Homeಮುಖಪುಟನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ...

ನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಹೈದರಾಬಾದ್: 2023ರಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ 30ರ ಹರೆಯದ ಕಿರುತರೆ ನಟಿ ಅಪ್ಸರಾ ಅವರ ಹತ್ಯೆ ಪ್ರಕರಣದಲ್ಲಿ ಆರ್ಚಕ ವೆಂಕಟ ಸಾಯಿ ಸೂರ್ಯ ಕೃಷ್ಣ (36) ಅವರಿಗೆ ಹೈದರಾಬಾದ್ ನ್ಯಾಯಾಲಯ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿದ್ದಕ್ಕಾಗಿ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತನಿಖಾಧಿಕಾರಿಗಳ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, ಅಪ್ಸರಾ ಎಂಬ ಮಹಿಳೆಯೊಂದಿಗೆ ಮದುವೆಯ ಸುಳ್ಳು ಭರವಸೆ ನೀಡುವ ಮೂಲಕ ಸಂಬಂಧ ಬೆಳೆಸಿಕೊಂಡಿದ್ದನು. ಇಬ್ಬರೂ ಸ್ವಲ್ಪ ಸಮಯದವರೆಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಆದರೆ, ಅಪ್ಸರಾ ತನ್ನ ಭರವಸೆಯನ್ನು ಈಡೇರಿಸುವಂತೆ ಮತ್ತು ತನ್ನನ್ನು ಮದುವೆಯಾಗುವಂತೆ ಆರ್ಚಕನಿಗೆ ಒತ್ತಡ ಹೇರಲು ಪ್ರಾರಂಭಿಸಿದಾಗ, ಸಾಯಿ ಕೃಷ್ಣ ಅವಳನ್ನು ಹತ್ಯೆಗೈಯ್ಯಲು ಸಂಚು ರೂಪಿಸಿದನು.

ಜೂನ್ 3, 2023ರಂದು ಆರ್ಚಕನು ಕೊಯಮತ್ತೂರಿಗೆ ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಅಪ್ಸರಾಳನ್ನು ಮನವೊಲಿಸಿದನು. ಆ ರಾತ್ರಿ ಅವರು ರಲ್ಲಾಗುಡದಲ್ಲಿ ಊಟ ಮಾಡಿದರು ಮತ್ತು ಸುಲ್ತಾನಪಲ್ಲಿಯಲ್ಲಿರುವ ಗೋಶಾಲೆಗೆ ಭೇಟಿ ನೀಡಿದರು. ಆದಾಗ್ಯೂ ಜೂನ್ 4ರ ಮುಂಜಾನೆ ಆರ್ಚಕನು ಅಪ್ಸರಳನ್ನು ಶಂಷಾಬಾದ್ ಬಳಿಯ ನರ್ಖೋಡಾ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಲ್ಲಿನಿಂದ ಜಜ್ಜಿ ಹತ್ಯೆಗೈದ್ದಿದ್ದನು.

ನಂತರ ಅವನು ಆಕೆಯ ದೇಹವನ್ನು ಸರೂರ್ ನಗರಕ್ಕೆ ಸಾಗಿಸಿ, ಎಸ್‌ಆರ್‌ಒ ಕಚೇರಿ ಬಳಿಯ ಒಳಚರಂಡಿ ಮ್ಯಾನ್‌ಹೋಲ್‌ನೊಳಗೆ ಹಾಕಿ ಅದನ್ನು ಸಿಮೆಂಟ್‌ನಿಂದ ಮುಚ್ಚಿದ್ದನು. ನಂತರ ಜನರ ಗಮನವನ್ನು ಬೇರೆಡೆ ಸೆಳೆಯಲು ಮಹಿಳೆ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು.

ಅನುಮಾನದಿಂದ ತಪ್ಪಿಸಿಕೊಳ್ಳುವ ಆಶಯದೊಂದಿಗೆ ಕೃಷ್ಣ ದಿನಚರಿ ಮುಂದುವರಿಸಿದನು. ಆದಾಗ್ಯೂ ಕಾಣೆಯಾದ ವ್ಯಕ್ತಿಯ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂತಿಮವಾಗಿ ಕೊಲೆಯ ಪುರಾವೆಗಳು ಸಿಗದಂತೆ ಹೇಗೆ ತಪ್ಪಿಸಿಕೊಳ್ಳುವುದು. ಹತ್ಯೆಯನ್ನು ಹೇಗೆ ನಡೆಸುವುದು ಮತ್ತು ಶವವನ್ನು ವಿಲೇವಾರಿ ಮಾಡುವುದು ಹೇಗೆ ಎಂಬುದರ ಕುರಿತು ಕೃಷ್ಣ ಗೂಗಲ್ ನಲ್ಲಿಯೂ ಸಹ ಸರ್ಫ್ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ಕೂಡಲೇ ಪೊಲೀಸರು ಸಾಯಿ ಕೃಷ್ಣನನ್ನು ಬಂಧಿಸಿದರು. ವಿಚಾರಣೆಯ ಸಮಯದಲ್ಲಿ ಪೂರ್ವಯೋಜಿತ ಕೊಲೆ ಮತ್ತು ಸಾಕ್ಷ್ಯಗಳನ್ನು ನಾಶಮಾಡುವ ಪ್ರಯತ್ನಗಳ ಬಲವಾದ ಪುರಾವೆಗಳು ನ್ಯಾಯಾಲಯಕ್ಕೆ ಕಂಡುಬಂದವು, ಇದು ಬುಧವಾರದ ತೀರ್ಪಿಗೆ ಕಾರಣವಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, 30 ವರ್ಷದ ಮಹಿಳೆಯನ್ನು ತಾನು ಮದುವೆಯಾಗುತ್ತೇನೆ ಮತ್ತು ಅವಳೊಂದಿಗೆ ಸಂಬಂಧ ಬೆಳೆಸುತ್ತೇನೆ ಎಂದು ನಂಬಿಸಿದ್ದನು. ಅಪ್ಸರಾ ಅವರ ತಾಯಿ ಆರೋಪಿ ಅರ್ಚಕರಾಗಿದ್ದ ದೇವಸ್ಥಾನಕ್ಕೆ ಆಗಾಗ್ಗೆ ಹೋಗುತ್ತಿದ್ದರಿಂದ ಸಾಯಿ ಕೃಷ್ಣ ಬಲಿಪಶುವಿನ ಪರಿಚಯವಾಯಿತು. ಇದು 2023ರ ಆರಂಭದಲ್ಲಿ ಸಂಬಂಧಕ್ಕೆ ನಾಂದಿ ಹಾಡಿತು.

ಕೊಲೆಯ ನಂತರ ಆರ್ಚಕನು ತನ್ನ ಕಾರನ್ನು ತೊಳೆದು ತನ್ನ ಅಪಾರ್ಟ್ಮೆಂಟ್ ನಲ್ಲಿ ನಿಲ್ಲಿಸಿದನು. ಮರುದಿನ ಅವನು ಸ್ಥಳಕ್ಕೆ ಭೇಟಿ ನೀಡಿದನು ಮತ್ತು ಕೆಟ್ಟವಾಸನೆ ಬರುತ್ತಿರುವುದನ್ನು ಗಮನಿಸಿದ ನಂತರ, ಅವನು ಕೆಲವು ಕಾರ್ಮಿಕರನ್ನು ಕರೆದುಕೊಂಡು ಮ್ಯಾನ್‌ಹೋಲ್ ಅನ್ನು ಕಾಂಕ್ರೀಟ್‌ನಿಂದ ಮುಚ್ಚಿದನು ಎಂದು ಪ್ರಾಸಿಕ್ಯೂಷನ್ ತಿಳಿಸಿದೆ.

ಇದೆಲ್ಲದರ ನಂತರ ಸಾಯಿ ಕೃಷ್ಣ ಸಂತ್ರಸ್ತೆಯ ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯ ಹೇಳಿಕೆಯಲ್ಲಿ ವಿರೋಧಾಭಾಸಗಳಿವೆ ಎಂದು ಪೊಲೀಸರು ಕಂಡುಕೊಂಡರು. ಇದೇ ಕಾರಣಕ್ಕಾಗಿ ಆರ್ಚಕನನ್ನು ವಿಚಾರಣೆ ನಡೆಸಿದಾಗ ಅವನು ನಟಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡನು ಮತ್ತು ಬಂಧಿಸಲ್ಪಟ್ಟನು ಎಂದು ಶಂಷಾಬಾದ್ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿ ಜಾರಿಗೆ ತರುವ ರಾಜಕೀಯ ಇಚ್ಛಾಶಕ್ತಿ ಹೊಂದಿದೆ: ಜಸ್ಟೀಸ್ ನಾಗಮೋಹನ್‌ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...