Homeಕರ್ನಾಟಕಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

ಗ್ಯಾರಂಟಿಗಳು ಹಕ್ಕುಗಳೋ? ಆರ್ಥಿಕ ಹೊರೆಯೋ? ಉಳ್ಳವರು ಹೇಳುತ್ತಿರುವ ಬಿಟ್ಟಿಗಳೋ?

- Advertisement -
- Advertisement -

ಕರ್ನಾಟಕದಲ್ಲಿ ಜನರು ಆಯ್ಕೆ ಮಾಡಿದ ಕಾಂಗ್ರೆಸ್‌ ಪಕ್ಷ ಅಧಿಕ್ಕಾರಕ್ಕೇರಿದೆ. ಚುನಾವಣಾ ಪೂರ್ವ ಭರವಸೆಗಳಾದ ತನ್ನ ಮುಖ್ಯ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ದಿನಾಂಕ ಗೊತ್ತು ಮಾಡಿದೆ. ಆದರೆ ಚುನಾವಣೆಯ ನಂತರ ವಿರೋಧ ಪಕ್ಷಗಳು ಮಾಡುತ್ತಿರುವ ವಾದಗಳು ಅತ್ಯಂತ ಮುಟ್ಟಾಳುತನದಿಂದ ಕೂಡಿವೆ. ಇದಕ್ಕೆ ತಕ್ಕಂತೆ ಬಿಜೆಪಿ ಪರವಾಗಿನ ಕೆಲವು ಮಾಧ್ಯಮಗಳು ಸಹ, ಅವೈಜ್ಞಾನಿಕ ಹೇಳಿಕೆಗಳನ್ನು ಮುಂದಿಟ್ಟು ಜನರನ್ನು ಗೊಂದಲಕ್ಕೆ ತಳ್ಳುತ್ತಿವೆ.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಒಂದು ಕಡೆ ಹೇಳುವ ಬಿಜೆಪಿ ಮತ್ತೊಂದು ಗ್ಯಾರಂಟಿಗಳನ್ನು ಇನ್ನು ಏಕೆ ಜಾರಿಯಾಗಿಲ್ಲ? ಅವುಗಳಿಗೆ ಕಂಡಿಷನ್ ಏಕೆ ಎಂಬ ವಿರೋಧಭಾಸದ ಹೇಳಿಕೆಗಳನ್ನು ನೀಡುತ್ತಿದೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಜೂನ್ ಒಂದರಿಂದ ಉಗ್ರ ಹೋರಾಟ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಸೋತಿರುವ ರೇಣುಕಾಚಾರ್ಯ ಮನೆ ಮನೆಗೆ ಹೋಗಿ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಪ್ರಚೋದನೆ ನೀಡುತ್ತಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿಯವರು ಮಾತ್ರ ಗ್ಯಾರಂಟಿ ಯೋಜನೆಗಳು ಜಾರಿಯಾದರೆ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ ಎನ್ನುತ್ತಾರೆ. ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಯಾವುದೇ ಕಂಡಿಷನ್ ಇಲ್ಲದೇ ಬಡವ ಶ್ರೀಮಂತ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಆದರೆ ಅವರು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವಾಗ ಏಕೆ ಕಂಡಿಷನ್‌ಗಳನ್ನು ಹಾಕಿದ್ದರು? ಇವರುಗಳ ದ್ವಿಮುಖ ನೀತಿಗೆ ಏನು ಹೇಳುವುದು?

ಗ್ಯಾರಂಟಿಗಳಿಂದ ರಾಜ್ಯಕ್ಕೆ ಆರ್ಥಿಕ ಹೊರೆಯೇ?

ಈ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವಾರ್ಷಿಕ 50,000 ಕೋಟಿ ರೂಗಳು ತಗುಲುತ್ತದೆ. ಪಕ್ಕದ ಆಂಧ್ರ ಪ್ರದೇಶ ಸರ್ಕಾರವು ಕಳೆದ ನಾಲ್ಕು ವರ್ಷಗಳಿಂದ ಅಲ್ಲಿನ ಬಡಜನರ ಕಲ್ಯಾಣ ಯೋಜನೆಗಳಿಗಾಗಿ ಸುಮಾರು 2.12 ಲಕ್ಷ ಕೋಟಿ ರೂಗಳನ್ನು ಖರ್ಚು ಮಾಡಿದೆ. ಅಂದರೆ ಅಲ್ಲಿಯೂ ವಾರ್ಷಿಕ ಸರಾಸರಿ 53,000 ಕೋಟಿ ವೆಚ್ಚ ಮಾಡಿದೆ. ಅಂದ ಮಾತ್ರಕ್ಕೆ ಆಂಧ್ರ ಪ್ರದೇಶ ರಾಜ್ಯ ದಿವಾಳಿಯಾಗಿದೆಯೇ? ತೆಲಂಗಾಣ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಹ ಇದೇ ಮಾದರಿಯ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದರೂ ಅವು ಸದೃಢವಾಗಿವೆ ಎಂಬುದನ್ನು ಮರೆಯಬಾರದು.

ಆದರೆ ಸರ್ಕಾರ ಈ ಯೋಜನೆಗಳ ಜಾರಿಗಾಗಿ ಮತ್ತೆ ರಾಜ್ಯದ ಜನರ ಮೇಲೆ ತೆರಿಗೆ ಹಾಕುವುದು, ಕೆಲ ಇಲಾಖೆಗಳ ವೆಚ್ಚ ಕಡಿತ ಮಾಡುವುದನ್ನು ಮಾಡಬಾರದು. ಬದಲಿಗೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಅನುವಾದ, ಜಿಎಸ್‌ಟಿ ಪಾಲನ್ನು ಗಟ್ಟಿಯಾಗಿ ಕೇಳಿ ಪಡೆದುಕೊಳ್ಳಬೇಕು. ಜೊತೆಗೆ ದೇಶದ ಅತಿ ಶ್ರೀಮಂತರ, ಕ್ರೋನಿ ಬಂಡವಾಳಶಾಹಿಗಳ ಮೇಲೆ ಸಂಪತ್ತಿನ ತೆರಿಗೆ ವಿಧಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು. ರಾಜ್ಯದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಮತ್ತು ಸೋರಿಕೆಯಾಗದಂತೆ ತಡೆಯಬೇಕಿದೆ.

ಅನೇಕ ಆರ್ಥಿಕ ತಜ್ಞರು ರಾಜ್ಯ ಸರ್ಕಾರ ಜಾರಿಮಾಡುವ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಜಿಎಸ್‌ಟಿ, ನೋಟು ರದ್ಧತಿ, ಕೋವಿಡ್ ಸಾಂಕ್ರಾಮಿಕ ಕಾರಣದಿಂದ ಜನರ ಆರ್ಥಿಕ ಸ್ಥಿತಿ ಕುಸಿದಿದ್ದು, ಕೊಳ್ಳುವ ಶಕ್ತಿ ಕಡಿಮೆಯಾಗಿದೆ. ಹಾಗಾಗಿ ಈ ಯೋಜನೆಗಳಿಂದ ಜನರ ಕೈಗೆ ನೇರವಾಗಿ ಹಣ ಸಿಕ್ಕರೆ ಅಥವಾ ಉಚಿತ ವಿದ್ಯುತ್, ಅಕ್ಕಿ, ಬಸ್‌ಪಾಸ್‌ನಿಂದ ಅವರ ಹಣ ಉಳಿದರೆ ಅದನ್ನು ಬೇರೆ ವಸ್ತುಗಳನ್ನು ಕೊಳ್ಳಲು ಬಳಸುತ್ತಾರೆ. ಅವರ ಅಗತ್ಯ ವಸ್ತುಗಳನ್ನು ಕೊಳ್ಳಲು ಮುಂದಾಗುತ್ತಾರೆ. ಆಗ ಹಣದ ವಹಿವಾಟು ಹೆಚ್ಚಾಗುತ್ತದೆ. ಬೇಡಿಕೆ ಹೆಚ್ಚಾದಂತೆ ಉತ್ಪಾದನೆ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗ ಸಿಕ್ಕಲ್ಲಿ ಜನ ಮತ್ತೆ ಖರ್ಚು ಮಾಡುತ್ತಾರೆ. ಜಿಡಿಪಿ – ತೆರಿಗೆ ಸಂಗ್ರಹ ಹೆಚ್ಚಳವಾಗುತ್ತದೆ.. ಹೀಗೆ ಆರ್ಥಿಕ ಸರಪಳಿ ಚೇತರಿಸಿಕೊಳ್ಳುತ್ತದೆ ಎಂಬುದು ಒಂದು ವಾದ.

ಉಳ್ಳವರು ಹೇಳುವಂತೆ ಇವು ಬಿಟ್ಟಿ ಭಾಗ್ಯಗಳೇ?

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ. ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ಬಡವರ ಹಣದಿಂದಲೇ ಈ ದೇಶ ನಡೆಯುತ್ತಿರುವಾಗ ಅವರಿಗೆ ಸರ್ಕಾರ ನೀಡುವ ಯೋಜನೆಗಳು ಉಚಿತವಲ್ಲ, ಬದಲಿಗೆ ಅವರ ಹಕ್ಕು ಎಂಬುದನ್ನು ಮರೆಯಬಾರದು.

ಯಾವುದೇ ಪ್ರದೇಶದ ಆರ್ಥಿಕ ಸ್ಥಿತಿಗತಿಗಳು ಸುಧಾರಿಸಬೇಕಾದರೆ, ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ. ಆದರೆ ಇಂದು ಮೂಲಭೂತ ಹಕ್ಕುಗಳಾದ ಉಚಿತ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ವ್ಯಾಪಾರ ಆಗಿರುವುದು ದುರಂತ. ಹಾಗಾಗಿಯೇ ಜನರು ತಮ್ಮ ದುಡಿಮೆಯ ಬಹುತೇಕ ಪಾಲನ್ನು ತಮ್ಮ ಮಕ್ಕಳ ಶಿಕ್ಷಣ ಮತ್ತು ಕುಟುಂಬದ ಆರೋಗ್ಯಕ್ಕಾಗಿ ವಿನಿಯೋಗಿಸುತ್ತಿದ್ದಾರೆ. ಹಾಗಾಗಿ ಅವು ಸದಾ ಬಡತನದಲ್ಲಿಯೇ ಉಳಿಯಬೇಕಾಗಿದೆ. ಹಾಗಾಗಿ ಗ್ಯಾರಂಟಿ ಯೋಜನೆಗಳಷ್ಟೇ ಸಾಲುವುದಿಲ್ಲ. ಬದಲಿಗೆ ಉಚಿತ ಶಿಕ್ಷಣ, ಸುಭದ್ರ ಉದ್ಯೋಗ, ಉಚಿತ ಆರೋಗ್ಯದಂತಹ ಮೂಲಭೂತ ಬದಲಾವಣೆಗಳನ್ನು ತರುವ ಯೋಜನೆಗಳು ಜಾರಿಯಾಗಬೇಕಿದೆ. ಅವುಗಳು ಜಾರಿಯಾಗುವಂತೆ ವಿರೋಧ ಪಕ್ಷಗಳು ದನಿಯೆತ್ತಬೇಕೆ ಹೊರತು ಬಡವರಿಗೆ ನೀಡುವ ಯೋಜನೆಗಳನ್ನು ವಿರೋಧಿಸುತ್ತಾ, ಗೊಂದಲ ಮೂಡಿಸಬಾರದು.

ಇನ್ನು ಈ ಐದು ಗ್ಯಾರಂಟಿಗಳನ್ನು ವಿರೋಧಿಸುವವರು ನಮ್ಮ ದೇಶದ ಹಸಿವಿನ ಸೂಚ್ಯಾಂಕವನ್ನು ಗಮನಿಸಿದ್ದಾರೆಯೇ? ಅಪೌಷ್ಟಿಕ ಮಕ್ಕಳನ್ನು ನೋಡಿದ್ದಾರೆಯೇ? ಹೋಗಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಯಾವತ್ತಾದರೂ ದನಿ ಎತ್ತಿದ್ದಾರೆಯೇ? ಇವು ಯಾವುದನ್ನು ಗಮನಿಸದೇ ಬಿಟ್ಟಿ ಭಾಗ್ಯ ಎಂದು ಕರೆಯುವುದು ಹೊಟ್ಟೆ ತುಂಬಿದವರ ಅಹಂಕಾರವಲ್ಲವೇ? ಇನ್ನು ಈ ಯೋಜನೆಗಳ ಹೆಚ್ಚಿನ ಅನುಕೂಲ ಮಹಿಳೆಯರಿಗೆ ಸಿಗುತ್ತಿದೆ. ಆದರೆ ಮಹಿಳೆಯರು ಮನೆಯ ಹೊಸ್ತಿಲು ದಾಟಬಾರದು ಎಂಬು ಪುರುಷಾಧಿಪತ್ಯ ತುಂಬಿಕೊಂಡ ಮನಸ್ಥಿತಿಗಳು ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಇದು ಸಾಮಾಜಿಕ ಚಲನೆಗೆ ಮಾಡುವ ದ್ರೋಹ. ಮುಖ್ಯವಾಗಿ ಸ್ತ್ರೀ ವಿರೋಧದ ವಿಕೃತ ರೂಪಕ ಅನ್ನುವುದನ್ನು ರಾಜ್ಯವು ಮರೆಯುವುದಿಲ್ಲ.

ಇದನ್ನೂ ಓದಿ:ಮತದಾರರಿಗೆ ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳು ಮತ್ತು ಆರ್ಥಿಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...