Homeಕರ್ನಾಟಕಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಅಭಿಯಾನ | ಏಪ್ರಿಲ್ 26ರಂದು ದಾವಣಗೆರೆಯಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶ

- Advertisement -
- Advertisement -

ಆಳುವವರನ್ನು ಪ್ರಶ್ನಿಸುವ, ಜನಹಿತವನ್ನು ಮತ್ತು ಸಂವಿಧಾನವನ್ನು ಕಾಪಾಡುವ ಮಹಾಯಾನ ಮಾಡುವುದಕ್ಕಾಗಿ ಸಂವಿಧಾನ ಸಂರಕ್ಷಣಾ ಪಡೆ ಸಂಘಟಿಸುತ್ತಿದ್ದು, ಅದರ ಆರಂಭವಾಗಿ ಏಪ್ರಿಲ್ 26ರಂದು ದಾವಣಗೆರೆಯಲ್ಲಿ 10 ಸಾವಿರ ಕಾರ್ಯಕರ್ತರನ್ನು ಸಂಘಟಿಸಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ನಡೆಸುತ್ತಿದ್ದೇವೆ ಎಂದು ಎದ್ದೇಳು ಕರ್ನಾಟಕದ ಕೇಂದ್ರ ಸಮಿತಿ ಸದಸ್ಯ, ಹೋರಾಟಗಾರ ನೂರ್ ಶ್ರೀಧರ್ ಅವರು ಮಂಗಳವಾರ ಹೇಳಿದರು. ಏಪ್ರಿಲ್ 26ರಂದು ದಾವಣಗೆರೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಭಾಗವಾಗಿ ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಮುಂದಿನ ಮೂರು ವರ್ಷಗಳಲ್ಲಿ 10 ಸಾವಿರ ಕಾರ್ಯಕರ್ತರ ಈ ಸಂವಿಧಾನ ಸಂರಕ್ಷಣಾ ಪಡೆಯನ್ನು ಒಂದು ಲಕ್ಷಕ್ಕೆ ಸಜ್ಜುಗೊಳಿಸಲಿದ್ದು, ಅದಕ್ಕಾಗಿ ರಾಜ್ಯಾದ್ಯಂತ ಎಲ್ಲಾ ತಾಲೂಕು, ಜಿಲ್ಲೆಗಳಲ್ಲಿ ಕೆಲಸ ಮಾಡಲಿದ್ದೇವೆ ಎಂದು ಅವರು ಹೇಳಿದರು. “ದ್ವೇಷವನ್ನು ಮಟ್ಟ ಹಾಕಿ ಪ್ರೀತಿಯ ಸಮಾಜಕ್ಕಾಗಿ ಈ ಪಡೆ ಕೆಲಸ ಮಾಡಲಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನು ಈಡೇರಿಸುವ ಬಗ್ಗೆ ಒತ್ತಾಯಿಸುವುದು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಜನಾಂದೋಲನ ಪ್ರಾರಂಭಿಸುವುದು ಇದರ ಉದ್ದೇಶವಾಗಿದೆ” ಎಂದು ಅವರು ಹೇಳಿದ್ದಾರೆ. ‌

“ಕಳೆದ ಹತ್ತು ತಿಂಗಳ ಚಿಂತನ ಮಂಥನದ ನಂತರ ಈ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಕೂಡಾ ಅಧಿಕಾರಕ್ಕೆ ಬಂದ ನಂತರ ಒಂದು ಎಂಬಂತೆ ಆಗಿದೆ. ಕಾಂಗ್ರೆಸ್ ಐದು ಗ್ಯಾರಂಟಿ ಬಿಟ್ಟು ಬೇರೆ ಕೆಲಸಗಳನ್ನು ಮಾಡುತ್ತಿಲ್ಲ” ಎಂದು ನೂರ್‌ ಶ್ರೀಧರ್ ಅವರು ಹೇಳಿದರು.

“ಎದ್ದೇಳು ಕರ್ನಾಟಕ ಎಂಬ 112 ಸಂಘಟನೆಗಳನ್ನೊಳಗೊಂಡ ನಾಗರೀಕ ವೇದಿಕೆಯು 2023ರ ವಿಧಾನಸಭಾ ಚುನಾವಣೆ ಹಾಗೂ 2024 ರ ಲೋಕಸಭಾ ಚುನಾವಣೆಗಳಲ್ಲಿ ಸಂವಿಧಾನ ವಿರೋಧಿ ಶಕ್ತಿಗಳನ್ನು ಅಧಿಕಾರದಿಂದ ಇಳಿಸಲು ಬೂತ್ ಮಟ್ಟಕ್ಕಿಳಿದು ಪರಿಣಾಮಕಾರಿ ಕೆಲಸ ಮಾಡಿತ್ತು. ಎದ್ದೇಳು ಕರ್ನಾಟಕ ಮಾತ್ರವಲ್ಲದೆ ಇನ್ನು ಹಲವು ಜನಪರ ಸಂಘಟನೆಗಳು ಮಾಡಿದ ಅವಿರತ ಪರಿಶ್ರಮದ ಫಲವಾಗಿಯೇ ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರದಿಂದ ಕೆಳಗೆ ದಬ್ಬಲು ಸಾಧ್ಯವಾಯಿತು” ಎಂದು ಅವರು ಹೇಳಿದರು.

“ದೇಶವ್ಯಾಪಿ ಜನಪರ ಶಕ್ತಿಗಳು, ಜನಪರ ಮಾಧ್ಯಮಗಳು ಮಾಡಿದ ಪ್ರಯತ್ನದಿಂದಾಗಿ ಕೇಂದ್ರದಲ್ಲಿ ಅವರ ಶಕ್ತಿಯನ್ನು ಕಡಿತಗೊಳಿಸುವಲ್ಲಿ ಯಶಸ್ಸನ್ನೂ ಪಡೆದೆವು. ಆದರೆ ಅವಕಾಶ ವಾದಿಗಳ ಆಸರೆ ಪಡೆದು ಅವರೇ ಕೇಂದ್ರದ ಅಧಿಕಾರವನ್ನು ಮತ್ತೆ ಹಿಡಿದುಕೊಂಡಿದ್ದಾರೆ. ಅದಾನಿ, ಅಂಬಾನಿಗಳ ಪರವಾದ ನೀತಿಗಳನ್ನು ಮುಂದುವರೆಸಿದ್ದಾರೆ. ಜನಸಾಮಾನ್ಯರ ಬದುಕಿನ ಮೇಲಿನ ಆಕ್ರಮಣವನ್ನು ಹಾಗೂ ತಮ್ಮ ವಿಚ್ಚಿದ್ರಕಾರಿ ನೀತಿಗಳನ್ನು ಮುಂದುವರೆಸಿದ್ದಾರೆ. ಮುಂದೆ ಇದನ್ನು ಇನ್ನೂ ಹೆಚ್ಚಿಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ನಾವೆಲ್ಲಾ ಸೇರಿ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಆದರೆ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನೆಲ್ಲಾ ತಾನೂ ಮುಂದುವರೆಸುತ್ತಿದೆ. ಗ್ಯಾರಂಟಿಗಳಂತಹ ಕೆಲವು ಜನಹಿತ ನೀತಿಗಳನ್ನು ಮಾಡಿದ್ದು ಬಿಟ್ಟರೆ ಮಿಕ್ಕಂತೆ ಆಡಳಿತದಲ್ಲಿ ದೊಡ್ಡ ವ್ಯತ್ಯಾಸವಿಲ್ಲವಾಗಿದೆ” ಎಂದು ಅವರು ಹೇಳಿದ್ದಾರೆ.

ಹೊಸಸಂದರ್ಭ ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ ಅಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಿದೆ.

ಈ ಗುರಿಯೊಂದಿಗೆಯೇ ಪ್ರತಿ ಊರು, ಕೇರಿ, ಹಾಡಿ, ಬೀದಿಗಳಲ್ಲಿ, “ಸಂವಿಧಾನ ಸಂರಕ್ಷಕ ಪಡೆ” ಹೆಸರಿನಲ್ಲಿ ದೇಶಪ್ರೇಮಿ ತಂಡಗಳನ್ನು ಕಟ್ಟುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಒಂದು ಲಕ್ಷಕಾರ್ಯಕರ್ತರ ಪಡೆಯನ್ನು ಸಜ್ಜುಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಪ್ರಕ್ರಿಯೆಗೆ ರಾಜ್ಯಮಟ್ಟದ ಚಾಲನೆ ನೀಡಲು ಇದೇ ತಿಂಗಳ 26 ರಂದು ದಾವಣಗೆರೆಯಲ್ಲಿ “ಸಂವಿಧಾನ ಸಂರಕ್ಷಕರ ಸಮಾವೇಶ”ವನ್ನು ಆಯೋಜಿಸಲಾಗುತ್ತಿದೆ. ಸಮಾವೇಶದಲ್ಲಿ ಹತ್ತು ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಶ್ರೀಧರ್ ಹೇಳಿದರು.

ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ಏಪ್ರಿಲ್ 25 ರ ಸಂಜೆ ದಾವಣಗೆರೆ ತಲುಪಲಿದ್ದು ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ. ಯುವ ಮುಂದಾಳು ಸರೋವರ್ ಬೆಂಕಿಕೆರೆ ಅದರ ನೇತೃತ್ವ ವಹಿಸಿದ್ದಾರೆ ಎಂದು ಅವರು ಹೇಳಿದರು.

ಸಮಾವೇಶದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ, ಪ್ರಸಿದ್ಧ ಚಿತ್ರ ನಟಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂ ಹೋರಾಟಗಾರ ಜಿನ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ನಾಯಕ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾನಾಯ್. ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ. ವೀರೇಶ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಹೋರಾಟಗಾರ ಸಿದ್ಧನಗೌಡ ಪಾಟೀಲ್ ಸೇರಿದಂತೆ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾವೇಶದ ಸ್ವಾಗತ ಸಮಿತಿ ಪರವಾಗಿ ಮಾಜಿ ಸಚಿವರಾದ ಬಿ.ಟಿ. ಲಲಿತಾ ನಾಯ್ಕ್, ರೈತ ಮುಖಂಡರಾದ ವೀರಸಂಗಯ್ಯ, ಜಮಾತೆ ಇಸ್ಲಾಮಿ ಮುಖಂಡ ಯೂಸುಫ್ ಕನ್ನಿ, ಹೋರಾಟಗಾರ್ತಿ ತಾರಾ ರಾವರ್, ಫಾದರ್ ರೆವರೆಂಡ್ ಚಂದ್ರಪ್ರಸಾದ್ ಇದ್ದರು. ಸಂವಿಧಾನ ಸಂರಕ್ಷಣಾ ಪಡೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

‘ನನ್ನ ಪುಸ್ತಕ ಉಲ್ಲೇಖಿಸಿ ತಪ್ಪು ಮಾಹಿತಿ ಹರಡಬೇಡಿ’: ಕಂಗನಾ ರನೌತ್ ‘ಎಮರ್ಜೆನ್ಸಿ’ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕೂಮಿ ಕಪೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...