Homeಮುಖಪುಟ'ದಕ್ಷಿಣದ ಸಿನಿಮಾಗಳೆಂದರೆ ಕೇವಲ KGF, RRR, ಪುಷ್ಪ ಅಷ್ಟೇ ಅಲ್ಲ' ಎಂದು ಬಾಲಿವುಡ್‌ಗೆ ಮನವರಿಕೆ...

‘ದಕ್ಷಿಣದ ಸಿನಿಮಾಗಳೆಂದರೆ ಕೇವಲ KGF, RRR, ಪುಷ್ಪ ಅಷ್ಟೇ ಅಲ್ಲ’ ಎಂದು ಬಾಲಿವುಡ್‌ಗೆ ಮನವರಿಕೆ ಮಾಡುವಲ್ಲಿ‌ ನಾವು ಸೋತೆವೆ?

- Advertisement -
- Advertisement -

‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ ಹೊರತಾಗಿ ಯಶಸ್ವಿ ಸಿನಿಮಾವೆಂದರೆ ಏನೆಂದು ನಾವು ಕೇಳಿಕೊಳ್ಳುವ ಅಗತ್ಯವೂ ಇದೆ. ‘ಪ್ಯಾನ್‌ ಇಂಡಿಯಾ’ ಹಾಗೂ ‘ಹಣ ಗಳಿಕೆ’ಯ ಮಾನದಂಡಗಳಾಚೆಯ ಯಶಸ್ಸುಗಳನ್ನೂ ಮನಗಾಣಬೇಕಿದೆ.

ಬಾಲಿವುಡ್‌ಗೆ ದಕ್ಷಿಣದ ಸಿನಿಮಾಗಳು ಸೆಡ್ಡು ಹೊಡೆದಿವೆ ಎಂಬ ಚರ್ಚೆಗೆ ಬಳಕೆಯಾಗುತ್ತಿರುವ ಈ ಮೂರೂ ಸಿನಿಮಾಗಳು ಏನನ್ನು ಹೇಳಲು ಹೊರಟಿವೆ? ಇವುಗಳ ಯಶಸ್ಸು ಪ್ರತಿನಿಧಿಸುತ್ತಿರುವುದೇನೂ ಎಂಬುದೂ ಮುಖ್ಯವಲ್ಲವೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಪುಷ್ಪ’ ಮಾಫಿಯಾಗಳು ಮೇಲುಗೈ ಸಾಧಿಸುವ ಕಥೆಯುಳ್ಳ ಸಿನಿಮಾ, ಹಿಂದುತ್ವವನ್ನು ಜನರ ತಲೆಯೊಳಗೆ ತರುಕಲು ಯತ್ನಿಸಿರುವ ಸಿನಿಮಾ ‘ಆರ್‌ಆರ್‌ಆರ್‌’, ಬಿಲ್ಡಪ್ ಹಾಗೂ ಹೆಣ್ಣನ್ನು ಸರಕು ಎಂಬಂತೆ ಚಿತ್ರಿಸಿದ ಸಿನಿಮಾ ಕೆಜಿಎಫ್‌. ಇಂಥವುಗಳಿಗೆ ಭಾರೀ ಹಣ ತೆತ್ತು ಸಿನಿಮಾ ನೋಡಿದ ಪ್ರೇಕ್ಷಕ ಬಯಸಿದ್ದಾದರೂ ಏನು? ಇವುಗಳನ್ನೆಲ್ಲ ‘ಮನರಂಜನೆ’ ಎನ್ನಲು ಸಾಧ್ಯವೇ? ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ತಲುಪಿದರೆ ಮುಂಬರುವ ಪ್ರಯೋಗಗಳು ಹೇಗಿರುತ್ತವೆ? ಈ ಮೂರು ಸಿನಿಮಾಗಳಾಚೆಗೆ ದಕ್ಷಿಣ ಭಾರತದ ಚಿತ್ರರಂಗ ಹಿಡಿದಿರುವ ಹೊಸತನದ ಹಾದಿ ಮಸುಕಾಗಿ ಮತ್ತದೇ ಸವಕಲು ಮಾದರಿಗೆ ನಾವು ಹೊರಳುತ್ತೇವೆಯೇ?

ದಕ್ಷಿಣ ಭಾರತದತ್ತ ಬಾಲಿವುಡ್ ತಿರುಗಿ ನೋಡಲೇಬೇಕಾದ ಸಾಕಷ್ಟು ಉತ್ಕೃಷ್ಟ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಬರುತ್ತಿವೆ. ಕೋವಿಡ್ ನಡುವೆ ಬಂದ ‘ಆಕ್ಟ್ 1978’, ‘ಅರಿಷಡ್ವರ್ಗ’ ಕನ್ನಡದ ಮಟ್ಟಿಗೆ ಗುರುತಿಸಬಹುದಾದ ಪ್ರಯೋಗಗಳು. ಆದರೆ ತಮಿಳು ಹಾಗೂ ಮಲಯಾಳಂನಲ್ಲಿ ದೊಡ್ಡ ಪಟ್ಟಿಯೇ ಇವೆ. ‘ಸರಪಟ್ಟ ಪರಂಬರೈ’ ಥರದ ಸಿನಿಮಾ ಓಟಿಟಿಗೆ ಬಂತು. ಅದು ಏನಾದರೂ ಚಿತ್ರಮಂದಿರದಲ್ಲಿ ತೆರೆ ಕಂಡಿದಿದ್ದರೆ ಪ್ರೇಕ್ಷಕನಿಗೆ ಸಿಗುತ್ತಿದ್ದ ಫೀಲ್‌ ಉತ್ಕೃಷ್ಟವಾಗಿರುತ್ತಿತ್ತು. ‘ಸೂರರೈ ಪೊಟ್ರು’ ‘ಜೈ ಭೀಮ್’ ಸಿನಿಮಾಗಳು ಚಿತ್ರಮಂದಿರದಲ್ಲಿ ತೆರೆಕಂಡಿದ್ದರೆ ‘ಪ್ಯಾನ್‌ ಇಂಡಿಯಾ’ ಮಾನದಂಡಕ್ಕೆ ಒಳಪಡುತ್ತಿದ್ದವೇನೋ!

ಇದನ್ನೂ ಓದಿರಿ: ಠಾಣಾಕ್ಕಾರನ್‌: ಬ್ರಿಟಿಷ್‌ ಕಾಲದ ಪೊಲೀಸ್‌ ಪಳೆಯುಳಿಕೆ ಮತ್ತು ವರ್ತಮಾನದ ಕ್ರಾಂತಿ

ಕೋವಿಡ್ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ ಭಾರತೀಯರು ಅತಿ ಹೆಚ್ಚು ನೋಡಿದ್ದು ಮಲಯಾಳಂ ಸಿನಿಮಾಗಳನ್ನು. ದೈತ್ಯ ಕಲಾವಿದ ಫಹಾದ್ ಫಾಸಿಲ್ ಅವರ ‘ಸಿ ಯೂ ಸೂನ್’, ‘ಇರುಳ್’, ‘ಜೋಜಿ’, ‘ಮಾಲಿಕ್’ ಒಟಿಟಿಗೆ ಬಂದವು. ಒಂದು ರೀತಿಯಲ್ಲಿ ಹೇಳುವುದಾದರೆ ಫಾಸಿಲ್, ಓಟಿಟಿಯ ಏಕಚಕ್ರಾಧಿಪತಿಯಂತೆ ಮೆರೆದರು. ಒಟಿಟಿಯಲ್ಲಿ ಬಂದ ‘ನಾಯಟ್ಟು’, ‘ಮಾಲಿಕ್’‌, ‘ಗ್ರೇಟ್ ಇಂಡಿಯನ್‌ ಕಿಚನ್’, ‘ಹೋಮ್’, ‘ಕುರುತಿ’, ‘ದೃಶ್ಯಂ2’ ಮೊದಲಾದ ಸಿನಿಮಾಗಳು ಹೊಸ ಚರ್ಚೆಯನ್ನೇ ಹುಟ್ಟು ಹಾಕಿದವು. ಕೋವಿಡ್‌ ಸೋಂಕಿನ ಭೀತಿಯಿಂದಾಗಿ ಮನೆಯೊಳಗೆ ಕುಳಿತ ಜನರನ್ನು ರಂಜಿಸಿದ್ದು, ಚಿಂತನೆಗೆ ಹಚ್ಚಿದ್ದು ಓಟಿಟಿಯಲ್ಲಿ ಬಂದ ಈ ಸಿನಿಮಾಗಳೆಂದರೆ ತಪ್ಪಾಗದು.

ತಮಿಳಿನಲ್ಲಿ 2021, 2022ನೇ ಇಸವಿಯಲ್ಲಿ ಬಿಡುಗಡೆಯಾದ ‘ಮಂಡೇಲಾ’, ‘ಕರ್ಣನ್’, ‘ಸಾರ್ಪಟ್ಟ ಪರಂಬರೈ’, ‘ಜೈ ಭೀಮ್’, ‘ರೈಟರ್’, ‘ಠಾಣಾಕ್ಕಾರನ್’ ಸಿನಿಮಾಗಳು ಕಥೆ ಹಾಗೂ ಉತ್ಕೃಷ್ಟತೆಯ ದೃಷ್ಟಿಯಿಂದ ಅದ್ಭುತವಾದ ಪ್ರಯೋಗಗಳು. ‘ರೈಟರ್‌’ ಹಾಗೂ ‘ಕರ್ಣನ್’ ಕೆಲಕಾಲ ಥೇಟರ್‌ನಲ್ಲಿಯೂ ಪ್ರದರ್ಶನ ಕಂಡವು.

ಇತ್ತೀಚಿಗೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಈಗ ಒಟಿಟಿಗೂ ಬಂದಿರುವ ‘ಪಡ’ ಎಂಬ ಮಲಯಾಳಂ ಸಿನಿಮಾ ನೈಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಆದಿವಾಸಿಗಳ ಬೆಟ್ಟದಂತ ನೋವಿಗೆ ಕನ್ನಡಿ ಹಿಡಿದಿದೆ. ಅಹಿಂಸಾತ್ಮಕವಾದರೂ ಮಿಲಿಟೆಂಟ್ ಪ್ರತಿರೋಧಕ್ಕೆ ಇಳಿದ ಹೋರಾಟಗಾರರು ಎದುರಿಸಿದ ಪ್ರಭುತ್ವದ ಕಿರುಕುಳವನ್ನು ತೆರೆದಿಟ್ಟಿದೆ.

ಇದನ್ನೂ ಓದಿರಿ: NFDC ಜತೆಗೆ ಇತರ ಸರ್ಕಾರಿ ಸಿನಿಮಾ ಸಂಸ್ಥೆಗಳ ವಿಲೀನ – ಅಪಾಯಗಳೇನು?

ಪೃಥ್ವಿರಾಜ್ ಸುಕುಮಾರನ್‌, ಸೂರಜ್ ವೆಂಜರಮೂಡು ಥರದ ಅದ್ಭುತ ನಟರು ಅಭಿನಯಿಸಿರುವ ‘ಜನಗಣಮನ’ (ಮಲಯಾಳಂ) ಸಿನಿಮಾ ಮೊನ್ನೆಯಷ್ಟೇ ಅಂದರೆ ಏಪ್ರಿಲ್‌ 28ರಂದು ಚಿತ್ರಮಂದಿರಗಳಿಗೆ ಬಂದಿದೆ. ಪ್ರಕರಣವೊಂದರ ಸುತ್ತ ಮಾಧ್ಯಮ ಹಾಗೂ ರಾಜಕಾರಣಿಗಳು ಸೃಷ್ಟಿಸುವ ಸಮೂಹ ಸನ್ನಿ, ವಾಸ್ತವಗಳಿಗೆ ಮಾಬ್‌ ಕುರುಡಾಗುವ ಪರಿಯನ್ನು ಈ ಸಿನಿಮಾ ಮನವರಿಕೆ ಮಾಡಿಕೊಟ್ಟಿದೆ. #FuckFascism ಎನ್ನುವಷ್ಟು ಧೈರ್ಯ ಮಲಯಾಳಿಗರಿಗಿದೆ. ಕ್ಯಾಂಪಸ್‌ಗಳ ಮೇಲೆ ಕೇಸರಿಧಾರಿಗಳು ದಾಳಿ ಮಾಡುತ್ತಿರುವುದರಿಂದ ಶೈಕ್ಷಣಿಕ ಹಾಗೂ ಡೆಮಾಕ್ರಟಿಕ್ ವ್ಯವಸ್ಥೆ ದಮನವಾಗುತ್ತಿರುವ ಸೂಕ್ಷ್ಮಗಳನ್ನು ಕಥೆಯೊಳಗೆ ತರಲಾಗಿದೆ.

ಇಷ್ಟೆಲ್ಲ ಅದ್ಭುತ ಸಿನಿಮಾಗಳು ದಕ್ಷಿಣ ಭಾರತದಲ್ಲಿಯೇ ಕಳೆದೆರಡು ವರ್ಷಗಳಲ್ಲಿ ಬಂದಿವೆ. ಪ್ರಾದೇಶಿಕ ಅಸ್ಮಿತೆಯೊಂದಿಗೆ ಜಾಗತಿಕ ಹಾಗೂ ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಮುಖಾಮುಖಿಯಾಗಿವೆ. ಹೊಸ ಆಲೋಚನೆಯನ್ನು ಹುಟ್ಟಿಹಾಕಿ, ಪ್ರಭುತ್ವದ ಮತೀಯ ತಾರತಮ್ಯವನ್ನು ಪ್ರಶ್ನಿಸಿವೆ. ಹೀಗಿರುವಾಗ ಬಾಲಿವುಡ್‌ v/s ದಕ್ಷಿಣ ಭಾರತದ ಚಿತ್ರರಂಗದ ಚರ್ಚೆಗೆ ಬಳಕೆಯಾಗುತ್ತಿರುವ ಸಿನಿಮಾಗಳ್ಯಾವುವು? ನಮ್ಮಲ್ಲಿ ಅದ್ಬುತ ಪ್ರಯೋಗಗಳು ನಡೆಸುತ್ತಿದ್ದರೂ ನಾವು ಬಾಲಿವುಡ್‌ಗೆ ಚಾಲೆಂಜ್ ಮಾಡುತ್ತಿರುವುದು ಯಾವ ರೀತಿಯ ಸಿನಿಮಾಗಳ ಮೂಲಕ? ನಮ್ಮ‌ ದೃಷ್ಟಿಕೋನ ಬದಲಾಗುವ ಅವಶ್ಯಕತೆ ಇದೆ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಕೆ.ಜಿ.ಎಫ್, ಪುಷ್ಪ, RRR ಸಿನಿಮಾಗಳು ಅದೋಗತಿಗೆ ಇಳಿದಿರುವ ನಮ್ಮ ಸಂವೇದನೆಗಳ ಪ್ರತೀಕ ಅಷ್ಟೆ.

  2. Act 1978, ಅರಿಷಡ್ವರ್ಗ, ಸೂರರೈ ಪೊಟ್ರು, ಜೈ ಭೀಮ್ ಚಿತ್ರ ಸರಿ ಇಲ್ಲ ಅಂತ ಹೇಳಿದವರು ಯಾರು. ಆ ಚಿತ್ರಗಳೂ ಚೆನ್ನಾಗಿವೆ. ಆದರೆ ಭಾರತೀಯ ಚಿತ್ರರಂಗ ಎಂದರೆ ಕೇವಲ ಹಿಂದಿ ಚಿತ್ರಗಳು ಉಳಿದ ಎಲ್ಲಾ ಭಾರತೀಯ ಚಿತ್ರಗಳು ಕೇವಲ ಪ್ರಾದೇಶಿಕ ಚಿತ್ರಗಳು ಎಂಬ ಭ್ರಮೆ, ಭಾರತದೊಳಗೆ ಹಾಗೂ ಭಾರತದ ಆಚೆ ಇದ್ದ ಪರಸ್ಥಿತಿಯಲ್ಲಿ ತೆರೆಕಂಡು ಇಡೀ ಭಾರತೀಯ ಹಾಗೂ ವಿದೇಶಿಯ ಚಿತ್ರರಂಗಗಳು ಕಣ್ಣು ಬಾಯಿ ಬಿಟ್ಟು ನೋಡೋ ಹಾಗೆ ಮಾಡಿದ್ದು rrr, kgf ಸರಣಿ, ಪುಷ್ಪ ಚಿತ್ರಗಳು, ಎಂದರೆ ಯಾವದೇ ಅತಿಶಯೋಕ್ತಿ ಆಗಲಿಕ್ಕಿಲ್ಲ. ಒಂದು ಚಿತ್ರ ಸಾವಿರಾರು ಕೋಟಿ ಗಳಿಸುತ್ತದೆ ಆದರೆ ಅದು ಹಾಲಿವುಡ್ ಚಿತವಾಗಿದ್ದರೆ ಅಂಥ ಚಿತ ಭಾರತೀಯರು ನಿರ್ಮಾಣ ಮಾಡುವದಿಲ್ಲ ಅಂತ ನಾವೇ ಬೊಬ್ಬೆ ಹಾಕ್ತಿವಿ. ಭಾರತೀಯ ,ಅದರಲ್ಲೂ ಸೌತ್ ಚಿತ್ರಗಳು ಆ ಕಮಾಲ್ ಮಾಡಿದರೆ ಅದನ್ನು ಕೂಡ ನಾವು ಸಹಿಸುವದಿಲ್ಲ.. ಇದೇ ನೋಡಿ ಕೆಲವು ವಿಚಾರವಂತರ ಮನೋಸ್ಥಿತಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...