Homeಕರ್ನಾಟಕಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

- Advertisement -
- Advertisement -

ಆಳುವವರನ್ನು ಪ್ರಶ್ನಿಸುವ, ಜನಹಿತವನ್ನು ಮತ್ತು ಸಂವಿಧಾನವನ್ನು ಕಾಪಾಡುವ ಮಹಾಯಾನ ಮಾಡುವುದಕ್ಕಾಗಿ ಸಂವಿಧಾನ ಸಂರಕ್ಷಣಾ ಪಡೆ ಸಂಘಟಿಸುತ್ತಿದ್ದು, ಅದರ ಆರಂಭವಾಗಿ ಏಪ್ರಿಲ್ 26ರಂದು ದಾವಣಗೆರೆಯಲ್ಲಿ 10 ಸಾವಿರ ಕಾರ್ಯಕರ್ತರನ್ನು ಸಂಘಟಿಸಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ನಡೆಸುತ್ತಿದ್ದೇವೆ ಎಂದು ಎದ್ದೇಳು ಕರ್ನಾಟಕದ ಕೇಂದ್ರ ಸಮಿತಿ ಸದಸ್ಯ, ಹೋರಾಟಗಾರ ನೂರ್ ಶ್ರೀಧರ್ ಅವರು ಮಂಗಳವಾರ ಹೇಳಿದರು. ಏಪ್ರಿಲ್ 26ರಂದು ದಾವಣಗೆರೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಮುಂದಿನ ಮೂರು ವರ್ಷಗಳಲ್ಲಿ 10 ಸಾವಿರ ಕಾರ್ಯಕರ್ತರ ಈ ಸಂವಿಧಾನ ಸಂರಕ್ಷಣಾ ಪಡೆಯನ್ನು ಒಂದು ಲಕ್ಷಕ್ಕೆ ಸಜ್ಜುಗೊಳಿಸಲಿದ್ದು, ಅದಕ್ಕಾಗಿ ರಾಜ್ಯಾದ್ಯಂತ ಎಲ್ಲಾ ತಾಲೂಕು, ಜಿಲ್ಲೆಗಳಲ್ಲಿ ಕೆಲಸ ಮಾಡಲಿದ್ದೇವೆ ಎಂದು ಅವರು ಹೇಳಿದರು. “ದ್ವೇಷವನ್ನು ಮಟ್ಟ ಹಾಕಿ ಪ್ರೀತಿಯ ಸಮಾಜಕ್ಕಾಗಿ ಈ ಪಡೆ ಕೆಲಸ ಮಾಡಲಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಈಡೇರಿಸುವ ಬಗ್ಗೆ ಒತ್ತಾಯಿಸುವುದು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಜನಾಂದೋಲನ ಪ್ರಾರಂಭಿಸುವುದು ಇದರ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ. ‌

“ಕಳೆದ ಹತ್ತು ತಿಂಗಳ ಚಿಂತನ ಮಂಥನದ ನಂತರ ಈ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಕೂಡಾ ಅಧಿಕಾರಕ್ಕೆ ಬಂದ ನಂತರ ಒಂದು ಎಂಬಂತೆ ಆಗಿದೆ. ಕಾಂಗ್ರೆಸ್ ಐದು ಗ್ಯಾರಂಟಿ ಬಿಟ್ಟು ಬೇರೆ ಕೆಲಸಗಳನ್ನು ಮಾಡುತ್ತಿಲ್ಲ” ಎಂದು ನೂರ್‌ ಶ್ರೀಧರ್ ಅವರು ಹೇಳಿದರು.

“ಎದ್ದೇಳು ಕರ್ನಾಟಕ ಎಂಬ 112 ಸಂಘಟನೆಗಳನ್ನೊಳಗೊಂಡ ನಾಗರೀಕ ವೇದಿಕೆಯು 2023ರ ವಿಧಾನಸಭಾ ಚುನಾವಣೆ ಹಾಗೂ 2024 ರ ಲೋಕಸಭಾ ಚುನಾವಣೆಗಳಲ್ಲಿ ಸಂವಿಧಾನ ವಿರೋಧಿ ಶಕ್ತಿಗಳನ್ನು ಅಧಿಕಾರದಿಂದ ಇಳಿಸಲು ಬೂತ್ ಮಟ್ಟಕ್ಕಿಳಿದು ಪರಿಣಾಮಕಾರಿ ಕೆಲಸ ಮಾಡಿತ್ತು. ಎದ್ದೇಳು ಕರ್ನಾಟಕ ಮಾತ್ರವಲ್ಲದೆ ಇನ್ನು ಹಲವು ಜನಪರ ಸಂಘಟನೆಗಳು ಮಾಡಿದ ಅವಿರತ ಪರಿಶ್ರಮದ ಫಲವಾಗಿಯೇ ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರದಿಂದ ಕೆಳಗೆ ದಬ್ಬಲು ಸಾಧ್ಯವಾಯಿತು” ಎಂದು ಅವರು ಹೇಳಿದರು.

“ದೇಶವ್ಯಾಪಿ ಜನಪರ ಶಕ್ತಿಗಳು, ಜನಪರ ಮಾಧ್ಯಮಗಳು ಮಾಡಿದ ಪ್ರಯತ್ನದಿಂದಾಗಿ ಕೇಂದ್ರದಲ್ಲಿ ಅವರ ಶಕ್ತಿಯನ್ನು ಕಡಿತಗೊಳಿಸುವಲ್ಲಿ ಯಶಸ್ಸನ್ನೂ ಪಡೆದೆವು. ಆದರೆ ಅವಕಾಶ ವಾದಿಗಳ ಆಸರೆ ಪಡೆದು ಅವರೇ ಕೇಂದ್ರದ ಅಧಿಕಾರವನ್ನು ಮತ್ತೆ ಹಿಡಿದುಕೊಂಡಿದ್ದಾರೆ. ಅದಾನಿ, ಅಂಬಾನಿಗಳ ಪರವಾದ ನೀತಿಗಳನ್ನು ಮುಂದುವರೆಸಿದ್ದಾರೆ. ಜನಸಾಮಾನ್ಯರ ಬದುಕಿನ ಮೇಲಿನ ಆಕ್ರಮಣವನ್ನು ಹಾಗೂ ತಮ್ಮ ವಿಚ್ಚಿದ್ರಕಾರಿ ನೀತಿಗಳನ್ನು ಮುಂದುವರೆಸಿದ್ದಾರೆ. ಮುಂದೆ ಇದನ್ನು ಇನ್ನೂ ಹೆಚ್ಚಿಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ನಾವೆಲ್ಲಾ ಸೇರಿ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಆದರೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನೆಲ್ಲಾ ತಾನೂ ಮುಂದುವರೆಸುತ್ತಿದೆ. ಗ್ಯಾರಂಟಿಗಳಂತಹ ಕೆಲವು ಜನಹಿತ ನೀತಿಗಳನ್ನು ಮಾಡಿದ್ದು ಬಿಟ್ಟರೆ ಮಿಕ್ಕಂತೆ ಆಡಳಿತದಲ್ಲಿ ದೊಡ್ಡ ವ್ಯತ್ಯಾಸವಿಲ್ಲವಾಗಿದೆ” ಎಂದು ಅವರು ಹೇಳಿದ್ದಾರೆ.

ಹೊಸಸಂದರ್ಭ ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ ಅಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಿದೆ.

ಈ ಗುರಿಯೊಂದಿಗೆಯೇ ಪ್ರತಿ ಊರು, ಕೇರಿ, ಹಾಡಿ, ಬೀದಿಗಳಲ್ಲಿ, “ಸಂವಿಧಾನ ಸಂರಕ್ಷಕ ಪಡೆ” ಹೆಸರಿನಲ್ಲಿ ದೇಶಪ್ರೇಮಿ ತಂಡಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಒಂದು ಲಕ್ಷಕಾರ್ಯಕರ್ತರ ಪಡೆಯನ್ನು ಸಜ್ಜುಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಪ್ರಕ್ರಿಯೆಗೆ ರಾಜ್ಯಮಟ್ಟದ ಚಾಲನೆ ನೀಡಲು ಇದೇ ತಿಂಗಳ 26 ರಂದು ದಾವಣಗೆರೆಯಲ್ಲಿ “ಸಂವಿಧಾನ ಸಂರಕ್ಷಕರ ಸಮಾವೇಶ”ವನ್ನು ಆಯೋಜಿಸಲಾಗುತ್ತಿದೆ. ಸಮಾವೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಶ್ರೀಧರ್ ಹೇಳಿದರು.

ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ಏಪ್ರಿಲ್ 25 ರ ಸಂಜೆ ದಾವಣಗೆರೆ ತಲುಪಲಿದ್ದು ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ. ಯುವ ಮುಂದಾಳು ಸರೋವರ್ ಬೆಂಕಿಕೆರೆ ಅದರ ನೇತೃತ್ವ ವಹಿಸಿದ್ದಾರೆ ಎಂದು ಅವರು ಹೇಳಿದರು.

ಸಮಾವೇಶದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ, ಪ್ರಸಿದ್ಧ ಚಿತ್ರ ನಟಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂ ಹೋರಾಟಗಾರ ಜಿನ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ನಾಯಕ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾನಾಯ್. ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ. ವೀರೇಶ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಹೋರಾಟಗಾರ ಸಿದ್ಧನಗೌಡ ಪಾಟೀಲ್ ಸೇರಿದಂತೆ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾವೇಶದ ಸ್ವಾಗತ ಸಮಿತಿ ಪರವಾಗಿ ಮಾಜಿ ಸಚಿವರಾದ ಬಿ.ಟಿ. ಲಲಿತಾ ನಾಯ್ಕ್, ರೈತ ಮುಖಂಡರಾದ ವೀರಸಂಗಯ್ಯ, ಜಮಾತೆ ಇಸ್ಲಾಮಿ ಮುಖಂಡ ಯೂಸುಫ್ ಕನ್ನಿ, ಹೋರಾಟಗಾರ್ತಿ ತಾರಾ ರಾವರ್, ಫಾದರ್ ರೆವರೆಂಡ್ ಚಂದ್ರಪ್ರಸಾದ್ ಇದ್ದರು. ಸಂವಿಧಾನ ಸಂರಕ್ಷಣಾ ಪಡೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...