Homeಕರ್ನಾಟಕ'ಬಾಂಬೆ ತಂಡ'ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

- Advertisement -
- Advertisement -

ಚುನಾವಣೆ ನಡೆಯಲಿರುವ ಕಾರಣಕ್ಕೆ ಮಸ್ಕಿ ಅಭಿವೃದ್ದಿ ಬಗ್ಗೆ ಮಾತನಾಡುತ್ತಿದ್ದೀರಿ, ವರ್ಷದ ಹಿಂದೆಯೇ ಚುನಾವಣೆಗಳಾದ ‘ಬಾಂಬೆ ತಂಡ’ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಕುಮಾರಸ್ವಾಮಿ ಸೋಮವಾರ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಸಿಎಂ ಯಡಿಯೂರಪ್ಪ ಇತ್ತೀಚೆಗೆ ಪ್ರಚಾರ ಸಭೆಯಲ್ಲಿ ಹೇಳಿರುವುದು ಗಮನಕ್ಕೆ ಬಂತು. ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗ(?)ದಿಂದ ಬಿಎಸ್‌ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈವರೆಗೆ ಯಾಕಾಗಿರಲಿಲ್ಲ ಮಸ್ಕಿಯ ಅಭಿವೃದ್ಧಿ? ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

“ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ಒಪ್ಪೋಣ. ಆದರೆ, ವರ್ಷದ ಹಿಂದೆಯೇ ಚುನಾವಣೆಗಳಾದ ‘ಬಾಂಬೆ ತಂಡ’ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು ಎಂದು ನಿಮಗಾದರೂ ಅನಿಸದೇ?” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ಮಸ್ಕಿ ಕ್ಷೇತ್ರವಿರಲಿ, ಬೇರಾವ ಕ್ಷೇತ್ರವೇ ಆಗಿರಲಿ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ? ರಾಜ್ಯದ ತೆರಿಗೆ ಹಣ, ಜನರ ಬೆವರಿನ ಋಣ ನಿಮ್ಮ ಸರ್ಕಾರದಲ್ಲಿರುವ ‘ಏಕಗವಾಕ್ಷಿ’ಗೆ ಆಪೋಷನವಾಗುತ್ತಿಲ್ಲವೇ? ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸರ್ಕಾರದ ‘ಏಕಗವಾಕ್ಷಿ’ ಆಡುವ ಮಾತುಗಳಿಗೆ ಜನ ಮನ್ನಣೆ ನೀಡಬಾರದು.” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...