Homeಕರ್ನಾಟಕಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

ಮುರುಘಾ ಶರಣರು ಕಾನೂನಿಗಿಂತ ದೊಡ್ಡವರೇ?: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

- Advertisement -
- Advertisement -

“ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದರೂ ಯಾಕಿನ್ನೂ ಸ್ವಾಮೀಜಿಯ ಬಂಧನವಾಗಿಲ್ಲ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ ಅವರನ್ನು ಕೇಳಿದರೆ, ‘ತನಿಖೆಯಾಗುತ್ತಿದೆ. ಕ್ರಮ ಜರುಗಿಸುತ್ತೇವೆ’ ಎನ್ನುತ್ತಾರೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಸ್ವಾಮೀಜಿಯನ್ನು ಯಾವಾಗ ಬಂಧಿಸುತ್ತೀರಿ? ಪೋಕ್ಸೋ ಪ್ರಕರಣದಲ್ಲಿ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕಲ್ಲ, ಬೇರೆಯವರಾಗಿದ್ದರೆ ಹೀಗೆಯೇ ವಿಳಂಬವಾಗುತ್ತಿತ್ತೇ ಎಂದು ಕೇಳಿದರೆ, “ಆರೋಪಗಳನ್ನು ಪರಿಶೀಲನೆ ಮಾಡಬೇಕು. ಏಕಾಏಕಿ ಬಂಧಿಸಲು ಆಗುವುದಿಲ್ಲ. ತನಿಖೆ ನಡೆಸುತ್ತಿದ್ದೇವೆ. ಮೈಸೂರಿನಿಂದ ನಿನ್ನೆಯಷ್ಟೇ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿದೆ” ಎನ್ನುತ್ತಾರೆ ಎಸ್.ಪಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಂತ ಶೋಷಿತ ಸಮುದಾಯಕ್ಕೆ ಸೇರಿದ, ಅಸಹಾಯಕ, ಬಡ ಬಾಲಕಿಯರು ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದೇ ದೊಡ್ಡ ಸಂಗತಿ. ಈ ಸಂತ್ರಸ್ತ ಮಕ್ಕಳಿಗೆ ಸಹಾಯ ಮಾಡಿರುವ ಒಡನಾಡಿ ಸಂಸ್ಥೆಯ ಪರಶು ಹೇಳುವಂತೆ, “ತಮಗೆ ನ್ಯಾಯ ದೊರಕದೆಂದು ಭಾವಿಸಿ ಈ ಮಕ್ಕಳು ಆತ್ಯಹತ್ಯೆಗೂ ಯೋಚಿಸಿದ್ದರು” ಎಂಬುದು ಆಘಾತಕಾರಿ ಸಂಗತಿ.

ಇದೆಲ್ಲದರ ನಡುವೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜಕಾರಣಿಗಳು ಹೇಗೆ ವರ್ತಿಸಬೇಕು? ಸ್ವಾಮೀಜಿ ಯಾವುದೇ ತಪ್ಪು ಮಾಡಿರಲಿಕ್ಕಿಲ್ಲ ಎಂಬ ಅಭಿಪ್ರಾಯ ತಾಳುವುದು ಸಂತ್ರಸ್ತ ಶೋಷಿತ ಮಕ್ಕಳಿಗೆ ತೋರುವ ಅಗೌರವ ತಾನೇ? ಆದರೆ ಆಘಾತಕಾರಿ ಸಂಗತಿಗಳೆಂದರೆ- ಪ್ರಕರಣವನ್ನು ಸಂಧಾನದ ಮೂಲಕ ಮುಚ್ಚಿಹಾಕುವ ಯತ್ನಗಳು ನಡೆಯುತ್ತಿರುವುದು ತಿಳಿದುಬಂದಿದೆ. ಶೋಷಿತ ಸಮುದಾಯದ ಜನಪ್ರತಿನಿಧಿಗಳು ಹಾಗೂ ಶಾಸಕರನ್ನೇ ಈ ಸಂಧಾನಕ್ಕೆ ಬಳಸಲಾಗುತ್ತಿದೆ ಎಂಬ ಆರೋಪಗಳು ಬರುತ್ತಿವೆ.

ಇದನ್ನೂ ಓದಿರಿ: ಮಕ್ಕಳ ಮೇಲೆ ಮುರುಘಾ ಶರಣರಿಂದ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಒಡನಾಡಿ ಸಂಸ್ಥೆ ಹೇಳಿದ್ದೇನು?

ಇಷ್ಟೆಲ್ಲದರ ನಡುವೆ ಚಿತ್ರದುರ್ಗದ ಆತ್ಮಸಾಕ್ಷಿ ಸುಮ್ಮನಿಲ್ಲ. ಆಗುತ್ತಿರುವ ಬೆಳವಣಿಗೆಗಳು ಆಘಾತಕಾರಿ ಹಾಗೂ ತಕ್ಷಣವೇ ಸ್ವಾಮೀಜಿಯ ಬಂಧನವಾಗಬೇಕಿರುವುದು ಸಾಂವಿಧಾನಿಕ ನಡೆ ಎಂಬ ಆಗ್ರಹಗಳೂ ಬರುತ್ತಿವೆ. ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಯನ್ನೂ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆಯನ್ನು ಪ್ರಜ್ಞಾವಂತರು ನೀಡುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಸಕ್ರಿಯವಾಗಿರುವ ದಲಿತ ಹಾಗೂ ಶೂದ್ರ ಸಮುದಾಯಗಳ ಸಾಮಾಜಿಕ ಸಂಘರ್ಷ ಸಮಿತಿಯು ಪ್ರಕರಣದ ಸುತ್ತ ಆಗುತ್ತಿರುವ ಬೆಳವಣಿಗೆಯನ್ನು ಖಂಡಿಸಿದೆ. ತಕ್ಷಣವೇ ಸ್ವಾಮೀಜಿ ಸಂವಿಧಾನಕ್ಕೆ ಗೌರವಕ್ಕೆ ಕೊಟ್ಟು ಬಂಧನಕ್ಕೊಳಗಾಗಿ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ದಲಿತ ಚಿಂತಕ ಸಿ.ಕೆ.ಮಹೇಶ್, “ಪೋಕ್ಸೋ ಪ್ರಕರಣ ದಾಖಲಾಗಿದೆ. ಸ್ವಾಮೀಜಿಯಾಗಲೀ, ಮತ್ತೆ ಯಾವನೇ ಆಗಿರಲಿ, ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ. ಇದು ಮಠಕ್ಕೂ ಅನ್ವಯಿಸುತ್ತದೆ. ಸಾಮಾನ್ಯ ಮನುಷ್ಯನಿಗೆ ಅನ್ವಯವಾಗುವ ಕಾನೂನು ಈ ದೇಶದ ಪ್ರಭಾವಿಗೂ ಅನ್ವಯವಾಗುತ್ತದೆ” ಎಂದರು.

“ಇಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಕ್ಕಳು ಶೋಷಿತ ಸಮುದಾಯಕ್ಕೆ ಸೇರಿದವರೋ, ಬೇರೆಯ ಸಮುದಾಯಕ್ಕೆ ಸೇರಿದವರೋ ಬೇಕಿಲ್ಲ. ಎಳೆಯ ಹೆಣ್ಣುಮಕ್ಕಳನ್ನು ಪೋಷಣೆ ಮಾಡುವುದಾಗಿ ಸೇರಿಸಿಕೊಂಡು ಲೈಂಗಿಕ ಕ್ರಿಯೆಗೆ ಬಳಸಿದ್ದರೆ ಅದು ಅಕ್ಷಮ್ಯ ಅಪರಾಧ. ಅಂತಹ ಅಪರಾಧ ಮಾಡಿರುವ ವ್ಯಕ್ತಿಗೆ ಶಿಕ್ಷೆಯಾಗಲೇಬೇಕು. ಪೋಕ್ಸೋ ಕಾನೂನಿನ ಪ್ರಕಾರ, ಎಫ್‌ಐಆರ್‌ ಆದ ತಕ್ಷಣವೇ ಅರೆಸ್ಟ್ ಮಾಡಿ ಮುಂದಿನ ಕ್ರಮಗಳನ್ನು ಜರುಗಿಸಬೇಕು” ಎಂದರು.

ಇದನ್ನೂ ಓದಿರಿ: ಮುರುಘಾ ಮಠ: ಮಕ್ಕಳ ಪ್ರಕರಣದಲ್ಲಿ ಆರೋಪಿಯಾದ ಮಹಿಳಾ ವಾರ್ಡನ್‌ ದೂರು; ಮಠದ ಮಾಜಿ ಆಡಳಿತಾಧಿಕಾರಿ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ ದಾಖಲು

“ಇಲ್ಲಿ ಆರೋಪಿಯು ಸ್ವಾಮೀಜಿಯಾಗಿರುವ ಕಾರಣಕ್ಕಾಗಿಯೋ, ಅಥವಾ ಅವರು ಪ್ರಭಾವಿಯಾಗಿರುವ ಕಾರಣಕ್ಕಾಗಿಯೋ ಪೋಕ್ಸೋ ಕೂಡ ನಿಷ್ಕ್ರಿಯವಾದಂತೆ ಕಾಣುತ್ತಿದೆ. ಸಾಮಾನ್ಯ ವ್ಯಕ್ತಿ ಏನಾದರೂ ಈ ಕೆಲಸ ಮಾಡಿದ್ದರೆ ತಕ್ಷಣವೇ ಅರೆಸ್ಟ್ ಮಾಡಲಾಗುತ್ತಿತ್ತು” ಎಂದು ತಿಳಿಸಿದರು.

‘ಬುದ್ಧ, ಬಸವಣ್ಣನವರ ಅನುಯಾಯಿಯಾಗಿದ್ದರೆ ಬಂಧನಕ್ಕೊಳಗಾಗಲಿ’

“ಮುರುಘಾ ಶರಣರು ಇಡೀ ರಾಜ್ಯದಲ್ಲಿ ಗುರುತಿಸಿಕೊಂಡವರು. ಬುದ್ಧ, ಯೇಸು, ಪೈಗಂಬರ್‌ ಮೇಲೆಯೂ ಆರೋಪಗಳು ಬಂದಿದ್ದವು ಎಂದು ಸ್ವಾಮೀಜಿ ಹೇಳಿಕೊಳ್ಳುತ್ತಿದ್ದಾರೆ. ಆ ಮೂಲಕ ಮಹಾನೀಯರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುತ್ತಿದ್ದಾರೆ. ತಮ್ಮ ಮೇಲೆ ಆರೋಪಗಳು ಬಂದಾಗ ಬಸವಣ್ಣ ಹಾಗೂ ಬುದ್ಧ ಮುಕ್ತ ತನಿಖೆಗೆ ಒಳಪಟ್ಟಿದ್ದರು ಎಂಬುದನ್ನು ಮುರುಘಾ ಶರಣರು ಮರೆಯಬಾರದು” ಎಂದು ಸಿ.ಕೆ.ಮಹೇಶ್ ಆಗ್ರಹಿಸಿದರು.

“ಬುದ್ಧನ ಮೇಲೆ ಬ್ರಾಹ್ಮಣರು ಆರೋಪಗಳನ್ನು ಮಾಡಿದಾಗ ಸ್ವಯಃ ಬುದ್ಧ ಗುರುವೇ ತನಿಖೆಗೆ ಒಳಗಾಗುತ್ತಾರೆ. ತನಿಖೆಯಾದ ಬಳಿಕ ಹೊರಗೆ ಬರುತ್ತಾರೆ. ಬುದ್ಧನ ಬಗ್ಗೆ ಮಾತನಾಡುವ ಮುರುಘಾ ಶರಣರು, ತನಿಖೆಗೆ ಒಳಗಾಗಬೇಕು. ನೀವು ಎಷ್ಟೇ ಶುದ್ಧರಾಗಿರಿ, ಪ್ರಾಮಾಣಿಕರಾಗಿರಿ, ಆ ಸರ್ಟಿಫಿಕೇಟ್‌ಗಳನ್ನು ನೀವಾಗಿಯೇ ತೆಗೆದುಕೊಳ್ಳಬಾರದು. ನಿಮ್ಮ ಕ್ರಿಯೆಗಳನ್ನು ಗುರುತಿಸಿದ ಬಳಿಕ ಜನರು ಆ ಸರ್ಟಿಫಿಕೇಟ್‌ಗಳನ್ನು ದೃಢೀಕರಿಸಬೇಕು” ಎಂದು ಆಶಿಸಿದರು.

“ಬುದ್ಧನ ಹೆಸರನ್ನು ಬಳಸಿಯೋ, ಮತ್ತ್ಯಾರೋ ಮಹನೀಯರ ಹೆಸರು ಮುಂದೆ ತರುವ ಮೂಲಕವೋ ರಕ್ಷಣೆ ಮಾಡಿಕೊಳ್ಳುವುದು ಖಂಡನೀಯ. ಬಸವಣ್ಣನವರ ಮೇಲೆ ದ್ರವ್ಯದ ಆರೋಪ ಬಂದಾಗಲೂ ತಾವು ಬಿಜ್ಜಳನ ತನಿಖೆಗೆ ಒಳಪಟ್ಟರು. ತಾವು ಸ್ವಚ್ಛ ಇದ್ದೇವೆ ಎಂಬುದನ್ನು ಸಾಬೀತು ಮಾಡಿದರು. ಆದರೆ ಇಲ್ಲಿ ಮುರುಘಾ ಶರಣರು ಕಾನೂನು ಪಾಲಿಸದೆ ತಮ್ಮ ಕ್ರಿಯೆಗಳ ಮೂಲಕ ತಾವು ತಪ್ಪಿತಸ್ಥರು ಎಂಬುದನ್ನು ಒಪ್ಪಿಕೊಳ್ಳುತ್ತಿದ್ದಾರೆ; ಬಾಯಿಮಾತಿನಲ್ಲಿ ಆರೋಪಿಯಲ್ಲ ಎನ್ನುತ್ತಿದ್ದಾರೆ” ಎಂದರು.

“ಘಟನೆಯನ್ನು ಖಂಡಿಸಿ ಸಾಮಾಜಿಕ ಸಂಘರ್ಷ ಸಮಿತಿ ಹೋರಾಟ ಹಮ್ಮಿಕೊಳ್ಳಲಿದೆ. ಸಂತ್ರಸ್ತ ಮಕ್ಕಳಿಗೆ ನ್ಯಾಯ ದೊರಕಬೇಕಿದೆ” ಎಂದ ಅವರು, “ಪ್ರಭುತ್ವ ಎನ್ನುವುದೇ ಒಂದು ಕೂಟ. ಅಲ್ಲಿ ಪ್ರಭಾವಿಗಳು, ಅಧಿಕಾರಿಗಳು, ಮಠಗಳು ಇರುತ್ತವೆ. ಈ ಕೂಟದ ಸದಸ್ಯನೊಬ್ಬನಿಗೆ ತೊಂದರೆಯಾದಾಗ ಮತ್ತೊಬ್ಬ ಸದಸ್ಯ ಸಂಧಾನಕ್ಕೆ ಬರುತ್ತಾನೆ. ಸಿಎಂ, ಎಂಎಲ್‌ಎ, ಮಂತ್ರಿಗಳು ಈ ಕೂಟದ ಭಾಗವಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪ್ರಗತಿಪರ ಚಿಂತಕ ಶಿವಣ್ಣ, “ಅಂಬೇಡ್ಕರ್‌ ಕೊಟ್ಟ ಸಂವಿಧಾನ ಉಳಿಯಬೇಕು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸ್ವಾಮೀಜಿ ಬಂಧನಕ್ಕೆ ಒಳಗಾಗಬೇಕು. ಇದಕ್ಕಾಗಿ ದಲಿತ ಶೋಷಿತರ ಬಳಗದಿಂದ ಹೋರಾಟ ರೂಪಿಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ಸಾಮಾಜಿಕ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಡಿ.ದುರ್ಗೇಶ್‌ ಮಾತನಾಡಿ, “ಈ ಸ್ವಾಮೀಜಿ ಮಾಡಿರುವ ಕೆಲಸ ಅಕ್ಷಮ್ಯ ಅಪರಾಧ. ಸಾಮಾನ್ಯ ಪ್ರಜೆಯಾಗಿದ್ದರೆ ತಕ್ಷಣವೇ ಬಂಧನಕ್ಕೊಳಗಾಗುತ್ತಿದ್ದ. ಆದರೆ ಮಠಾಧಿಪತಿಗೆ ಸರ್ಕಾರ ರಕ್ಷಣೆ ನೀಡುತ್ತಿದೆ ಅನಿಸುತ್ತಿದೆ. ಮುರುಘಾ ಶರಣರನ್ನು ಮೊದಲು ಬಂಧಿಸಬೇಕಾಗಿದೆ” ಎಂದು ಆಗ್ರಹಿಸಿದರು.

“ಸಂತ್ರಸ್ತರ ಬಾಯಿ ಮುಚ್ಚಿಸುವ ಕುತಂತ್ರಗಳನ್ನು ಮಾಡಿಯೇ ಮಾಡುತ್ತಾರೆ. ಕೆಲವರು ಹೇಳೋದೊಂದು ಮಾಡೋದೊಂದು. ಇಂಥವರಿಂದ ದೇಶ ಹಾಳಾಗಿದೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣ ಚಿತ್ರದುರ್ಗಕ್ಕೆ ವರ್ಗಾವಣೆ

ಸಮಿತಿಯ ಜಿಲ್ಲಾಧ್ಯಕ್ಷರಾದ ಕೆ.ಕುಮಾರ್‌ ಮಾತನಾಡಿ, “ಬಹಳ ನೋವಾಗುವ ಕೆಲಸವಿದು. ರಾಜಕೀಯ ಪಕ್ಷಗಳು ಸ್ವಾಮೀಜಿಯ ಪರ ಮಾತನಾಡುತ್ತಿವೆ. ಸಾಮಾನ್ಯ ವ್ಯಕ್ತಿಯಾಗಿದ್ದರೆ ಎನ್‌ಕೌಂಟರ್ ವಿಷಯ ಪ್ರಸ್ತಾಪಿಸುತ್ತಿದ್ದರು. ಈಗ ಎಲ್ಲಿ ಹೋಗಿದ್ದಾರೆ ಆ ರಾಜಕಾರಣಿಗಳು?” ಎಂದು ಪ್ರಶ್ನಿಸಿದರು.

“ಮಾಜಿ ಶಾಸಕ ಬಸವರಾಜನ್‌ ಮತ್ತು ಮುರುಘಾ ಶರಣರ ನಡುವಿನ ವೈಯಕ್ತಿಕ ವೈಷಮ್ಯವನ್ನು ಪೋಕ್ಸೋ ಪ್ರಕರಣಕ್ಕೆ ಥಳುಕುಹಾಕುವುದು ಬೇಡ. ಅಮಾಯಕ ಹೆಣ್ಣು ಮಕ್ಕಳು ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ. ಬಸವರಾಜನ್‌ ಮೇಲೆಯೂ ತನಿಖೆಯಾಗಲಿ” ಎಂದು ಒತ್ತಾಯಿಸಿದರು.

ದಲಿತ ಸಮುದಾಯದ ಮುಖಂಡರಾದ ರಾಮು ಘೋಸೆ, ಡಾ.ವಿ.ಬಸವರಾಜು, ಶ್ರೀನಿವಾಸ್‌, ಸಿ.ಕೆ.ಗೋಪಾಲಕೃಷ್ಣ, ತಮ್ಮಣ್ಣ, ಶಿವಕುಮಾರ್‌, ಮಾಯಣ್ಣ ಮೊದಲಾದವರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...