Homeಮುಖಪುಟನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ...

ನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಹೈದರಾಬಾದ್: 2023ರಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ 30ರ ಹರೆಯದ ಕಿರುತರೆ ನಟಿ ಅಪ್ಸರಾ ಅವರ ಹತ್ಯೆ ಪ್ರಕರಣದಲ್ಲಿ ಆರ್ಚಕ ವೆಂಕಟ ಸಾಯಿ ಸೂರ್ಯ ಕೃಷ್ಣ (36) ಅವರಿಗೆ ಹೈದರಾಬಾದ್ ನ್ಯಾಯಾಲಯ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿದ್ದಕ್ಕಾಗಿ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತನಿಖಾಧಿಕಾರಿಗಳ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, ಅಪ್ಸರಾ ಎಂಬ ಮಹಿಳೆಯೊಂದಿಗೆ ಮದುವೆಯ ಸುಳ್ಳು ಭರವಸೆ ನೀಡುವ ಮೂಲಕ ಸಂಬಂಧ ಬೆಳೆಸಿಕೊಂಡಿದ್ದನು. ಇಬ್ಬರೂ ಸ್ವಲ್ಪ ಸಮಯದವರೆಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಆದರೆ, ಅಪ್ಸರಾ ತನ್ನ ಭರವಸೆಯನ್ನು ಈಡೇರಿಸುವಂತೆ ಮತ್ತು ತನ್ನನ್ನು ಮದುವೆಯಾಗುವಂತೆ ಆರ್ಚಕನಿಗೆ ಒತ್ತಡ ಹೇರಲು ಪ್ರಾರಂಭಿಸಿದಾಗ, ಸಾಯಿ ಕೃಷ್ಣ ಅವಳನ್ನು ಹತ್ಯೆಗೈಯ್ಯಲು ಸಂಚು ರೂಪಿಸಿದನು.

ಜೂನ್ 3, 2023ರಂದು ಆರ್ಚಕನು ಕೊಯಮತ್ತೂರಿಗೆ ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಅಪ್ಸರಾಳನ್ನು ಮನವೊಲಿಸಿದನು. ಆ ರಾತ್ರಿ ಅವರು ರಲ್ಲಾಗುಡದಲ್ಲಿ ಊಟ ಮಾಡಿದರು ಮತ್ತು ಸುಲ್ತಾನಪಲ್ಲಿಯಲ್ಲಿರುವ ಗೋಶಾಲೆಗೆ ಭೇಟಿ ನೀಡಿದರು. ಆದಾಗ್ಯೂ ಜೂನ್ 4ರ ಮುಂಜಾನೆ ಆರ್ಚಕನು ಅಪ್ಸರಳನ್ನು ಶಂಷಾಬಾದ್ ಬಳಿಯ ನರ್ಖೋಡಾ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಲ್ಲಿನಿಂದ ಜಜ್ಜಿ ಹತ್ಯೆಗೈದ್ದಿದ್ದನು.

ನಂತರ ಅವನು ಆಕೆಯ ದೇಹವನ್ನು ಸರೂರ್ ನಗರಕ್ಕೆ ಸಾಗಿಸಿ, ಎಸ್‌ಆರ್‌ಒ ಕಚೇರಿ ಬಳಿಯ ಒಳಚರಂಡಿ ಮ್ಯಾನ್‌ಹೋಲ್‌ನೊಳಗೆ ಹಾಕಿ ಅದನ್ನು ಸಿಮೆಂಟ್‌ನಿಂದ ಮುಚ್ಚಿದ್ದನು. ನಂತರ ಜನರ ಗಮನವನ್ನು ಬೇರೆಡೆ ಸೆಳೆಯಲು ಮಹಿಳೆ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು.

ಅನುಮಾನದಿಂದ ತಪ್ಪಿಸಿಕೊಳ್ಳುವ ಆಶಯದೊಂದಿಗೆ ಕೃಷ್ಣ ದಿನಚರಿ ಮುಂದುವರಿಸಿದನು. ಆದಾಗ್ಯೂ ಕಾಣೆಯಾದ ವ್ಯಕ್ತಿಯ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂತಿಮವಾಗಿ ಕೊಲೆಯ ಪುರಾವೆಗಳು ಸಿಗದಂತೆ ಹೇಗೆ ತಪ್ಪಿಸಿಕೊಳ್ಳುವುದು. ಹತ್ಯೆಯನ್ನು ಹೇಗೆ ನಡೆಸುವುದು ಮತ್ತು ಶವವನ್ನು ವಿಲೇವಾರಿ ಮಾಡುವುದು ಹೇಗೆ ಎಂಬುದರ ಕುರಿತು ಕೃಷ್ಣ ಗೂಗಲ್ ನಲ್ಲಿಯೂ ಸಹ ಸರ್ಫ್ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ಕೂಡಲೇ ಪೊಲೀಸರು ಸಾಯಿ ಕೃಷ್ಣನನ್ನು ಬಂಧಿಸಿದರು. ವಿಚಾರಣೆಯ ಸಮಯದಲ್ಲಿ ಪೂರ್ವಯೋಜಿತ ಕೊಲೆ ಮತ್ತು ಸಾಕ್ಷ್ಯಗಳನ್ನು ನಾಶಮಾಡುವ ಪ್ರಯತ್ನಗಳ ಬಲವಾದ ಪುರಾವೆಗಳು ನ್ಯಾಯಾಲಯಕ್ಕೆ ಕಂಡುಬಂದವು, ಇದು ಬುಧವಾರದ ತೀರ್ಪಿಗೆ ಕಾರಣವಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, 30 ವರ್ಷದ ಮಹಿಳೆಯನ್ನು ತಾನು ಮದುವೆಯಾಗುತ್ತೇನೆ ಮತ್ತು ಅವಳೊಂದಿಗೆ ಸಂಬಂಧ ಬೆಳೆಸುತ್ತೇನೆ ಎಂದು ನಂಬಿಸಿದ್ದನು. ಅಪ್ಸರಾ ಅವರ ತಾಯಿ ಆರೋಪಿ ಅರ್ಚಕರಾಗಿದ್ದ ದೇವಸ್ಥಾನಕ್ಕೆ ಆಗಾಗ್ಗೆ ಹೋಗುತ್ತಿದ್ದರಿಂದ ಸಾಯಿ ಕೃಷ್ಣ ಬಲಿಪಶುವಿನ ಪರಿಚಯವಾಯಿತು. ಇದು 2023ರ ಆರಂಭದಲ್ಲಿ ಸಂಬಂಧಕ್ಕೆ ನಾಂದಿ ಹಾಡಿತು.

ಕೊಲೆಯ ನಂತರ ಆರ್ಚಕನು ತನ್ನ ಕಾರನ್ನು ತೊಳೆದು ತನ್ನ ಅಪಾರ್ಟ್ಮೆಂಟ್ ನಲ್ಲಿ ನಿಲ್ಲಿಸಿದನು. ಮರುದಿನ ಅವನು ಸ್ಥಳಕ್ಕೆ ಭೇಟಿ ನೀಡಿದನು ಮತ್ತು ಕೆಟ್ಟವಾಸನೆ ಬರುತ್ತಿರುವುದನ್ನು ಗಮನಿಸಿದ ನಂತರ, ಅವನು ಕೆಲವು ಕಾರ್ಮಿಕರನ್ನು ಕರೆದುಕೊಂಡು ಮ್ಯಾನ್‌ಹೋಲ್ ಅನ್ನು ಕಾಂಕ್ರೀಟ್‌ನಿಂದ ಮುಚ್ಚಿದನು ಎಂದು ಪ್ರಾಸಿಕ್ಯೂಷನ್ ತಿಳಿಸಿದೆ.

ಇದೆಲ್ಲದರ ನಂತರ ಸಾಯಿ ಕೃಷ್ಣ ಸಂತ್ರಸ್ತೆಯ ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯ ಹೇಳಿಕೆಯಲ್ಲಿ ವಿರೋಧಾಭಾಸಗಳಿವೆ ಎಂದು ಪೊಲೀಸರು ಕಂಡುಕೊಂಡರು. ಇದೇ ಕಾರಣಕ್ಕಾಗಿ ಆರ್ಚಕನನ್ನು ವಿಚಾರಣೆ ನಡೆಸಿದಾಗ ಅವನು ನಟಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡನು ಮತ್ತು ಬಂಧಿಸಲ್ಪಟ್ಟನು ಎಂದು ಶಂಷಾಬಾದ್ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿ ಜಾರಿಗೆ ತರುವ ರಾಜಕೀಯ ಇಚ್ಛಾಶಕ್ತಿ ಹೊಂದಿದೆ: ಜಸ್ಟೀಸ್ ನಾಗಮೋಹನ್‌ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಸರಪಂಚ್ ಚುನಾವಣೆಯಲ್ಲಿ ಬೆಂಬಲಿಸದ ದಲಿತ ಕುಟುಂಬದ ಮನೆ ಕೆಡವಿದ ಕಾಂಗ್ರೆಸ್ ಸದಸ್ಯರು

ಕಾಂಗ್ರೆಸ್ ಬೆಂಬಲಿತ ಸರಪಂಚ್ ಆಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ, ಪದ್ಮಾವತಿ ಮತ್ತು ಅವರ ಮಗ ಪ್ರಸಾದ್ ರೆಡ್ಡಿ ಎಂಬುವವರು ಸೋಮವಾರ ಕೊಹಿರ್ ಮಂಡಲದ ಸಜ್ಜಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ದಲಿತ ಕುಟುಂಬದ ಮನೆಯನ್ನು...

“ಆತ್ಮಹತ್ಯೆಗೆ ಮುಂದಾದೆ, ಕುಟುಂಬ ನೆನೆದು ಸುಮ್ಮನಾದೆ”: ನೋವು ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

"ನಾನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದೆ. ಆದರೆ, ನನ್ನ ಕುಟುಂಬವನ್ನು ನೆನೆದು ಸುಮ್ಮನಾದೆ" ಇದು ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮಂಗಳವಾರ (2025 ಡಿಸೆಂಬರ್ 24) ಸಂಜೆ ದೆಹಲಿಯ ಇಂಡಿಯಾ ಗೇಟ್ ಎದುರಿನ ಹುಲ್ಲುಹಾಸಿನ ಮೇಲೆ...

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...