Homeಅಂಕಣಗಳುಕನ್ನಡಿಗರಿಗೆ ನುಡಿ-ಯುನಿಕೋಡ್ ಬದಲಾಯಿಸುವ ಉಚಿತ ತಂತ್ರಾಂಶ ನೀಡಿದ ಅರವಿಂದ.ವಿ.ಕೆ

ಕನ್ನಡಿಗರಿಗೆ ನುಡಿ-ಯುನಿಕೋಡ್ ಬದಲಾಯಿಸುವ ಉಚಿತ ತಂತ್ರಾಂಶ ನೀಡಿದ ಅರವಿಂದ.ವಿ.ಕೆ

Linux ಮುಕ್ತ ತಂತ್ರಾಂಶ ಜತೆಗೆ ಟ್ರೆಕಿಂಗ್, ವೆಬ್ ಡೆವೆಲಪ್ಮೆಂಟ್, ಬ್ಲಾಗಿಂಗ್, ಫೋಟೋಗ್ರಫಿಯಂತಹ ಇಷ್ಟದ ಹವ್ಯಾಸಗಳ ಜತೆಗೆ ಸಂಗಾತಿ ಚಿನ್ಮಯಿ ಮಗಳು ಇಂಪನಾ ಜತೆ ಬೆಂಗಳೂರಿನಲ್ಲಿ ನೆಲೆಸಿದ ಅರವಿಂದ ವಿ.ಕೆ ಅವರಿಗೆ ಕನ್ನಡಿಗರ ಪರವಾಗಿ ಪತ್ರಿಕೆ ಅಭಿನಂದನೆಗಳನ್ನು ಸಲ್ಲಿಸುತ್ತದೆ.

- Advertisement -
- Advertisement -

ಕಳೆದ ಆರೇಳು ವರ್ಷದಲ್ಲಿ ಯೂನಿಕೋಡ್ ಫಾಂಟನ್ನು ನುಡಿಗೆ, ನುಡಿ ಫಾಂಟನ್ನು ಯೂನಿಕೋಡಿಗೆ ಬದಲಾಯಿಸಲು ಬಹಳಷ್ಟು ಜನ ಬಳಸುತ್ತಿರುವ ತಂತ್ರಾಂಶವನ್ನು ಅರವಿಂದ ವಿ.ಕೆ ಅವರು ಅಭಿವೃದ್ಧಿಪಡಿಸಿರುವುದು. ಗೂಗಲ್‌ನಲ್ಲಿ ಅರವಿಂದ ವಿ.ಕೆ ಎಂದು ನೀವು ಹುಡುಕಿದರೆ, ಕೆಳಗೆ ಒಂದಷ್ಟು ಕೊಂಡಿಗಳು ತೆರೆದುಕೊಳ್ಳುತ್ತವೆ. ಅದರಲ್ಲಿ ಪರಿಷ್ಕೃತ ತಂತ್ರಾಂಶವಾದ https://aravindavk.in/sanka/ ಲಿಂಕನ್ನು ಒತ್ತಿದರೆ ’ಸಂಕ’ ಆಸ್ಕಿ-ಯುನಿಕೋಡಿಗೆ ಕನ್ನಡದ ಸಂಕ ಎನ್ನುವ ಪುಟ ತೆರೆದುಕೊಳ್ಳುತ್ತದೆ. ಇದರಲ್ಲಿ ಎರಡು ಖಾಲಿ ಬಾಕ್ಸ್‌ಗಳು ಕಾಣುತ್ತವೆ. ನಿಮಗೆದುರಾಗಿ ಎಡದ ಬಾಕ್ಸ್‌‌ಗೆ ನುಡಿ/ಬರಹದ ಫಾಂಟ್ ಹಾಕಿ, ಯೂನಿಕೋಡಿಗೂ, ಯೂನಿಕೋಡ್ ಅಂಟಿಸಿ ನುಡಿಗೂ ಕ್ಷಣಾರ್ಧದಲ್ಲಿ ಪಡೆಯಬಹುದು.ಈ ತಂತ್ರಾಂಶವನ್ನು ನಾನು ದಿನಕ್ಕೆ ಎರಡು ಮೂರು ಬಾರಿಯಾದರೂ ಬಳಸುತ್ತಿದ್ದೆನಾದರೂ ಈ ಅರವಿಂದ್ ಯಾರು? ಎನ್ನುವ ಬಗ್ಗೆ ಯೋಚಿಸಿರಲಿಲ್ಲ. ನಂತರ ಅವರ ಬ್ಲಾಗ್, ಫೇಸ್‌ಬುಕ್‌ನಲ್ಲಿ ಒಂದಷ್ಟು ಮಾಹಿತಿ ಸಂಗ್ರಹಿಸಿ ಫೇಸ್‌ಬುಕ್ ಅಕೌಂಟಲ್ಲಿ ಒಂದು ಸ್ಟೇಟಸ್ ಹಾಕಿದ್ದೆ. ಇದೀಗ ಅರವಿಂದ ಅವರನ್ನು ಮಾತನಾಡಿಸಿ ಒಂದಷ್ಟು ಸಂಗತಿಗಳ ಬಗ್ಗೆ ಚರ್ಚಿಸಿದೆ. ಬರೆಯುವುದಿದ್ದರೆ ಕನ್ವರ್ಟ್ ಟೂಲ್ ಬಗ್ಗೆ ಬರೆಯಿರಿ ನನ್ನ ಬಗ್ಗೆ ಹೆಚ್ಚು ಬರೆಯಬೇಡಿ ಎಂದು ಎಚ್ಚರಿಸಿದರು.

2011 ಮಾರ್ಚ್ 6 ರ ಪ್ರಜಾವಾಣಿ ಪತ್ರಿಕೆಯ ಸಾಪ್ತಾಹಿಕ ಪುರವಣಿಯಲ್ಲಿ ’ಮುಕ್ತ ಜಗತ್ತಿಗೆ ಸ್ವಾಗತ’ ಎನ್ನುವ ಲೇಖನ ಬಂದಿತ್ತು. ಆ ಲೇಖನದಲ್ಲಿ ಫ್ರೀ ಸಾಪ್ಟವೇರ್, ಕನ್ನಡದ್ದೇ ತಂತ್ರಾಂಶ ಬರೆಯಲು ಇರುವ ಸಾಧ್ಯತೆಗಳೇನು, ಆ ನಿಟ್ಟಿನಲ್ಲಿ ಏನೇನು ಕೆಲಸಗಳಾಗಿವೆ, ಮುಂತಾದ ಸಂಗತಿಗಳ ಬಗ್ಗೆ ತಂತ್ರಾಂಶದ ಪರಿಭಾಷೆ ಅರಿಯದವರಿಗೂ ಅರ್ಥವಾಗುವಂತೆ ಕನ್ನಡದ ತಂತ್ರಾಂಶದ ಬಿಕ್ಕಟ್ಟನ್ನು ತುಂಬಾ ಸೂಕ್ಷ್ಮವಾಗಿ ಬರೆದಿದ್ದರು. ಈ ಲೇಖನ ಬರೆದವರು ಹಳ್ಳಿಮನೆ ಅರವಿಂದ ಎನ್ನುವವರು. ಹೀಗೆ ಉಚಿತ ತಂತ್ರಾಂಶದ ಥಿಯರಿ ಮತ್ತು ಪ್ರಾಯೋಗಿಕತೆಗೆ ತೆರೆದುಕೊಂಡ ಈ ಹಳ್ಳಿಮನೆ ಅರವಿಂದರೇ ನುಡಿ/ಬರಹ ಫಾಂಟಿಂದ ಯುನಿಕೋಡಿಗೂ, ಯುನಿಕೋಡಿಂದ ನುಡಿ/ಬಹರಕ್ಕೂ ಬದಲಾಯಿಸುವ `ಸಂಕ’ ಉಚಿತ/ಮುಕ್ತ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ ಅರವಿಂದ ವಿ.ಕೆ.ಶೃಂಗೇರಿಯ ಹತ್ತಿರ ಉತ್ತಮೇಶ್ವರದವರಾದ ಇವರು ಪಿ.ಯು ತನಕ ಶೃಂಗೇರಿಯಲ್ಲಿ ಓದಿದ ನಂತರ ಬೆಂಗಳೂರಿನಲ್ಲಿ ಬಿಇ (ಇಂಡಸ್ಟ್ರಿಯಲ್ ಇಂಜಿನೀರಿಂಗ್ ಆಂಡ್ ಮ್ಯಾನೇಜ್ಮೆಂಟ್)ಪದವಿ ಪಡೆದವರು. ಬೆಂಗಳೂರಿನಲ್ಲಿ ಇದೀಗ ತಮ್ಮದೇ ’ಕಡಲು’ ಎನ್ನುವ ಸಾಪ್ಟ್ವೇರ್ ಕಂಪನಿಯನ್ನು ನಿರ್ವಹಿಸುತ್ತಿದ್ದು, ಓಪನ್ ಸೋರ್ಸ್ ನೆಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇಂತಹದ್ದೇ ಹಿನ್ನೆಲೆಯ ರೆಡ್ ಹ್ಯಾಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಯುನಿಕೋಡಿಗೆ ’ಗುಬ್ಬಿ’ ಮತ್ತು ’ನವಿಲು’ ಎನ್ನುವ ಎರಡು ಫಾಂಟ್‌ಗಳನ್ನು ಕನ್ನಡಕ್ಕಾಗಿ ಅಭಿವೃದ್ಧಿಪಡಿಸಿ ನಿರ್ವಹಿಸುತ್ತಿದ್ದಾರೆ. ನವಿಲು ಫಾಂಟ್ ಕೈಬರಹದ ಮಾದರಿಯದು.ಗೂಗಲ್ ಅನಾಲಿಸಸ್ ಪ್ರಕಾರ ಪ್ರತಿದಿನ ಮೂರು ಸಾವಿರದಿಂದ 3500 ಬಾರಿ ’ಸಂಕ’ ಟೂಲಿನ ಉಪಯೋಗ ಪಡೆಯುತ್ತಾರೆ. ಅಂದರೆ ತಿಂಗಳಿಗೆ ಕನಿಷ್ಠ ಒಂದು ಲಕ್ಷದಷ್ಟು ಬಾರಿ ಈ ಟೂಲ್ ಉಚಿತವಾಗಿ ಬಳಕೆಯಾಗುತ್ತದೆ. ಇಂತಹ ಟೂಲ್ ಅರವಿಂದ್ ಅವರು ಯಾಕಾಗಿ ಮಾಡಿದರು ಎನ್ನುವುದನ್ನು ಅವರು ಸಹಜವಾಗಿ ವಿವರಿಸುತ್ತಾರೆ. ನಾನೊಂದು ಕತೆ ಬರೆದಿದ್ದೆ, ಅದು ASCII (American Standard Code for Information Interchange) ಫಾರ್ಮೆಟ್‌ನಲ್ಲಿತ್ತು. ಅದನ್ನು ಯೂನಿಕೋಡ್‌ಗೆ ಕನ್ವರ್ಟ್ ಮಾಡಬೇಕಿತ್ತು. ಸಾಫ್ಟವೇರ್‌ಗಾಗಿ ಹುಡುಕಿದೆ, ಸಿಗಲಿಲ್ಲ. ನಾನಾವಾಗ Linux ಬಳಸುತ್ತಿದ್ದೆ. ಕನ್ವರ್ಟರ್ ಸಿಗದೇ ಇರುವಾಗ ನಾನೇ ಯಾಕೆ ಕನ್ವರ್ಟರ್ ಮಾಡಬಾರದು ಎಂದು ಅನಿಸಿತು. ಪ್ರತಿಯೊಂದು ಎನ್ಕೋಡಿಂಗ್ ನೋಡಿಕೊಂಡು ನಾನೇ ಕನ್ವರ್ಟರ್ ಸಿದ್ಧಪಡಿಸಿದೆ.

ಈ ಸೌಲಭ್ಯವನ್ನು ಎಲ್ಲರಿಗೂ ಯಾಕೆ ಕಲ್ಪಿಸಬಾರದು ಎಂದು ಯೋಚಿಸಿ ಅದನ್ನೇ ನನ್ನ ಬ್ಲಾಗ್ ನಲ್ಲಿ ಹಾಕಿದೆ. ವೆಬ್ ನಲ್ಲಿ ಹುಡುಕಿದಾಗ ನನ್ನ ಬ್ಲಾಗ್ ಸಿಗುತ್ತಿತ್ತು. ಜನರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಯಿತು. ಕನ್ವರ್ಟರ್ ಬಳಸಿದ ಜನರು ಇಮೇಲ್ ಮಾಡುತ್ತಿದ್ದರು. ಕನ್ವರ್ಟ್ ಮಾಡುವಾಗ ಕೆಲವೊಂದು ಅಕ್ಷರಗಳು ಸರಿಯಾಗಿ ಬರುವುದಿಲ್ಲ, ತಪ್ಪುಗಳು ಗಮನಕ್ಕೆ ಬಂದಾಗ ತಿದ್ದಿದ್ದೇನೆ ಎನ್ನುತ್ತಾರೆ.

ಇಂಥಹದ್ದೊಂದು ವೆಬ್ ಆಪ್ ನಿರ್ವಹಣೆ ಮಾಡೋಕೆ ಪ್ರತಿ ವರ್ಷ ಒಂದಷ್ಟು ಖರ್ಚು ಮಾಡಬೇಕು. ಅದನ್ನೆಲ್ಲಾ ಅವರೇ ಸ್ವಂತ ಹಣದಲ್ಲಿ ಭರಿಸುತ್ತಾರೆ. ಸಂಕ ಕನ್ವರ್ಟ್ ಟೂಲ್ ಬಳಕೆಯಿಂದ ಕನ್ನಡಿಗರಿಗೆ ಅಪಾರ ಸಹಾಯವಾಗುವುದನ್ನು ಅರಿತು ವಾರ್ತಾ ಇಲಾಖೆ ಅರವಿಂದ್ ಅವರ ಬಗೆಗೆ ಒಂದು ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದೆ. ಇದಿನ್ನೂ ಬಿಡುಗಡೆಯಾಗಿಲ್ಲ.

ಕನ್ನಡದಲ್ಲಿ ತಂತ್ರಜ್ಞಾನದ ತಿಳಿವನ್ನು ಸರಳವಾಗಿ ವಿವರಿಸುವ ಸೂಕ್ಷ್ಮ ಪತ್ರಕರ್ತರಾದ ಎನ್. ಎ. ಎಮ್. ಇಸ್ಮಾಯಿಲ್ ಅವರು ಓಪನ್‌ಸೋರ್ಸ್ ಮತ್ತು ಅರವಿಂದ ವಿ. ಕೆ ಅವರ ಬಗ್ಗೆ ’ಫ್ರೀ ಸಾಫ್ಟ್ವೇರ್ ಮತ್ತು ಓಪನ್ ಸೋರ್ಸ್ ತಾತ್ವಿಕತೆಯಲ್ಲಿ ಕೆಲಸ ಮಾಡುವವರೆಲ್ಲಾ ಯಾರೂ ಜಾಹೀರಾತು ಮತ್ತು ಹಣದ ಹಿಂದೆ ಬೀಳುವುದಿಲ್ಲ. ತಮ್ಮ ಜ್ಞಾನದ ಬೆಳವಣಿಗೆಯಲ್ಲಿ ಸಮುದಾಯದ ಪಾಲಿದೆ. ನಾವು ಅಭಿವೃದ್ಧಿಪಡಿಸಿದ್ದು ಸಮುದಾಯಕ್ಕೂ ದೊರೆಯಬೇಕು ಎಂಬುದು ಅವರ ಗುಣ. ಅರವಿಂದ ಕೂಡಾ ಹೀಗೆಯೇ ನಡೆದುಕೊಂಡಿದ್ದಾರೆ. ಅವರ ಕನ್ವರ್ಷನ್ ವೆಬ್ ಆಪ್‌ನ ಸಂಪೂರ್ಣ ಸೋರ್ಸ್ ಕೋಡ್ ಉಚಿತವಾಗಿ ಮತ್ತು ಮುಕ್ತವಾಗಿ ಲಭ್ಯವಿದೆ. ಜ್ಞಾನವನ್ನು ಹಂಚಿಕೊಳ್ಳುತ್ತಾ ಅದನ್ನು ಹೆಚ್ಚಿಸುವ ಪ್ರಯತ್ನ ಇದು. ಸರಳವಾಗಿ ಹೇಳುವುದಾದರೆ ಚಕ್ರವನ್ನು ಕಂಡುಹಿಡಿದವರು ಅದಕ್ಕೆ ಕಾಪಿರೈಟ್ ಅಥವಾ ಪೇಟೆಂಟ್ ಮಾಡಿ ರಾಯಲ್ಟಿ ಪಡೆಯುತ್ತಿದ್ದರೆ ತಂತ್ರಜ್ಞಾನ ಇಷ್ಟೊಂದು ಅಭಿವೃದ್ಧಿಯಾಗುತ್ತಿತ್ತೇ? ಅರವಿಂದ್ ತಮ್ಮ ಜ್ಞಾನವನ್ನು ಬಳಸಿ ಏನನ್ನೇ ಮಾಡಿದರೂ, ಅದನ್ನವರು ಮುಕ್ತವಾಗಿ ಇಡುವ ಮೂಲಕ ಮತ್ತಷ್ಟು ಅಭಿವೃದ್ಧಿಯನ್ನು ಸಮುದಾಯ ಮಾಡಲಿ ಎಂದು ಭಾವಿಸಿದವರು. ತಂತ್ರಜ್ಞಾನ ಕ್ಷೇತ್ರದಲ್ಲಿ ದುಡಿಯುತ್ತಿರುವ ಒಬ್ಬರು ಸಮಾಜಕ್ಕೆ ಹಿಂದಿರುಗಿಸುವ ಬಗೆಯಿದು’ ಎನ್ನುತ್ತಾರೆ.Linux ಮುಕ್ತ ತಂತ್ರಾಂಶ ಜತೆಗೆ ಟ್ರೆಕಿಂಗ್, ವೆಬ್ ಡೆವೆಲಪ್ಮೆಂಟ್, ಬ್ಲಾಗಿಂಗ್, ಫೋಟೋಗ್ರಫಿಯಂತಹ ಇಷ್ಟದ ಹವ್ಯಾಸಗಳ ಜತೆಗೆ ಸಂಗಾತಿ ಚಿನ್ಮಯಿ ಮಗಳು ಇಂಪನಾ ಜತೆ ಬೆಂಗಳೂರಿನಲ್ಲಿ ನೆಲೆಸಿದ ಅರವಿಂದ ವಿ.ಕೆ ಅವರಿಗೆ ಕನ್ನಡಿಗರ ಪರವಾಗಿ ಪತ್ರಿಕೆ ಅಭಿನಂದನೆಗಳನ್ನು ಸಲ್ಲಿಸುತ್ತದೆ.

ನುಡಿ/ಬರಹ-ಯುನಿಕೋಡ್ ಬದಲಾಯಿಸುವ ತಂತ್ರಾಂಶದ ಲಿಂಕ್: https://aravindavk.in/sanka/

ಅರವಿಂದ ವಿ.ಕೆ ಅವರನ್ನು ಸಂಪರ್ಕಿಸುವ ಇಮೇಲ್: [email protected]


ಇದನ್ನೂ ಓದಿ: ಮಾದರಿ ಪಿಡಿಓ ಡಾ. ಶೋಭಾರಾಣಿ : ಅರುಣ್ ಜೋಳದ ಕೂಡ್ಲಿಗಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನುಡಿ/ಬರಹ-ಯುನಿಕೋಡ್ ಬದಲಾಯಿಸುವ ಉಚಿತ/ಮುಕ್ತ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ ಅರವಿಂದ ವಿ.ಕೆ. ಅವರ ಕೊಡುಗೆ ಪ್ರಶಂಸಾರ್ಹ. ಅವರ ಪರಿಚಯ ನೀಡಿದ ತಮಗೆ ಧನ್ಯವಾದಗಳು.

  2. ಅರವಿಂದ್ ಅವರಿಗೆ ವಿಶ್ವದ ಸಮಸ್ತ ಕನ್ನಡಿಗರು ಸದಾ ಕೃತಜ್ಞರಾಗಿರುತ್ತಾರೆ.
    – 9148391546

  3. ಶ್ರೀಯುತ ಅರವಿಂದ್ ಅವರಿಗೆ ನನ್ನ ಹೃತ್ಪೂರ್ವಕ ವಂದನೆಗಳು, ತಾವು ಸೃಷ್ಟಿಸಿದ ಅದ್ಬುತ ಈ-ಬರವಣಿಗೆ ಇಂದ ನನಗೆ ಕಛೇರಿ ಕೆಲಸಗಳನ್ನು ನಿರ್ವಹಿಸಲು ಅನುಕೂಲವಾಗಿದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...