Homeಮುಖಪುಟನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ...

ನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಹೈದರಾಬಾದ್: 2023ರಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ 30ರ ಹರೆಯದ ಕಿರುತರೆ ನಟಿ ಅಪ್ಸರಾ ಅವರ ಹತ್ಯೆ ಪ್ರಕರಣದಲ್ಲಿ ಆರ್ಚಕ ವೆಂಕಟ ಸಾಯಿ ಸೂರ್ಯ ಕೃಷ್ಣ (36) ಅವರಿಗೆ ಹೈದರಾಬಾದ್ ನ್ಯಾಯಾಲಯ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿದ್ದಕ್ಕಾಗಿ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತನಿಖಾಧಿಕಾರಿಗಳ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, ಅಪ್ಸರಾ ಎಂಬ ಮಹಿಳೆಯೊಂದಿಗೆ ಮದುವೆಯ ಸುಳ್ಳು ಭರವಸೆ ನೀಡುವ ಮೂಲಕ ಸಂಬಂಧ ಬೆಳೆಸಿಕೊಂಡಿದ್ದನು. ಇಬ್ಬರೂ ಸ್ವಲ್ಪ ಸಮಯದವರೆಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಆದರೆ, ಅಪ್ಸರಾ ತನ್ನ ಭರವಸೆಯನ್ನು ಈಡೇರಿಸುವಂತೆ ಮತ್ತು ತನ್ನನ್ನು ಮದುವೆಯಾಗುವಂತೆ ಆರ್ಚಕನಿಗೆ ಒತ್ತಡ ಹೇರಲು ಪ್ರಾರಂಭಿಸಿದಾಗ, ಸಾಯಿ ಕೃಷ್ಣ ಅವಳನ್ನು ಹತ್ಯೆಗೈಯ್ಯಲು ಸಂಚು ರೂಪಿಸಿದನು.

ಜೂನ್ 3, 2023ರಂದು ಆರ್ಚಕನು ಕೊಯಮತ್ತೂರಿಗೆ ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಅಪ್ಸರಾಳನ್ನು ಮನವೊಲಿಸಿದನು. ಆ ರಾತ್ರಿ ಅವರು ರಲ್ಲಾಗುಡದಲ್ಲಿ ಊಟ ಮಾಡಿದರು ಮತ್ತು ಸುಲ್ತಾನಪಲ್ಲಿಯಲ್ಲಿರುವ ಗೋಶಾಲೆಗೆ ಭೇಟಿ ನೀಡಿದರು. ಆದಾಗ್ಯೂ ಜೂನ್ 4ರ ಮುಂಜಾನೆ ಆರ್ಚಕನು ಅಪ್ಸರಳನ್ನು ಶಂಷಾಬಾದ್ ಬಳಿಯ ನರ್ಖೋಡಾ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಲ್ಲಿನಿಂದ ಜಜ್ಜಿ ಹತ್ಯೆಗೈದ್ದಿದ್ದನು.

ನಂತರ ಅವನು ಆಕೆಯ ದೇಹವನ್ನು ಸರೂರ್ ನಗರಕ್ಕೆ ಸಾಗಿಸಿ, ಎಸ್‌ಆರ್‌ಒ ಕಚೇರಿ ಬಳಿಯ ಒಳಚರಂಡಿ ಮ್ಯಾನ್‌ಹೋಲ್‌ನೊಳಗೆ ಹಾಕಿ ಅದನ್ನು ಸಿಮೆಂಟ್‌ನಿಂದ ಮುಚ್ಚಿದ್ದನು. ನಂತರ ಜನರ ಗಮನವನ್ನು ಬೇರೆಡೆ ಸೆಳೆಯಲು ಮಹಿಳೆ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು.

ಅನುಮಾನದಿಂದ ತಪ್ಪಿಸಿಕೊಳ್ಳುವ ಆಶಯದೊಂದಿಗೆ ಕೃಷ್ಣ ದಿನಚರಿ ಮುಂದುವರಿಸಿದನು. ಆದಾಗ್ಯೂ ಕಾಣೆಯಾದ ವ್ಯಕ್ತಿಯ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂತಿಮವಾಗಿ ಕೊಲೆಯ ಪುರಾವೆಗಳು ಸಿಗದಂತೆ ಹೇಗೆ ತಪ್ಪಿಸಿಕೊಳ್ಳುವುದು. ಹತ್ಯೆಯನ್ನು ಹೇಗೆ ನಡೆಸುವುದು ಮತ್ತು ಶವವನ್ನು ವಿಲೇವಾರಿ ಮಾಡುವುದು ಹೇಗೆ ಎಂಬುದರ ಕುರಿತು ಕೃಷ್ಣ ಗೂಗಲ್ ನಲ್ಲಿಯೂ ಸಹ ಸರ್ಫ್ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ಕೂಡಲೇ ಪೊಲೀಸರು ಸಾಯಿ ಕೃಷ್ಣನನ್ನು ಬಂಧಿಸಿದರು. ವಿಚಾರಣೆಯ ಸಮಯದಲ್ಲಿ ಪೂರ್ವಯೋಜಿತ ಕೊಲೆ ಮತ್ತು ಸಾಕ್ಷ್ಯಗಳನ್ನು ನಾಶಮಾಡುವ ಪ್ರಯತ್ನಗಳ ಬಲವಾದ ಪುರಾವೆಗಳು ನ್ಯಾಯಾಲಯಕ್ಕೆ ಕಂಡುಬಂದವು, ಇದು ಬುಧವಾರದ ತೀರ್ಪಿಗೆ ಕಾರಣವಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, 30 ವರ್ಷದ ಮಹಿಳೆಯನ್ನು ತಾನು ಮದುವೆಯಾಗುತ್ತೇನೆ ಮತ್ತು ಅವಳೊಂದಿಗೆ ಸಂಬಂಧ ಬೆಳೆಸುತ್ತೇನೆ ಎಂದು ನಂಬಿಸಿದ್ದನು. ಅಪ್ಸರಾ ಅವರ ತಾಯಿ ಆರೋಪಿ ಅರ್ಚಕರಾಗಿದ್ದ ದೇವಸ್ಥಾನಕ್ಕೆ ಆಗಾಗ್ಗೆ ಹೋಗುತ್ತಿದ್ದರಿಂದ ಸಾಯಿ ಕೃಷ್ಣ ಬಲಿಪಶುವಿನ ಪರಿಚಯವಾಯಿತು. ಇದು 2023ರ ಆರಂಭದಲ್ಲಿ ಸಂಬಂಧಕ್ಕೆ ನಾಂದಿ ಹಾಡಿತು.

ಕೊಲೆಯ ನಂತರ ಆರ್ಚಕನು ತನ್ನ ಕಾರನ್ನು ತೊಳೆದು ತನ್ನ ಅಪಾರ್ಟ್ಮೆಂಟ್ ನಲ್ಲಿ ನಿಲ್ಲಿಸಿದನು. ಮರುದಿನ ಅವನು ಸ್ಥಳಕ್ಕೆ ಭೇಟಿ ನೀಡಿದನು ಮತ್ತು ಕೆಟ್ಟವಾಸನೆ ಬರುತ್ತಿರುವುದನ್ನು ಗಮನಿಸಿದ ನಂತರ, ಅವನು ಕೆಲವು ಕಾರ್ಮಿಕರನ್ನು ಕರೆದುಕೊಂಡು ಮ್ಯಾನ್‌ಹೋಲ್ ಅನ್ನು ಕಾಂಕ್ರೀಟ್‌ನಿಂದ ಮುಚ್ಚಿದನು ಎಂದು ಪ್ರಾಸಿಕ್ಯೂಷನ್ ತಿಳಿಸಿದೆ.

ಇದೆಲ್ಲದರ ನಂತರ ಸಾಯಿ ಕೃಷ್ಣ ಸಂತ್ರಸ್ತೆಯ ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯ ಹೇಳಿಕೆಯಲ್ಲಿ ವಿರೋಧಾಭಾಸಗಳಿವೆ ಎಂದು ಪೊಲೀಸರು ಕಂಡುಕೊಂಡರು. ಇದೇ ಕಾರಣಕ್ಕಾಗಿ ಆರ್ಚಕನನ್ನು ವಿಚಾರಣೆ ನಡೆಸಿದಾಗ ಅವನು ನಟಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡನು ಮತ್ತು ಬಂಧಿಸಲ್ಪಟ್ಟನು ಎಂದು ಶಂಷಾಬಾದ್ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿ ಜಾರಿಗೆ ತರುವ ರಾಜಕೀಯ ಇಚ್ಛಾಶಕ್ತಿ ಹೊಂದಿದೆ: ಜಸ್ಟೀಸ್ ನಾಗಮೋಹನ್‌ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...