Homeಕರ್ನಾಟಕನುಡಿನಮನ: ಸಹಾಯ ಮಾಡಿದ್ದನ್ನು ‘ಅಪ್ಪು’ ಹೇಳಿಕೊಳ್ಳುತ್ತಿರಲಿಲ್ಲ

ನುಡಿನಮನ: ಸಹಾಯ ಮಾಡಿದ್ದನ್ನು ‘ಅಪ್ಪು’ ಹೇಳಿಕೊಳ್ಳುತ್ತಿರಲಿಲ್ಲ

ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಒಡನಾಟವನ್ನು ‘ಜಟ್ಟ’, ‘ಮೈತ್ರಿ’, ‘ಅಮರಾವತಿ’ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌ ಹಂಚಿಕೊಂಡಿದ್ದಾರೆ.

- Advertisement -
- Advertisement -

“ಪುನೀತ್‌ ರಾಜ್‌ಕುಮಾರ್‌ ಅವರ ದೊಡ್ಡತನವೆಂದರೆ ನೀವು ಅಪರಿಚಿತರಿದ್ದರೂ ಅವರ ಬಳಿ ಎರಡು ನಿಮಿಷ ಮಾತನಾಡಿದರೂ ಆ ಎರಡು ನಿಮಿಷ ನಿಮಗೆ ವಿಶೇಷವೆನಿಸುತ್ತಿತ್ತು” ಎಂದು ಪ್ರತಿಕ್ರಿಯಿಸಿದರು ಮೈತ್ರಿ ಸಿನಿಮಾ ನಿರ್ದೇಶಕ ಬಿ.ಎಂ.ಗಿರಿರಾಜ್‌.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಜಟ್ಟ, ಮೈತ್ರಿ, ಅಮರಾವತಿ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌, ಮೈತ್ರಿ ಸಿನಿಮಾ ನಿರ್ದೇಶಿಸುವಾಗ ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಅನುಭವಗಳನ್ನು ಹಂಚಿಕೊಂಡರು.

“ಈ ಸಮಯ ನಿಮಗಾಗಿ ಮೀಸಲಾಗಿದೆ ಎಂಬುದನ್ನು ಪುನೀತ್‌ ರಾಜ್‌ಕುಮಾರ್‌ ಅವರು ಮನದಟ್ಟು ಮಾಡಿ ಮಾತನಾಡುತ್ತಿದ್ದರು. ನಾನು ಅವರ ಮನೆಗೆ ಮೈತ್ರಿ ಸಿನಿಮಾದ ಕತೆ ಹೇಳಲು ಹೋದಾಗ ನಾನು ಯಾರು ಎಂಬುದು ಯಾರಿಗೂ ಗೊತ್ತಿರಲಿಲ್ಲ. ಆಗ ನನ್ನ ಯಾವ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಅವರೇ ಬಂದು ಕರೆದುಕೊಂಡು ಹೋಗಿ ಬಹಳ ಪ್ರೀತಿಯಿಂದ ಮಾತನಾಡಿದರು. ಅವರು ಯಾವುದಾದರೂ ವಿಷಯವನ್ನು ತಿರಸ್ಕರಿಸಿದರೂ ನಮಗೆ ಯಾರಿಗೂ ನೋವಾಗದಂತೆ ತಿರಸ್ಕಾರದ ಉದ್ದೇಶವನ್ನು ಸ್ಪಷ್ಟಪಡಿಸುತ್ತಿದ್ದರು. ಅವರು ಹೇಳಿದ್ದನ್ನು ಅಲ್ಲಗಳೆಯಲು ಸಾಧ್ಯವಾಗದಂತೆ ಮನದಟ್ಟು ಮಾಡುತ್ತಿದ್ದರು” ಎಂದು ಗಿರಿರಾಜ್ ಸ್ಮರಿಸಿದರು.

ಮುಂದುವರಿದು, “ಮೈತ್ರಿ ಸಿನಿಮಾ ಹೆಸರಘಟ್ಟದಲ್ಲಿ ಶೂಟ್‌ ಆಗುತ್ತಿತ್ತು. ನೂರೈವತ್ತು ಮಕ್ಕಳು ಬಂದಿದ್ದರು. ಸಂಯೋಜಕರು ಮಕ್ಕಳನ್ನು ಎಲ್ಲಿಂದಲೋ ಕರೆತಂದಿದ್ದರು. ಪುನೀತ್‌ ರಾಜ್‌ ಕುಮಾರ್‌ ಅವರು ಮಕ್ಕಳನ್ನು ನೋಡಿ, ಅವರು ಬರಿಗಾಲಲ್ಲಿ ಓಡಾಡುತ್ತಿದ್ದಾರೆ ಎಂದು ಎಲ್ಲ ಮಕ್ಕಳಿಗೂ ಫುಟ್‌ವೇರ್‌ಗಳನ್ನು ತರಿಸಿಕೊಟ್ಟರು. ಅವರು ಮಾಡಿರುವ ಮೈತ್ರಿಯಂತಹ ಸಿನಿಮಾ- ಸ್ಟಾರ್‌ ನಟರು ರಿಸ್ಕ್‌ ತೆಗೆದುಕೊಳ್ಳುವಂತಹದ್ದು. ಹೊಸತನ ಬರಬೇಕೆಂಬುದು ಅವರ ಉದ್ದೇಶವಾಗಿತ್ತು. ಕೊನೆಗೆ ಅವರೇ ಪ್ರೊಡಕ್ಷನ್‌ ಹೌಸ್‌ ತೆರೆದರು. ಹೊಸ ಬರಹಗಾರರಿಗೆ ಒತ್ತು ನೀಡುತ್ತಿದ್ದರು. ಸ್ಟಾರ್‌ ನಟರಿಗಿಂತ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದರು. ಜಂಟಲ್‌ ಮ್ಯಾನ್‌ ಎಂಬುದಕ್ಕೆ ಮೂರ್ತರೂಪ ಪುನೀತ್ ರಾಜ್‌ಕುಮಾರ್‌” ಎಂದು ಬಣ್ಣಿಸಿದರು.

“ಡಾ.ರಾಜ್‌ ಕುಮಾರ್‌ ಅವರು ನಿಧನರಾದಾಗ ಮನೆಯ ಹಿರಿಯ ಮಗ ನಮ್ಮನ್ನು ಅಗಲಿದ ಅನುಭವವಾಯಿತು. ನಮ್ಮ ಮನೆಯಲ್ಲಿ ಮಗು ಇಲ್ಲದಿದ್ದಾಗ ಸೃಷ್ಟಿಯಾಗುವ ನಿರ್ವಾತವನ್ನು ಅಪ್ಪು ನಿಧನ ತಂದಿದೆ. ಯಾರನ್ನೂ ಪುನೀತ್‌ ಅವರು ಕೀಳಾಗಿ ನೋಡುತ್ತಿರಲಿಲ್ಲ. ಅನಾಥಾಶ್ರಮಕ್ಕೆ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಿದ್ದದ್ದು ನಮಗೆಲ್ಲ ತಿಳಿದೇ ಇದೆ. ಮಾಡಿದ ಸಹಾಯವನ್ನು ಅಪ್ಪು ಸಾರ್ವಜನಿಕವಾಗಿ ಹೇಳಿಕೊಳ್ಳುತ್ತಿರಲಿಲ್ಲ.”

ಇದನ್ನೂ ಓದಿರಿ: ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

“ಮರಕ್ಕಿಂತ ಮರ ದೊಡ್ಡದು ಎಂಬ ರೀತಿ ದೊಡ್ಡ ದೊಡ್ಡ ಸ್ಟಾರ್‌ಗಳು ಮುಂದೆ ಬರಬಹುದು. ಒಂದು ಸಿನಿಮಾ ಸಾಧನೆಯನ್ನು ಮತ್ತೊಂದು ಸಿನಿಮಾ ಮುರಿಯಬಹುದು. ಆದರೆ ಅಷ್ಟೊಂದು ಯಶಸ್ಸು, ಸಾಧನೆ ಮಾಡಿದರೂ ಪ್ರೀತಿ ವಿಶ್ವಾಸದಲ್ಲೇ ಮನುಷ್ಯರನ್ನು ಗೆಲ್ಲುವುದಿದೆಯಲ್ಲ, ಅದು ಅತ್ಯಂತ ಅಪರೂಪದ ಗುಣ. ಅಂತಹ ಅಪರೂಪದ ಗುಣ ಪುನೀತ್‌ ಅವರಿಗಿತ್ತು. ಒಬ್ಬ ಸ್ಟಾರ್‌ ನಟ ನಿಧನರಾದರು ಎಂಬುದಕ್ಕಿಂತ, ಅಂತಹ ಒಳ್ಳೆಯ ಮನುಷ್ಯ ನಿಧನರಾದರು ಎಂಬುದು ನಮ್ಮನ್ನು ಸದಾ ಕಾಡುತ್ತದೆ” ಎನ್ನುತ್ತಾರೆ ಗಿರಿರಾಜ್‌.

ಮಲಯಾಳಂ ಚಿತ್ರರಂಗದ ಮೇರು ನಟ ಮೋಹನ್‌ ಲಾಲ್‌ ಸಂತಾಪ ಸೂಚಿಸಿದ್ದಾರೆ. ಪುನೀತ್‌ ಅವರ ಮೈತ್ರಿ ಸಿನಿಮಾದಲ್ಲಿ ಮೋಹನ್‌ ಲಾಲ್‌ ಅವರೂ ಅಭಿನಯಿಸಿದ್ದರು.

“ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ಸುದ್ದಿ ಆಘಾತ ತಂದಿದೆ. ಈ ಸುದ್ದಿಯನ್ನು ನಂಬಲು ಆಗುತ್ತಿಲ್ಲ. ನನ್ನ ಹಿರಿಯ ಸಹೋದರನನ್ನು ಕಳೆದುಕೊಂಡ ಅನುಭವವಾಗುತ್ತಿದೆ. ಈ ದುಃಖದಿಂದ ಪುನೀತ್‌ ಕುಟುಂಬ ಹೊರಬರಲಿ ಎಂದು ಪ್ರಾರ್ಥಿಸುವೆ” ಎಂದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸಂತಾಪ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಫೇಸ್‌ಬುಕ್‌ ಪೋಸ್ಟ್‌ ಮೂಲಕ ಸಂತಾಪ ಸೂಚಿಸಿದ್ದು, “ಕನ್ನಡದ ಚಿತ್ರಂಗದ ದಂತಕತೆ ಡಾ.ರಾಜ್‌ಕುಮಾರ್‌ ಅವರ ಪುತ್ರ ಪವರ್‌ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಅವರ ಹಠಾತ್‌ ನಿರ್ಗಮನವನ್ನು ಕೇಳಿ ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

“ನಮ್ಮ ಮತ್ತು ಅವರ ಕುಟುಂಬದೊಂದಿಗೆ ಬಹಳ ವರ್ಷಗಳಿಂದ ಒಡನಾಟವಿತ್ತು. ಪುನೀತ್‌ ಅವರ ನಿಧನದಿಂದಾಗಿ ವೈಯಕ್ತಿಕ ನಷ್ಟವೂ ಆಗಿದೆ. ತಾರಾಪಟ್ಟದ ಹೊರತಾಗಿಯೂ ಅವರು ಮಹಾನ್‌ ವಿನಯವಂತರಾಗಿದ್ದರು. ರಾಜಕೀಯ ನಾಯಕ ಕಲೈಂಗರ್ ಅವರ ನಿಧನದ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ನಮ್ಮ ಗೋಪಾಲಪುರಂ ನಿವಾಸಕ್ಕೆ ಭೇಟಿ ನೀಡಿದ್ದ ಪುನೀತ್ ಅವರ ವರ್ತನೆ ನನ್ನ ಹೃದಯದಲ್ಲಿ ಉಳಿದಿದೆ. ಕನ್ನಡ ಸಿನಿ ಉದ್ಯಮವು ತನ್ನ ಸಮಕಾಲೀನ ಶ್ರೇಷ್ಠ ಐಕಾನ್‌ಗಳಲ್ಲಿ ಒಂದನ್ನು ಕಳೆದುಕೊಂಡಿದೆ. ಈ ತುಂಬಲಾರದ ನಷ್ಟದಲ್ಲಿ, ದುಃಖದಲ್ಲಿರುವ ಪುನೀತ್ ಅವರ ಕುಟುಂಬಕ್ಕೆ ಮತ್ತು ಕರ್ನಾಟಕದ ಜನತೆಗೆ ನನ್ನ ಹೃದಯಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ಸ್ಟಾಲಿನ್‌ ತಿಳಿಸಿದ್ದಾರೆ.


ಇದನ್ನೂ ಓದಿರಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...