Homeಅಂಕಣಗಳುಮಾಧ್ಯಮಗಳು ಪ್ರಜಾಪ್ರಭುತ್ವದ ಕಾವಲು ನಾಯಿಗಳೋ? ಆಳುವವರ ಸಾಕು ನಾಯಿಗಳೋ?

ಮಾಧ್ಯಮಗಳು ಪ್ರಜಾಪ್ರಭುತ್ವದ ಕಾವಲು ನಾಯಿಗಳೋ? ಆಳುವವರ ಸಾಕು ನಾಯಿಗಳೋ?

- Advertisement -
- Advertisement -

ಹಂಗಾರ ಅಧಿಕಾರ ದಾಗ ಇದ್ದವರು ಏನು ಮಾಡಿದರೂ ಸುದ್ದಿಮನೆಯವರು ಸುಮ್ಮನೇ ಇರಬೇಕ? ಅವರು ಬೇಕಾದ್ದು ಮಾತಾಡಿದರೂ ಜೀ ಹುಜೂರ್ ಅನ್ನಬೇಕ? ಸುದ್ದಿ ಬರಬೇಕಾದ್ದು ಎಲ್ಲಿಂದ? ಅಧಿಕಾರಸ್ಥರಿಂದನೋ ಅಥವಾ ಸಾಮಾನ್ಯ ಜನರಿಂದನೋ?

ಸುದ್ದಿಯ ಮೂಲವೇ ಈ ಸಲದ ಸುದ್ದಿ. ಸುದ್ದಿ ಎಲ್ಲಿಂದ ಬರತದ ಅನ್ನೋದು ಬಲ್ಲಿರೇನಯ್ಯ? ಮೊನ್ನೆ ಏನಾತಪಾ ಅಂದರ ವಿಶ್ವದ ಅತಿ ಶ್ರೀಮಂತರ ಪೈಕಿ ಒಬ್ಬರಾದ ಜೆಫರಿ ಬೆಜೋಸ್ ಅನ್ನೋ ಅಮೇಜಾನ್ ಕಂಪನಿ ಮಾಲಿಕರು ದೆಹಲಿಗೆ ಬಂದಿದ್ದರು.

ಪ್ರತಿ ಸಾರಿ ಸಾಹುಕಾರರು ಬಂದಾಗ ಸರಕಾರಿ ಸಾಲಿಗೆ ಸಾಹೇಬರು ಬಂದಾಗ ಹುಡುಗರು ನೀಟಾಗಿ ಸಮವಸ್ತ್ರ ಹಕ್ಕೊಂಡು, ಸಾಲಾಗಿ ನಿಂತು ನಮಸ್ಕಾರ ಅಂತಾರಲ್ಲ, ಹಂಗ ಪ್ರಧಾನ ಮಂತ್ರಿ ಆದಿಯಾಗಿ ಎಲ್ಲ ಮಂತ್ರಿವರೇಣ್ಯರು ನಿಲ್ಲತಿದ್ದರು. ಐಟಿ, ಬಿಟಿ, ಕೋಟಿ, ಚೀಟಿ, ರೋಟಿ ಕಂಪನಿಗಳ ಮಾಲಿಕರು ಅವರ ಕೈಕುಲುಕಿ ನಮಗೊಂದಿಷ್ಟು ಕೂಲಿ ಕೊಡಿ ಅಂತ ಅಂತಿದ್ದರು. ಆದರ ಈ ಸಲೆ ಮಾತ್ರ ಮನಿಷಾನ್ನ ಯಾರು ಭೇಟಿ ಆಗಲಿಲ್ಲ. ಅವರು ನಮ್ಮ ದೇಶದಾಗ ಸಾವಿರ ಕೋಟಿ ಡಾಲರ್ ಬಂಡವಾಳ ಹೂಡಿ ಲಕ್ಷಾಂತರ ಜನರಿಗೆ ಉದ್ಯೋಗ ಕೊಡತೇನಿ ಅಂದರು. ಆದರೂ ಸಹಿತ ಯಾರೂ ಅವರ ಸಂಗತೆ ಮಾತಾಡಲಿಲ್ಲ. ಹೋಗಲಿ, ಕೇಂದ್ರ ಹಣಕಾಸು ಸಚಿವರು ಅವರು ಬಂಡವಾಳ ಹೂಡೋದೇನು ನಮ್ಮ ಮ್ಯಾಲ ಉಪಕಾರ ಮಾಡಲಿಕ್ಕೆ ಹತ್ತಿಲ್ಲ, ಅಂತ ಒಂದು ಡ್ಯಾಷ್ ಡ್ಯಾಷ್ ನೋಟ ಬೀರಿದರು. ಏ ಅಮ್ಮೀಜಾನ್, ಈ ಇಂಡಿಯಾಕ್ಕ ಹೋಗೋ ಐಡಿಯಾ ಕೊಟ್ಟವ ಯಾವಾನವಾ ಅಂತ ಅವರು ತಮ್ಮ ಕಚೇರಿ ಒಳಗ ಜೋರಾಗಿ ಕೂಗಾಡಿರಬೇಕು.

ಆ ಅಂತರಜಾಲಿಯ ಮ್ಯಾಲೆ ನಮ್ಮನ್ನಾಳುವವರ ರಂಜಿಷ್ಗೆ ಕಾರಣ ಏನು ಇದ್ದಿರಬಹುದು? ಬೇಜೋಸ್ ಅವರು ನೆಹರೂ ಜಾಕೆಟ್ ಹಕ್ಕೊಂಡು ಮಹಾತ್ಮಾಗಾಂಧಿ ಸಮಾಧಿಗೆ ಭೇಟಿ ನೀಡಿದ್ದರು. ಅದೂ ಒಂದು ಕಾರಣ ಇರಬಹುದು ಅಂತ ಮೋಷಾ ವಿರೋಧಿಗಳು ಹೇಳಿಕೋತ ಅಡ್ಯಾಡಲಿಕ್ಕೆ ಹತ್ಯಾರಂತ.

ಆದರ ಖರೇ ಸಿಟ್ಟು ಯಾಕಂದರ ಅಮೇರಿಕದ ವಾಷಿಂಗಟನ್ ಪೋಸ್ಟ್ ಪತ್ರಿಕೆ ವರದಿಗಾರರು, ಅಂಕಣಕಾರರು ಭಾರತದ ಸರಕಾರದ ಬಗ್ಗೆ ಸಕಾರಣ ಟೀಕೆ ಮಾಡಿ ಒಂದಿಷ್ಟು ಸುದ್ದಿ ಬರದಾರ. ಬೇಜೋಸ್ ಅವರು ಆ ಪತ್ರಿಕೆ ಮಾಲಿಕರು. ಅಷ್ಟ.

ನಾಕಾಣಿ ಅನ್ನೋ ಹೆಸರಿಟ್ಟುಕೊಂಡಿರುವ ಆಳುವ ಪಕ್ಷದ ನಾಯಕರೊಬ್ಬರು ಮೊನ್ನೆ ರಾತ್ರೋ ರಾತ್ರಿ ಫೇಮಸ್ ಆದರು. ಅವರು ಮಾಡಿದ್ದಿಷ್ಟೇ. ಅವರು ಟ್ವೀಟು ಮಾಡಿದರು. ನಾವು ಸಣ್ಣವರಿದ್ದಾಗ ಕೆಲಸ ಇಲ್ಲದ ಬಡಿಗ್ಯಾ ಮಗಾ ಕೂಡಲಿಕ್ಕೆ ಮೂರು ಮಣಿ ಮಾಡಿದ್ದನಂತ ಅಂತ ಒಂದು ಗಾದಿ ಮಾತು ಇತ್ತು. ಈಗ ಅದು ಬದಲಾಗಿ. ಮಾಡಲಿಕ್ಕೆ ಕೆಲಸ ಇರಲಾರದವರು ಟ್ವೀಟು ಮಾಡಿದ್ದರಂತ ಅಂತ ಆಗೇದ. ಈ ಚೌಥಾಯಿಯಾ ಅನ್ನೋರು ಬೇಜೋಸ್ ಅವರ ಹೆಸರಿಗೆ ಟ್ವೀಟು ಮಾಡಿದರು. “ನೀವು ಇಲ್ಲಿ ಬಂದು ನಮ್ಮ ದೇಶ ಛಲೋ ಅಂದರ ಸಾಲಂಗಿಲ್ಲ. ಅದನ್ನ ಹೋಗಿ ವಾಷಿಂಗಟನ್ನಿನ ನಿಮ್ಮ ನೌಕರರಿಗೆ ಹೇಳಿರಿ” ಅದರ ಅರ್ಥ ಏನಂದರ ವಾಪೋ ಪತ್ರಿಕೆ ಮೋಷಾ ಸರಕಾರದ ಬಗ್ಗೆ ದನಾತ್ಮಕವಾಗಿ ಬರೀಬೇಕು ಅಂತ. ಅವರ ಪ್ರಕಾರ ಅತಳ ಪತಳ ರಸಾತಳದಾಗಿನ ಯಾರೂ ನಮ್ಮ ಸರಕಾರವನ್ನು ಟೀಕೆ ಮಾಡಬಾರದು. ಚಿಕಿತ್ಸಕ ದೃಷ್ಟಿಯಿಂದ ನೋಡಬಾರದು. ಎಲ್ಲರೂ ಉಘೇ ಉಘೇ ಅನ್ನಬೇಕು.

ಅದನ್ನ ನೋಡಿ, ಅದರ ಹಿಂದಿನ ಭಾವನೆ ಅರ್ಥ ಮಾಡಿಕೊಂಡ ಪತ್ರಿಕೆಯ ಜಾಗತಿಕ ಅಭಿಪ್ರಾಯ ವಿಭಾಗದ ಸಂಪಾದಕ ಎಲ್ಲೀ ಲೋಪೆಜ್ ಅವರು ಸಟಕ್ಕನ ಉತ್ತರ ಕೊಟ್ಟರು. “ಜೆಫ್ ಬೆಜೋಸ್ ಅವರು ನಮ್ಮ ಪತ್ರಿಕೆಯೊಳಗ ನಾವು ಏನು ಬರೀಬೇಕು ಅಂತ ಹೇಳಿಕೊಡಂಗಿಲ್ಲ” ಅಂತ. ಅದರ ಅರ್ಥ ನಿಮ್ಮ ದೇಶದಾಗ ನೀವು ಪತ್ರಿಕೆ ಮಾಲಿಕರ ಮಾತು ಕೇಳಿ ಸುದ್ದಿ ಬರೀತೀರಿ ಅಂತನೂ ಆಗಬಹುದು. “ಸ್ವತಂತ್ರ ಪತ್ರಿಕೋದ್ಯಮದ ಕೆಲಸ ಅಂದರೆ ಸರಕಾರಕ್ಕ ಬೆಣ್ಣಿ ಹಚ್ಚೋದಲ್ಲ. ನಾವೇನು ತಪ್ಪು ಮಾಡ್ತಿಲ್ಲ. ಭಾರತದ ಪ್ರಜಾಪ್ರಭುತ್ವದ ತತ್ವ ಭಂಗವಾಗದ ಹಂಗ ನಾವು ಸುದ್ದಿ ಮಾಡ್ತಿದ್ದೇವೆ” ಅಂತ ಒಂದು ಸ್ಪಷ್ಟೀಕರಣನೂ ಕೊಟ್ಟರು.

ಇದನ್ನ ನೋಡಿದರ ಅಮೇರಿಕೆ ಪತ್ರಿಕೋದ್ಯಮದ ದಂತ ಕಥೆ ಎನ್ನಲಾದ ವಾಷಿಂಗಟನ್ ಪೋಸ್ಟಿನ ಮಾಜಿ ಸಂಪಾದಕ ಬೆನಜಮಿನ್ ಬ್ರ್ಯಾಡಲೀ ಅವರ ನೆನಪು ಆಗತದ.

ಅಧ್ಯಕ್ಷ ರಿಚರ್ಡ ನಿಕ್ಸನ್ ಅವರನ್ನ ಕುರ್ಚಿಯಿಂದ ಇಳಿಸಲಿಕ್ಕೆ ಕಾರಣರಾದ ವಾಟರ್ ಗೇಟ ಹಗರಣದ ವರದಿಗಾರರಾದ ಬಾಬ್ ವುಡವರ್ಡ್ ಹಾಗೂ ಕಾರ್ಲ್ ಬರ್ನಸ್ಟೀನ್ ಅವರನ್ನು ಬೆನ್ ಅವರು ಅತ್ಯಂತ ಕಷ್ಟದ ದಿನಗಳಲ್ಲಿ ಬೆಂಬಲಿಸಿದರು. ಆಳುವವರಿಂದ, ತಮ್ಮ ವೃತ್ತಿಯ ಇತರರಿಂದ, ಕುಟುಂಬದಿಂದ, ಇನ್ಯಾವುದೋ ಮೂಲದಿಂದ ಬೆದರಿಕೆ, ಆಮಿಷಗಳು ಬಂದರೂ ಸಹ ಅವರು ಹಿಂಜರಿಯಲಿಲ್ಲ. `ನನ್ನನ್ನು ಎಲ್ಲರೂ ಪ್ರೀತಿಸಲಿ ಎನ್ನುವುದು ಪತ್ರಕರ್ತನ ಧ್ಯೇಯ ಆಗಿರಬಾರದು. ಅವನ ಜೀವನದ ಒಂದೇ ಒಂದು ಗುರಿ- ಸತ್ಯದ ಹುಡುಕಾಟ ಹಾಗೂ ಅದನ್ನು ಜಗತ್ತಿನ ಮುಂದ ಜಾಹೀರು ಪಡಿಸೋದು ಆಗಿರಬೇಕು’ ಅಂತ ತಮ್ಮನ್ನು ವಿಚಾರಣೆಗೆ ಗುರಿಪಡಿಸಿದ ಸಂಸತ್ ಸಮಿತಿಯ ಎದುರು ಹೇಳಿದರು. ಸರಿ ಸುಮಾರು ಮೂವತ್ತು ವರ್ಷ ಪತ್ರಿಕೆಯ ಸಂಪಾದಕರಾಗಿದ್ದ ಬೆನ್ ಅವರು ಕೆಲವು ವರ್ಷಗಳ ಹಿಂದೆ ತೀರಿಹೋದರು.

ಹಂಗಾರ ಅಧಿಕಾರದಾಗ ಇದ್ದವರು ಏನು ಮಾಡಿದರೂ ಸುದ್ದಿಮನೆಯವರು ಸುಮ್ಮನೇ ಇರಬೇಕ? ಅವರು ಬೇಕಾದ್ದು ಮಾತಾಡಿದರೂ ಜೀ ಹುಜೂರ್ ಅನ್ನಬೇಕ? ಸುದ್ದಿ ಬರಬೇಕಾದ್ದು ಎಲ್ಲಿಂದ? ಅಧಿಕಾರಸ್ಥರಿಂದನೋ ಅಥವಾ ಸಾಮಾನ್ಯ ಜನರಿಂದನೋ?

ಜರ್ಮನಿಯಲ್ಲಿ ಹಿಟ್ಲರ್ ಏನೂ ತಪ್ಪು ಮಾಡದ ಆರು ಲಕ್ಷ ಜನ ಯಹೂದಿಗಳನ್ನ ಕೊಂದಾಗ, ಇದಿ ಅಮೀನ ಅವರು ಪ್ರಾಯದ ಯುವಕರ ಮಾಂಸ ಬೇಯಿಸಿ ತಿಂದಾಗ, ಪೋಲ್ ಪೋಟ್ ಅವರು ಚಾಳೀಸು ಹಾಕಿದ ಎಲ್ಲರಿಗೂ ಗುಂಡು ಹಾಕಿರಿ ಅಂತ ಆದೇಶ ಕೊಟ್ಟಾಗ, ಫ್ರೆಂಚ ಸರಕಾರ ಆಫ್ರಿಕಾದ ತನ್ನ ಕಾಲನಿಗಳಲ್ಲಿ ಕರಿಯರನ್ನು ಬಿಡಾಡಿ ದನಗಳಂತೆ ಬಹಿರಂಗ ಹರಾಜು ಹಾಕಿ ಮಾರಾಟ ಮಾಡಿದಾಗ, ಅಮೇರಿಕಾದಾಗ ಗುಲಾಮರನ್ನು ಹತ್ತಿ ಹೂವು ಕದ್ದಿದ್ದಕ್ಕಾಗಿ ಚೌರಸ್ತಾಗಳಲ್ಲಿ ಬೆಂಕಿ ಹಚ್ಚಿದಾಗ, ಇಂಗ್ಲಂಡಿನಲ್ಲಿ ಕೂಲಿ ಮಾಡೋ ಮಹಿಳೆಯರನ್ನ ಮಾಟಗಾತಿಯರು ಅಂತ ಹೇಳಿ ಆರೋಪಿಸಿ ಕೂಟಿನಲ್ಲಿ ಸುಟ್ಟಾಗ, ಅಲ್ಲಿನ ಪತ್ರಿಕೆಗಳು ಸುಮ್ಮನೇ ಇದ್ದದ್ದನ್ನು ನಾವು ಈಗ ಮೆಚ್ಚುತ್ತೇವೋ, ದೂರುತ್ತೇವೋ?

ಧರಾಸನಾ ಉಪ್ಪಿನ ಕಾರಖಾನೆಯೊಳಗ ಶಾಂತಿಯುತ ಪ್ರತಿಭಟನಾಕಾರರನ್ನು ಬ್ರಿಟಿಷರು ಸಾಲು ಹಚ್ಚಿ ಹೊಡೆದು ತಲೆ ಒಡೆದಾಗ ಪತ್ರಿಕರ್ತ ವಿನ್ಸ್ ವಾಕರ್ ಅವರು `ಭಯಂಕರ ಹಿಂಸೆ, ಮಾನವ ಹಕ್ಕುಗಳ ದಮನ’ ಅಂತ ಬರೆದರು. ಜಲಿಯನ್ ವಾಲಾಬಾಗ್ ಹತ್ಯಾಕಾಂಡವನ್ನು ಕೆಲವು ಬ್ರಿಟಿಷ ಪತ್ರಿಕೆಗಳೇ `ಅತಿರೇಕದ ಹಿಂಸೆ’ ಅಂತ ಬರೆದವು. ಹಂಗಾರ ಅವರು ಸರಕಾರದ ವಿರುದ್ಧ ಬರೆದದ್ದು ತಪ್ಪೇ? ಪತ್ರಿಕಾ ಧರ್ಮಕ್ಕೆ ಮಾಡಿದ ದ್ರೋಹವೇ?

ಈಗ ಜಗತ್ ಪ್ರಸಿದ್ಧವಾಗಿರುವ, ಬೆನ್ ಬ್ರ್ಯಾಡಲೀ ಅವರು ಐವತ್ತು ವರ್ಷ ಹಿಂದೆ ನೀಡಿದ ಹೇಳಿಕೆಯೊಂದನ್ನ ಗಮನಿಸೋಣ.

“ಮಾಧ್ಯಮಗಳು ತಮ್ಮನ್ನು ತಾವು ಪ್ರಜಾಪ್ರಭುತ್ವದ ಕಾವಲು ನಾಯಿ ಅಂತ ತಿಳಿದುಕೊಂಡಿರುತ್ತವೆ. ಆದರೆ ಆಳುವವರು ಮಾಧ್ಯಮ ತಮ್ಮ ಸಾಕುನಾಯಿಯಾಗಿರಬೇಕು ಅಂದುಕೊಂಡಿರುತ್ತಾರೆ”. ಇದರಲ್ಲಿ ನಾವು ಏನನ್ನು ನಂಬುತ್ತೇವೋ ಅದು ನಮ್ಮ ಪ್ರಜಾಪ್ರಭುತ್ವದ ವಿಕಾಸವನ್ನು, ನಮ್ಮ ನಾಳೆಗಳನ್ನ, ನಿರ್ಧರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...