Homeಕರ್ನಾಟಕನುಡಿನಮನ: ಸಹಾಯ ಮಾಡಿದ್ದನ್ನು ‘ಅಪ್ಪು’ ಹೇಳಿಕೊಳ್ಳುತ್ತಿರಲಿಲ್ಲ

ನುಡಿನಮನ: ಸಹಾಯ ಮಾಡಿದ್ದನ್ನು ‘ಅಪ್ಪು’ ಹೇಳಿಕೊಳ್ಳುತ್ತಿರಲಿಲ್ಲ

ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಒಡನಾಟವನ್ನು ‘ಜಟ್ಟ’, ‘ಮೈತ್ರಿ’, ‘ಅಮರಾವತಿ’ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌ ಹಂಚಿಕೊಂಡಿದ್ದಾರೆ.

- Advertisement -
- Advertisement -

“ಪುನೀತ್‌ ರಾಜ್‌ಕುಮಾರ್‌ ಅವರ ದೊಡ್ಡತನವೆಂದರೆ ನೀವು ಅಪರಿಚಿತರಿದ್ದರೂ ಅವರ ಬಳಿ ಎರಡು ನಿಮಿಷ ಮಾತನಾಡಿದರೂ ಆ ಎರಡು ನಿಮಿಷ ನಿಮಗೆ ವಿಶೇಷವೆನಿಸುತ್ತಿತ್ತು” ಎಂದು ಪ್ರತಿಕ್ರಿಯಿಸಿದರು ಮೈತ್ರಿ ಸಿನಿಮಾ ನಿರ್ದೇಶಕ ಬಿ.ಎಂ.ಗಿರಿರಾಜ್‌.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಜಟ್ಟ, ಮೈತ್ರಿ, ಅಮರಾವತಿ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌, ಮೈತ್ರಿ ಸಿನಿಮಾ ನಿರ್ದೇಶಿಸುವಾಗ ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಅನುಭವಗಳನ್ನು ಹಂಚಿಕೊಂಡರು.

“ಈ ಸಮಯ ನಿಮಗಾಗಿ ಮೀಸಲಾಗಿದೆ ಎಂಬುದನ್ನು ಪುನೀತ್‌ ರಾಜ್‌ಕುಮಾರ್‌ ಅವರು ಮನದಟ್ಟು ಮಾಡಿ ಮಾತನಾಡುತ್ತಿದ್ದರು. ನಾನು ಅವರ ಮನೆಗೆ ಮೈತ್ರಿ ಸಿನಿಮಾದ ಕತೆ ಹೇಳಲು ಹೋದಾಗ ನಾನು ಯಾರು ಎಂಬುದು ಯಾರಿಗೂ ಗೊತ್ತಿರಲಿಲ್ಲ. ಆಗ ನನ್ನ ಯಾವ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಅವರೇ ಬಂದು ಕರೆದುಕೊಂಡು ಹೋಗಿ ಬಹಳ ಪ್ರೀತಿಯಿಂದ ಮಾತನಾಡಿದರು. ಅವರು ಯಾವುದಾದರೂ ವಿಷಯವನ್ನು ತಿರಸ್ಕರಿಸಿದರೂ ನಮಗೆ ಯಾರಿಗೂ ನೋವಾಗದಂತೆ ತಿರಸ್ಕಾರದ ಉದ್ದೇಶವನ್ನು ಸ್ಪಷ್ಟಪಡಿಸುತ್ತಿದ್ದರು. ಅವರು ಹೇಳಿದ್ದನ್ನು ಅಲ್ಲಗಳೆಯಲು ಸಾಧ್ಯವಾಗದಂತೆ ಮನದಟ್ಟು ಮಾಡುತ್ತಿದ್ದರು” ಎಂದು ಗಿರಿರಾಜ್ ಸ್ಮರಿಸಿದರು.

ಮುಂದುವರಿದು, “ಮೈತ್ರಿ ಸಿನಿಮಾ ಹೆಸರಘಟ್ಟದಲ್ಲಿ ಶೂಟ್‌ ಆಗುತ್ತಿತ್ತು. ನೂರೈವತ್ತು ಮಕ್ಕಳು ಬಂದಿದ್ದರು. ಸಂಯೋಜಕರು ಮಕ್ಕಳನ್ನು ಎಲ್ಲಿಂದಲೋ ಕರೆತಂದಿದ್ದರು. ಪುನೀತ್‌ ರಾಜ್‌ ಕುಮಾರ್‌ ಅವರು ಮಕ್ಕಳನ್ನು ನೋಡಿ, ಅವರು ಬರಿಗಾಲಲ್ಲಿ ಓಡಾಡುತ್ತಿದ್ದಾರೆ ಎಂದು ಎಲ್ಲ ಮಕ್ಕಳಿಗೂ ಫುಟ್‌ವೇರ್‌ಗಳನ್ನು ತರಿಸಿಕೊಟ್ಟರು. ಅವರು ಮಾಡಿರುವ ಮೈತ್ರಿಯಂತಹ ಸಿನಿಮಾ- ಸ್ಟಾರ್‌ ನಟರು ರಿಸ್ಕ್‌ ತೆಗೆದುಕೊಳ್ಳುವಂತಹದ್ದು. ಹೊಸತನ ಬರಬೇಕೆಂಬುದು ಅವರ ಉದ್ದೇಶವಾಗಿತ್ತು. ಕೊನೆಗೆ ಅವರೇ ಪ್ರೊಡಕ್ಷನ್‌ ಹೌಸ್‌ ತೆರೆದರು. ಹೊಸ ಬರಹಗಾರರಿಗೆ ಒತ್ತು ನೀಡುತ್ತಿದ್ದರು. ಸ್ಟಾರ್‌ ನಟರಿಗಿಂತ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದರು. ಜಂಟಲ್‌ ಮ್ಯಾನ್‌ ಎಂಬುದಕ್ಕೆ ಮೂರ್ತರೂಪ ಪುನೀತ್ ರಾಜ್‌ಕುಮಾರ್‌” ಎಂದು ಬಣ್ಣಿಸಿದರು.

“ಡಾ.ರಾಜ್‌ ಕುಮಾರ್‌ ಅವರು ನಿಧನರಾದಾಗ ಮನೆಯ ಹಿರಿಯ ಮಗ ನಮ್ಮನ್ನು ಅಗಲಿದ ಅನುಭವವಾಯಿತು. ನಮ್ಮ ಮನೆಯಲ್ಲಿ ಮಗು ಇಲ್ಲದಿದ್ದಾಗ ಸೃಷ್ಟಿಯಾಗುವ ನಿರ್ವಾತವನ್ನು ಅಪ್ಪು ನಿಧನ ತಂದಿದೆ. ಯಾರನ್ನೂ ಪುನೀತ್‌ ಅವರು ಕೀಳಾಗಿ ನೋಡುತ್ತಿರಲಿಲ್ಲ. ಅನಾಥಾಶ್ರಮಕ್ಕೆ, ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಿದ್ದದ್ದು ನಮಗೆಲ್ಲ ತಿಳಿದೇ ಇದೆ. ಮಾಡಿದ ಸಹಾಯವನ್ನು ಅಪ್ಪು ಸಾರ್ವಜನಿಕವಾಗಿ ಹೇಳಿಕೊಳ್ಳುತ್ತಿರಲಿಲ್ಲ.”

ಇದನ್ನೂ ಓದಿರಿ: ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

“ಮರಕ್ಕಿಂತ ಮರ ದೊಡ್ಡದು ಎಂಬ ರೀತಿ ದೊಡ್ಡ ದೊಡ್ಡ ಸ್ಟಾರ್‌ಗಳು ಮುಂದೆ ಬರಬಹುದು. ಒಂದು ಸಿನಿಮಾ ಸಾಧನೆಯನ್ನು ಮತ್ತೊಂದು ಸಿನಿಮಾ ಮುರಿಯಬಹುದು. ಆದರೆ ಅಷ್ಟೊಂದು ಯಶಸ್ಸು, ಸಾಧನೆ ಮಾಡಿದರೂ ಪ್ರೀತಿ ವಿಶ್ವಾಸದಲ್ಲೇ ಮನುಷ್ಯರನ್ನು ಗೆಲ್ಲುವುದಿದೆಯಲ್ಲ, ಅದು ಅತ್ಯಂತ ಅಪರೂಪದ ಗುಣ. ಅಂತಹ ಅಪರೂಪದ ಗುಣ ಪುನೀತ್‌ ಅವರಿಗಿತ್ತು. ಒಬ್ಬ ಸ್ಟಾರ್‌ ನಟ ನಿಧನರಾದರು ಎಂಬುದಕ್ಕಿಂತ, ಅಂತಹ ಒಳ್ಳೆಯ ಮನುಷ್ಯ ನಿಧನರಾದರು ಎಂಬುದು ನಮ್ಮನ್ನು ಸದಾ ಕಾಡುತ್ತದೆ” ಎನ್ನುತ್ತಾರೆ ಗಿರಿರಾಜ್‌.

ಮಲಯಾಳಂ ಚಿತ್ರರಂಗದ ಮೇರು ನಟ ಮೋಹನ್‌ ಲಾಲ್‌ ಸಂತಾಪ ಸೂಚಿಸಿದ್ದಾರೆ. ಪುನೀತ್‌ ಅವರ ಮೈತ್ರಿ ಸಿನಿಮಾದಲ್ಲಿ ಮೋಹನ್‌ ಲಾಲ್‌ ಅವರೂ ಅಭಿನಯಿಸಿದ್ದರು.

“ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ಸುದ್ದಿ ಆಘಾತ ತಂದಿದೆ. ಈ ಸುದ್ದಿಯನ್ನು ನಂಬಲು ಆಗುತ್ತಿಲ್ಲ. ನನ್ನ ಹಿರಿಯ ಸಹೋದರನನ್ನು ಕಳೆದುಕೊಂಡ ಅನುಭವವಾಗುತ್ತಿದೆ. ಈ ದುಃಖದಿಂದ ಪುನೀತ್‌ ಕುಟುಂಬ ಹೊರಬರಲಿ ಎಂದು ಪ್ರಾರ್ಥಿಸುವೆ” ಎಂದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸಂತಾಪ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಫೇಸ್‌ಬುಕ್‌ ಪೋಸ್ಟ್‌ ಮೂಲಕ ಸಂತಾಪ ಸೂಚಿಸಿದ್ದು, “ಕನ್ನಡದ ಚಿತ್ರಂಗದ ದಂತಕತೆ ಡಾ.ರಾಜ್‌ಕುಮಾರ್‌ ಅವರ ಪುತ್ರ ಪವರ್‌ ಸ್ಟಾರ್ ಪುನೀತ್‌ ರಾಜ್‌ಕುಮಾರ್‌ ಅವರ ಹಠಾತ್‌ ನಿರ್ಗಮನವನ್ನು ಕೇಳಿ ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

“ನಮ್ಮ ಮತ್ತು ಅವರ ಕುಟುಂಬದೊಂದಿಗೆ ಬಹಳ ವರ್ಷಗಳಿಂದ ಒಡನಾಟವಿತ್ತು. ಪುನೀತ್‌ ಅವರ ನಿಧನದಿಂದಾಗಿ ವೈಯಕ್ತಿಕ ನಷ್ಟವೂ ಆಗಿದೆ. ತಾರಾಪಟ್ಟದ ಹೊರತಾಗಿಯೂ ಅವರು ಮಹಾನ್‌ ವಿನಯವಂತರಾಗಿದ್ದರು. ರಾಜಕೀಯ ನಾಯಕ ಕಲೈಂಗರ್ ಅವರ ನಿಧನದ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ನಮ್ಮ ಗೋಪಾಲಪುರಂ ನಿವಾಸಕ್ಕೆ ಭೇಟಿ ನೀಡಿದ್ದ ಪುನೀತ್ ಅವರ ವರ್ತನೆ ನನ್ನ ಹೃದಯದಲ್ಲಿ ಉಳಿದಿದೆ. ಕನ್ನಡ ಸಿನಿ ಉದ್ಯಮವು ತನ್ನ ಸಮಕಾಲೀನ ಶ್ರೇಷ್ಠ ಐಕಾನ್‌ಗಳಲ್ಲಿ ಒಂದನ್ನು ಕಳೆದುಕೊಂಡಿದೆ. ಈ ತುಂಬಲಾರದ ನಷ್ಟದಲ್ಲಿ, ದುಃಖದಲ್ಲಿರುವ ಪುನೀತ್ ಅವರ ಕುಟುಂಬಕ್ಕೆ ಮತ್ತು ಕರ್ನಾಟಕದ ಜನತೆಗೆ ನನ್ನ ಹೃದಯಪೂರ್ವಕ ಸಂತಾಪವನ್ನು ಅರ್ಪಿಸುತ್ತೇನೆ” ಎಂದು ಸ್ಟಾಲಿನ್‌ ತಿಳಿಸಿದ್ದಾರೆ.


ಇದನ್ನೂ ಓದಿರಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...