Homeಕರ್ನಾಟಕಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

ಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

- Advertisement -
- Advertisement -

“ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದರೂ ಯಾಕಿನ್ನೂ ಸ್ವಾಮೀಜಿಯ ಬಂಧನವಾಗಿಲ್ಲ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ ಅವರನ್ನು ಕೇಳಿದರೆ, ‘ತನಿಖೆಯಾಗುತ್ತಿದೆ. ಕ್ರಮ ಜರುಗಿಸುತ್ತೇವೆ’ ಎನ್ನುತ್ತಾರೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತೀರಿ? ಪೋಕ್ಸೋ ಪ್ರಕರಣದಲ್ಲಿ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಲ್ಲ, ಬೇರೆಯವರಾಗಿದ್ದರೆ ಹೀಗೆಯೇ ವಿಳಂಬವಾಗುತ್ತಿತ್ತೇ ಎಂದು ಕೇಳಿದರೆ, “ಆರೋಪಗಳನ್ನು ಪರಿಶೀಲನೆ ಮಾಡಬೇಕು. ಏಕಾಏಕಿ ಬಂಧಿಸಲು ಆಗುವುದಿಲ್ಲ. ತನಿಖೆ ನಡೆಸುತ್ತಿದ್ದೇವೆ. ಮೈಸೂರಿನಿಂದ ನಿನ್ನೆಯಷ್ಟೇ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ” ಎನ್ನುತ್ತಾರೆ ಎಸ್.ಪಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಂತ ಶೋಷಿತ ಸಮುದಾಯಕ್ಕೆ ಸೇರಿದ, ಅಸಹಾಯಕ, ಬಡ ಬಾಲಕಿಯರು ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದೇ ದೊಡ್ಡ ಸಂಗತಿ. ಈ ಸಂತ್ರಸ್ತ ಮಕ್ಕಳಿಗೆ ಸಹಾಯ ಮಾಡಿರುವ ಒಡನಾಡಿ ಸಂಸ್ಥೆಯ ಪರಶು ಹೇಳುವಂತೆ, “ತಮಗೆ ನ್ಯಾಯ ದೊರಕದೆಂದು ಭಾವಿಸಿ ಈ ಮಕ್ಕಳು ಆತ್ಯಹತ್ಯೆಗೂ ಯೋಚಿಸಿದ್ದರು” ಎಂಬುದು ಆಘಾತಕಾರಿ ಸಂಗತಿ.

ಇದೆಲ್ಲದರ ನಡುವೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜಕಾರಣಿಗಳು ಹೇಗೆ ವರ್ತಿಸಬೇಕು? ಸ್ವಾಮೀಜಿ ಯಾವುದೇ ತಪ್ಪು ಮಾಡಿರಲಿಕ್ಕಿಲ್ಲ ಎಂಬ ಅಭಿಪ್ರಾಯ ತಾಳುವುದು ಸಂತ್ರಸ್ತ ಶೋಷಿತ ಮಕ್ಕಳಿಗೆ ತೋರುವ ಅಗೌರವ ತಾನೇ? ಆದರೆ ಆಘಾತಕಾರಿ ಸಂಗತಿಗಳೆಂದರೆ- ಪ್ರಕರಣವನ್ನು ಸಂಧಾನದ ಮೂಲಕ ಮುಚ್ಚಿಹಾಕುವ ಯತ್ನಗಳು ನಡೆಯುತ್ತಿರುವುದು ತಿಳಿದುಬಂದಿದೆ. ಶೋಷಿತ ಸಮುದಾಯದ ಜನಪ್ರತಿನಿಧಿಗಳು ಹಾಗೂ ಶಾಸಕರನ್ನೇ ಈ ಸಂಧಾನಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳು ಬರುತ್ತಿವೆ.

ಇದನ್ನೂ ಓದಿರಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಇಷ್ಟೆಲ್ಲದರ ನಡುವೆ ಚಿತ್ರದುರ್ಗದ ಆತ್ಮಸಾಕ್ಷಿ ಸುಮ್ಮನಿಲ್ಲ. ಆಗುತ್ತಿರುವ ಬೆಳವಣಿಗೆಗಳು ಆಘಾತಕಾರಿ ಹಾಗೂ ತಕ್ಷಣವೇ ಸ್ವಾಮೀಜಿಯ ಬಂಧನವಾಗಬೇಕಿರುವುದು ಸಾಂವಿಧಾನಿಕ ನಡೆ ಎಂಬ ಆಗ್ರಹಗಳೂ ಬರುತ್ತಿವೆ. ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಯನ್ನೂ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆಯನ್ನು ಪ್ರಜ್ಞಾವಂತರು ನೀಡುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಸಕ್ರಿಯವಾಗಿರುವ ದಲಿತ ಹಾಗೂ ಶೂದ್ರ ಸಮುದಾಯಗಳ ಸಾಮಾಜಿಕ ಸಂಘರ್ಷ ಸಮಿತಿಯು ಪ್ರಕರಣದ ಸುತ್ತ ಆಗುತ್ತಿರುವ ಬೆಳವಣಿಗೆಯನ್ನು ಖಂಡಿಸಿದೆ. ತಕ್ಷಣವೇ ಸ್ವಾಮೀಜಿ ಸಂವಿಧಾನಕ್ಕೆ ಗೌರವಕ್ಕೆ ಕೊಟ್ಟು ಬಂಧನಕ್ಕೊಳಗಾಗಿ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಚಿಂತಕ ಸಿ.ಕೆ.ಮಹೇಶ್, “ಪೋಕ್ಸೋ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯಾಗಲೀ, ಮತ್ತೆ ಯಾವನೇ ಆಗಿರಲಿ, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ. ಇದು ಮಠಕ್ಕೂ ಅನ್ವಯಿಸುತ್ತದೆ. ಸಾಮಾನ್ಯ ಮನುಷ್ಯನಿಗೆ ಅನ್ವಯವಾಗುವ ಕಾನೂನು ಈ ದೇಶದ ಪ್ರಭಾವಿಗೂ ಅನ್ವಯವಾಗುತ್ತದೆ” ಎಂದರು.

“ಇಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಕ್ಕಳು ಶೋಷಿತ ಸಮುದಾಯಕ್ಕೆ ಸೇರಿದವರೋ, ಬೇರೆಯ ಸಮುದಾಯಕ್ಕೆ ಸೇರಿದವರೋ ಬೇಕಿಲ್ಲ. ಎಳೆಯ ಹೆಣ್ಣುಮಕ್ಕಳನ್ನು ಪೋಷಣೆ ಮಾಡುವುದಾಗಿ ಸೇರಿಸಿಕೊಂಡು ಲೈಂಗಿಕ ಕ್ರಿಯೆಗೆ ಬಳಸಿದ್ದರೆ ಅದು ಅಕ್ಷಮ್ಯ ಅಪರಾಧ. ಅಂತಹ ಅಪರಾಧ ಮಾಡಿರುವ ವ್ಯಕ್ತಿಗೆ ಶಿಕ್ಷೆಯಾಗಲೇಬೇಕು. ಪೋಕ್ಸೋ ಕಾನೂನಿನ ಪ್ರಕಾರ, ಎಫ್‌ಐಆರ್‌ ಆದ ತಕ್ಷಣವೇ ಅರೆಸ್ಟ್ ಮಾಡಿ ಮುಂದಿನ ಕ್ರಮಗಳನ್ನು ಜರುಗಿಸಬೇಕು” ಎಂದರು.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇಲ್ಲಿ ಆರೋಪಿಯು ಸ್ವಾಮೀಜಿಯಾಗಿರುವ ಕಾರಣಕ್ಕಾಗಿಯೋ, ಅಥವಾ ಅವರು ಪ್ರಭಾವಿಯಾಗಿರುವ ಕಾರಣಕ್ಕಾಗಿಯೋ ಪೋಕ್ಸೋ ಕೂಡ ನಿಷ್ಕ್ರಿಯವಾದಂತೆ ಕಾಣುತ್ತಿದೆ. ಸಾಮಾನ್ಯ ವ್ಯಕ್ತಿ ಏನಾದರೂ ಈ ಕೆಲಸ ಮಾಡಿದ್ದರೆ ತಕ್ಷಣವೇ ಅರೆಸ್ಟ್ ಮಾಡಲಾಗುತ್ತಿತ್ತು” ಎಂದು ತಿಳಿಸಿದರು.

‘ಬುದ್ಧ, ಬಸವಣ್ಣನವರ ಅನುಯಾಯಿಯಾಗಿದ್ದರೆ ಬಂಧನಕ್ಕೊಳಗಾಗಲಿ’

“ಮುರುಘಾ ಶರಣರು ಇಡೀ ರಾಜ್ಯದಲ್ಲಿ ಗುರುತಿಸಿಕೊಂಡವರು. ಬುದ್ಧ, ಯೇಸು, ಪೈಗಂಬರ್‌ ಮೇಲೆಯೂ ಆರೋಪಗಳು ಬಂದಿದ್ದವು ಎಂದು ಸ್ವಾಮೀಜಿ ಹೇಳಿಕೊಳ್ಳುತ್ತಿದ್ದಾರೆ. ಆ ಮೂಲಕ ಮಹಾನೀಯರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುತ್ತಿದ್ದಾರೆ. ತಮ್ಮ ಮೇಲೆ ಆರೋಪಗಳು ಬಂದಾಗ ಬಸವಣ್ಣ ಹಾಗೂ ಬುದ್ಧ ಮುಕ್ತ ತನಿಖೆಗೆ ಒಳಪಟ್ಟಿದ್ದರು ಎಂಬುದನ್ನು ಮುರುಘಾ ಶರಣರು ಮರೆಯಬಾರದು” ಎಂದು ಸಿ.ಕೆ.ಮಹೇಶ್ ಆಗ್ರಹಿಸಿದರು.

“ಬುದ್ಧನ ಮೇಲೆ ಬ್ರಾಹ್ಮಣರು ಆರೋಪಗಳನ್ನು ಮಾಡಿದಾಗ ಸ್ವಯಃ ಬುದ್ಧ ಗುರುವೇ ತನಿಖೆಗೆ ಒಳಗಾಗುತ್ತಾರೆ. ತನಿಖೆಯಾದ ಬಳಿಕ ಹೊರಗೆ ಬರುತ್ತಾರೆ. ಬುದ್ಧನ ಬಗ್ಗೆ ಮಾತನಾಡುವ ಮುರುಘಾ ಶರಣರು, ತನಿಖೆಗೆ ಒಳಗಾಗಬೇಕು. ನೀವು ಎಷ್ಟೇ ಶುದ್ಧರಾಗಿರಿ, ಪ್ರಾಮಾಣಿಕರಾಗಿರಿ, ಆ ಸರ್ಟಿಫಿಕೇಟ್‌ಗಳನ್ನು ನೀವಾಗಿಯೇ ತೆಗೆದುಕೊಳ್ಳಬಾರದು. ನಿಮ್ಮ ಕ್ರಿಯೆಗಳನ್ನು ಗುರುತಿಸಿದ ಬಳಿಕ ಜನರು ಆ ಸರ್ಟಿಫಿಕೇಟ್‌ಗಳನ್ನು ದೃಢೀಕರಿಸಬೇಕು” ಎಂದು ಆಶಿಸಿದರು.

“ಬುದ್ಧನ ಹೆಸರನ್ನು ಬಳಸಿಯೋ, ಮತ್ತ್ಯಾರೋ ಮಹನೀಯರ ಹೆಸರು ಮುಂದೆ ತರುವ ಮೂಲಕವೋ ರಕ್ಷಣೆ ಮಾಡಿಕೊಳ್ಳುವುದು ಖಂಡನೀಯ. ಬಸವಣ್ಣನವರ ಮೇಲೆ ದ್ರವ್ಯದ ಆರೋಪ ಬಂದಾಗಲೂ ತಾವು ಬಿಜ್ಜಳನ ತನಿಖೆಗೆ ಒಳಪಟ್ಟರು. ತಾವು ಸ್ವಚ್ಛ ಇದ್ದೇವೆ ಎಂಬುದನ್ನು ಸಾಬೀತು ಮಾಡಿದರು. ಆದರೆ ಇಲ್ಲಿ ಮುರುಘಾ ಶರಣರು ಕಾನೂನು ಪಾಲಿಸದೆ ತಮ್ಮ ಕ್ರಿಯೆಗಳ ಮೂಲಕ ತಾವು ತಪ್ಪಿತಸ್ಥರು ಎಂಬುದನ್ನು ಒಪ್ಪಿಕೊಳ್ಳುತ್ತಿದ್ದಾರೆ; ಬಾಯಿಮಾತಿನಲ್ಲಿ ಆರೋಪಿಯಲ್ಲ ಎನ್ನುತ್ತಿದ್ದಾರೆ” ಎಂದರು.

“ಘಟನೆಯನ್ನು ಖಂಡಿಸಿ ಸಾಮಾಜಿಕ ಸಂಘರ್ಷ ಸಮಿತಿ ಹೋರಾಟ ಹಮ್ಮಿಕೊಳ್ಳಲಿದೆ. ಸಂತ್ರಸ್ತ ಮಕ್ಕಳಿಗೆ ನ್ಯಾಯ ದೊರಕಬೇಕಿದೆ” ಎಂದ ಅವರು, “ಪ್ರಭುತ್ವ ಎನ್ನುವುದೇ ಒಂದು ಕೂಟ. ಅಲ್ಲಿ ಪ್ರಭಾವಿಗಳು, ಅಧಿಕಾರಿಗಳು, ಮಠಗಳು ಇರುತ್ತವೆ. ಈ ಕೂಟದ ಸದಸ್ಯನೊಬ್ಬನಿಗೆ ತೊಂದರೆಯಾದಾಗ ಮತ್ತೊಬ್ಬ ಸದಸ್ಯ ಸಂಧಾನಕ್ಕೆ ಬರುತ್ತಾನೆ. ಸಿಎಂ, ಎಂಎಲ್‌ಎ, ಮಂತ್ರಿಗಳು ಈ ಕೂಟದ ಭಾಗವಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರಗತಿಪರ ಚಿಂತಕ ಶಿವಣ್ಣ, “ಅಂಬೇಡ್ಕರ್‌ ಕೊಟ್ಟ ಸಂವಿಧಾನ ಉಳಿಯಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸ್ವಾಮೀಜಿ ಬಂಧನಕ್ಕೆ ಒಳಗಾಗಬೇಕು. ಇದಕ್ಕಾಗಿ ದಲಿತ ಶೋಷಿತರ ಬಳಗದಿಂದ ಹೋರಾಟ ರೂಪಿಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ಸಾಮಾಜಿಕ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಿ.ದುರ್ಗೇಶ್‌ ಮಾತನಾಡಿ, “ಈ ಸ್ವಾಮೀಜಿ ಮಾಡಿರುವ ಕೆಲಸ ಅಕ್ಷಮ್ಯ ಅಪರಾಧ. ಸಾಮಾನ್ಯ ಪ್ರಜೆಯಾಗಿದ್ದರೆ ತಕ್ಷಣವೇ ಬಂಧನಕ್ಕೊಳಗಾಗುತ್ತಿದ್ದ. ಆದರೆ ಮಠಾಧಿಪತಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಅನಿಸುತ್ತಿದೆ. ಮುರುಘಾ ಶರಣರನ್ನು ಮೊದಲು ಬಂಧಿಸಬೇಕಾಗಿದೆ” ಎಂದು ಆಗ್ರಹಿಸಿದರು.

“ಸಂತ್ರಸ್ತರ ಬಾಯಿ ಮುಚ್ಚಿಸುವ ಕುತಂತ್ರಗಳನ್ನು ಮಾಡಿಯೇ ಮಾಡುತ್ತಾರೆ. ಕೆಲವರು ಹೇಳೋದೊಂದು ಮಾಡೋದೊಂದು. ಇಂಥವರಿಂದ ದೇಶ ಹಾಳಾಗಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್‌ ಮಾತನಾಡಿ, “ಬಹಳ ನೋವಾಗುವ ಕೆಲಸವಿದು. ರಾಜಕೀಯ ಪಕ್ಷಗಳು ಸ್ವಾಮೀಜಿಯ ಪರ ಮಾತನಾಡುತ್ತಿವೆ. ಸಾಮಾನ್ಯ ವ್ಯಕ್ತಿಯಾಗಿದ್ದರೆ ಎನ್‌ಕೌಂಟರ್ ವಿಷಯ ಪ್ರಸ್ತಾಪಿಸುತ್ತಿದ್ದರು. ಈಗ ಎಲ್ಲಿ ಹೋಗಿದ್ದಾರೆ ಆ ರಾಜಕಾರಣಿಗಳು?” ಎಂದು ಪ್ರಶ್ನಿಸಿದರು.

“ಮಾಜಿ ಶಾಸಕ ಬಸವರಾಜನ್‌ ಮತ್ತು ಮುರುಘಾ ಶರಣರ ನಡುವಿನ ವೈಯಕ್ತಿಕ ವೈಷಮ್ಯವನ್ನು ಪೋಕ್ಸೋ ಪ್ರಕರಣಕ್ಕೆ ಥಳುಕುಹಾಕುವುದು ಬೇಡ. ಅಮಾಯಕ ಹೆಣ್ಣು ಮಕ್ಕಳು ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ. ಬಸವರಾಜನ್‌ ಮೇಲೆಯೂ ತನಿಖೆಯಾಗಲಿ” ಎಂದು ಒತ್ತಾಯಿಸಿದರು.

ದಲಿತ ಸಮುದಾಯದ ಮುಖಂಡರಾದ ರಾಮು ಘೋಸೆ, ಡಾ.ವಿ.ಬಸವರಾಜು, ಶ್ರೀನಿವಾಸ್‌, ಸಿ.ಕೆ.ಗೋಪಾಲಕೃಷ್ಣ, ತಮ್ಮಣ್ಣ, ಶಿವಕುಮಾರ್‌, ಮಾಯಣ್ಣ ಮೊದಲಾದವರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...