Homeಕರ್ನಾಟಕಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

ಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

- Advertisement -
- Advertisement -

ಕರ್ನಾಟಕದಲ್ಲಿ ಜನರು ಆಯ್ಕೆ ಮಾಡಿದ ಕಾಂಗ್ರೆಸ್‌ ಪಕ್ಷ ಅಧಿಕ್ಕಾರಕ್ಕೇರಿದೆ. ಚುನಾವಣಾ ಪೂರ್ವ ಭರವಸೆಗಳಾದ ತನ್ನ ಮುಖ್ಯ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ದಿನಾಂಕ ಗೊತ್ತು ಮಾಡಿದೆ. ಆದರೆ ಚುನಾವಣೆಯ ನಂತರ ವಿರೋಧ ಪಕ್ಷಗಳು ಮಾಡುತ್ತಿರುವ ವಾದಗಳು ಅತ್ಯಂತ ಮುಟ್ಟಾಳುತನದಿಂದ ಕೂಡಿವೆ. ಇದಕ್ಕೆ ತಕ್ಕಂತೆ ಬಿಜೆಪಿ ಪರವಾಗಿನ ಕೆಲವು ಮಾಧ್ಯಮಗಳು ಸಹ, ಅವೈಜ್ಞಾನಿಕ ಹೇಳಿಕೆಗಳನ್ನು ಮುಂದಿಟ್ಟು ಜನರನ್ನು ಗೊಂದಲಕ್ಕೆ ತಳ್ಳುತ್ತಿವೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಒಂದು ಕಡೆ ಹೇಳುವ ಬಿಜೆಪಿ ಮತ್ತೊಂದು ಗ್ಯಾರಂಟಿಗಳನ್ನು ಇನ್ನು ಏಕೆ ಜಾರಿಯಾಗಿಲ್ಲ? ಅವುಗಳಿಗೆ ಕಂಡಿಷನ್ ಏಕೆ ಎಂಬ ವಿರೋಧಭಾಸದ ಹೇಳಿಕೆಗಳನ್ನು ನೀಡುತ್ತಿದೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಜೂನ್ ಒಂದರಿಂದ ಉಗ್ರ ಹೋರಾಟ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಸೋತಿರುವ ರೇಣುಕಾಚಾರ್ಯ ಮನೆ ಮನೆಗೆ ಹೋಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಪ್ರಚೋದನೆ ನೀಡುತ್ತಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿಯವರು ಮಾತ್ರ ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ. ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಯಾವುದೇ ಕಂಡಿಷನ್ ಇಲ್ಲದೇ ಬಡವ ಶ್ರೀಮಂತ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಅವರು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವಾಗ ಏಕೆ ಕಂಡಿಷನ್‌ಗಳನ್ನು ಹಾಕಿದ್ದರು? ಇವರುಗಳ ದ್ವಿಮುಖ ನೀತಿಗೆ ಏನು ಹೇಳುವುದು?

ಗ್ಯಾರಂಟಿಗಳಿಂದ ರಾಜ್ಯಕ್ಕೆ ಆರ್ಥಿಕ ಹೊರೆಯೇ?

ಈ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಾರ್ಷಿಕ 50,000 ಕೋಟಿ ರೂಗಳು ತಗುಲುತ್ತದೆ. ಪಕ್ಕದ ಆಂಧ್ರ ಪ್ರದೇಶ ಸರ್ಕಾರವು ಕಳೆದ ನಾಲ್ಕು ವರ್ಷಗಳಿಂದ ಅಲ್ಲಿನ ಬಡಜನರ ಕಲ್ಯಾಣ ಯೋಜನೆಗಳಿಗಾಗಿ ಸುಮಾರು 2.12 ಲಕ್ಷ ಕೋಟಿ ರೂಗಳನ್ನು ಖರ್ಚು ಮಾಡಿದೆ. ಅಂದರೆ ಅಲ್ಲಿಯೂ ವಾರ್ಷಿಕ ಸರಾಸರಿ 53,000 ಕೋಟಿ ವೆಚ್ಚ ಮಾಡಿದೆ. ಅಂದ ಮಾತ್ರಕ್ಕೆ ಆಂಧ್ರ ಪ್ರದೇಶ ರಾಜ್ಯ ದಿವಾಳಿಯಾಗಿದೆಯೇ? ತೆಲಂಗಾಣ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಹ ಇದೇ ಮಾದರಿಯ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದರೂ ಅವು ಸದೃಢವಾಗಿವೆ ಎಂಬುದನ್ನು ಮರೆಯಬಾರದು.

ಆದರೆ ಸರ್ಕಾರ ಈ ಯೋಜನೆಗಳ ಜಾರಿಗಾಗಿ ಮತ್ತೆ ರಾಜ್ಯದ ಜನರ ಮೇಲೆ ತೆರಿಗೆ ಹಾಕುವುದು, ಕೆಲ ಇಲಾಖೆಗಳ ವೆಚ್ಚ ಕಡಿತ ಮಾಡುವುದನ್ನು ಮಾಡಬಾರದು. ಬದಲಿಗೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಅನುವಾದ, ಜಿಎಸ್‌ಟಿ ಪಾಲನ್ನು ಗಟ್ಟಿಯಾಗಿ ಕೇಳಿ ಪಡೆದುಕೊಳ್ಳಬೇಕು. ಜೊತೆಗೆ ದೇಶದ ಅತಿ ಶ್ರೀಮಂತರ, ಕ್ರೋನಿ ಬಂಡವಾಳಶಾಹಿಗಳ ಮೇಲೆ ಸಂಪತ್ತಿನ ತೆರಿಗೆ ವಿಧಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ರಾಜ್ಯದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಮತ್ತು ಸೋರಿಕೆಯಾಗದಂತೆ ತಡೆಯಬೇಕಿದೆ.

ಅನೇಕ ಆರ್ಥಿಕ ತಜ್ಞರು ರಾಜ್ಯ ಸರ್ಕಾರ ಜಾರಿಮಾಡುವ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಜಿಎಸ್‌ಟಿ, ನೋಟು ರದ್ಧತಿ, ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಜನರ ಆರ್ಥಿಕ ಸ್ಥಿತಿ ಕುಸಿದಿದ್ದು, ಕೊಳ್ಳುವ ಶಕ್ತಿ ಕಡಿಮೆಯಾಗಿದೆ. ಹಾಗಾಗಿ ಈ ಯೋಜನೆಗಳಿಂದ ಜನರ ಕೈಗೆ ನೇರವಾಗಿ ಹಣ ಸಿಕ್ಕರೆ ಅಥವಾ ಉಚಿತ ವಿದ್ಯುತ್, ಅಕ್ಕಿ, ಬಸ್‌ಪಾಸ್‌ನಿಂದ ಅವರ ಹಣ ಉಳಿದರೆ ಅದನ್ನು ಬೇರೆ ವಸ್ತುಗಳನ್ನು ಕೊಳ್ಳಲು ಬಳಸುತ್ತಾರೆ. ಅವರ ಅಗತ್ಯ ವಸ್ತುಗಳನ್ನು ಕೊಳ್ಳಲು ಮುಂದಾಗುತ್ತಾರೆ. ಆಗ ಹಣದ ವಹಿವಾಟು ಹೆಚ್ಚಾಗುತ್ತದೆ. ಬೇಡಿಕೆ ಹೆಚ್ಚಾದಂತೆ ಉತ್ಪಾದನೆ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗ ಸಿಕ್ಕಲ್ಲಿ ಜನ ಮತ್ತೆ ಖರ್ಚು ಮಾಡುತ್ತಾರೆ. ಜಿಡಿಪಿ – ತೆರಿಗೆ ಸಂಗ್ರಹ ಹೆಚ್ಚಳವಾಗುತ್ತದೆ.. ಹೀಗೆ ಆರ್ಥಿಕ ಸರಪಳಿ ಚೇತರಿಸಿಕೊಳ್ಳುತ್ತದೆ ಎಂಬುದು ಒಂದು ವಾದ.

ಉಳ್ಳವರು ಹೇಳುವಂತೆ ಇವು ಬಿಟ್ಟಿ ಭಾಗ್ಯಗಳೇ?

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ಬಡವರ ಹಣದಿಂದಲೇ ಈ ದೇಶ ನಡೆಯುತ್ತಿರುವಾಗ ಅವರಿಗೆ ಸರ್ಕಾರ ನೀಡುವ ಯೋಜನೆಗಳು ಉಚಿತವಲ್ಲ, ಬದಲಿಗೆ ಅವರ ಹಕ್ಕು ಎಂಬುದನ್ನು ಮರೆಯಬಾರದು.

ಯಾವುದೇ ಪ್ರದೇಶದ ಆರ್ಥಿಕ ಸ್ಥಿತಿಗತಿಗಳು ಸುಧಾರಿಸಬೇಕಾದರೆ, ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಇಂದು ಮೂಲಭೂತ ಹಕ್ಕುಗಳಾದ ಉಚಿತ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ವ್ಯಾಪಾರ ಆಗಿರುವುದು ದುರಂತ. ಹಾಗಾಗಿಯೇ ಜನರು ತಮ್ಮ ದುಡಿಮೆಯ ಬಹುತೇಕ ಪಾಲನ್ನು ತಮ್ಮ ಮಕ್ಕಳ ಶಿಕ್ಷಣ ಮತ್ತು ಕುಟುಂಬದ ಆರೋಗ್ಯಕ್ಕಾಗಿ ವಿನಿಯೋಗಿಸುತ್ತಿದ್ದಾರೆ. ಹಾಗಾಗಿ ಅವು ಸದಾ ಬಡತನದಲ್ಲಿಯೇ ಉಳಿಯಬೇಕಾಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಷ್ಟೇ ಸಾಲುವುದಿಲ್ಲ. ಬದಲಿಗೆ ಉಚಿತ ಶಿಕ್ಷಣ, ಸುಭದ್ರ ಉದ್ಯೋಗ, ಉಚಿತ ಆರೋಗ್ಯದಂತಹ ಮೂಲಭೂತ ಬದಲಾವಣೆಗಳನ್ನು ತರುವ ಯೋಜನೆಗಳು ಜಾರಿಯಾಗಬೇಕಿದೆ. ಅವುಗಳು ಜಾರಿಯಾಗುವಂತೆ ವಿರೋಧ ಪಕ್ಷಗಳು ದನಿಯೆತ್ತಬೇಕೆ ಹೊರತು ಬಡವರಿಗೆ ನೀಡುವ ಯೋಜನೆಗಳನ್ನು ವಿರೋಧಿಸುತ್ತಾ, ಗೊಂದಲ ಮೂಡಿಸಬಾರದು.

ಇನ್ನು ಈ ಐದು ಗ್ಯಾರಂಟಿಗಳನ್ನು ವಿರೋಧಿಸುವವರು ನಮ್ಮ ದೇಶದ ಹಸಿವಿನ ಸೂಚ್ಯಾಂಕವನ್ನು ಗಮನಿಸಿದ್ದಾರೆಯೇ? ಅಪೌಷ್ಟಿಕ ಮಕ್ಕಳನ್ನು ನೋಡಿದ್ದಾರೆಯೇ? ಹೋಗಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಯಾವತ್ತಾದರೂ ದನಿ ಎತ್ತಿದ್ದಾರೆಯೇ? ಇವು ಯಾವುದನ್ನು ಗಮನಿಸದೇ ಬಿಟ್ಟಿ ಭಾಗ್ಯ ಎಂದು ಕರೆಯುವುದು ಹೊಟ್ಟೆ ತುಂಬಿದವರ ಅಹಂಕಾರವಲ್ಲವೇ? ಇನ್ನು ಈ ಯೋಜನೆಗಳ ಹೆಚ್ಚಿನ ಅನುಕೂಲ ಮಹಿಳೆಯರಿಗೆ ಸಿಗುತ್ತಿದೆ. ಆದರೆ ಮಹಿಳೆಯರು ಮನೆಯ ಹೊಸ್ತಿಲು ದಾಟಬಾರದು ಎಂಬು ಪುರುಷಾಧಿಪತ್ಯ ತುಂಬಿಕೊಂಡ ಮನಸ್ಥಿತಿಗಳು ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಇದು ಸಾಮಾಜಿಕ ಚಲನೆಗೆ ಮಾಡುವ ದ್ರೋಹ. ಮುಖ್ಯವಾಗಿ ಸ್ತ್ರೀ ವಿರೋಧದ ವಿಕೃತ ರೂಪಕ ಅನ್ನುವುದನ್ನು ರಾಜ್ಯವು ಮರೆಯುವುದಿಲ್ಲ.

ಇದನ್ನೂ ಓದಿ:ಮತದಾರರಿಗೆ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳು ಮತ್ತು ಆರ್ಥಿಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...