೇ ಇಲ್ಲ. ಬೆಸ್ಟ್ ಡ್ಯಾನ್ಸರ್ ಅವರು. ಡ್ಯಾನ್ಸ್ ಅಂದ್ರೆ ಅವರಿಗೆ ತುಂಬಾ ಇಷ್ಟ” ಎನ್ನುತ್ತಾರೆ.

“ಪುನೀತ್ ಅವರ ಜೊತೆಗೆ ಸಿನಿಮಾದಲ್ಲಿ ಡ್ಯಾನ್ಸ್ ಮಾಡಿದ್ದಿನಿ, ಅಭಿ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದೀನಿ. ಜೊತೆಗೆ ಅವರ ’ಅಂಜನಿ ಪುತ್ರಕ್ಕೆ ನಿರ್ದೇಶಕನಾಗಿದ್ದಿನಿ. ಎಲ್ಲಾ ವಿಧವಾಗಿ ಅವರ ಜೊತೆಗೆ ನಾನು ಇದ್ದೆ” ಎಂದು ಭಾವುಕರಾಗಿ ನುಟಿಯುತ್ತಾರೆ ನಿರ್ದೇಶಕ ಹರ್ಷ.

ಚಿತ್ರರಂಗದಲ್ಲಿ 200ಕ್ಕೂ ಹೆಚ್ಚು ಚಿತ್ರಗಳಿಗೆ ನೃತ್ಯನಿರ್ದೇಶನ ಮಾಡಿರುವ ಮದನ್ ಹರಿಣಿ ಜೋಡಿ, ಅಪ್ಪು ಬಗ್ಗೆ ತಮ್ಮ ನೆನಪುಗಳನ್ನು ಹಂಚಿಕೊಂಡಿದ್ದಾರೆ. “ಅವರು ತುಂಬಾ ಪ್ರತಿಭಾನ್ವಿತ ನಟ ಅವರು. ಸರಳತೆಯ ಪ್ರತಿರೂಪ. ಅವರ ಜೊತೆಗೆ ಕೆಲಸ ಮಾಡಿಲ್ಲ. ಅದರೆ ಅವರ ಬ್ಯಾನರ್ ಕೆಳಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು. ಅವರೊಬ್ಬ ಯುತ್ ಐಕಾನ್. ಅವರು ಒಬ್ಬ ನಟ, ಗಾಯಕ, ಡ್ಯಾನ್ಸರ್ ಎಲ್ಲವೂ ಆಗಿದ್ದ ಪರಿಪೂರ್ಣ ನಟ ಅವರು” ಎಂದಿದ್ದಾರೆ ಹರಿಣಿ.

“ಕನ್ನಡ ಚಿತ್ರರಂಗದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಒಂದು ಹಾಡಿಗೆ ಅವರಿಗೆ ಕೊರಿಯೋಗ್ರಾಫ್ ಮಾಡುವ ಅವಕಾಶ ಸಿಕ್ಕಿತ್ತು. ದರ್ಶನ್ ಮತ್ತು ಪುನೀತ್ ಇಬ್ಬರು ಬಬ್ರುವಾಹನ ಚಿತ್ರದ ಹಾಡಿಗೆ ನಟಿಸುತ್ತಿದ್ದರು. ಅದು ಒಂದು ಒಳ್ಳೆಯ ಅನುಭವ. ಅವರೊಬ್ಬ ಪರಿಪೂರ್ಣ ನಟ. ಈ ಆಘಾತದಿಂದ ನನಗೆ ಇನ್ನು ಚೇತರಿಸಿಕೊಳ್ಳಲು ಆಗುತ್ತಿಲ್ಲ ಎನ್ನುತ್ತಾರೆ ಹರಿಣಿ.

ಅಪ್ಪು ಅಭಿಮಾನಿಯಾಗಿರುವ ಮತ್ತು ತಮ್ಮ ನೃತ್ಯ ತರಬೇತಿಗೆ ಅಪ್ಪುನೇ ಯುನಿವರ್ಸಿಟಿ ಎನ್ನುವ ಡ್ಯಾನ್ಸ್ ಮಾಸ್ಟರ್ ಚೇತನ್ ಮಂಜುನಾಥ್, ಪುನೀತ್ ರಾಜಕುಮಾರ್ ಅವರನ್ನು ನೃತ್ಯರತ್ನ ಎನ್ನುತ್ತಾರೆ.
“ಅಪ್ಪು ಅಂದ್ರೆ ಎನರ್ಜಿ, ಸ್ಪೆಷಲೀ ಡ್ಯಾನ್ಸರ್ಸ್‌ಗೆ. ಅವರಿಂದ ತುಂಬಾ ಕಲ್ತಿದೀವಿ, ಕಲಿತಿರ್ತೀವಿ ಕೊನೆಯವರೆಗೂ.. ನನ್ನಂತ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಮಕ್ಕಳಿಗಂತೂ ಅಪ್ಪು ಡ್ಯಾನ್ಸ್ ಯುನಿವರ್ಸಿಟಿ ಇದ್ದಂಗೆ.. ಯಾಕಂದ್ರೆ ನಮಗೆ ನೃತ್ಯದಲ್ಲಿ ಹೊಸದಾಗಿ ಕಲಿಯೋದಕ್ಕೆ ಅನುಕೂಲಗಳಿರಲಿಲ್ಲ.. ಇವರ ಪ್ರತಿ ಸಿನಿಮಾಗಳಿಗೂ ಹುಚ್ಚರಂತೆ ಕಾಯ್ತಿದ್ವಿ. ಸಾಂಗ್ಸ್ ಹೇಗಿರ್ತವೆ.. ಡ್ಯಾನ್ಸ್ ಹೇಗಿರುತ್ತೆ, ಯಾವ ರೀತಿ ಹೊಸ ಸ್ಟೆಪ್ ಹಾಕ್ತಾರೆ ಅಂತ.. ಸಿನಿಮಾ ಹಾಡು ರಿಲೀಸ್ ಆದ ತಕ್ಷಣ ಅವರು ಹಾಕಿರೊ ಸ್ಟೆಪ್‌ಗಳನ್ನ ಕಲ್ತು ಸ್ಟೇಜ್ ಪ್ರೋಗ್ರಾಮ್ ಕೊಡ್ತಿದ್ವಿ.. ನಮ್ ಜೊತೆ ಕಲಿತಿದ್ದ ಮಕ್ಕಳಿಗೂ ಹೇಳಿ ಕೊಡ್ತಿದ್ವಿ. ಅಪ್ಪು ನಮ್ಮ ಕನ್ನಡ ಚಿತ್ರರಂಗದ ನೃತ್ಯರತ್ನ.. ಬೇರೆ

ಇಂಡಸ್ಟ್ರಿಯಲ್ಲಿದ್ದ ಈ ಜನರೇಷನ್‌ನ ಗ್ರೇಟ್ ಡ್ಯಾನ್ಸರ್ಸ್ ಮತ್ತು ಹೀರೋಗಳಿಗೆಲ್ಲಾ ನಮ್ಮ ಕನ್ನಡದಿಂದ ಕಾಂಪಿಟಿಶನ್ ಕೊಡ್ತಿದ್ದಿದುಷ್ಟೇ ಅಲ್ಲ ನಮ್ಮ ಅಪ್ಪು, ನಾವೆಲ್ಲಾ ಎದೆ ತಟ್ಟಿಕೊಂಡು ಹೇಳ್ತಿದ್ವಿ ಅಪ್ಪು ಈಸ್ ನಂಬರ್ ಒನ್ ಡ್ಯಾನ್ಸರ್ ಇನ್ ಇಂಡಿಯಾ ಅಂತ.. ಈಗ ಫಿಸಿಕಲಿ ಅವರಿಲ್ಲಾ ಅಷ್ಟೇ.. ಬಟ್ ನನ್ನಂತ ಲಕ್ಷಾಂತರ ಕಲಾವಿದರ ಕಲೆಯೊಳಗೆ ಬೆರೆತುಹೋಗಿದ್ದಾರೆ ಅವರು. ಕಲೆ ಮತ್ತು ಕನ್ನಡದ ಜೊತೆ ಯಾವತ್ತೂ ಜೀವಂತವಾಗಿರ್ತಾರೆ. ನಮ್ಮಂತ ಯುವ ಕಲಾವಿದರಿಗಂತೂ ಅವರೇ ಭರವಸೆ ಮತ್ತು ಭವಿಷ್ಯ ಆಗಿದ್ದರು.. ಯಾಕಂದ್ರೆ ಅವರು ಪಿ.ಆರ್.ಕೆ ಪ್ರೊಡಕ್ಷನ್ ಸ್ಟಾರ್ಟ್ ಮಾಡಿ ಹೊಸಹೊಸ ತಂತ್ರಜ್ಞರಿಗೆ ಸಪೋರ್ಟ್ ಮಾಡ್ತಾ ಬೆಳೆಸ್ತಿದ್ದಿದ್ದು ನಮ್ಮ ಕಣ್ಣ ಮುಂದೇನೆ ಇದೆ.. ನಮ್ಮೆಲ್ಲರ ಕನಸುಗಳಿಗೆ.. ಹೊಸ ಹೊಸ ಸ್ಕ್ರಿಪ್ಟ್‌ಗಳಿಗೆ ಇನ್ನು ಅನಾಥಭಾವ ಕಾಡಲಿದೆ” ಎಂದು ಕಣ್ಣೀರು ಇಡುತ್ತಾರೆ ಬೆಂಗಳೂರಿನಲ್ಲಿ ’ನಕ್ಷತ್ರ ಸ್ಕೂಲ್ ಆಫ್ ಡ್ಯಾನ್ಸ್ ಅಂಡ್ ಡ್ರಾಮಾ’ ಸಂಸ್ಥೆ ನಡೆಸುತ್ತಿರುವ ಚೇತನ್ ಮಂಜುನಾಥ್.

ಸಿನಿಮಾಗಳಲ್ಲಿ ಕಥೆ, ಫೈಟ್, ಕಾಮಿಡಿಗೆ ಪ್ರಾಮುಖ್ಯತೆ ಕೊಟ್ಟ ಹಾಗೆಯೇ ಪುನೀತ್ ರಾಜಕುಮಾರ್ ಅವರ ಚಿತ್ರಗಳಲ್ಲಿ ಡ್ಯಾನ್ಸ್‌ಗಳಿಗೆ ಪ್ರಾಮುಖ್ಯತೆ ನೀಡಲಾಗುತ್ತಿತ್ತು. ಡ್ಯಾನ್ಸ್‌ನಲ್ಲಿ ಹೊಸಹೊಸ ಪ್ರಯೋಗಗಳಿಗೆ ತಮ್ಮನ್ನು ತಾವು ಒಡ್ಡಿಕೊಳ್ಳುತ್ತಿದ್ದರು ಅಪ್ಪು. ಪ್ರತಿ ಸಿನಿಮಾದಲ್ಲಿಯೂ ಒಂದಲ್ಲ ಒಂದು ಹಾಡು ಕರ್ನಾಟಕದಾದ್ಯಂತ ಕ್ರೇಜ್ ಕ್ರಿಯೇಟ್ ಮಾಡುತ್ತಿತ್ತು.

ಸಾಮಾಜಿಕ ಜಾಲತಾಣಗಳಲ್ಲಿ ಅಪ್ಪು ಡ್ಯಾನ್ಸ್ ಎಂದು ಟೈಪ್ ಮಾಡಿದರೆ ಮೊದಲು ಬರುವುದು ಅಪ್ಪು ಮಕ್ಕಳ ಜೊತೆಗೆ ಡ್ಯಾನ್ಸ್ ಮಾಡುವ ವಿಡಿಯೋ, ಮಕ್ಕಳಿಗೆ ಡ್ಯಾನ್ಸ್ ಹೇಳಿಕೊಡುವುದು, ಮಗುವಿಗಾಗಿ ಡ್ಯಾನ್ಸ್ ಮಾಡುವುದು ಇಂತಹವೆ. ಇದು ಮಕ್ಕಳಲ್ಲಿ ಅಪ್ಪು ಬಗೆಗಿನ ಅಭಿಮಾನಕ್ಕೆ ಸಾಕ್ಷ್ಯದಂತೆ ಬೆಳಗುತ್ತದೆ.
ಇತ್ತೀಚೆಗೆ ಭಜರಂಗಿ-೨ ಸಿನಿಮಾದ ಪ್ರಚಾರದ ವೇಳೆ ವೇದಿಕೆ ಮೇಲೆ ಶಿವರಾಜ್ ಕುಮಾರ್, ಯಶ್ ಜೊತೆಗೆ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ. ಇದರ ಜೊತೆಜೊತೆಗೆ ಡ್ಯಾನ್ಸ್ ರಾಜ, ಭಾರತದ ಮೈಕಲ್ ಜಾಕ್ಸನ್ ಎಂದು ಕರೆಸಿಕೊಳ್ಳುವ ಪ್ರಭುದೇವ್ ಅವರ ಜೊತೆಗೆ ’ಲಕ್ಕಿಮ್ಯಾನ್ ಚಿತ್ರದ ಹಾಡೊಂದಕ್ಕೆ ಅದ್ಭುತವಾಗಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ.

ತಮ್ಮದೇ ಪಿಆರ್‌ಕೆ ಬ್ಯಾನರ್‌ನಲ್ಲಿ ಬಂದ ಮಾಯಾಬಜಾರ್ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿ ಯುವ ಕಲಾವಿದರಿಗೆ ಪ್ರೋತ್ಸಾಹ ನೀಡಿದ್ದರು. ಕಿರುತೆರೆಯ ಹಲವು ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಡ್ಯಾನ್ಸರ್‌ಗಳಿಗೆ ಸ್ಫೂರ್ತಿ ತುಂಬಿದ್ದಾರೆ ಪುನೀತ್ ರಾಜಕುಮಾರ್. ಯಾವ ಡ್ಯಾನ್ಸರ್ ಆದರೂ ನಿಮ್ಮೊಂದಿಗೆ ಒಂದು ಸ್ಟೆಪ್ ಹಾಕಬೇಕು ಎಂದು ಕೇಳಿದ ತಕ್ಷಣ ವೇದಿಕೆ ಮೇಲೆ ಹತ್ತಿ ಡ್ಯಾನ್ಸ್ ಮಾಡಿರುವುದು ಅವರ ವಿನಯಕ್ಕೆ ಸಾಕ್ಷಿಯಾಗಿದೆ.

ಭೂತಾಯಿಯ ಗರ್ಭ ಸೇರಿದ್ದು ಕೇವಲ ಪುನೀತ್ ರಾಜಕುಮಾರ್ ಅವರ ದೇಹವಲ್ಲ. ಎಷ್ಟೋ ಯುವ ಪ್ರತಿಭೆಗಳ ಕನಸು ಕೂಡ. ಪಿಆರ್‌ಕೆ ಪ್ರೊಡಕ್ಷನ್ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಾಗುತ್ತಿತ್ತು. ಹೊಸ ಡ್ಯಾನ್ಸರ್‌ಗಳ ಬಳಿ ಹೊಸ ಹೊಸ ಕನಸುಗಳಿದ್ದವು. ಇವುಗಳೆಲ್ಲಾ ಪುನೀತ್ ಅವರ ಪ್ರತಿಭೆಯ ನೆನಪಿನಲ್ಲಿ ಮತ್ತೆ ಚಿಗುರೊಡೆಯಬೇಕಿದೆ. ಕನ್ನಡ ನಾಡು ಕಂಡ ಮಾನವೀಯ ವ್ಯಕ್ತಿತ್ವದ ಒಬ್ಬ ಮಹಾನ್ ನಟ ಮತ್ತು ಅದ್ಭುತ ನೃತ್ಯಗಾರರನ್ನು ನಾಡು ಕಳೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....