Homeಕರ್ನಾಟಕಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

ಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

- Advertisement -
- Advertisement -

“ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದರೂ ಯಾಕಿನ್ನೂ ಸ್ವಾಮೀಜಿಯ ಬಂಧನವಾಗಿಲ್ಲ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ ಅವರನ್ನು ಕೇಳಿದರೆ, ‘ತನಿಖೆಯಾಗುತ್ತಿದೆ. ಕ್ರಮ ಜರುಗಿಸುತ್ತೇವೆ’ ಎನ್ನುತ್ತಾರೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತೀರಿ? ಪೋಕ್ಸೋ ಪ್ರಕರಣದಲ್ಲಿ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಲ್ಲ, ಬೇರೆಯವರಾಗಿದ್ದರೆ ಹೀಗೆಯೇ ವಿಳಂಬವಾಗುತ್ತಿತ್ತೇ ಎಂದು ಕೇಳಿದರೆ, “ಆರೋಪಗಳನ್ನು ಪರಿಶೀಲನೆ ಮಾಡಬೇಕು. ಏಕಾಏಕಿ ಬಂಧಿಸಲು ಆಗುವುದಿಲ್ಲ. ತನಿಖೆ ನಡೆಸುತ್ತಿದ್ದೇವೆ. ಮೈಸೂರಿನಿಂದ ನಿನ್ನೆಯಷ್ಟೇ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ” ಎನ್ನುತ್ತಾರೆ ಎಸ್.ಪಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಂತ ಶೋಷಿತ ಸಮುದಾಯಕ್ಕೆ ಸೇರಿದ, ಅಸಹಾಯಕ, ಬಡ ಬಾಲಕಿಯರು ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದೇ ದೊಡ್ಡ ಸಂಗತಿ. ಈ ಸಂತ್ರಸ್ತ ಮಕ್ಕಳಿಗೆ ಸಹಾಯ ಮಾಡಿರುವ ಒಡನಾಡಿ ಸಂಸ್ಥೆಯ ಪರಶು ಹೇಳುವಂತೆ, “ತಮಗೆ ನ್ಯಾಯ ದೊರಕದೆಂದು ಭಾವಿಸಿ ಈ ಮಕ್ಕಳು ಆತ್ಯಹತ್ಯೆಗೂ ಯೋಚಿಸಿದ್ದರು” ಎಂಬುದು ಆಘಾತಕಾರಿ ಸಂಗತಿ.

ಇದೆಲ್ಲದರ ನಡುವೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜಕಾರಣಿಗಳು ಹೇಗೆ ವರ್ತಿಸಬೇಕು? ಸ್ವಾಮೀಜಿ ಯಾವುದೇ ತಪ್ಪು ಮಾಡಿರಲಿಕ್ಕಿಲ್ಲ ಎಂಬ ಅಭಿಪ್ರಾಯ ತಾಳುವುದು ಸಂತ್ರಸ್ತ ಶೋಷಿತ ಮಕ್ಕಳಿಗೆ ತೋರುವ ಅಗೌರವ ತಾನೇ? ಆದರೆ ಆಘಾತಕಾರಿ ಸಂಗತಿಗಳೆಂದರೆ- ಪ್ರಕರಣವನ್ನು ಸಂಧಾನದ ಮೂಲಕ ಮುಚ್ಚಿಹಾಕುವ ಯತ್ನಗಳು ನಡೆಯುತ್ತಿರುವುದು ತಿಳಿದುಬಂದಿದೆ. ಶೋಷಿತ ಸಮುದಾಯದ ಜನಪ್ರತಿನಿಧಿಗಳು ಹಾಗೂ ಶಾಸಕರನ್ನೇ ಈ ಸಂಧಾನಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳು ಬರುತ್ತಿವೆ.

ಇದನ್ನೂ ಓದಿರಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಇಷ್ಟೆಲ್ಲದರ ನಡುವೆ ಚಿತ್ರದುರ್ಗದ ಆತ್ಮಸಾಕ್ಷಿ ಸುಮ್ಮನಿಲ್ಲ. ಆಗುತ್ತಿರುವ ಬೆಳವಣಿಗೆಗಳು ಆಘಾತಕಾರಿ ಹಾಗೂ ತಕ್ಷಣವೇ ಸ್ವಾಮೀಜಿಯ ಬಂಧನವಾಗಬೇಕಿರುವುದು ಸಾಂವಿಧಾನಿಕ ನಡೆ ಎಂಬ ಆಗ್ರಹಗಳೂ ಬರುತ್ತಿವೆ. ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಯನ್ನೂ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆಯನ್ನು ಪ್ರಜ್ಞಾವಂತರು ನೀಡುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಸಕ್ರಿಯವಾಗಿರುವ ದಲಿತ ಹಾಗೂ ಶೂದ್ರ ಸಮುದಾಯಗಳ ಸಾಮಾಜಿಕ ಸಂಘರ್ಷ ಸಮಿತಿಯು ಪ್ರಕರಣದ ಸುತ್ತ ಆಗುತ್ತಿರುವ ಬೆಳವಣಿಗೆಯನ್ನು ಖಂಡಿಸಿದೆ. ತಕ್ಷಣವೇ ಸ್ವಾಮೀಜಿ ಸಂವಿಧಾನಕ್ಕೆ ಗೌರವಕ್ಕೆ ಕೊಟ್ಟು ಬಂಧನಕ್ಕೊಳಗಾಗಿ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಚಿಂತಕ ಸಿ.ಕೆ.ಮಹೇಶ್, “ಪೋಕ್ಸೋ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯಾಗಲೀ, ಮತ್ತೆ ಯಾವನೇ ಆಗಿರಲಿ, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ. ಇದು ಮಠಕ್ಕೂ ಅನ್ವಯಿಸುತ್ತದೆ. ಸಾಮಾನ್ಯ ಮನುಷ್ಯನಿಗೆ ಅನ್ವಯವಾಗುವ ಕಾನೂನು ಈ ದೇಶದ ಪ್ರಭಾವಿಗೂ ಅನ್ವಯವಾಗುತ್ತದೆ” ಎಂದರು.

“ಇಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಕ್ಕಳು ಶೋಷಿತ ಸಮುದಾಯಕ್ಕೆ ಸೇರಿದವರೋ, ಬೇರೆಯ ಸಮುದಾಯಕ್ಕೆ ಸೇರಿದವರೋ ಬೇಕಿಲ್ಲ. ಎಳೆಯ ಹೆಣ್ಣುಮಕ್ಕಳನ್ನು ಪೋಷಣೆ ಮಾಡುವುದಾಗಿ ಸೇರಿಸಿಕೊಂಡು ಲೈಂಗಿಕ ಕ್ರಿಯೆಗೆ ಬಳಸಿದ್ದರೆ ಅದು ಅಕ್ಷಮ್ಯ ಅಪರಾಧ. ಅಂತಹ ಅಪರಾಧ ಮಾಡಿರುವ ವ್ಯಕ್ತಿಗೆ ಶಿಕ್ಷೆಯಾಗಲೇಬೇಕು. ಪೋಕ್ಸೋ ಕಾನೂನಿನ ಪ್ರಕಾರ, ಎಫ್‌ಐಆರ್‌ ಆದ ತಕ್ಷಣವೇ ಅರೆಸ್ಟ್ ಮಾಡಿ ಮುಂದಿನ ಕ್ರಮಗಳನ್ನು ಜರುಗಿಸಬೇಕು” ಎಂದರು.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇಲ್ಲಿ ಆರೋಪಿಯು ಸ್ವಾಮೀಜಿಯಾಗಿರುವ ಕಾರಣಕ್ಕಾಗಿಯೋ, ಅಥವಾ ಅವರು ಪ್ರಭಾವಿಯಾಗಿರುವ ಕಾರಣಕ್ಕಾಗಿಯೋ ಪೋಕ್ಸೋ ಕೂಡ ನಿಷ್ಕ್ರಿಯವಾದಂತೆ ಕಾಣುತ್ತಿದೆ. ಸಾಮಾನ್ಯ ವ್ಯಕ್ತಿ ಏನಾದರೂ ಈ ಕೆಲಸ ಮಾಡಿದ್ದರೆ ತಕ್ಷಣವೇ ಅರೆಸ್ಟ್ ಮಾಡಲಾಗುತ್ತಿತ್ತು” ಎಂದು ತಿಳಿಸಿದರು.

‘ಬುದ್ಧ, ಬಸವಣ್ಣನವರ ಅನುಯಾಯಿಯಾಗಿದ್ದರೆ ಬಂಧನಕ್ಕೊಳಗಾಗಲಿ’

“ಮುರುಘಾ ಶರಣರು ಇಡೀ ರಾಜ್ಯದಲ್ಲಿ ಗುರುತಿಸಿಕೊಂಡವರು. ಬುದ್ಧ, ಯೇಸು, ಪೈಗಂಬರ್‌ ಮೇಲೆಯೂ ಆರೋಪಗಳು ಬಂದಿದ್ದವು ಎಂದು ಸ್ವಾಮೀಜಿ ಹೇಳಿಕೊಳ್ಳುತ್ತಿದ್ದಾರೆ. ಆ ಮೂಲಕ ಮಹಾನೀಯರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುತ್ತಿದ್ದಾರೆ. ತಮ್ಮ ಮೇಲೆ ಆರೋಪಗಳು ಬಂದಾಗ ಬಸವಣ್ಣ ಹಾಗೂ ಬುದ್ಧ ಮುಕ್ತ ತನಿಖೆಗೆ ಒಳಪಟ್ಟಿದ್ದರು ಎಂಬುದನ್ನು ಮುರುಘಾ ಶರಣರು ಮರೆಯಬಾರದು” ಎಂದು ಸಿ.ಕೆ.ಮಹೇಶ್ ಆಗ್ರಹಿಸಿದರು.

“ಬುದ್ಧನ ಮೇಲೆ ಬ್ರಾಹ್ಮಣರು ಆರೋಪಗಳನ್ನು ಮಾಡಿದಾಗ ಸ್ವಯಃ ಬುದ್ಧ ಗುರುವೇ ತನಿಖೆಗೆ ಒಳಗಾಗುತ್ತಾರೆ. ತನಿಖೆಯಾದ ಬಳಿಕ ಹೊರಗೆ ಬರುತ್ತಾರೆ. ಬುದ್ಧನ ಬಗ್ಗೆ ಮಾತನಾಡುವ ಮುರುಘಾ ಶರಣರು, ತನಿಖೆಗೆ ಒಳಗಾಗಬೇಕು. ನೀವು ಎಷ್ಟೇ ಶುದ್ಧರಾಗಿರಿ, ಪ್ರಾಮಾಣಿಕರಾಗಿರಿ, ಆ ಸರ್ಟಿಫಿಕೇಟ್‌ಗಳನ್ನು ನೀವಾಗಿಯೇ ತೆಗೆದುಕೊಳ್ಳಬಾರದು. ನಿಮ್ಮ ಕ್ರಿಯೆಗಳನ್ನು ಗುರುತಿಸಿದ ಬಳಿಕ ಜನರು ಆ ಸರ್ಟಿಫಿಕೇಟ್‌ಗಳನ್ನು ದೃಢೀಕರಿಸಬೇಕು” ಎಂದು ಆಶಿಸಿದರು.

“ಬುದ್ಧನ ಹೆಸರನ್ನು ಬಳಸಿಯೋ, ಮತ್ತ್ಯಾರೋ ಮಹನೀಯರ ಹೆಸರು ಮುಂದೆ ತರುವ ಮೂಲಕವೋ ರಕ್ಷಣೆ ಮಾಡಿಕೊಳ್ಳುವುದು ಖಂಡನೀಯ. ಬಸವಣ್ಣನವರ ಮೇಲೆ ದ್ರವ್ಯದ ಆರೋಪ ಬಂದಾಗಲೂ ತಾವು ಬಿಜ್ಜಳನ ತನಿಖೆಗೆ ಒಳಪಟ್ಟರು. ತಾವು ಸ್ವಚ್ಛ ಇದ್ದೇವೆ ಎಂಬುದನ್ನು ಸಾಬೀತು ಮಾಡಿದರು. ಆದರೆ ಇಲ್ಲಿ ಮುರುಘಾ ಶರಣರು ಕಾನೂನು ಪಾಲಿಸದೆ ತಮ್ಮ ಕ್ರಿಯೆಗಳ ಮೂಲಕ ತಾವು ತಪ್ಪಿತಸ್ಥರು ಎಂಬುದನ್ನು ಒಪ್ಪಿಕೊಳ್ಳುತ್ತಿದ್ದಾರೆ; ಬಾಯಿಮಾತಿನಲ್ಲಿ ಆರೋಪಿಯಲ್ಲ ಎನ್ನುತ್ತಿದ್ದಾರೆ” ಎಂದರು.

“ಘಟನೆಯನ್ನು ಖಂಡಿಸಿ ಸಾಮಾಜಿಕ ಸಂಘರ್ಷ ಸಮಿತಿ ಹೋರಾಟ ಹಮ್ಮಿಕೊಳ್ಳಲಿದೆ. ಸಂತ್ರಸ್ತ ಮಕ್ಕಳಿಗೆ ನ್ಯಾಯ ದೊರಕಬೇಕಿದೆ” ಎಂದ ಅವರು, “ಪ್ರಭುತ್ವ ಎನ್ನುವುದೇ ಒಂದು ಕೂಟ. ಅಲ್ಲಿ ಪ್ರಭಾವಿಗಳು, ಅಧಿಕಾರಿಗಳು, ಮಠಗಳು ಇರುತ್ತವೆ. ಈ ಕೂಟದ ಸದಸ್ಯನೊಬ್ಬನಿಗೆ ತೊಂದರೆಯಾದಾಗ ಮತ್ತೊಬ್ಬ ಸದಸ್ಯ ಸಂಧಾನಕ್ಕೆ ಬರುತ್ತಾನೆ. ಸಿಎಂ, ಎಂಎಲ್‌ಎ, ಮಂತ್ರಿಗಳು ಈ ಕೂಟದ ಭಾಗವಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರಗತಿಪರ ಚಿಂತಕ ಶಿವಣ್ಣ, “ಅಂಬೇಡ್ಕರ್‌ ಕೊಟ್ಟ ಸಂವಿಧಾನ ಉಳಿಯಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸ್ವಾಮೀಜಿ ಬಂಧನಕ್ಕೆ ಒಳಗಾಗಬೇಕು. ಇದಕ್ಕಾಗಿ ದಲಿತ ಶೋಷಿತರ ಬಳಗದಿಂದ ಹೋರಾಟ ರೂಪಿಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ಸಾಮಾಜಿಕ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಿ.ದುರ್ಗೇಶ್‌ ಮಾತನಾಡಿ, “ಈ ಸ್ವಾಮೀಜಿ ಮಾಡಿರುವ ಕೆಲಸ ಅಕ್ಷಮ್ಯ ಅಪರಾಧ. ಸಾಮಾನ್ಯ ಪ್ರಜೆಯಾಗಿದ್ದರೆ ತಕ್ಷಣವೇ ಬಂಧನಕ್ಕೊಳಗಾಗುತ್ತಿದ್ದ. ಆದರೆ ಮಠಾಧಿಪತಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಅನಿಸುತ್ತಿದೆ. ಮುರುಘಾ ಶರಣರನ್ನು ಮೊದಲು ಬಂಧಿಸಬೇಕಾಗಿದೆ” ಎಂದು ಆಗ್ರಹಿಸಿದರು.

“ಸಂತ್ರಸ್ತರ ಬಾಯಿ ಮುಚ್ಚಿಸುವ ಕುತಂತ್ರಗಳನ್ನು ಮಾಡಿಯೇ ಮಾಡುತ್ತಾರೆ. ಕೆಲವರು ಹೇಳೋದೊಂದು ಮಾಡೋದೊಂದು. ಇಂಥವರಿಂದ ದೇಶ ಹಾಳಾಗಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್‌ ಮಾತನಾಡಿ, “ಬಹಳ ನೋವಾಗುವ ಕೆಲಸವಿದು. ರಾಜಕೀಯ ಪಕ್ಷಗಳು ಸ್ವಾಮೀಜಿಯ ಪರ ಮಾತನಾಡುತ್ತಿವೆ. ಸಾಮಾನ್ಯ ವ್ಯಕ್ತಿಯಾಗಿದ್ದರೆ ಎನ್‌ಕೌಂಟರ್ ವಿಷಯ ಪ್ರಸ್ತಾಪಿಸುತ್ತಿದ್ದರು. ಈಗ ಎಲ್ಲಿ ಹೋಗಿದ್ದಾರೆ ಆ ರಾಜಕಾರಣಿಗಳು?” ಎಂದು ಪ್ರಶ್ನಿಸಿದರು.

“ಮಾಜಿ ಶಾಸಕ ಬಸವರಾಜನ್‌ ಮತ್ತು ಮುರುಘಾ ಶರಣರ ನಡುವಿನ ವೈಯಕ್ತಿಕ ವೈಷಮ್ಯವನ್ನು ಪೋಕ್ಸೋ ಪ್ರಕರಣಕ್ಕೆ ಥಳುಕುಹಾಕುವುದು ಬೇಡ. ಅಮಾಯಕ ಹೆಣ್ಣು ಮಕ್ಕಳು ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ. ಬಸವರಾಜನ್‌ ಮೇಲೆಯೂ ತನಿಖೆಯಾಗಲಿ” ಎಂದು ಒತ್ತಾಯಿಸಿದರು.

ದಲಿತ ಸಮುದಾಯದ ಮುಖಂಡರಾದ ರಾಮು ಘೋಸೆ, ಡಾ.ವಿ.ಬಸವರಾಜು, ಶ್ರೀನಿವಾಸ್‌, ಸಿ.ಕೆ.ಗೋಪಾಲಕೃಷ್ಣ, ತಮ್ಮಣ್ಣ, ಶಿವಕುಮಾರ್‌, ಮಾಯಣ್ಣ ಮೊದಲಾದವರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...