Homeಕರ್ನಾಟಕ`ವೈರಸ್' ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

`ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

- Advertisement -
- Advertisement -

ಈರುಳ್ಳಿ ಬೆಳೆಯುವ ಒಂದೂರ ಕಥೆ

ನನ್ನೂರು ತಾಳಿಕಟ್ಟೆ. ನಿಖರವಾಗಿ ಹೇಳಬೇಕೆಂದರೆ ಇಲ್ಲಿಂದ ಒಂದೂವರೆ ಮೈಲಿ ದೂರಕ್ಕೆ ಟಿಸಿಲೊಡೆದ ಪುಟ್ಟ ಕುಗ್ರಾಮ ನನ್ನೂರಾದರು, ನೂರಿಪ್ಪತ್ತು ಮನೆಗಳಿರುವ ನನ್ನ `ಕಾವಲು’ ತನ್ನ ಅಸ್ತಿತ್ವವನ್ನು ಗುರುತಿಸಿಕೊಳ್ಳೋದು ಹೆಚ್ಚೂಕಮ್ಮಿ ಸಾವಿರ ಮನೆಗಳಿರುವ ಇದೇ ತಾಳಿಕಟ್ಟೆಯ ಮೂಲಕ. ಈ ತಾಳಿಕಟ್ಟೆಯ ಬಗ್ಗೆ, ಈ ಊರಿನ ಸೌಹಾರ್ದ ಪರಂಪರೆಯ ಬಗ್ಗೆ ಇಲ್ಲಿಗೆ ಮೂವತ್ತು ವರ್ಷಗಳ ಹಿಂದೆಯೇ ಲಂಕೇಶ್ ಮೇಷ್ಟ್ರು ತಮ್ಮ ಮರೆಯುವ ಮುನ್ನ ಅಂಕಣದಲ್ಲಿ ಬರೆದಿದ್ದರು. ಕಾಕತಾಳೀಯವೊ ಏನೊ, ಮುಂದೆ ಲಂಕೇಶ್ ಅವರು ಕನ್ನಡದ ಜಾಣಜಾಣೆಯರನ್ನೆ ಮುಂದಿಟ್ಟುಕೊಂಡು `ಪ್ರಗತಿರಂಗ’ ಕಟ್ಟಿದಾಗ ಅದರ ಮೊದಲ ಸಭೆ ನಡೆಸಿದ್ದು ಕೂಡಾ ಇದೇ ತಾಳಿಕಟ್ಟೆಯಲ್ಲಿ. ಇಲ್ಲಿ ಸರ್ ಸೈಯದ್ ಮಹಮದ್ ಇಸ್ಮಾಯಿಲ್ ಖಾದ್ರಿ ಎಂಬ ಸೂಫಿ ಸಂತರ ದರ್ಗಾ ಇದೆ. ಆದರು ಈ ಊರಿನಲ್ಲಿ ಇವತ್ತಿಗು ಒಂದು ಮುಸ್ಲಿಂ ಕುಟುಂಬ ಬಿಟ್ಟರೆ ಎರಡನೆಯ ಮನೆಯಿಲ್ಲ. ಈ ದರ್ಗಾದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳೋದು ಹಿಂದೂಗಳೆ. ವರ್ಷಕ್ಕೊಮ್ಮೆ ನಡೆಯುವ ಉರುಸಿನ ನೇತಾರಿಕೆ ಕೂಡಾ ಇಲ್ಲಿನ ಶೂದ್ರ ಸಮುದಾಯಗಳದ್ದೆ. ಬೇರೆ ಕಡೆಯಿಂದ ಉರುಸಿಗೆಂದು ಬರುವ ಮುಸ್ಲಿಂ ಜನರ ದೇಖರೇಖಿಯನ್ನು ಹಿಂದೂಗಳು ಮುತುವರ್ಜಿಯಿಂದ ನೋಡಿಕೊಳ್ಳುತ್ತಾರೆ.

ಈ ಸೌಹಾರ್ದತೆಯ ಬಗ್ಗೆ ಬರೆಯುತ್ತಾ ಲಂಕೇಶ್ ಮೇಷ್ಟ್ರು `ಜಾತಿ ಜಗಳದಲ್ಲಿ ಮನುಷ್ಯತ್ವವನ್ನೆ ಬಲಿತೆಗೆದುಕೊಳ್ಳುವ ನೀಚರೆಲ್ಲರು ಈ ಊರಿನ ಕುರುಬರಿಂದ ಕಲಿಯಬೇಕು ಎನ್ನುವುದೇ ನನ್ನ ಅನಿಸಿಕೆ’ ಎಂದು ಹೆಮ್ಮೆಯಿಂದ ದಾಖಲಿಸಿದ್ದರು. ಇಂಥಾ ಸೌಹಾರ್ದತೆಗೆ ಹೆಸರಾಗಿದ್ದ ಈ ಊರು, ಇವತ್ತು ದರ್ಗಾಕ್ಕೆ ಬರುವ ಮುಸ್ಲಿಂ ಭಕ್ತರ ಮಾತು ಒತ್ತಟ್ಟಿಗಿರಲಿ, ಮುಸಲ್ಮಾನ ವ್ಯಾಪಾರಿಗಳನ್ನೂ ತನ್ನೊಳಗೆ ಬಿಡಿಸಿಕೊಳ್ಳಬಾರದೆಂಬ ಅಲಿಖಿತ ಫರ್ಮಾನು ಧರಿಸಿಕೊಂಡು ಕೂತಿದೆ. ಮೂಲತಃ ಮನುಷ್ಯನೆ ಅಲ್ಲದ ಕ್ಷುದ್ರ ಕ್ರಿಮಿಯೊಂದು ತಂದೊಡ್ಡುವ ಕೊರೊನಾ ಎಂಬ ರೋಗದಲ್ಲು ಧರ್ಮದ ನಂಜು ಹುಡುಕಿ ಸಮಾಜವನ್ನೆ ಸೋಂಕುಗೊಳಿಸಿದ `ಪುಣ್ಯಾತ್ಮ?ರ ಪ್ರಭಾವಕ್ಕೆ ಈ ಊರಿನ ಸೌಹಾರ್ದತೆಯೂ ಬಲಿಯಾದುದರ ದ್ಯೋತಕ ಇದು.

ಈ ಕುರಿತಂತೆ ನನಗೆ ನನ್ನ ಜನರ ಬಗ್ಗೆ ಬೇಸರವಿಲ್ಲ, ಆಕ್ಷೇಪಗಳೂ ಇಲ್ಲ. ಯಾಕೆಂದರೆ ಈ ಒಂದು ಕಾರಣಕ್ಕೆ ನನ್ನ ಜನ ಸಂಪೂರ್ಣ ಕೋಮುವಾದಿಗಳಾಗಿಬಿಟ್ಟಿದ್ದಾರೆ, ಮೋದಿ ಭಜನಾ ಮಂಡಳಿ ಸೇರಿಕೊಂಡಿದ್ದಾರೆ, ಹೊಸದಾಗಿ ಅಜ್ಞಾನಿಗಳಾಗಿಬಿಟ್ಟಿದ್ದಾರೆ ಎಂದು ಆರೋಪಿಸಲಾರೆ. ಅಜ್ಞಾನ ಮತ್ತು ಮುಗ್ಧತೆ, ಇವೆರಡೂ ನಮ್ಮ ಜನರ ನಿತ್ಯಾಚರಣೆಗಳು. ಅವಕಾಶ ತಮ್ಮ ಕೈಯಲ್ಲಿದ್ದಾಗ ವಿವೇಕವನ್ನು ಜನರಿಗೆ ತಲುಪಿಸುವ ಹೊಣೆಯನ್ನು ಸಮರ್ಪಕವಾಗಿ ನಿಭಾಯಿಸಲಾಗದ ಈ ದೇಶದ ಜಾತ್ಯತೀತ ವಾರಸುದಾರರು ಇವತ್ತು ಇಂಥಾ ಘಟನೆಗಳನ್ನು ನೆಪ ಮಾಡಿಕೊಂಡು `ಜನ’ರನ್ನು ದೂಷಿಸುವುದರ ಬಗ್ಗೆ ನನಗೆ ಅನೇಕ ಆಕ್ಷೇಪಣೆಗಳಿವೆ. ವಾಸ್ತವಗಳನ್ನು ಧಿಕ್ಕರಿಸಿ ಆದರ್ಶಗಳನ್ನು ಕಟ್ಟಲಾಗುವುದಿಲ್ಲ!

ಇಷ್ಟೆಲ್ಲ ಬದಲಾದ ನಮ್ಮ ಜನ ಮುಂದಿನ ವರ್ಷದಿಂದ ಉರುಸ್ ನಿಲ್ಲಿಸಿಬಿಡುತ್ತಾರೆಯೇ? ಖಂಡಿತ ಇಲ್ಲ. ಯಾಕೆಂದರೆ ಪ್ರತಿವರ್ಷ ತಾವು ಆಚರಿಸುವ ಗುಳ್ಳಮ್ಮ, ಬೀರಪ್ಪ ದೇವರುಗಳ ಉತ್ಸವದಷ್ಟೆ ಕಟಿಬದ್ಧರಾಗಿ ಆ ಉರುಸ್ ನಡೆಸುತ್ತಾರೆ. ಅದು ಅವರಿಗೆ ತಮ್ಮದೇ ಎನ್ನುವಷ್ಟು ಸಹಜವಾಗಿ ಒಗ್ಗಿಹೋಗಿದೆ. ಆದರು ಸಂದರ್ಭ ಮತ್ತು ಸಮೂಹಸನ್ನಿಗೆ ದನಿಗೂಡಿಸುವ ದೌರ್ಬಲ್ಯಕ್ಕೆ ಜನ ಮಾರುಹೋಗಿದ್ದಾರೆ. ನಾವಿಲ್ಲಿ ದೂಷಿಸಲೇಬೇಕೆಂದಿದ್ದರೆ ಅದು ಜನರನ್ನಲ್ಲ, ಸ್ವತಃ ಸೌಹಾರ್ದತೆ ಸ್ವಭಾವದ ನಮ್ಮ ಜನರನ್ನು ಅದಕ್ಕೆ ಕಮಿಟ್ ಮಾಡಿಸುವಲ್ಲಿ ಸೋತುಹೋದ ಇಷ್ಟುದಿನಗಳ ಅಧಿಕಾರಸ್ಥ-ಹೋರಾಟನಿರತ ಜಾತ್ಯತೀತ ವಾರಸುದಾರರನ್ನು ಮತ್ತು ಈ ವಾರಸುದಾರರ ಲೋಪಗಳ ಲಾಭ ಪಡೆದು ಕೋಮುಸನ್ನಿಗಳನ್ನು ಹುಟ್ಟುಹಾಕುತ್ತಿರುವ ಮನುಷ್ಯ ಕ್ರಿಮಿಗಳನ್ನು.

ಕೇವಲ ವಿಚಾರವಂತಿಕೆಗಷ್ಟೆ ಅಲ್ಲ, ಆರ್ಥಿಕತೆಯಲ್ಲು ನಮ್ಮ ಜನ ಇಂಥಾ ಸನ್ನಿಗಳಿಂದಾಗಿ ದೊಡ್ಡ ಗೊಂದಲಕ್ಕೆ ಬಿದ್ದಿದ್ದಾರೆ. ಫಲವತ್ತಾದ ಕಪ್ಪುಮಣ್ಣು ಹೊಂದಿರುವ ನಮ್ಮ ಜನರಿಗೆ ಈರುಳ್ಳಿಯೆ ಪ್ರಧಾನ ಆರ್ಥಿಕ ಬೆಳೆ. ಹೊಲಗಳನ್ನು ಅಣಿಗೊಳಿಸಿಕೊಂಡು ಕೂತಿರುವ ಜನ, ಒಂದೆರಡು ಮಳೆ ಬಿದ್ದು ನೆಲ ಹಸನಾದರೆ ಬಿತ್ತನೆಗೆ ದಿನ ಎಣಿಸುತ್ತಿದ್ದಾರೆ. ಸಾಬರ ಮೇಲಿನ ಈ ಅಘೋಷಿತ ಸಮೂಹಸನ್ನಿಯಂತಹ ಗ್ರಾಮೀಣ ನಿಷೇಧ ಈಗ ಅವರನ್ನು ದೊಡ್ಡ ಸಂಕಟಕ್ಕೆ ತಳ್ಳಿದೆ. ಬೆಳೆದ ಈರುಳ್ಳಿಯನ್ನು ಬೆಂಗಳೂರಿಗೊ, ಹಾಸನಕ್ಕೊ ತಂದು ಮಾರಾಟ ಮಾಡುವ ಪರಿಪಾಟ ಇದೆಯಾದರು, ಈರುಳ್ಳಿ ರೇಟು ಕುಸಿದಂತಹ ಸಂದರ್ಭದಲ್ಲಿ ನಮ್ಮೂರಿನ ರೈತರಿಗೆ ಆಸರೆಯಾಗಿ ನಿಲ್ಲೋದು `ಈರುಳ್ಳಿ ಸಾಬರು’. ಹತ್ತಿರದ ಪಟ್ಟಣಗಳ ಮುಸ್ಲಿಂ ವರ್ತಕರು ಮನೆ ಬಾಗಿಲಿಗೇ ಬಂದು ಒಂದಷ್ಟು ಚೌಕಾಸಿ ನಡೆಸಿ, ಚೂರು ಲಾಭವನ್ನೂ ಇಟ್ಟುಕೊಂಡು ಲೋಡುಗಟ್ಟಲೆ ಈರುಳ್ಳಿ ಖರೀದಿಸಿ ಒಯ್ಯುತ್ತಾರೆ. ಮೊದಲೇ ರೇಟು ಕಡಿಮೆ ಇರುವಾಗ ಖಾಲಿ ಚೀಲ, ಹಮಾಲಿ ಮತ್ತು ಲಾರಿ ಬಾಡಿಗೆಯಂತಹ ಹೆಚ್ಚಿನ ಹೊರೆ ತಪ್ಪಿಸಿಕೊಳ್ಳಲು ಜನ ಈರುಳ್ಳಿ ಸಾಬರಿಗೇ ತಮ್ಮ ಬೆಳೆ ಮಾರಾಟ ಮಾಡಿ ಕೈತೊಳೆದುಕೊಳ್ಳುತ್ತಾರೆ.

ಆದರೆ ಈ ಸಲ ಕೊರೊನಾ ಕಾಯಿಲೆ ಯಾವಾಗ ಸಂಪೂರ್ಣ ಸಮಾಪ್ತಿಯಾಗುತ್ತೆ ಎಂಬ ಖಾತ್ರಿಯಿಲ್ಲ. ಕಳೆದ ಸಲವೇ ಆರಂಭದಲ್ಲಿ ಒಳ್ಳೆಯ ಬೆಲೆ ಸಿಕ್ಕರು, ಆಮೇಲೆ ಏಕಾಏಕಿ ರೇಟು ಕುಸಿದು ಕಣ್ಣೀರಿಟ್ಟ ರೈತರು ಸಾಕಷ್ಟಿದ್ದಾರೆ. ಕೊರೊನಾ ಕಾರಣದಿಂದ ಹೊರ ದೇಶಕ್ಕೆ ಈರುಳ್ಳಿ ಎಕ್ಸ್ಪೋರ್ಟ್ ಅನುಮತಿ ಸಿಗದೆ ಹೋದರೆ ರೇಟು ಕೈಗತ್ತುವುದಿಲ್ಲ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಅಂಥಾ ಹೊತ್ತಲ್ಲಿ ಸಾಬರಿಗು ನಾವು ಹೀಗೆ ನಿಷೇಧ ಹೇರಿಕೊಂಡು ಕೂತರೆ ಈರುಳ್ಳಿಯ ಗತಿಯೇನು? ಎಂಬ ಚಿಂತೆಯೂ ಇದೇ ಜನರನ್ನು ಕಾಡುತ್ತಿದೆ. ಬೇರೆ ಬೆಳೆಗಳಂತೆ ಈರುಳ್ಳಿಯನ್ನು ದಾಸ್ತಾನು ಇಡಲಾಗದು.

ಬಿದ್ದ ಆರ್ಥಿಕತೆ, ಕುಂಠಿತಗೊಂಡ ಕೃಷಿ ಚಟುವಟಿಕೆಯಿಂದಾಗಿ ಈರುಳ್ಳಿ ಬೀಜಗಳು ಹಿಂದೆಂದು ಕಂಡರಿಯದಷ್ಟು ದುಬಾರಿಯಾಗಿವೆ. ಪ್ರತಿ ಸೇರಿಗೆ ಏಳುನೂರರಿಂದ ಎಂಟುನೂರು ರೂಪಾಯಿ ಇರುತ್ತಿದ್ದ ಬೀಜ, ಈಗಾಗಲೆ ಒಂದು ಸಾವಿರದ ಮುನ್ನೂರರಿಂದ ಒಂದೂವರೆ ಸಾವಿರ ರೂಪಾಯಿಯಾಗಿದೆ. ಬಿತ್ತನೆ ಕಾಲ ಸಮೀಪಿಸಿದಂತೆ ಅದು ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಈ ಸಲ ಕೃಷಿ ಚಟುವಟಿಕೆಯ ಇನ್ನಿತರೆ ಖರ್ಚೂ ದುಬಾರಿಯಾಗುವ ಸಾಧ್ಯತೆ ಇದೆ. ಹೀಗೆ ಎಕರೆಗೆ ಮೂವತ್ತರಿಂದ ನಲವತ್ತು ಸಾವಿರ ಖರ್ಚು ಮಾಡಿ ಕೊಳ್ಳುವವರೇ ಇಲ್ಲವಾದರೆ ಏನು ಗತಿ? ಎಂಬ ಆತಂಕವೂ ಇದೇ ಜನರನ್ನು ಕಾಡುತ್ತಿದೆ.

ಇದು ಕೇವಲ ಒಂದು ಊರಿನ ಕಥೆಯಲ್ಲ. ಹಿಂದೂಗಳು ಮಾತ್ರವಲ್ಲದೇ ಮುಸಲ್ಮಾನರು, ಸಿಖ್ಖರು, ಪಾರಸಿಗಳು, ಜೈನರು, ಬೌದ್ಧರು, ಕಿರಸ್ತಾನರು ಹೀಗೆ ಎಲ್ಲಾ ಧರ್ಮ ವರ್ಗಗಳನ್ನು ತನ್ನವರೆಂದು ಭಾವಿಸಿರುವ ಈ ನಮ್ಮ ದೇಶ ಈ ಎಲ್ಲರ ಆರ್ಥಿಕ ಪಾಲುದಾರಿಕೆಯಿಂದ ತನ್ನ ಆರ್ಥಿಕಶಕ್ತಿಯನ್ನು ಅರ್ಥಾತ್ ಜಿಡಿಪಿಯನ್ನು ಸೃಷ್ಟಿಸಿಕೊಂಡಿದೆ. ಇದೊಂಥರ ಆರ್ಥಿಕ ಸರಪಳಿಯಿದ್ದಂತೆ. ಯಾವುದೊ ರಾಜಕೀಯ ಅಥವಾ ಸೈದ್ದಾಂತಿಕ ದುರುದ್ದೇಶಕ್ಕಾಗಿ ಇವರಲ್ಲಿ ಒಬ್ಬರನ್ನು ಹೊರಗಿಡುವ ಹುನ್ನಾರ ನಡೆಸಿದರು, ಇಡೀ ಆರ್ಥಿಕ ಚಕ್ರವೆ ಕೊಂಡಿ ಕಳಚಿಕೊಂಡ ಸರಪಳಿಯಂತೆ ಅಸ್ತವ್ಯಸ್ತವಾಗಿ ಬಿದ್ದುಹೋಗುತ್ತೆ. ನನ್ನೂರು ಅನುಭವಿಸುತ್ತಿರುವ ಗೊಂದಲ ಇದಕ್ಕೊಂದು ನಿದರ್ಶನವಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is baseless. You haven’t addressed other problems happening around us. Our country remains secular only till Hindu’s are in majority. Please look at what happened in Pak and Bangladesh or even in West Bengal.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...