Homeಮುಖಪುಟನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ...

ನಟಿಯ ಹತ್ಯೆಗೈದು ಮ್ಯಾನ್ ಹೋಲ್ ಗೆ ಶವ ಹಾಕಿ ಸಿಮೆಂಟ್ ನಿಂದ ಮುಚ್ಚಿದ್ದ ಆರ್ಚಕನಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಹೈದರಾಬಾದ್: 2023ರಲ್ಲಿ ವಿವಾಹೇತರ ಸಂಬಂಧ ಹೊಂದಿದ್ದ 30ರ ಹರೆಯದ ಕಿರುತರೆ ನಟಿ ಅಪ್ಸರಾ ಅವರ ಹತ್ಯೆ ಪ್ರಕರಣದಲ್ಲಿ ಆರ್ಚಕ ವೆಂಕಟ ಸಾಯಿ ಸೂರ್ಯ ಕೃಷ್ಣ (36) ಅವರಿಗೆ ಹೈದರಾಬಾದ್ ನ್ಯಾಯಾಲಯ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ತಿರುಚಿದ್ದಕ್ಕಾಗಿ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತನಿಖಾಧಿಕಾರಿಗಳ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, ಅಪ್ಸರಾ ಎಂಬ ಮಹಿಳೆಯೊಂದಿಗೆ ಮದುವೆಯ ಸುಳ್ಳು ಭರವಸೆ ನೀಡುವ ಮೂಲಕ ಸಂಬಂಧ ಬೆಳೆಸಿಕೊಂಡಿದ್ದನು. ಇಬ್ಬರೂ ಸ್ವಲ್ಪ ಸಮಯದವರೆಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ವರದಿಯಾಗಿದೆ. ಆದರೆ, ಅಪ್ಸರಾ ತನ್ನ ಭರವಸೆಯನ್ನು ಈಡೇರಿಸುವಂತೆ ಮತ್ತು ತನ್ನನ್ನು ಮದುವೆಯಾಗುವಂತೆ ಆರ್ಚಕನಿಗೆ ಒತ್ತಡ ಹೇರಲು ಪ್ರಾರಂಭಿಸಿದಾಗ, ಸಾಯಿ ಕೃಷ್ಣ ಅವಳನ್ನು ಹತ್ಯೆಗೈಯ್ಯಲು ಸಂಚು ರೂಪಿಸಿದನು.

ಜೂನ್ 3, 2023ರಂದು ಆರ್ಚಕನು ಕೊಯಮತ್ತೂರಿಗೆ ಪ್ರವಾಸಕ್ಕೆ ಹೋಗುತ್ತಿದ್ದೇವೆ ಎಂದು ಅಪ್ಸರಾಳನ್ನು ಮನವೊಲಿಸಿದನು. ಆ ರಾತ್ರಿ ಅವರು ರಲ್ಲಾಗುಡದಲ್ಲಿ ಊಟ ಮಾಡಿದರು ಮತ್ತು ಸುಲ್ತಾನಪಲ್ಲಿಯಲ್ಲಿರುವ ಗೋಶಾಲೆಗೆ ಭೇಟಿ ನೀಡಿದರು. ಆದಾಗ್ಯೂ ಜೂನ್ 4ರ ಮುಂಜಾನೆ ಆರ್ಚಕನು ಅಪ್ಸರಳನ್ನು ಶಂಷಾಬಾದ್ ಬಳಿಯ ನರ್ಖೋಡಾ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಲ್ಲಿನಿಂದ ಜಜ್ಜಿ ಹತ್ಯೆಗೈದ್ದಿದ್ದನು.

ನಂತರ ಅವನು ಆಕೆಯ ದೇಹವನ್ನು ಸರೂರ್ ನಗರಕ್ಕೆ ಸಾಗಿಸಿ, ಎಸ್‌ಆರ್‌ಒ ಕಚೇರಿ ಬಳಿಯ ಒಳಚರಂಡಿ ಮ್ಯಾನ್‌ಹೋಲ್‌ನೊಳಗೆ ಹಾಕಿ ಅದನ್ನು ಸಿಮೆಂಟ್‌ನಿಂದ ಮುಚ್ಚಿದ್ದನು. ನಂತರ ಜನರ ಗಮನವನ್ನು ಬೇರೆಡೆ ಸೆಳೆಯಲು ಮಹಿಳೆ ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು.

ಅನುಮಾನದಿಂದ ತಪ್ಪಿಸಿಕೊಳ್ಳುವ ಆಶಯದೊಂದಿಗೆ ಕೃಷ್ಣ ದಿನಚರಿ ಮುಂದುವರಿಸಿದನು. ಆದಾಗ್ಯೂ ಕಾಣೆಯಾದ ವ್ಯಕ್ತಿಯ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಅಂತಿಮವಾಗಿ ಕೊಲೆಯ ಪುರಾವೆಗಳು ಸಿಗದಂತೆ ಹೇಗೆ ತಪ್ಪಿಸಿಕೊಳ್ಳುವುದು. ಹತ್ಯೆಯನ್ನು ಹೇಗೆ ನಡೆಸುವುದು ಮತ್ತು ಶವವನ್ನು ವಿಲೇವಾರಿ ಮಾಡುವುದು ಹೇಗೆ ಎಂಬುದರ ಕುರಿತು ಕೃಷ್ಣ ಗೂಗಲ್ ನಲ್ಲಿಯೂ ಸಹ ಸರ್ಫ್ ಮಾಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.

ಘಟನೆ ಬೆಳಕಿಗೆ ಬಂದ ಕೂಡಲೇ ಪೊಲೀಸರು ಸಾಯಿ ಕೃಷ್ಣನನ್ನು ಬಂಧಿಸಿದರು. ವಿಚಾರಣೆಯ ಸಮಯದಲ್ಲಿ ಪೂರ್ವಯೋಜಿತ ಕೊಲೆ ಮತ್ತು ಸಾಕ್ಷ್ಯಗಳನ್ನು ನಾಶಮಾಡುವ ಪ್ರಯತ್ನಗಳ ಬಲವಾದ ಪುರಾವೆಗಳು ನ್ಯಾಯಾಲಯಕ್ಕೆ ಕಂಡುಬಂದವು, ಇದು ಬುಧವಾರದ ತೀರ್ಪಿಗೆ ಕಾರಣವಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, ಈಗಾಗಲೇ ವಿವಾಹಿತನಾಗಿದ್ದ ಸಾಯಿ ಕೃಷ್ಣ, 30 ವರ್ಷದ ಮಹಿಳೆಯನ್ನು ತಾನು ಮದುವೆಯಾಗುತ್ತೇನೆ ಮತ್ತು ಅವಳೊಂದಿಗೆ ಸಂಬಂಧ ಬೆಳೆಸುತ್ತೇನೆ ಎಂದು ನಂಬಿಸಿದ್ದನು. ಅಪ್ಸರಾ ಅವರ ತಾಯಿ ಆರೋಪಿ ಅರ್ಚಕರಾಗಿದ್ದ ದೇವಸ್ಥಾನಕ್ಕೆ ಆಗಾಗ್ಗೆ ಹೋಗುತ್ತಿದ್ದರಿಂದ ಸಾಯಿ ಕೃಷ್ಣ ಬಲಿಪಶುವಿನ ಪರಿಚಯವಾಯಿತು. ಇದು 2023ರ ಆರಂಭದಲ್ಲಿ ಸಂಬಂಧಕ್ಕೆ ನಾಂದಿ ಹಾಡಿತು.

ಕೊಲೆಯ ನಂತರ ಆರ್ಚಕನು ತನ್ನ ಕಾರನ್ನು ತೊಳೆದು ತನ್ನ ಅಪಾರ್ಟ್ಮೆಂಟ್ ನಲ್ಲಿ ನಿಲ್ಲಿಸಿದನು. ಮರುದಿನ ಅವನು ಸ್ಥಳಕ್ಕೆ ಭೇಟಿ ನೀಡಿದನು ಮತ್ತು ಕೆಟ್ಟವಾಸನೆ ಬರುತ್ತಿರುವುದನ್ನು ಗಮನಿಸಿದ ನಂತರ, ಅವನು ಕೆಲವು ಕಾರ್ಮಿಕರನ್ನು ಕರೆದುಕೊಂಡು ಮ್ಯಾನ್‌ಹೋಲ್ ಅನ್ನು ಕಾಂಕ್ರೀಟ್‌ನಿಂದ ಮುಚ್ಚಿದನು ಎಂದು ಪ್ರಾಸಿಕ್ಯೂಷನ್ ತಿಳಿಸಿದೆ.

ಇದೆಲ್ಲದರ ನಂತರ ಸಾಯಿ ಕೃಷ್ಣ ಸಂತ್ರಸ್ತೆಯ ತಾಯಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದನು. ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿದ ನಂತರ ಆರೋಪಿಯ ಹೇಳಿಕೆಯಲ್ಲಿ ವಿರೋಧಾಭಾಸಗಳಿವೆ ಎಂದು ಪೊಲೀಸರು ಕಂಡುಕೊಂಡರು. ಇದೇ ಕಾರಣಕ್ಕಾಗಿ ಆರ್ಚಕನನ್ನು ವಿಚಾರಣೆ ನಡೆಸಿದಾಗ ಅವನು ನಟಿಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡನು ಮತ್ತು ಬಂಧಿಸಲ್ಪಟ್ಟನು ಎಂದು ಶಂಷಾಬಾದ್ ಪೊಲೀಸರು ಈ ಹಿಂದೆ ತಿಳಿಸಿದ್ದರು.

ಕಾಂಗ್ರೆಸ್ ಸರ್ಕಾರವು ಒಳ ಮೀಸಲಾತಿ ಜಾರಿಗೆ ತರುವ ರಾಜಕೀಯ ಇಚ್ಛಾಶಕ್ತಿ ಹೊಂದಿದೆ: ಜಸ್ಟೀಸ್ ನಾಗಮೋಹನ್‌ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...