Homeಕರ್ನಾಟಕ`ವೈರಸ್' ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

`ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

- Advertisement -
- Advertisement -

ಈರುಳ್ಳಿ ಬೆಳೆಯುವ ಒಂದೂರ ಕಥೆ

ನನ್ನೂರು ತಾಳಿಕಟ್ಟೆ. ನಿಖರವಾಗಿ ಹೇಳಬೇಕೆಂದರೆ ಇಲ್ಲಿಂದ ಒಂದೂವರೆ ಮೈಲಿ ದೂರಕ್ಕೆ ಟಿಸಿಲೊಡೆದ ಪುಟ್ಟ ಕುಗ್ರಾಮ ನನ್ನೂರಾದರು, ನೂರಿಪ್ಪತ್ತು ಮನೆಗಳಿರುವ ನನ್ನ `ಕಾವಲು’ ತನ್ನ ಅಸ್ತಿತ್ವವನ್ನು ಗುರುತಿಸಿಕೊಳ್ಳೋದು ಹೆಚ್ಚೂಕಮ್ಮಿ ಸಾವಿರ ಮನೆಗಳಿರುವ ಇದೇ ತಾಳಿಕಟ್ಟೆಯ ಮೂಲಕ. ಈ ತಾಳಿಕಟ್ಟೆಯ ಬಗ್ಗೆ, ಈ ಊರಿನ ಸೌಹಾರ್ದ ಪರಂಪರೆಯ ಬಗ್ಗೆ ಇಲ್ಲಿಗೆ ಮೂವತ್ತು ವರ್ಷಗಳ ಹಿಂದೆಯೇ ಲಂಕೇಶ್ ಮೇಷ್ಟ್ರು ತಮ್ಮ ಮರೆಯುವ ಮುನ್ನ ಅಂಕಣದಲ್ಲಿ ಬರೆದಿದ್ದರು. ಕಾಕತಾಳೀಯವೊ ಏನೊ, ಮುಂದೆ ಲಂಕೇಶ್ ಅವರು ಕನ್ನಡದ ಜಾಣಜಾಣೆಯರನ್ನೆ ಮುಂದಿಟ್ಟುಕೊಂಡು `ಪ್ರಗತಿರಂಗ’ ಕಟ್ಟಿದಾಗ ಅದರ ಮೊದಲ ಸಭೆ ನಡೆಸಿದ್ದು ಕೂಡಾ ಇದೇ ತಾಳಿಕಟ್ಟೆಯಲ್ಲಿ. ಇಲ್ಲಿ ಸರ್ ಸೈಯದ್ ಮಹಮದ್ ಇಸ್ಮಾಯಿಲ್ ಖಾದ್ರಿ ಎಂಬ ಸೂಫಿ ಸಂತರ ದರ್ಗಾ ಇದೆ. ಆದರು ಈ ಊರಿನಲ್ಲಿ ಇವತ್ತಿಗು ಒಂದು ಮುಸ್ಲಿಂ ಕುಟುಂಬ ಬಿಟ್ಟರೆ ಎರಡನೆಯ ಮನೆಯಿಲ್ಲ. ಈ ದರ್ಗಾದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳೋದು ಹಿಂದೂಗಳೆ. ವರ್ಷಕ್ಕೊಮ್ಮೆ ನಡೆಯುವ ಉರುಸಿನ ನೇತಾರಿಕೆ ಕೂಡಾ ಇಲ್ಲಿನ ಶೂದ್ರ ಸಮುದಾಯಗಳದ್ದೆ. ಬೇರೆ ಕಡೆಯಿಂದ ಉರುಸಿಗೆಂದು ಬರುವ ಮುಸ್ಲಿಂ ಜನರ ದೇಖರೇಖಿಯನ್ನು ಹಿಂದೂಗಳು ಮುತುವರ್ಜಿಯಿಂದ ನೋಡಿಕೊಳ್ಳುತ್ತಾರೆ.

ಈ ಸೌಹಾರ್ದತೆಯ ಬಗ್ಗೆ ಬರೆಯುತ್ತಾ ಲಂಕೇಶ್ ಮೇಷ್ಟ್ರು `ಜಾತಿ ಜಗಳದಲ್ಲಿ ಮನುಷ್ಯತ್ವವನ್ನೆ ಬಲಿತೆಗೆದುಕೊಳ್ಳುವ ನೀಚರೆಲ್ಲರು ಈ ಊರಿನ ಕುರುಬರಿಂದ ಕಲಿಯಬೇಕು ಎನ್ನುವುದೇ ನನ್ನ ಅನಿಸಿಕೆ’ ಎಂದು ಹೆಮ್ಮೆಯಿಂದ ದಾಖಲಿಸಿದ್ದರು. ಇಂಥಾ ಸೌಹಾರ್ದತೆಗೆ ಹೆಸರಾಗಿದ್ದ ಈ ಊರು, ಇವತ್ತು ದರ್ಗಾಕ್ಕೆ ಬರುವ ಮುಸ್ಲಿಂ ಭಕ್ತರ ಮಾತು ಒತ್ತಟ್ಟಿಗಿರಲಿ, ಮುಸಲ್ಮಾನ ವ್ಯಾಪಾರಿಗಳನ್ನೂ ತನ್ನೊಳಗೆ ಬಿಡಿಸಿಕೊಳ್ಳಬಾರದೆಂಬ ಅಲಿಖಿತ ಫರ್ಮಾನು ಧರಿಸಿಕೊಂಡು ಕೂತಿದೆ. ಮೂಲತಃ ಮನುಷ್ಯನೆ ಅಲ್ಲದ ಕ್ಷುದ್ರ ಕ್ರಿಮಿಯೊಂದು ತಂದೊಡ್ಡುವ ಕೊರೊನಾ ಎಂಬ ರೋಗದಲ್ಲು ಧರ್ಮದ ನಂಜು ಹುಡುಕಿ ಸಮಾಜವನ್ನೆ ಸೋಂಕುಗೊಳಿಸಿದ `ಪುಣ್ಯಾತ್ಮ?ರ ಪ್ರಭಾವಕ್ಕೆ ಈ ಊರಿನ ಸೌಹಾರ್ದತೆಯೂ ಬಲಿಯಾದುದರ ದ್ಯೋತಕ ಇದು.

ಈ ಕುರಿತಂತೆ ನನಗೆ ನನ್ನ ಜನರ ಬಗ್ಗೆ ಬೇಸರವಿಲ್ಲ, ಆಕ್ಷೇಪಗಳೂ ಇಲ್ಲ. ಯಾಕೆಂದರೆ ಈ ಒಂದು ಕಾರಣಕ್ಕೆ ನನ್ನ ಜನ ಸಂಪೂರ್ಣ ಕೋಮುವಾದಿಗಳಾಗಿಬಿಟ್ಟಿದ್ದಾರೆ, ಮೋದಿ ಭಜನಾ ಮಂಡಳಿ ಸೇರಿಕೊಂಡಿದ್ದಾರೆ, ಹೊಸದಾಗಿ ಅಜ್ಞಾನಿಗಳಾಗಿಬಿಟ್ಟಿದ್ದಾರೆ ಎಂದು ಆರೋಪಿಸಲಾರೆ. ಅಜ್ಞಾನ ಮತ್ತು ಮುಗ್ಧತೆ, ಇವೆರಡೂ ನಮ್ಮ ಜನರ ನಿತ್ಯಾಚರಣೆಗಳು. ಅವಕಾಶ ತಮ್ಮ ಕೈಯಲ್ಲಿದ್ದಾಗ ವಿವೇಕವನ್ನು ಜನರಿಗೆ ತಲುಪಿಸುವ ಹೊಣೆಯನ್ನು ಸಮರ್ಪಕವಾಗಿ ನಿಭಾಯಿಸಲಾಗದ ಈ ದೇಶದ ಜಾತ್ಯತೀತ ವಾರಸುದಾರರು ಇವತ್ತು ಇಂಥಾ ಘಟನೆಗಳನ್ನು ನೆಪ ಮಾಡಿಕೊಂಡು `ಜನ’ರನ್ನು ದೂಷಿಸುವುದರ ಬಗ್ಗೆ ನನಗೆ ಅನೇಕ ಆಕ್ಷೇಪಣೆಗಳಿವೆ. ವಾಸ್ತವಗಳನ್ನು ಧಿಕ್ಕರಿಸಿ ಆದರ್ಶಗಳನ್ನು ಕಟ್ಟಲಾಗುವುದಿಲ್ಲ!

ಇಷ್ಟೆಲ್ಲ ಬದಲಾದ ನಮ್ಮ ಜನ ಮುಂದಿನ ವರ್ಷದಿಂದ ಉರುಸ್ ನಿಲ್ಲಿಸಿಬಿಡುತ್ತಾರೆಯೇ? ಖಂಡಿತ ಇಲ್ಲ. ಯಾಕೆಂದರೆ ಪ್ರತಿವರ್ಷ ತಾವು ಆಚರಿಸುವ ಗುಳ್ಳಮ್ಮ, ಬೀರಪ್ಪ ದೇವರುಗಳ ಉತ್ಸವದಷ್ಟೆ ಕಟಿಬದ್ಧರಾಗಿ ಆ ಉರುಸ್ ನಡೆಸುತ್ತಾರೆ. ಅದು ಅವರಿಗೆ ತಮ್ಮದೇ ಎನ್ನುವಷ್ಟು ಸಹಜವಾಗಿ ಒಗ್ಗಿಹೋಗಿದೆ. ಆದರು ಸಂದರ್ಭ ಮತ್ತು ಸಮೂಹಸನ್ನಿಗೆ ದನಿಗೂಡಿಸುವ ದೌರ್ಬಲ್ಯಕ್ಕೆ ಜನ ಮಾರುಹೋಗಿದ್ದಾರೆ. ನಾವಿಲ್ಲಿ ದೂಷಿಸಲೇಬೇಕೆಂದಿದ್ದರೆ ಅದು ಜನರನ್ನಲ್ಲ, ಸ್ವತಃ ಸೌಹಾರ್ದತೆ ಸ್ವಭಾವದ ನಮ್ಮ ಜನರನ್ನು ಅದಕ್ಕೆ ಕಮಿಟ್ ಮಾಡಿಸುವಲ್ಲಿ ಸೋತುಹೋದ ಇಷ್ಟುದಿನಗಳ ಅಧಿಕಾರಸ್ಥ-ಹೋರಾಟನಿರತ ಜಾತ್ಯತೀತ ವಾರಸುದಾರರನ್ನು ಮತ್ತು ಈ ವಾರಸುದಾರರ ಲೋಪಗಳ ಲಾಭ ಪಡೆದು ಕೋಮುಸನ್ನಿಗಳನ್ನು ಹುಟ್ಟುಹಾಕುತ್ತಿರುವ ಮನುಷ್ಯ ಕ್ರಿಮಿಗಳನ್ನು.

ಕೇವಲ ವಿಚಾರವಂತಿಕೆಗಷ್ಟೆ ಅಲ್ಲ, ಆರ್ಥಿಕತೆಯಲ್ಲು ನಮ್ಮ ಜನ ಇಂಥಾ ಸನ್ನಿಗಳಿಂದಾಗಿ ದೊಡ್ಡ ಗೊಂದಲಕ್ಕೆ ಬಿದ್ದಿದ್ದಾರೆ. ಫಲವತ್ತಾದ ಕಪ್ಪುಮಣ್ಣು ಹೊಂದಿರುವ ನಮ್ಮ ಜನರಿಗೆ ಈರುಳ್ಳಿಯೆ ಪ್ರಧಾನ ಆರ್ಥಿಕ ಬೆಳೆ. ಹೊಲಗಳನ್ನು ಅಣಿಗೊಳಿಸಿಕೊಂಡು ಕೂತಿರುವ ಜನ, ಒಂದೆರಡು ಮಳೆ ಬಿದ್ದು ನೆಲ ಹಸನಾದರೆ ಬಿತ್ತನೆಗೆ ದಿನ ಎಣಿಸುತ್ತಿದ್ದಾರೆ. ಸಾಬರ ಮೇಲಿನ ಈ ಅಘೋಷಿತ ಸಮೂಹಸನ್ನಿಯಂತಹ ಗ್ರಾಮೀಣ ನಿಷೇಧ ಈಗ ಅವರನ್ನು ದೊಡ್ಡ ಸಂಕಟಕ್ಕೆ ತಳ್ಳಿದೆ. ಬೆಳೆದ ಈರುಳ್ಳಿಯನ್ನು ಬೆಂಗಳೂರಿಗೊ, ಹಾಸನಕ್ಕೊ ತಂದು ಮಾರಾಟ ಮಾಡುವ ಪರಿಪಾಟ ಇದೆಯಾದರು, ಈರುಳ್ಳಿ ರೇಟು ಕುಸಿದಂತಹ ಸಂದರ್ಭದಲ್ಲಿ ನಮ್ಮೂರಿನ ರೈತರಿಗೆ ಆಸರೆಯಾಗಿ ನಿಲ್ಲೋದು `ಈರುಳ್ಳಿ ಸಾಬರು’. ಹತ್ತಿರದ ಪಟ್ಟಣಗಳ ಮುಸ್ಲಿಂ ವರ್ತಕರು ಮನೆ ಬಾಗಿಲಿಗೇ ಬಂದು ಒಂದಷ್ಟು ಚೌಕಾಸಿ ನಡೆಸಿ, ಚೂರು ಲಾಭವನ್ನೂ ಇಟ್ಟುಕೊಂಡು ಲೋಡುಗಟ್ಟಲೆ ಈರುಳ್ಳಿ ಖರೀದಿಸಿ ಒಯ್ಯುತ್ತಾರೆ. ಮೊದಲೇ ರೇಟು ಕಡಿಮೆ ಇರುವಾಗ ಖಾಲಿ ಚೀಲ, ಹಮಾಲಿ ಮತ್ತು ಲಾರಿ ಬಾಡಿಗೆಯಂತಹ ಹೆಚ್ಚಿನ ಹೊರೆ ತಪ್ಪಿಸಿಕೊಳ್ಳಲು ಜನ ಈರುಳ್ಳಿ ಸಾಬರಿಗೇ ತಮ್ಮ ಬೆಳೆ ಮಾರಾಟ ಮಾಡಿ ಕೈತೊಳೆದುಕೊಳ್ಳುತ್ತಾರೆ.

ಆದರೆ ಈ ಸಲ ಕೊರೊನಾ ಕಾಯಿಲೆ ಯಾವಾಗ ಸಂಪೂರ್ಣ ಸಮಾಪ್ತಿಯಾಗುತ್ತೆ ಎಂಬ ಖಾತ್ರಿಯಿಲ್ಲ. ಕಳೆದ ಸಲವೇ ಆರಂಭದಲ್ಲಿ ಒಳ್ಳೆಯ ಬೆಲೆ ಸಿಕ್ಕರು, ಆಮೇಲೆ ಏಕಾಏಕಿ ರೇಟು ಕುಸಿದು ಕಣ್ಣೀರಿಟ್ಟ ರೈತರು ಸಾಕಷ್ಟಿದ್ದಾರೆ. ಕೊರೊನಾ ಕಾರಣದಿಂದ ಹೊರ ದೇಶಕ್ಕೆ ಈರುಳ್ಳಿ ಎಕ್ಸ್ಪೋರ್ಟ್ ಅನುಮತಿ ಸಿಗದೆ ಹೋದರೆ ರೇಟು ಕೈಗತ್ತುವುದಿಲ್ಲ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಅಂಥಾ ಹೊತ್ತಲ್ಲಿ ಸಾಬರಿಗು ನಾವು ಹೀಗೆ ನಿಷೇಧ ಹೇರಿಕೊಂಡು ಕೂತರೆ ಈರುಳ್ಳಿಯ ಗತಿಯೇನು? ಎಂಬ ಚಿಂತೆಯೂ ಇದೇ ಜನರನ್ನು ಕಾಡುತ್ತಿದೆ. ಬೇರೆ ಬೆಳೆಗಳಂತೆ ಈರುಳ್ಳಿಯನ್ನು ದಾಸ್ತಾನು ಇಡಲಾಗದು.

ಬಿದ್ದ ಆರ್ಥಿಕತೆ, ಕುಂಠಿತಗೊಂಡ ಕೃಷಿ ಚಟುವಟಿಕೆಯಿಂದಾಗಿ ಈರುಳ್ಳಿ ಬೀಜಗಳು ಹಿಂದೆಂದು ಕಂಡರಿಯದಷ್ಟು ದುಬಾರಿಯಾಗಿವೆ. ಪ್ರತಿ ಸೇರಿಗೆ ಏಳುನೂರರಿಂದ ಎಂಟುನೂರು ರೂಪಾಯಿ ಇರುತ್ತಿದ್ದ ಬೀಜ, ಈಗಾಗಲೆ ಒಂದು ಸಾವಿರದ ಮುನ್ನೂರರಿಂದ ಒಂದೂವರೆ ಸಾವಿರ ರೂಪಾಯಿಯಾಗಿದೆ. ಬಿತ್ತನೆ ಕಾಲ ಸಮೀಪಿಸಿದಂತೆ ಅದು ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಈ ಸಲ ಕೃಷಿ ಚಟುವಟಿಕೆಯ ಇನ್ನಿತರೆ ಖರ್ಚೂ ದುಬಾರಿಯಾಗುವ ಸಾಧ್ಯತೆ ಇದೆ. ಹೀಗೆ ಎಕರೆಗೆ ಮೂವತ್ತರಿಂದ ನಲವತ್ತು ಸಾವಿರ ಖರ್ಚು ಮಾಡಿ ಕೊಳ್ಳುವವರೇ ಇಲ್ಲವಾದರೆ ಏನು ಗತಿ? ಎಂಬ ಆತಂಕವೂ ಇದೇ ಜನರನ್ನು ಕಾಡುತ್ತಿದೆ.

ಇದು ಕೇವಲ ಒಂದು ಊರಿನ ಕಥೆಯಲ್ಲ. ಹಿಂದೂಗಳು ಮಾತ್ರವಲ್ಲದೇ ಮುಸಲ್ಮಾನರು, ಸಿಖ್ಖರು, ಪಾರಸಿಗಳು, ಜೈನರು, ಬೌದ್ಧರು, ಕಿರಸ್ತಾನರು ಹೀಗೆ ಎಲ್ಲಾ ಧರ್ಮ ವರ್ಗಗಳನ್ನು ತನ್ನವರೆಂದು ಭಾವಿಸಿರುವ ಈ ನಮ್ಮ ದೇಶ ಈ ಎಲ್ಲರ ಆರ್ಥಿಕ ಪಾಲುದಾರಿಕೆಯಿಂದ ತನ್ನ ಆರ್ಥಿಕಶಕ್ತಿಯನ್ನು ಅರ್ಥಾತ್ ಜಿಡಿಪಿಯನ್ನು ಸೃಷ್ಟಿಸಿಕೊಂಡಿದೆ. ಇದೊಂಥರ ಆರ್ಥಿಕ ಸರಪಳಿಯಿದ್ದಂತೆ. ಯಾವುದೊ ರಾಜಕೀಯ ಅಥವಾ ಸೈದ್ದಾಂತಿಕ ದುರುದ್ದೇಶಕ್ಕಾಗಿ ಇವರಲ್ಲಿ ಒಬ್ಬರನ್ನು ಹೊರಗಿಡುವ ಹುನ್ನಾರ ನಡೆಸಿದರು, ಇಡೀ ಆರ್ಥಿಕ ಚಕ್ರವೆ ಕೊಂಡಿ ಕಳಚಿಕೊಂಡ ಸರಪಳಿಯಂತೆ ಅಸ್ತವ್ಯಸ್ತವಾಗಿ ಬಿದ್ದುಹೋಗುತ್ತೆ. ನನ್ನೂರು ಅನುಭವಿಸುತ್ತಿರುವ ಗೊಂದಲ ಇದಕ್ಕೊಂದು ನಿದರ್ಶನವಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is baseless. You haven’t addressed other problems happening around us. Our country remains secular only till Hindu’s are in majority. Please look at what happened in Pak and Bangladesh or even in West Bengal.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...