Homeಕರ್ನಾಟಕನುಡಿನಮನ: ಸಹಾಯ ಮಾಡಿದ್ದನ್ನು ‘ಅಪ್ಪು’ ಹೇಳಿಕೊಳ್ಳುತ್ತಿರಲಿಲ್ಲ

ನುಡಿನಮನ: ಸಹಾಯ ಮಾಡಿದ್ದನ್ನು ‘ಅಪ್ಪು’ ಹೇಳಿಕೊಳ್ಳುತ್ತಿರಲಿಲ್ಲ

ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಒಡನಾಟವನ್ನು ‘ಜಟ್ಟ’, ‘ಮೈತ್ರಿ’, ‘ಅಮರಾವತಿ’ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌ ಹಂಚಿಕೊಂಡಿದ್ದಾರೆ.

- Advertisement -
- Advertisement -

“ಪುನೀತ್‌ ರಾಜ್‌ಕುಮಾರ್‌ ಅವರ ದೊಡ್ಡತನವೆಂದರೆ ನೀವು ಅಪರಿಚಿತರಿದ್ದರೂ ಅವರ ಬಳಿ ಎರಡು ನಿಮಿಷ ಮಾತನಾಡಿದರೂ ಆ ಎರಡು ನಿಮಿಷ ನಿಮಗೆ ವಿಶೇಷವೆನಿಸುತ್ತಿತ್ತು” ಎಂದು ಪ್ರತಿಕ್ರಿಯಿಸಿದರು ಮೈತ್ರಿ ಸಿನಿಮಾ ನಿರ್ದೇಶಕ ಬಿ.ಎಂ.ಗಿರಿರಾಜ್‌.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಜಟ್ಟ, ಮೈತ್ರಿ, ಅಮರಾವತಿ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌, ಮೈತ್ರಿ ಸಿನಿಮಾ ನಿರ್ದೇಶಿಸುವಾಗ ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಅನುಭವಗಳನ್ನು ಹಂಚಿಕೊಂಡರು.

“ಈ ಸಮಯ ನಿಮಗಾಗಿ ಮೀಸಲಾಗಿದೆ ಎಂಬುದನ್ನು ಪುನೀತ್‌ ರಾಜ್‌ಕುಮಾರ್‌ ಅವರು ಮನದಟ್ಟು ಮಾಡಿ ಮಾತನಾಡುತ್ತಿದ್ದರು. ನಾನು ಅವರ ಮನೆಗೆ ಮೈತ್ರಿ ಸಿನಿಮಾದ ಕತೆ ಹೇಳಲು ಹೋದಾಗ ನಾನು ಯಾರು ಎಂಬುದು ಯಾರಿಗೂ ಗೊತ್ತಿರಲಿಲ್ಲ. ಆಗ ನನ್ನ ಯಾವ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಅವರೇ ಬಂದು ಕರೆದುಕೊಂಡು ಹೋಗಿ ಬಹಳ ಪ್ರೀತಿಯಿಂದ ಮಾತನಾಡಿದರು. ಅವರು ಯಾವುದಾದರೂ ವಿಷಯವನ್ನು ತಿರಸ್ಕರಿಸಿದರೂ ನಮಗೆ ಯಾರಿಗೂ ನೋವಾಗದಂತೆ ತಿರಸ್ಕಾರದ ಉದ್ದೇಶವನ್ನು ಸ್ಪಷ್ಟಪಡಿಸುತ್ತಿದ್ದರು. ಅವರು ಹೇಳಿದ್ದನ್ನು ಅಲ್ಲಗಳೆಯಲು ಸಾಧ್ಯವಾಗದಂತೆ ಮನದಟ್ಟು ಮಾಡುತ್ತಿದ್ದರು” ಎಂದು ಗಿರಿರಾಜ್ ಸ್ಮರಿಸಿದರು.

ಮುಂದುವರಿದು, “ಮೈತ್ರಿ ಸಿನಿಮಾ ಹೆಸರಘಟ್ಟದಲ್ಲಿ ಶೂಟ್‌ ಆಗುತ್ತಿತ್ತು. ನೂರೈವತ್ತು ಮಕ್ಕಳು ಬಂದಿದ್ದರು. ಸಂಯೋಜಕರು ಮಕ್ಕಳನ್ನು ಎಲ್ಲಿಂದಲೋ ಕರೆತಂದಿದ್ದರು. ಪುನೀತ್‌ ರಾಜ್‌ ಕುಮಾರ್‌ ಅವರು ಮಕ್ಕಳನ್ನು ನೋಡಿ, ಅವರು ಬರಿಗಾಲಲ್ಲಿ ಓಡಾಡುತ್ತಿದ್ದಾರೆ ಎಂದು ಎಲ್ಲ ಮಕ್ಕಳಿಗೂ ಫುಟ್‌ವೇರ್‌ಗಳನ್ನು ತರಿಸಿಕೊಟ್ಟರು. ಅವರು ಮಾಡಿರುವ ಮೈತ್ರಿಯಂತಹ ಸಿನಿಮಾ- ಸ್ಟಾರ್‌ ನಟರು ರಿಸ್ಕ್‌ ತೆಗೆದುಕೊಳ್ಳುವಂತಹದ್ದು. ಹೊಸತನ ಬರಬೇಕೆಂಬುದು ಅವರ ಉದ್ದೇಶವಾಗಿತ್ತು. ಕೊನೆಗೆ ಅವರೇ ಪ್ರೊಡಕ್ಷನ್‌ ಹೌಸ್‌ ತೆರೆದರು. ಹೊಸ ಬರಹಗಾರರಿಗೆ ಒತ್ತು ನೀಡುತ್ತಿದ್ದರು. ಸ್ಟಾರ್‌ ನಟರಿಗಿಂತ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದರು. ಜಂಟಲ್‌ ಮ್ಯಾನ್‌ ಎಂಬುದಕ್ಕೆ ಮೂರ್ತರೂಪ ಪುನೀತ್ ರಾಜ್‌ಕುಮಾರ್‌” ಎಂದು ಬಣ್ಣಿಸಿದರು.

“ಡಾ.ರಾಜ್‌ ಕುಮಾರ್‌ ಅವರು ನಿಧನರಾದಾಗ ಮನೆಯ ಹಿರಿಯ ಮಗ ನಮ್ಮನ್ನು ಅಗಲಿದ ಅನುಭವವಾಯಿತು. ನಮ್ಮ ಮನೆಯಲ್ಲಿ ಮಗು ಇಲ್ಲದಿದ್ದಾಗ ಸೃಷ್ಟಿಯಾಗುವ ನಿರ್ವಾತವನ್ನು ಅಪ್ಪು ನಿಧನ ತಂದಿದೆ. ಯಾರನ್ನೂ ಪುನೀತ್‌ ಅವರು ಕೀಳಾಗಿ ನೋಡುತ್ತಿರಲಿಲ್ಲ. ಅನಾಥಾಶ್ರಮಕ್ಕೆ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಿದ್ದದ್ದು ನಮಗೆಲ್ಲ ತಿಳಿದೇ ಇದೆ. ಮಾಡಿದ ಸಹಾಯವನ್ನು ಅಪ್ಪು ಸಾರ್ವಜನಿಕವಾಗಿ ಹೇಳಿಕೊಳ್ಳುತ್ತಿರಲಿಲ್ಲ.”

ಇದನ್ನೂ ಓದಿರಿ: ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

“ಮರಕ್ಕಿಂತ ಮರ ದೊಡ್ಡದು ಎಂಬ ರೀತಿ ದೊಡ್ಡ ದೊಡ್ಡ ಸ್ಟಾರ್‌ಗಳು ಮುಂದೆ ಬರಬಹುದು. ಒಂದು ಸಿನಿಮಾ ಸಾಧನೆಯನ್ನು ಮತ್ತೊಂದು ಸಿನಿಮಾ ಮುರಿಯಬಹುದು. ಆದರೆ ಅಷ್ಟೊಂದು ಯಶಸ್ಸು, ಸಾಧನೆ ಮಾಡಿದರೂ ಪ್ರೀತಿ ವಿಶ್ವಾಸದಲ್ಲೇ ಮನುಷ್ಯರನ್ನು ಗೆಲ್ಲುವುದಿದೆಯಲ್ಲ, ಅದು ಅತ್ಯಂತ ಅಪರೂಪದ ಗುಣ. ಅಂತಹ ಅಪರೂಪದ ಗುಣ ಪುನೀತ್‌ ಅವರಿಗಿತ್ತು. ಒಬ್ಬ ಸ್ಟಾರ್‌ ನಟ ನಿಧನರಾದರು ಎಂಬುದಕ್ಕಿಂತ, ಅಂತಹ ಒಳ್ಳೆಯ ಮನುಷ್ಯ ನಿಧನರಾದರು ಎಂಬುದು ನಮ್ಮನ್ನು ಸದಾ ಕಾಡುತ್ತದೆ” ಎನ್ನುತ್ತಾರೆ ಗಿರಿರಾಜ್‌.

ಮಲಯಾಳಂ ಚಿತ್ರರಂಗದ ಮೇರು ನಟ ಮೋಹನ್‌ ಲಾಲ್‌ ಸಂತಾಪ ಸೂಚಿಸಿದ್ದಾರೆ. ಪುನೀತ್‌ ಅವರ ಮೈತ್ರಿ ಸಿನಿಮಾದಲ್ಲಿ ಮೋಹನ್‌ ಲಾಲ್‌ ಅವರೂ ಅಭಿನಯಿಸಿದ್ದರು.

“ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ಸುದ್ದಿ ಆಘಾತ ತಂದಿದೆ. ಈ ಸುದ್ದಿಯನ್ನು ನಂಬಲು ಆಗುತ್ತಿಲ್ಲ. ನನ್ನ ಹಿರಿಯ ಸಹೋದರನನ್ನು ಕಳೆದುಕೊಂಡ ಅನುಭವವಾಗುತ್ತಿದೆ. ಈ ದುಃಖದಿಂದ ಪುನೀತ್‌ ಕುಟುಂಬ ಹೊರಬರಲಿ ಎಂದು ಪ್ರಾರ್ಥಿಸುವೆ” ಎಂದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸಂತಾಪ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಫೇಸ್‌ಬುಕ್‌ ಪೋಸ್ಟ್‌ ಮೂಲಕ ಸಂತಾಪ ಸೂಚಿಸಿದ್ದು, “ಕನ್ನಡದ ಚಿತ್ರಂಗದ ದಂತಕತೆ ಡಾ.ರಾಜ್‌ಕುಮಾರ್‌ ಅವರ ಪುತ್ರ ಪವರ್‌ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಅವರ ಹಠಾತ್‌ ನಿರ್ಗಮನವನ್ನು ಕೇಳಿ ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

“ನಮ್ಮ ಮತ್ತು ಅವರ ಕುಟುಂಬದೊಂದಿಗೆ ಬಹಳ ವರ್ಷಗಳಿಂದ ಒಡನಾಟವಿತ್ತು. ಪುನೀತ್‌ ಅವರ ನಿಧನದಿಂದಾಗಿ ವೈಯಕ್ತಿಕ ನಷ್ಟವೂ ಆಗಿದೆ. ತಾರಾಪಟ್ಟದ ಹೊರತಾಗಿಯೂ ಅವರು ಮಹಾನ್‌ ವಿನಯವಂತರಾಗಿದ್ದರು. ರಾಜಕೀಯ ನಾಯಕ ಕಲೈಂಗರ್ ಅವರ ನಿಧನದ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ನಮ್ಮ ಗೋಪಾಲಪುರಂ ನಿವಾಸಕ್ಕೆ ಭೇಟಿ ನೀಡಿದ್ದ ಪುನೀತ್ ಅವರ ವರ್ತನೆ ನನ್ನ ಹೃದಯದಲ್ಲಿ ಉಳಿದಿದೆ. ಕನ್ನಡ ಸಿನಿ ಉದ್ಯಮವು ತನ್ನ ಸಮಕಾಲೀನ ಶ್ರೇಷ್ಠ ಐಕಾನ್‌ಗಳಲ್ಲಿ ಒಂದನ್ನು ಕಳೆದುಕೊಂಡಿದೆ. ಈ ತುಂಬಲಾರದ ನಷ್ಟದಲ್ಲಿ, ದುಃಖದಲ್ಲಿರುವ ಪುನೀತ್ ಅವರ ಕುಟುಂಬಕ್ಕೆ ಮತ್ತು ಕರ್ನಾಟಕದ ಜನತೆಗೆ ನನ್ನ ಹೃದಯಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ಸ್ಟಾಲಿನ್‌ ತಿಳಿಸಿದ್ದಾರೆ.


ಇದನ್ನೂ ಓದಿರಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....