Homeಅಂಕಣಗಳುಮಾಧ್ಯಮಗಳು ಪ್ರಜಾಪ್ರಭುತ್ವದ ಕಾವಲು ನಾಯಿಗಳೋ? ಆಳುವವರ ಸಾಕು ನಾಯಿಗಳೋ?

ಮಾಧ್ಯಮಗಳು ಪ್ರಜಾಪ್ರಭುತ್ವದ ಕಾವಲು ನಾಯಿಗಳೋ? ಆಳುವವರ ಸಾಕು ನಾಯಿಗಳೋ?

- Advertisement -
- Advertisement -

ಹಂಗಾರ ಅಧಿಕಾರ ದಾಗ ಇದ್ದವರು ಏನು ಮಾಡಿದರೂ ಸುದ್ದಿಮನೆಯವರು ಸುಮ್ಮನೇ ಇರಬೇಕ? ಅವರು ಬೇಕಾದ್ದು ಮಾತಾಡಿದರೂ ಜೀ ಹುಜೂರ್ ಅನ್ನಬೇಕ? ಸುದ್ದಿ ಬರಬೇಕಾದ್ದು ಎಲ್ಲಿಂದ? ಅಧಿಕಾರಸ್ಥರಿಂದನೋ ಅಥವಾ ಸಾಮಾನ್ಯ ಜನರಿಂದನೋ?

ಸುದ್ದಿಯ ಮೂಲವೇ ಈ ಸಲದ ಸುದ್ದಿ. ಸುದ್ದಿ ಎಲ್ಲಿಂದ ಬರತದ ಅನ್ನೋದು ಬಲ್ಲಿರೇನಯ್ಯ? ಮೊನ್ನೆ ಏನಾತಪಾ ಅಂದರ ವಿಶ್ವದ ಅತಿ ಶ್ರೀಮಂತರ ಪೈಕಿ ಒಬ್ಬರಾದ ಜೆಫರಿ ಬೆಜೋಸ್ ಅನ್ನೋ ಅಮೇಜಾನ್ ಕಂಪನಿ ಮಾಲಿಕರು ದೆಹಲಿಗೆ ಬಂದಿದ್ದರು.

ಪ್ರತಿ ಸಾರಿ ಸಾಹುಕಾರರು ಬಂದಾಗ ಸರಕಾರಿ ಸಾಲಿಗೆ ಸಾಹೇಬರು ಬಂದಾಗ ಹುಡುಗರು ನೀಟಾಗಿ ಸಮವಸ್ತ್ರ ಹಕ್ಕೊಂಡು, ಸಾಲಾಗಿ ನಿಂತು ನಮಸ್ಕಾರ ಅಂತಾರಲ್ಲ, ಹಂಗ ಪ್ರಧಾನ ಮಂತ್ರಿ ಆದಿಯಾಗಿ ಎಲ್ಲ ಮಂತ್ರಿವರೇಣ್ಯರು ನಿಲ್ಲತಿದ್ದರು. ಐಟಿ, ಬಿಟಿ, ಕೋಟಿ, ಚೀಟಿ, ರೋಟಿ ಕಂಪನಿಗಳ ಮಾಲಿಕರು ಅವರ ಕೈಕುಲುಕಿ ನಮಗೊಂದಿಷ್ಟು ಕೂಲಿ ಕೊಡಿ ಅಂತ ಅಂತಿದ್ದರು. ಆದರ ಈ ಸಲೆ ಮಾತ್ರ ಮನಿಷಾನ್ನ ಯಾರು ಭೇಟಿ ಆಗಲಿಲ್ಲ. ಅವರು ನಮ್ಮ ದೇಶದಾಗ ಸಾವಿರ ಕೋಟಿ ಡಾಲರ್ ಬಂಡವಾಳ ಹೂಡಿ ಲಕ್ಷಾಂತರ ಜನರಿಗೆ ಉದ್ಯೋಗ ಕೊಡತೇನಿ ಅಂದರು. ಆದರೂ ಸಹಿತ ಯಾರೂ ಅವರ ಸಂಗತೆ ಮಾತಾಡಲಿಲ್ಲ. ಹೋಗಲಿ, ಕೇಂದ್ರ ಹಣಕಾಸು ಸಚಿವರು ಅವರು ಬಂಡವಾಳ ಹೂಡೋದೇನು ನಮ್ಮ ಮ್ಯಾಲ ಉಪಕಾರ ಮಾಡಲಿಕ್ಕೆ ಹತ್ತಿಲ್ಲ, ಅಂತ ಒಂದು ಡ್ಯಾಷ್ ಡ್ಯಾಷ್ ನೋಟ ಬೀರಿದರು. ಏ ಅಮ್ಮೀಜಾನ್, ಈ ಇಂಡಿಯಾಕ್ಕ ಹೋಗೋ ಐಡಿಯಾ ಕೊಟ್ಟವ ಯಾವಾನವಾ ಅಂತ ಅವರು ತಮ್ಮ ಕಚೇರಿ ಒಳಗ ಜೋರಾಗಿ ಕೂಗಾಡಿರಬೇಕು.

ಆ ಅಂತರಜಾಲಿಯ ಮ್ಯಾಲೆ ನಮ್ಮನ್ನಾಳುವವರ ರಂಜಿಷ್ಗೆ ಕಾರಣ ಏನು ಇದ್ದಿರಬಹುದು? ಬೇಜೋಸ್ ಅವರು ನೆಹರೂ ಜಾಕೆಟ್ ಹಕ್ಕೊಂಡು ಮಹಾತ್ಮಾಗಾಂಧಿ ಸಮಾಧಿಗೆ ಭೇಟಿ ನೀಡಿದ್ದರು. ಅದೂ ಒಂದು ಕಾರಣ ಇರಬಹುದು ಅಂತ ಮೋಷಾ ವಿರೋಧಿಗಳು ಹೇಳಿಕೋತ ಅಡ್ಯಾಡಲಿಕ್ಕೆ ಹತ್ಯಾರಂತ.

ಆದರ ಖರೇ ಸಿಟ್ಟು ಯಾಕಂದರ ಅಮೇರಿಕದ ವಾಷಿಂಗಟನ್ ಪೋಸ್ಟ್ ಪತ್ರಿಕೆ ವರದಿಗಾರರು, ಅಂಕಣಕಾರರು ಭಾರತದ ಸರಕಾರದ ಬಗ್ಗೆ ಸಕಾರಣ ಟೀಕೆ ಮಾಡಿ ಒಂದಿಷ್ಟು ಸುದ್ದಿ ಬರದಾರ. ಬೇಜೋಸ್ ಅವರು ಆ ಪತ್ರಿಕೆ ಮಾಲಿಕರು. ಅಷ್ಟ.

ನಾಕಾಣಿ ಅನ್ನೋ ಹೆಸರಿಟ್ಟುಕೊಂಡಿರುವ ಆಳುವ ಪಕ್ಷದ ನಾಯಕರೊಬ್ಬರು ಮೊನ್ನೆ ರಾತ್ರೋ ರಾತ್ರಿ ಫೇಮಸ್ ಆದರು. ಅವರು ಮಾಡಿದ್ದಿಷ್ಟೇ. ಅವರು ಟ್ವೀಟು ಮಾಡಿದರು. ನಾವು ಸಣ್ಣವರಿದ್ದಾಗ ಕೆಲಸ ಇಲ್ಲದ ಬಡಿಗ್ಯಾ ಮಗಾ ಕೂಡಲಿಕ್ಕೆ ಮೂರು ಮಣಿ ಮಾಡಿದ್ದನಂತ ಅಂತ ಒಂದು ಗಾದಿ ಮಾತು ಇತ್ತು. ಈಗ ಅದು ಬದಲಾಗಿ. ಮಾಡಲಿಕ್ಕೆ ಕೆಲಸ ಇರಲಾರದವರು ಟ್ವೀಟು ಮಾಡಿದ್ದರಂತ ಅಂತ ಆಗೇದ. ಈ ಚೌಥಾಯಿಯಾ ಅನ್ನೋರು ಬೇಜೋಸ್ ಅವರ ಹೆಸರಿಗೆ ಟ್ವೀಟು ಮಾಡಿದರು. “ನೀವು ಇಲ್ಲಿ ಬಂದು ನಮ್ಮ ದೇಶ ಛಲೋ ಅಂದರ ಸಾಲಂಗಿಲ್ಲ. ಅದನ್ನ ಹೋಗಿ ವಾಷಿಂಗಟನ್ನಿನ ನಿಮ್ಮ ನೌಕರರಿಗೆ ಹೇಳಿರಿ” ಅದರ ಅರ್ಥ ಏನಂದರ ವಾಪೋ ಪತ್ರಿಕೆ ಮೋಷಾ ಸರಕಾರದ ಬಗ್ಗೆ ದನಾತ್ಮಕವಾಗಿ ಬರೀಬೇಕು ಅಂತ. ಅವರ ಪ್ರಕಾರ ಅತಳ ಪತಳ ರಸಾತಳದಾಗಿನ ಯಾರೂ ನಮ್ಮ ಸರಕಾರವನ್ನು ಟೀಕೆ ಮಾಡಬಾರದು. ಚಿಕಿತ್ಸಕ ದೃಷ್ಟಿಯಿಂದ ನೋಡಬಾರದು. ಎಲ್ಲರೂ ಉಘೇ ಉಘೇ ಅನ್ನಬೇಕು.

ಅದನ್ನ ನೋಡಿ, ಅದರ ಹಿಂದಿನ ಭಾವನೆ ಅರ್ಥ ಮಾಡಿಕೊಂಡ ಪತ್ರಿಕೆಯ ಜಾಗತಿಕ ಅಭಿಪ್ರಾಯ ವಿಭಾಗದ ಸಂಪಾದಕ ಎಲ್ಲೀ ಲೋಪೆಜ್ ಅವರು ಸಟಕ್ಕನ ಉತ್ತರ ಕೊಟ್ಟರು. “ಜೆಫ್ ಬೆಜೋಸ್ ಅವರು ನಮ್ಮ ಪತ್ರಿಕೆಯೊಳಗ ನಾವು ಏನು ಬರೀಬೇಕು ಅಂತ ಹೇಳಿಕೊಡಂಗಿಲ್ಲ” ಅಂತ. ಅದರ ಅರ್ಥ ನಿಮ್ಮ ದೇಶದಾಗ ನೀವು ಪತ್ರಿಕೆ ಮಾಲಿಕರ ಮಾತು ಕೇಳಿ ಸುದ್ದಿ ಬರೀತೀರಿ ಅಂತನೂ ಆಗಬಹುದು. “ಸ್ವತಂತ್ರ ಪತ್ರಿಕೋದ್ಯಮದ ಕೆಲಸ ಅಂದರೆ ಸರಕಾರಕ್ಕ ಬೆಣ್ಣಿ ಹಚ್ಚೋದಲ್ಲ. ನಾವೇನು ತಪ್ಪು ಮಾಡ್ತಿಲ್ಲ. ಭಾರತದ ಪ್ರಜಾಪ್ರಭುತ್ವದ ತತ್ವ ಭಂಗವಾಗದ ಹಂಗ ನಾವು ಸುದ್ದಿ ಮಾಡ್ತಿದ್ದೇವೆ” ಅಂತ ಒಂದು ಸ್ಪಷ್ಟೀಕರಣನೂ ಕೊಟ್ಟರು.

ಇದನ್ನ ನೋಡಿದರ ಅಮೇರಿಕೆ ಪತ್ರಿಕೋದ್ಯಮದ ದಂತ ಕಥೆ ಎನ್ನಲಾದ ವಾಷಿಂಗಟನ್ ಪೋಸ್ಟಿನ ಮಾಜಿ ಸಂಪಾದಕ ಬೆನಜಮಿನ್ ಬ್ರ್ಯಾಡಲೀ ಅವರ ನೆನಪು ಆಗತದ.

ಅಧ್ಯಕ್ಷ ರಿಚರ್ಡ ನಿಕ್ಸನ್ ಅವರನ್ನ ಕುರ್ಚಿಯಿಂದ ಇಳಿಸಲಿಕ್ಕೆ ಕಾರಣರಾದ ವಾಟರ್ ಗೇಟ ಹಗರಣದ ವರದಿಗಾರರಾದ ಬಾಬ್ ವುಡವರ್ಡ್ ಹಾಗೂ ಕಾರ್ಲ್ ಬರ್ನಸ್ಟೀನ್ ಅವರನ್ನು ಬೆನ್ ಅವರು ಅತ್ಯಂತ ಕಷ್ಟದ ದಿನಗಳಲ್ಲಿ ಬೆಂಬಲಿಸಿದರು. ಆಳುವವರಿಂದ, ತಮ್ಮ ವೃತ್ತಿಯ ಇತರರಿಂದ, ಕುಟುಂಬದಿಂದ, ಇನ್ಯಾವುದೋ ಮೂಲದಿಂದ ಬೆದರಿಕೆ, ಆಮಿಷಗಳು ಬಂದರೂ ಸಹ ಅವರು ಹಿಂಜರಿಯಲಿಲ್ಲ. `ನನ್ನನ್ನು ಎಲ್ಲರೂ ಪ್ರೀತಿಸಲಿ ಎನ್ನುವುದು ಪತ್ರಕರ್ತನ ಧ್ಯೇಯ ಆಗಿರಬಾರದು. ಅವನ ಜೀವನದ ಒಂದೇ ಒಂದು ಗುರಿ- ಸತ್ಯದ ಹುಡುಕಾಟ ಹಾಗೂ ಅದನ್ನು ಜಗತ್ತಿನ ಮುಂದ ಜಾಹೀರು ಪಡಿಸೋದು ಆಗಿರಬೇಕು’ ಅಂತ ತಮ್ಮನ್ನು ವಿಚಾರಣೆಗೆ ಗುರಿಪಡಿಸಿದ ಸಂಸತ್ ಸಮಿತಿಯ ಎದುರು ಹೇಳಿದರು. ಸರಿ ಸುಮಾರು ಮೂವತ್ತು ವರ್ಷ ಪತ್ರಿಕೆಯ ಸಂಪಾದಕರಾಗಿದ್ದ ಬೆನ್ ಅವರು ಕೆಲವು ವರ್ಷಗಳ ಹಿಂದೆ ತೀರಿಹೋದರು.

ಹಂಗಾರ ಅಧಿಕಾರದಾಗ ಇದ್ದವರು ಏನು ಮಾಡಿದರೂ ಸುದ್ದಿಮನೆಯವರು ಸುಮ್ಮನೇ ಇರಬೇಕ? ಅವರು ಬೇಕಾದ್ದು ಮಾತಾಡಿದರೂ ಜೀ ಹುಜೂರ್ ಅನ್ನಬೇಕ? ಸುದ್ದಿ ಬರಬೇಕಾದ್ದು ಎಲ್ಲಿಂದ? ಅಧಿಕಾರಸ್ಥರಿಂದನೋ ಅಥವಾ ಸಾಮಾನ್ಯ ಜನರಿಂದನೋ?

ಜರ್ಮನಿಯಲ್ಲಿ ಹಿಟ್ಲರ್ ಏನೂ ತಪ್ಪು ಮಾಡದ ಆರು ಲಕ್ಷ ಜನ ಯಹೂದಿಗಳನ್ನ ಕೊಂದಾಗ, ಇದಿ ಅಮೀನ ಅವರು ಪ್ರಾಯದ ಯುವಕರ ಮಾಂಸ ಬೇಯಿಸಿ ತಿಂದಾಗ, ಪೋಲ್ ಪೋಟ್ ಅವರು ಚಾಳೀಸು ಹಾಕಿದ ಎಲ್ಲರಿಗೂ ಗುಂಡು ಹಾಕಿರಿ ಅಂತ ಆದೇಶ ಕೊಟ್ಟಾಗ, ಫ್ರೆಂಚ ಸರಕಾರ ಆಫ್ರಿಕಾದ ತನ್ನ ಕಾಲನಿಗಳಲ್ಲಿ ಕರಿಯರನ್ನು ಬಿಡಾಡಿ ದನಗಳಂತೆ ಬಹಿರಂಗ ಹರಾಜು ಹಾಕಿ ಮಾರಾಟ ಮಾಡಿದಾಗ, ಅಮೇರಿಕಾದಾಗ ಗುಲಾಮರನ್ನು ಹತ್ತಿ ಹೂವು ಕದ್ದಿದ್ದಕ್ಕಾಗಿ ಚೌರಸ್ತಾಗಳಲ್ಲಿ ಬೆಂಕಿ ಹಚ್ಚಿದಾಗ, ಇಂಗ್ಲಂಡಿನಲ್ಲಿ ಕೂಲಿ ಮಾಡೋ ಮಹಿಳೆಯರನ್ನ ಮಾಟಗಾತಿಯರು ಅಂತ ಹೇಳಿ ಆರೋಪಿಸಿ ಕೂಟಿನಲ್ಲಿ ಸುಟ್ಟಾಗ, ಅಲ್ಲಿನ ಪತ್ರಿಕೆಗಳು ಸುಮ್ಮನೇ ಇದ್ದದ್ದನ್ನು ನಾವು ಈಗ ಮೆಚ್ಚುತ್ತೇವೋ, ದೂರುತ್ತೇವೋ?

ಧರಾಸನಾ ಉಪ್ಪಿನ ಕಾರಖಾನೆಯೊಳಗ ಶಾಂತಿಯುತ ಪ್ರತಿಭಟನಾಕಾರರನ್ನು ಬ್ರಿಟಿಷರು ಸಾಲು ಹಚ್ಚಿ ಹೊಡೆದು ತಲೆ ಒಡೆದಾಗ ಪತ್ರಿಕರ್ತ ವಿನ್ಸ್ ವಾಕರ್ ಅವರು `ಭಯಂಕರ ಹಿಂಸೆ, ಮಾನವ ಹಕ್ಕುಗಳ ದಮನ’ ಅಂತ ಬರೆದರು. ಜಲಿಯನ್ ವಾಲಾಬಾಗ್ ಹತ್ಯಾಕಾಂಡವನ್ನು ಕೆಲವು ಬ್ರಿಟಿಷ ಪತ್ರಿಕೆಗಳೇ `ಅತಿರೇಕದ ಹಿಂಸೆ’ ಅಂತ ಬರೆದವು. ಹಂಗಾರ ಅವರು ಸರಕಾರದ ವಿರುದ್ಧ ಬರೆದದ್ದು ತಪ್ಪೇ? ಪತ್ರಿಕಾ ಧರ್ಮಕ್ಕೆ ಮಾಡಿದ ದ್ರೋಹವೇ?

ಈಗ ಜಗತ್ ಪ್ರಸಿದ್ಧವಾಗಿರುವ, ಬೆನ್ ಬ್ರ್ಯಾಡಲೀ ಅವರು ಐವತ್ತು ವರ್ಷ ಹಿಂದೆ ನೀಡಿದ ಹೇಳಿಕೆಯೊಂದನ್ನ ಗಮನಿಸೋಣ.

“ಮಾಧ್ಯಮಗಳು ತಮ್ಮನ್ನು ತಾವು ಪ್ರಜಾಪ್ರಭುತ್ವದ ಕಾವಲು ನಾಯಿ ಅಂತ ತಿಳಿದುಕೊಂಡಿರುತ್ತವೆ. ಆದರೆ ಆಳುವವರು ಮಾಧ್ಯಮ ತಮ್ಮ ಸಾಕುನಾಯಿಯಾಗಿರಬೇಕು ಅಂದುಕೊಂಡಿರುತ್ತಾರೆ”. ಇದರಲ್ಲಿ ನಾವು ಏನನ್ನು ನಂಬುತ್ತೇವೋ ಅದು ನಮ್ಮ ಪ್ರಜಾಪ್ರಭುತ್ವದ ವಿಕಾಸವನ್ನು, ನಮ್ಮ ನಾಳೆಗಳನ್ನ, ನಿರ್ಧರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...