Homeಅಂಕಣಗಳುಮಾರಣಹೋಮದ ಪೂರ್ವ ತಯಾರಿ!

ಮಾರಣಹೋಮದ ಪೂರ್ವ ತಯಾರಿ!

- Advertisement -
- Advertisement -

ಸ್ತ್ರಿದ್ವೇಷ ಮತ್ತು ಧರ್ಮಾಂಧತೆ ಈ ನೆಲಕ್ಕೆ ಹೊಸ ಆವಿಷ್ಕಾರಗಳೇನೂ ಅಲ್ಲ. ಆದರೆ ’ಬೇಟೀ ಬಚಾವೊ, ಬೇಟಿ ಪಢಾವೋ’ (ಮಗಳನ್ನು ಕಾಪಾಡಿರಿ, ಆಕೆಗೆ ಅಕ್ಷರ ಕಲಿಸಿರಿ) ಎಂಬುದು ಖುದ್ದು ಪ್ರಧಾನಮಂತ್ರಿಯವರೇ ವರ್ಷಗಳ ಹಿಂದೆ ನೀಡಿದ ಘೋಷಣೆ. ಎಲ್ಲಿ ನಾರಿಯರು ಪೂಜಿಸಲ್ಪಡುವರೋ ಅಲ್ಲಿ ದೇವಾನುದೇವತೆಗಳೂ ರಮಿಸುವರು ಎಂದು ಅಡಿಗಡಿಗೆ ಹೇಳಿಕೊಳ್ಳಲಾಗುತ್ತದೆ. ಮುಸ್ಲಿಮ್ ನಾರಿಯರು, ದಲಿತ ದಮನಿತ ಆದಿವಾಸಿ ನಾರಿಯರು, ಕ್ರೈಸ್ತ ನಾರಿಯರು, ಕಡೆಗೆ ಉಗ್ರ ಹಿಂದುತ್ವವನ್ನು ಒಪ್ಪದಿರುವ ಹಿಂದೂ ನಾರಿಯರು ನಾರಿಯರೇ ಅಲ್ಲವೇ? ಅವರನ್ನು ಹೀನಾಮಾನ ನಿಂದಿಸಲುಬಹುದೇ? ಮುಸಲ್ಮಾನರೂ ಸೇರಿದಂತೆ ಎಲ್ಲ ದೇಶವಾಸಿಗಳ ಡಿ.ಎನ್.ಎ. ಒಂದೇ ಎಂದು ಸರಸಂಘಚಾಲಕರು ನೀಡಿದ ಹೇಳಿಕೆಗೆ ಅರ್ಥವೇನು?

ಪ್ರಧಾನಿಯಾಗಲಿ, ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರೇ ಇರಲಿ, ಮುಸಲ್ಮಾನ ಹೆಣ್ಣುಮಕ್ಕಳ ಡಿಜಿಟಲ್ ಹರಾಜಿನ ಕುರಿತು ಈತನಕ ತುಟಿ ಬಿಚ್ಚಿಲ್ಲ. ಬೆಚ್ಚಿಬೀಳಿಸುವ ಆತಂಕಕಾರಿ ಅರ್ಥಗರ್ಭಿತ ಮೌನವಿದು. ಸಮ್ಮತಿಯಲ್ಲದೆ ಇನ್ನೇನೆಂದು ಅರ್ಥೈಸಬೇಕು?

ಅಲ್ಪಸಂಖ್ಯಾತರು, ಹೆಣ್ಣುಮಕ್ಕಳು, ದಲಿತ ದಮನಿತರು ಭಯದ ನೆರಳಿನಲ್ಲಿ ಬದುಕುವ ದ್ವೇಷ ರಾಜಕಾರಣದ ವಾತಾವರಣವನ್ನು ಕಳೆದ ಕೆಲವು ವರ್ಷಗಳಲ್ಲಿ ಕಟ್ಟಿ ಬೆಳೆಸಲಾಗಿದೆ. ಹೊಸ ದ್ವೇಷಗಳ ವಿಷದ ಕಳೆಗೆ ಯಥೇಚ್ಛ ನೀರು ಗೊಬ್ಬರ ನಿರ್ಭೀತಿ ನಿರ್ಲಜ್ಜೆಯನ್ನು ಎರೆಯತೊಡಗಿದೆ ಈ ವಾತಾವರಣ. ಮುಸಲ್ಮಾನರ ನರಮೇಧಕ್ಕೆ ಬಹಿರಂಗ ಕರೆ ನೀಡುವವರನ್ನು ಮುಟ್ಟಲೂ ಆಗದೆ ಅಸಹಾಯಕವಾಗಿ ಕೈಕಟ್ಟಿ ಕುಳಿತಿದೆ ಕಾನೂನು.

ಮನೆಯಲ್ಲಿ ಉಳಿದು ಮಕ್ಕಳನ್ನು ಹೆತ್ತು ಪೋಷಿಸುವ ಪಾತ್ರವನ್ನು ಮಹಿಳೆ ನಿಭಾಯಿಸಬೇಕೆಂಬ ಮಾತನ್ನು ಆರೆಸ್ಸೆಸ್ ಮುಖ್ಯಸ್ಥರು ಕೂಡ ಹೇಳುತ್ತಾರೆ. ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕೆಂಬ ಕರೆಯನ್ನು ವಿಶ್ವಹಿಂದೂ ಪರಿಷತ್ ನೀಡುತ್ತಲೇ ಬಂದಿದೆ. ತೀವ್ರ ಹಿಂದುತ್ವವಾದಿ ನರಸಿಂಘಾನಂದ್ ಹೆಚ್ಚು ಮಕ್ಕಳನ್ನು ಹೆರದಿರುವ ಹಿಂದೂ ಮಹಿಳೆಯರನ್ನು ರಾಕ್ಷಸಿಯರು ಮತ್ತು ನಾಗಿಣಿಯರು ಎಂದು ಜರೆದರು. ಸಾಧು ಸಂತರು ಎರಡೆರಡು ಸಲ ಮದುವೆಯಾಗಿ ’ಶುದ್ಧ ಹಿಂದೂ ಡಿ.ಎನ್.ಎ’ ವೃದ್ಧಿಸಬೇಕು ಎಂದು ಕರೆ ನೀಡಿದರು. ಕುಣಾಲ್ ಶರ್ಮ ಎಂಬ ಈತನ ಶಿಷ್ಯನೊಬ್ಬನು ಬಡತನದ ಹಿನ್ನೆಲೆಯ ಮುಸ್ಲಿಮ್ ಹೆಣ್ಣುಮಕ್ಕಳ ಮೊಬೈಲು ಫೋನು ನಂಬರುಗಳ ಪಟ್ಟಿಯೊಂದನ್ನು ಹೊರಡಿಸಿ ಅವರನ್ನು ರೇಪ್ ಮಾಡುವಂತೆ ಹಿಂದೂ ಗಂಡಸರಿಗೆ ಕರೆ ನೀಡಿದ. ಮುಸ್ಲಿಮ್ ಹುಡುಗಿಯರ ಮದುವೆ ಮಾಡಿಕೊಂಡು ಅವರನ್ನು ಸರ್ಕಾರಿ ಆಸ್ತಿಯೆಂದು ಬಳಸಿರಿ, ಖುದ್ದು ಭೋಗಿಸಿ ಇತರರಿಗೂ ಕೊಡಿಸಿರಿ. ಆಗ ಮಾತ್ರವೇ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ (ಸರ್ವರಿಗೂ ನ್ಯಾಯ) ಸಿಕ್ಕೀತು ಎಂದು ಸಾಮಾಜಿಕ
ಜಾಲತಾಣಗಳಲ್ಲಿ ಬೊಗಳಿದ್ದ. ಒಂದನ್ನೊಂದು ಮೀರಿಸುವ ಇಂತಹದೇ ಕಾರ್ಕೋಟಕ ನಂಜಿನ ಹೇಳಿಕೆಗಳಿಂದ ಕಿಕ್ಕಿರಿದಿವೆ ಸಾಮಾಜಿಕ ಜಾಲತಾಣಗಳು.

ಇಸ್ಲಾಮ್ ಕ್ಷಿಪ್ರ ವಿಷವೆಂದೂ, ಕ್ರೈಸ್ತ ಧರ್ಮ ನಿಧಾನ ವಿಷವೆಂದೂ ಎರಡನ್ನೂ ಇಳೆಯಿಂದಲೇ ಅಳಿಸಿಹಾಕಬೇಕೆಂದೂ, ತೀವ್ರ ಹಿಂದುತ್ವವಾದಿಗಳು ಪ್ರಚಾರ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕಿಕ್ಕಿರಿದಿರುವ ಧರ್ಮಾಂಧ ಖಾತೆಗಳು ತಾವು ’ಕಾಲಿಫ್ಲವರ್ ಫಾರ್ಮರ್’ (ಹೂಕೋಸು ರೈತ) ಎಂಬ ಬಣ್ಣನೆ ಹೊಂದಿರುತ್ತಿದ್ದವು. ಈಗಲೂ ಇಂತಹ ಲೆಕ್ಕವಿಲ್ಲದಷ್ಟು ಖಾತೆಗಳು ಕಾಣಸಿಗುತ್ತವೆ. 1989ರ ಭಗಲ್ಪುರ ಕೋಮುಗಲಭೆಗಳಲ್ಲಿ ಒಂದು ಕೋಮಿನವರು ಮತ್ತೊಂದು ಕೋಮಿಗೆ ಸೇರಿದವರನ್ನು ಕೊಂದು ಹೊಲಗಳಲ್ಲಿ ಹುಗಿದು ಮೇಲೆ ಹೂಕೋಸು ಬೆಳೆಯಲಾಗಿತ್ತು. ಹೂಕೋಸು ಕೃಷಿಯ ಈ ಕ್ರೂರ ರೂಪಕ ಇದೀಗ ಪುನಃ ಚಾಲ್ತಿಗೆ ಬಂದಿದೆ.

ಅರವತ್ತು ಲಕ್ಷ ಯಹೂದಿಗಳ ನರಮೇಧ ಸರಣಿಗೆ ಮುನ್ನ ಜರ್ಮನಿ ಇಂತಹುದೇ ದ್ವೇಷದ ಕೃಷಿ ಜರ್ಮನಿಯಲ್ಲಿ ನಡೆದಿತ್ತು. ಶ್ರೇಷ್ಠ ಜರ್ಮನ್ ಜನಾಂಗೀಯ ಶುದ್ಧಿಯ ವ್ಯಸನದ ಬಲೆಗೆ ಸಿಲುಕಿದ್ದ ಹಿಟ್ಲರ್. ಅವನ ನಾಜೀವಾದವು ಕ್ರೌರ್ಯದ ಪರಮಾವಧಿಯನ್ನು ಮುಟ್ಟಿತ್ತು.

ಜರ್ಮನರ ಆರ್ಯಜನಾಂಗೀಯ ’ಶುದ್ಧ ಶ್ರೇಷ್ಠ ರಕ್ತ’ವನ್ನು ಯಹೂದಿಗಳ ’ಕೀಳು ರಕ್ತ’ದಿಂದ ಕಲುಷಿತವಾಗದಂತೆ ’ಸಂರಕ್ಷಿಸುವುದು’ ನಾಜೀವಾದದ ಗುರಿಯಾಗಿತ್ತು.

ಒಬ್ಬ ಮನುಷ್ಯನ ರಕ್ತ ಶ್ರೇಷ್ಠ ಅಥವಾ ಮತ್ತೊಬ್ಬನದು ಕನಿಷ್ಠ ಎಂಬ ವಾದಕ್ಕೆ ವೈಜ್ಞಾನಿಕ ಸಮರ್ಥನೆ ಇಲ್ಲ. ಆದರೆ ಹಿಟ್ಲರ್ ಅದಕ್ಕೆಲ್ಲ ಸೊಪ್ಪು ಹಾಕಲಿಲ್ಲ. ಜರ್ಮನ್ ರಕ್ತ ಹೊಂದಿರುವವರಿಗೆ ಮಾತ್ರವೇ ಜರ್ಮನ್ ನಾಗರಿಕತೆ ಮೀಸಲು. ಹೀಗಾಗಿ ಅನ್ಯ ಜನಾಂಗವಾಗಿದ್ದ ಯಹೂದಿಗಳು ಜರ್ಮನ್ ನಾಗರಿಕತೆಗೆ ಅರ್ಹರಲ್ಲ ಎಂದು ಸಾರಲಾಯಿತು. ಅವರ ನಾಗರಿಕ ಹಕ್ಕುಗಳನ್ನು ಕಿತ್ತುಕೊಳ್ಳಲಾಯಿತು. ಯಹೂದಿಗಳು ಮತ್ತು ಜರ್ಮನರ ನಡುವೆ ವಿವಾಹ ಮತ್ತು ವಿವಾಹೇತರ ಸಂಬಂಧವನ್ನು ನಿಷೇಧಿಸಲಾಯಿತು.

ಮತ ಚಲಾಯಿಸುವ ಹಕ್ಕು, ಸಾರ್ವಜನಿಕ ಸ್ಥಾನಮಾನಗಳಿಗೆ ಮತ್ತು ಚುನಾವಣೆಗಳಲ್ಲಿ ಸ್ಪರ್ಧಿಸುವ ಹಕ್ಕುಗಳನ್ನು ಯಹೂದಿಗಳಿಗೆ ನಿರಾಕರಿಸಲಾಯಿತು. ಅವರು ರಾಜ್ಯವಿಲ್ಲದ ಪ್ರಜೆಗಳಾದರು. ಪಾಸ್‌ಪೋರ್ಟುಗಳು ವೀಸಾಗಳನ್ನೂ ಅವರು ಹೊಂದುವಂತಿರಲಿಲ್ಲ. ಅಂತಿಮವಾಗಿ ಯಹೂದಿಗಳ ಮಾರಣಹೋಮಕ್ಕೆ ನಡೆಸಲಾದ ಪೂರ್ವಭಾವಿ ತಯಾರಿಯಾಗಿತ್ತು ಇದು.

ಹೆಚ್ಚುಹೆಚ್ಚು ಮಕ್ಕಳನ್ನು ಹೆರುವ ಮೂಲಕ ಶುದ್ಧ ಆರ್ಯ ಜರ್ಮನ್ ಜನಾಂಗದ ಸಂಖ್ಯೆಯನ್ನು ವೃದ್ಧಿಸಬೇಕೆಂದು ಜರ್ಮನ್ ಮಹಿಳೆಯರ ಮೇಲೆ ಅತೀವ ಒತ್ತಡ ಹೇರಲಾಯಿತು. ಸ್ತ್ರೀವಾದಿ ಆಂದೋಲನವನ್ನು ಹೀಗಳೆಯಲಾಯಿತು. ಮಹಿಳೆಯು ಕೇವಲ ಮಕ್ಕಳ ಹೆರುವ ಯಂತ್ರವಾಗಿ ಮನೆಯ ನಾಲ್ಕು ಗೋಡೆಗಳ ಉಳಿಯಬೇಕೆಂದು ನಿರೀಕ್ಷಿಸಲಾಯಿತು. ಹೆರಲು ಅಸಮರ್ಥರಾದ ಹೆಂಡತಿಯರಿಗೆ ವಿಚ್ಛೇದನ ನೀಡಿ ಯುವತಿಯರನ್ನು ವರಿಸಿ ಮಕ್ಕಳ ಹುಟ್ಟಿಸುವಂತೆ ಜರ್ಮನ್ ಪುರುಷರನ್ನು ಪ್ರೋತ್ಸಾಹಿಸಲಾಯಿತು.

ಜರ್ಮನಿಯಲ್ಲಿ ದಫನ್ ಆದದ್ದು ಹಿಟ್ಲರನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

“Birth, Sex and Abuse: Women`s Vioces Under Nazi Rule’’ ಎಂಬ ಹೆಸರಿನ
ಹೊತ್ತಿಗೆಯೊಂದಿದೆ. ಹೊಟ್ಟೆ ತೊಳಸಿ ಬರುವ ಭಯಾನಕ ಅತ್ಯಾಚಾರಗಳ ವಿವರಗಳಿಂದ ಅದು ತುಂಬಿಹೋಗಿದೆ. ಓದುವುದು ಕಡುಕಠಿಣ. ಡಾ.ಬೀವರ್ಲೀ ಛಾಮರ್ಸ್ ಎಂಬಾಕೆ ಈ ಪುಸ್ತಕದ ಲೇಖಕಿ.

ಯಾತನಾ ಶಿಬಿರಗಳಲ್ಲಿ ಯಹೂದಿ ಮಹಿಳೆಯರ ಮೇಲೆ ನಾಜೀಗಳು ನಡೆಸುವ ಅತ್ಯಾಚಾರಗಳನ್ನೂ, ಅಮಾನುಷ ವೈದ್ಯಕೀಯ ಪ್ರಯೋಗಗಳನ್ನೂ, ಅವರನ್ನು ಸೂಳೆಗಾರಿಕೆಗೆ ಬಳಸಿ ಕೊಲ್ಲುವುದನ್ನೂ ಇಲ್ಲಿ ದಾಖಲಿಸಲಾಗಿದೆ. ಕೌಸರ್ ಬೀಬಿಯ ಬಸಿರನ್ನು ಖಡ್ಗದಿಂದ ಬಗೆದು ಭ್ರೂಣವನ್ನು ಎತ್ತಿ ಹಿಡಿದ ಪೈಶಾಚಿಕತೆಯ ಪೂರ್ವನಿದರ್ಶನಗಳು ಇಲ್ಲಿ ಹೇರಳ.

ಕೋಮು ದಂಗೆಗಳೂ ಸೇರಿದಂತೆ ಚರಿತ್ರೆ ಮತ್ತು ವರ್ತಮಾನ ಕಾಲದ ಧಾರ್ಮಿಕ, ಜನಾಂಗೀಯ, ರಾಜಕೀಯ, ಆರ್ಥಿಕ ಹಿತಾಸಕ್ತಿಯ ಕದನಗಳು, ಯುದ್ಧಗಳಿಗೆ ಲಕ್ಷಲಕ್ಷ ಹೆಣ್ಣು ದೇಹಗಳು ಕದನ ಭೂಮಿಗಳಾಗಿ ಪರಿಣಮಿಸಿದ್ದು ನಾಚಿಕೆಗೇಡಿನ ನಿಜ. ಬುಲ್ಲೀಬಾಯಿ ಸುಲ್ಲೀಡೀಲ್ಸ್ ಹರಾಜಿನ ಅಧಮ ಕೃತ್ಯದ ಹಿಂದೆ ಈ ಬಗೆಯ ಗಂಡಾಳಿಕೆಯೂ ಹೆಡೆಯಾಡಿದೆ.

ಅಪಾಯಕಾರಿ ವ್ಯಾಧಿಯ ನಿಚ್ಚಳ ಲಕ್ಷಣಗಳು ಸಮಕಾಲೀನ ಭಾರತದಲ್ಲಿ ಭುಸುಗುಟ್ಟಿವೆ. ಸೌಹಾರ್ದ ಸಾಮರಸ್ಯದ ಬಹುಮುಖೀ ಸಂಸ್ಕೃತಿಯ ಸಾಮಾಜಿಕ ಹಂದರವನ್ನು ಛಿದ್ರಗೊಳಿಸಿ ದೇಶವನ್ನು ದುರ್ಬಲಗೊಳಿಸುವ ರೋಗದ ಚಿಹ್ನೆಗಳಿವು.

ಈ ರೋಗ ಬಡಿದಿದ್ದ ಜರ್ಮನಿಯು ಕಂಡ ನೀಚಾತಿನೀಚ ನರಮೇಧಗಳ ತಾಜಾ ಉದಾಹರಣೆ ನಮ್ಮ ಕಣ್ಣಮುಂದೆಯೇ ಇದೆ. ಹಗಲು ಕಂಡ ಈ ಭಾವಿಗೆ ರಾತ್ರಿ ಬೀಳತೊಡಗಿದೆ ಭಾರತ.


ಇದನ್ನೂ ಓದಿ: ’ಬುಲ್ಲಿ ಭಾಯ್’ – ಗುಂಪುದಾಳಿ ಮನಸ್ಥಿತಿ ವರ್ಚುವಲ್ ಸ್ಪೇಸ್‌ನೊಳಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...