Homeಕರ್ನಾಟಕಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

ಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

- Advertisement -
- Advertisement -

ಕರ್ನಾಟಕದಲ್ಲಿ ಜನರು ಆಯ್ಕೆ ಮಾಡಿದ ಕಾಂಗ್ರೆಸ್‌ ಪಕ್ಷ ಅಧಿಕ್ಕಾರಕ್ಕೇರಿದೆ. ಚುನಾವಣಾ ಪೂರ್ವ ಭರವಸೆಗಳಾದ ತನ್ನ ಮುಖ್ಯ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ದಿನಾಂಕ ಗೊತ್ತು ಮಾಡಿದೆ. ಆದರೆ ಚುನಾವಣೆಯ ನಂತರ ವಿರೋಧ ಪಕ್ಷಗಳು ಮಾಡುತ್ತಿರುವ ವಾದಗಳು ಅತ್ಯಂತ ಮುಟ್ಟಾಳುತನದಿಂದ ಕೂಡಿವೆ. ಇದಕ್ಕೆ ತಕ್ಕಂತೆ ಬಿಜೆಪಿ ಪರವಾಗಿನ ಕೆಲವು ಮಾಧ್ಯಮಗಳು ಸಹ, ಅವೈಜ್ಞಾನಿಕ ಹೇಳಿಕೆಗಳನ್ನು ಮುಂದಿಟ್ಟು ಜನರನ್ನು ಗೊಂದಲಕ್ಕೆ ತಳ್ಳುತ್ತಿವೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಒಂದು ಕಡೆ ಹೇಳುವ ಬಿಜೆಪಿ ಮತ್ತೊಂದು ಗ್ಯಾರಂಟಿಗಳನ್ನು ಇನ್ನು ಏಕೆ ಜಾರಿಯಾಗಿಲ್ಲ? ಅವುಗಳಿಗೆ ಕಂಡಿಷನ್ ಏಕೆ ಎಂಬ ವಿರೋಧಭಾಸದ ಹೇಳಿಕೆಗಳನ್ನು ನೀಡುತ್ತಿದೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಜೂನ್ ಒಂದರಿಂದ ಉಗ್ರ ಹೋರಾಟ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಸೋತಿರುವ ರೇಣುಕಾಚಾರ್ಯ ಮನೆ ಮನೆಗೆ ಹೋಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಪ್ರಚೋದನೆ ನೀಡುತ್ತಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿಯವರು ಮಾತ್ರ ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ. ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಯಾವುದೇ ಕಂಡಿಷನ್ ಇಲ್ಲದೇ ಬಡವ ಶ್ರೀಮಂತ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಅವರು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವಾಗ ಏಕೆ ಕಂಡಿಷನ್‌ಗಳನ್ನು ಹಾಕಿದ್ದರು? ಇವರುಗಳ ದ್ವಿಮುಖ ನೀತಿಗೆ ಏನು ಹೇಳುವುದು?

ಗ್ಯಾರಂಟಿಗಳಿಂದ ರಾಜ್ಯಕ್ಕೆ ಆರ್ಥಿಕ ಹೊರೆಯೇ?

ಈ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಾರ್ಷಿಕ 50,000 ಕೋಟಿ ರೂಗಳು ತಗುಲುತ್ತದೆ. ಪಕ್ಕದ ಆಂಧ್ರ ಪ್ರದೇಶ ಸರ್ಕಾರವು ಕಳೆದ ನಾಲ್ಕು ವರ್ಷಗಳಿಂದ ಅಲ್ಲಿನ ಬಡಜನರ ಕಲ್ಯಾಣ ಯೋಜನೆಗಳಿಗಾಗಿ ಸುಮಾರು 2.12 ಲಕ್ಷ ಕೋಟಿ ರೂಗಳನ್ನು ಖರ್ಚು ಮಾಡಿದೆ. ಅಂದರೆ ಅಲ್ಲಿಯೂ ವಾರ್ಷಿಕ ಸರಾಸರಿ 53,000 ಕೋಟಿ ವೆಚ್ಚ ಮಾಡಿದೆ. ಅಂದ ಮಾತ್ರಕ್ಕೆ ಆಂಧ್ರ ಪ್ರದೇಶ ರಾಜ್ಯ ದಿವಾಳಿಯಾಗಿದೆಯೇ? ತೆಲಂಗಾಣ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಹ ಇದೇ ಮಾದರಿಯ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದರೂ ಅವು ಸದೃಢವಾಗಿವೆ ಎಂಬುದನ್ನು ಮರೆಯಬಾರದು.

ಆದರೆ ಸರ್ಕಾರ ಈ ಯೋಜನೆಗಳ ಜಾರಿಗಾಗಿ ಮತ್ತೆ ರಾಜ್ಯದ ಜನರ ಮೇಲೆ ತೆರಿಗೆ ಹಾಕುವುದು, ಕೆಲ ಇಲಾಖೆಗಳ ವೆಚ್ಚ ಕಡಿತ ಮಾಡುವುದನ್ನು ಮಾಡಬಾರದು. ಬದಲಿಗೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಅನುವಾದ, ಜಿಎಸ್‌ಟಿ ಪಾಲನ್ನು ಗಟ್ಟಿಯಾಗಿ ಕೇಳಿ ಪಡೆದುಕೊಳ್ಳಬೇಕು. ಜೊತೆಗೆ ದೇಶದ ಅತಿ ಶ್ರೀಮಂತರ, ಕ್ರೋನಿ ಬಂಡವಾಳಶಾಹಿಗಳ ಮೇಲೆ ಸಂಪತ್ತಿನ ತೆರಿಗೆ ವಿಧಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ರಾಜ್ಯದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಮತ್ತು ಸೋರಿಕೆಯಾಗದಂತೆ ತಡೆಯಬೇಕಿದೆ.

ಅನೇಕ ಆರ್ಥಿಕ ತಜ್ಞರು ರಾಜ್ಯ ಸರ್ಕಾರ ಜಾರಿಮಾಡುವ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಜಿಎಸ್‌ಟಿ, ನೋಟು ರದ್ಧತಿ, ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಜನರ ಆರ್ಥಿಕ ಸ್ಥಿತಿ ಕುಸಿದಿದ್ದು, ಕೊಳ್ಳುವ ಶಕ್ತಿ ಕಡಿಮೆಯಾಗಿದೆ. ಹಾಗಾಗಿ ಈ ಯೋಜನೆಗಳಿಂದ ಜನರ ಕೈಗೆ ನೇರವಾಗಿ ಹಣ ಸಿಕ್ಕರೆ ಅಥವಾ ಉಚಿತ ವಿದ್ಯುತ್, ಅಕ್ಕಿ, ಬಸ್‌ಪಾಸ್‌ನಿಂದ ಅವರ ಹಣ ಉಳಿದರೆ ಅದನ್ನು ಬೇರೆ ವಸ್ತುಗಳನ್ನು ಕೊಳ್ಳಲು ಬಳಸುತ್ತಾರೆ. ಅವರ ಅಗತ್ಯ ವಸ್ತುಗಳನ್ನು ಕೊಳ್ಳಲು ಮುಂದಾಗುತ್ತಾರೆ. ಆಗ ಹಣದ ವಹಿವಾಟು ಹೆಚ್ಚಾಗುತ್ತದೆ. ಬೇಡಿಕೆ ಹೆಚ್ಚಾದಂತೆ ಉತ್ಪಾದನೆ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗ ಸಿಕ್ಕಲ್ಲಿ ಜನ ಮತ್ತೆ ಖರ್ಚು ಮಾಡುತ್ತಾರೆ. ಜಿಡಿಪಿ – ತೆರಿಗೆ ಸಂಗ್ರಹ ಹೆಚ್ಚಳವಾಗುತ್ತದೆ.. ಹೀಗೆ ಆರ್ಥಿಕ ಸರಪಳಿ ಚೇತರಿಸಿಕೊಳ್ಳುತ್ತದೆ ಎಂಬುದು ಒಂದು ವಾದ.

ಉಳ್ಳವರು ಹೇಳುವಂತೆ ಇವು ಬಿಟ್ಟಿ ಭಾಗ್ಯಗಳೇ?

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ಬಡವರ ಹಣದಿಂದಲೇ ಈ ದೇಶ ನಡೆಯುತ್ತಿರುವಾಗ ಅವರಿಗೆ ಸರ್ಕಾರ ನೀಡುವ ಯೋಜನೆಗಳು ಉಚಿತವಲ್ಲ, ಬದಲಿಗೆ ಅವರ ಹಕ್ಕು ಎಂಬುದನ್ನು ಮರೆಯಬಾರದು.

ಯಾವುದೇ ಪ್ರದೇಶದ ಆರ್ಥಿಕ ಸ್ಥಿತಿಗತಿಗಳು ಸುಧಾರಿಸಬೇಕಾದರೆ, ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಇಂದು ಮೂಲಭೂತ ಹಕ್ಕುಗಳಾದ ಉಚಿತ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ವ್ಯಾಪಾರ ಆಗಿರುವುದು ದುರಂತ. ಹಾಗಾಗಿಯೇ ಜನರು ತಮ್ಮ ದುಡಿಮೆಯ ಬಹುತೇಕ ಪಾಲನ್ನು ತಮ್ಮ ಮಕ್ಕಳ ಶಿಕ್ಷಣ ಮತ್ತು ಕುಟುಂಬದ ಆರೋಗ್ಯಕ್ಕಾಗಿ ವಿನಿಯೋಗಿಸುತ್ತಿದ್ದಾರೆ. ಹಾಗಾಗಿ ಅವು ಸದಾ ಬಡತನದಲ್ಲಿಯೇ ಉಳಿಯಬೇಕಾಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಷ್ಟೇ ಸಾಲುವುದಿಲ್ಲ. ಬದಲಿಗೆ ಉಚಿತ ಶಿಕ್ಷಣ, ಸುಭದ್ರ ಉದ್ಯೋಗ, ಉಚಿತ ಆರೋಗ್ಯದಂತಹ ಮೂಲಭೂತ ಬದಲಾವಣೆಗಳನ್ನು ತರುವ ಯೋಜನೆಗಳು ಜಾರಿಯಾಗಬೇಕಿದೆ. ಅವುಗಳು ಜಾರಿಯಾಗುವಂತೆ ವಿರೋಧ ಪಕ್ಷಗಳು ದನಿಯೆತ್ತಬೇಕೆ ಹೊರತು ಬಡವರಿಗೆ ನೀಡುವ ಯೋಜನೆಗಳನ್ನು ವಿರೋಧಿಸುತ್ತಾ, ಗೊಂದಲ ಮೂಡಿಸಬಾರದು.

ಇನ್ನು ಈ ಐದು ಗ್ಯಾರಂಟಿಗಳನ್ನು ವಿರೋಧಿಸುವವರು ನಮ್ಮ ದೇಶದ ಹಸಿವಿನ ಸೂಚ್ಯಾಂಕವನ್ನು ಗಮನಿಸಿದ್ದಾರೆಯೇ? ಅಪೌಷ್ಟಿಕ ಮಕ್ಕಳನ್ನು ನೋಡಿದ್ದಾರೆಯೇ? ಹೋಗಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಯಾವತ್ತಾದರೂ ದನಿ ಎತ್ತಿದ್ದಾರೆಯೇ? ಇವು ಯಾವುದನ್ನು ಗಮನಿಸದೇ ಬಿಟ್ಟಿ ಭಾಗ್ಯ ಎಂದು ಕರೆಯುವುದು ಹೊಟ್ಟೆ ತುಂಬಿದವರ ಅಹಂಕಾರವಲ್ಲವೇ? ಇನ್ನು ಈ ಯೋಜನೆಗಳ ಹೆಚ್ಚಿನ ಅನುಕೂಲ ಮಹಿಳೆಯರಿಗೆ ಸಿಗುತ್ತಿದೆ. ಆದರೆ ಮಹಿಳೆಯರು ಮನೆಯ ಹೊಸ್ತಿಲು ದಾಟಬಾರದು ಎಂಬು ಪುರುಷಾಧಿಪತ್ಯ ತುಂಬಿಕೊಂಡ ಮನಸ್ಥಿತಿಗಳು ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಇದು ಸಾಮಾಜಿಕ ಚಲನೆಗೆ ಮಾಡುವ ದ್ರೋಹ. ಮುಖ್ಯವಾಗಿ ಸ್ತ್ರೀ ವಿರೋಧದ ವಿಕೃತ ರೂಪಕ ಅನ್ನುವುದನ್ನು ರಾಜ್ಯವು ಮರೆಯುವುದಿಲ್ಲ.

ಇದನ್ನೂ ಓದಿ:ಮತದಾರರಿಗೆ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳು ಮತ್ತು ಆರ್ಥಿಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...