Homeಚಳವಳಿಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

ಏ.14 ರಂದು ಅಂಬೇಡ್ಕರ್ ಹಬ್ಬ: ದ್ವೇಷ, ಅಸೂಯೆ ಮೀರಿ ಶಾಂತಿ ಸಾಮರಸ್ಯದ ದೇಶ ಕಟ್ಟಲು ಕರೆ

'ತಳಸ್ತರದವರ ಅಭಿವೃದ್ದಿ ಮತ್ತು ಏಳಿಗೆಗಾಗಿ ದುಡಿದ' ಆರು ಹೋರಾಟಗಾರರಿಗೆ ಬೋಧಿವೃಕ್ಷ ಮತ್ತು ಬೋಧಿವರ್ಧನ ಪ್ರಶಸ್ತಿ ನೀಡಲಾಗುತ್ತಿದೆ.

- Advertisement -
- Advertisement -

ದ್ವೇಷ – ಅಸೂಯೆಗಳನ್ನು ಮೀರೋಣ, ಶಾಂತಿ ಸಾಮರಸ್ಯದ ದೇಶ ಕಟ್ಟೋಣ ಎಂಬ ಕರೆಯೊಂದಿಗೆ 2022ರ ಅಂಬೇಡ್ಕರ್ ಹಬ್ಬವನ್ನು ಆಚರಿಸಲು ಸ್ಫೂರ್ತಿಧಾಮ ಸಂಸ್ಥೆ ನಿರ್ಧರಿಸಿದೆ. ಏಪ್ರಿಲ್ 14 ರಂದು ಬೆಂಗಳೂರಿನ ಮಾಗಡಿ ರಸ್ತೆಯ ಅಂಜನಾನಗರದ ಸ್ಫೂರ್ತಿಧಾಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ತಳಸ್ತರದವರ ಅಭಿವೃದ್ದಿ ಮತ್ತು ಏಳಿಗೆಗಾಗಿ ದುಡಿದ’ ಆರು ಹೋರಾಟಗಾರರಿಗೆ ಬೋಧಿವೃಕ್ಷ ಮತ್ತು ಬೋಧಿವರ್ಧನ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಗುರುವಾರ ನಡೆಯುವ ಅಂಬೇಡ್ಕರ್ ಹಬ್ಬದಲ್ಲಿ ಬೆಳಿಗ್ಗೆಯಿಂದಲೂ ಪ್ರೀತಿ-ಸಹಬಾಳ್ವೆಯನ್ನು ಎತ್ತಿ ಹಿಡಿಯುವ ಹಾಡು, ಕುಣಿತ, ಕಾವ್ಯ ವಾಚನ, ಚಿತ್ರಕಲೆ ಮತ್ತು ವಿಚಾರ ವಿನಿಮಯ ನಡೆಯಲಿದೆ. ಸಂಜೆ 6 ಗಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳು ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದು, ಸ್ಪೂರ್ತಿಧಾಮದ ಅಧ್ಯಕ್ಷರಾದ ಎಸ್.ಮರಿಸ್ವಾಮಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯಾಯಮೂರ್ತಿ ವಿ.ಗೋಪಾಲಗೌಡರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಹೋರಾಟಗಾರರಾದ ಜಿ.ರಾಮಕೃಷ್ಣರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೋದಿವೃಕ್ಷ ಪ್ರಶಸ್ತಿಗೆ ಆಯ್ಕೆಯಾದ ಡಾ.ಆರ್.ಎಸ್ ಪ್ರವೀಣ್ ಕುಮಾರ್

ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಅಲ್ಲಂಪುರ ಗ್ರಾಮದವರಾದ ಡಾ.ಆರ್.ಎಸ್ ಪ್ರವೀಣ್ ಕುಮಾರ್‌ರವರು ಐಪಿಎಸ್ ಅಧಿಕಾರಿಯಾಗಿದ್ದರು. ತಮ್ಮ ವೃತ್ತಿಗೆ ರಾಜೀನಾಮೆ ಸಲ್ಲಿಸಿ ಸಂಪೂರ್ಣ ಸಮಯವನ್ನು ತಳಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ಮೆಲ್ದರ್ಜೆಗೇರಿಸುವುದು, ಕೂಲಿಕಾರರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತೆಲಂಗಾಣ ರಾಜ್ಯಾದ್ಯಂತ ಬಹುಜನ ಯಾತ್ರೆ ನಡೆಸುತ್ತಾ ಶಿಕ್ಷಣದ ಮೂಲಕ ಸಾಮಾಜಿಕ ಬದಲಾವಣೆಗಾಗಿ ದುಡಿಯುತ್ತಿದ್ದಾರೆ. ಇವರು ಈ ಬಾರಿಯ ಸ್ಪೂರ್ತಿಧಾಮ ನೀಡುವ ಬೋದಿವೃಕ್ಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೋದಿವರ್ಧನ ಪ್ರಶಸ್ತಿಗೆ ಆಯ್ಕೆಯಾದವರು

ಸ್ಪೂರ್ತಿಧಾಮ ಸಂಸ್ಥೆಯು ಐವರು ಹೋರಾಟಗಾರರಿಗೆ ಬೋದಿವರ್ಧನ ಪ್ರಶಸ್ತಿ ನೀಡುತ್ತಿದೆ. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಮಂಡ್ಯದ ಗುರುಪ್ರಸಾದ್ ಕೆರಗೋಡುರವರು, ರಾಜ್ಯಾದ್ಯಂತ ಆಶಾ ಕಾರ್ಯಕರ್ತರನ್ನು ಸಂಘಟಿಸುತ್ತಿರುವ ಬಳ್ಳಾರಿಯ AIMSS ಸಂಘಟನೆಯ ಡಿ.ನಾಗಲಕ್ಷ್ಮಿಯವರು, ಯುವಜನರಲ್ಲಿ ಬುದ್ದ ಧರ್ಮದ ಅರಿವು ಮೂಡಿಸುತ್ತಿರುವ ಕೋಲಾರದ ಪದ್ಮಾಲಯ ನಾಗರಾಜ್‌ರವರು, ಆದಿವಾಸಿಗಳ ಹಕ್ಕುಗಳಿಗಾಗಿ ಹಲವು ದಶಕಗಳಿಂದ ಹೋರಾಡುತ್ತಿರುವ ಉತ್ತರ ಕನ್ನಡದ ಡಾ.ಬಿ.ಪಿ ಮಹೇಂದ್ರ ಕುಮಾರ್‌ರವರು ಮತ್ತು ದಾದಿಯಾಗಿ ಬಡಜನರ ಸೇವೆಗೈಯುತ್ತಿರುವ ಮೈಸೂರಿನ ಮೇರಿ ಲೋಬೋರವರು ಬೋದಿವರ್ಧನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬೋಧಿವೃಕ್ಷ ಪ್ರಶಸ್ತಿಯು ಒಂದು ಲಕ್ಷ ರೂ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದ್ದರೆ, ಬೋದಿವರ್ಧನ ಪ್ರಶಸ್ತಿಗಳು ತಲಾ 25 ಸಾವಿರು ರೂ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...