Homeಕರ್ನಾಟಕಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ

ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ

- Advertisement -
- Advertisement -

ಕೆಲವು ದಿನಗಳಿಂದ ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು, ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದರು. ಅವರು ಕಾಂಗ್ರೆಸ್‌ ಸೇರುವ ಇಂಗಿತವನ್ನು ಹೊರಹಾಕಿದ್ದರು. ಹಾಗಾಗಿ ಇಂದು (ಭಾನುವಾರ) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿವ ಮೂಲಕ ಕಾಂಗ್ರೆಸ್ ಸೇರ್ಪಡೆಯ ದಾರಿಯನ್ನು ಸುಗಮ ಮಾಡಿಕೊಂಡಿದ್ದಾರೆ.

ಶಾಸಕ ಶಿವಲಿಂಗೇಗೌಡ ಅವರು ಇಂದು ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭೇಟಿ ನೀಡಿ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಈ ವೇಳೆ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಶಿವಲಿಂಗೇಗೌಡ ಅವರು ವಿಧಾನಸಭೆ ಅಧಿವೇಶನದ ವೇಳೆ ಜನಪರವಾಗಿ ಆಡಿದ ಮಾತುಗಳನ್ನು ಪರಸ್ಪರ ಶ್ಲಾಘಿಸಿದರು. ಶಿವಲಿಂಗೇಗೌಡರ ಜೊತೆ 300ಕ್ಕೂ ಅಧಿಕ ಬೆಂಬಲಿಗರು ಬಂದಿದ್ದರು.

ಶಿವಲಿಂಗೇಗೌಡ ಅವರು 2008ರಲ್ಲಿ ಮೊದಲ ಬಾರಿ  ಶಾಸನಸಭೆಗೆ ಆಯ್ಕೆಯಾಗಿದ್ದರು. ಆ ನಂತರ 2018ರ ಚುನಾವಣೆಯಲ್ಲಿ ಅರಸಿಕೆರೆ ವಿಧಾನಸಭೆ ಕ್ಷೇತ್ರದಲ್ಲಿ 93,986 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್ ಪಕ್ಷದಲ್ಲಿ ಅವರಿಗೆ ಸರಿಯಾದ ಮನ್ನಣೆ, ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಅವರು ಈ ಹಿಂದೆಯೇ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುವ ತೀಮಾಣ ಮಾಡಿದ್ದರು. ಹಾಗಾಗಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸೇರ ಅವರು ಜೆಡಿಎಸ್ ತೊರೆಯಲು ನಿರ್ಧರಿಸಿದ್ದರು.

ಇದನ್ನೂ ಓದಿ: ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ ಗೋಪಾಲಕೃಷ್ಣ ರಾಜೀನಾಮೆ: ಕಾಂಗ್ರೆಸ್ ಸೇರುವ ಸಾಧ್ಯತೆ

ಇತ್ತೀಚೆಗೆ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋವೊಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿತ್ತು. ಆ ಆಡಿಯೋದಲ್ಲಿ, ”ಯಾವ ನನ್‌ ಮಗ ಅಡ್ಡ ಬಂದ್ರೂ ನಾನು ಕಾಂಗ್ರೆಸ್‌ನಲ್ಲಿ 50 ಸಾವಿರ ಲೀಡಲ್ಲಿ ಗೆಲ್ತೀನಿ. ಜೆಡಿಎಸ್‌ನಿಂದ ಯಾರೇ ನಿಂತರೂ ನನ್ನ ಗೆಲುವಿಗೆ ಅಡ್ಡಿಯಿಲ್ಲ. ಜನ ದೊಡ್ಡವರ ಮುಖ ನೋಡಿ ಓಟು ಹಾಕಲ್ಲ” ಎಂದು ಹೇಳಲಾಗಿತ್ತು. ಅದರಂತೆ ಇದೀಗ ಜೆಡಿಎಸ್ ತೊರೆದಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಲಾಗುತ್ತಿದೆ.

ಬಹಳಷ್ಟು ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇತ್ತೀಚೆಗೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಕಾಂಗ್ರೆಸ್ ಸೇರಿದ್ದಾರೆ. ಮಾಜಿ ಶಾಸಕ ವೈ.ಎಸ್.ವಿ ದತ್ತಾರವರು ಕಾಂಗ್ರೆಸ್ ಸೇರಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ಹಾಗೂ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರಿದ್ದಾರೆ. ಇಂದು ಶಿವಲಿಂಗೇಗೌಡ ಅವರು ಜೆಡಿಎಸ್‌ಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಸೇರುವ ಎಲ್ಲ ಲಕ್ಷಣಗಳಿವೆ. ಇನ್ನು ಆಯನೂರು ಮಂಜುನಾಥ್ ಮತ್ತು ಆರ್.ಶಂಕರ್‌ರವರು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...