Homeಕರ್ನಾಟಕ`ವೈರಸ್' ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

`ವೈರಸ್’ ಕಾರಣಕ್ಕೆ ಹೊರಗಿಟ್ಟ ಸಾಬರನ್ನು ಬಿಟ್ಟು ಬದುಕೀತೇ ನಮ್ಮೂರು?

- Advertisement -
- Advertisement -

ಈರುಳ್ಳಿ ಬೆಳೆಯುವ ಒಂದೂರ ಕಥೆ

ನನ್ನೂರು ತಾಳಿಕಟ್ಟೆ. ನಿಖರವಾಗಿ ಹೇಳಬೇಕೆಂದರೆ ಇಲ್ಲಿಂದ ಒಂದೂವರೆ ಮೈಲಿ ದೂರಕ್ಕೆ ಟಿಸಿಲೊಡೆದ ಪುಟ್ಟ ಕುಗ್ರಾಮ ನನ್ನೂರಾದರು, ನೂರಿಪ್ಪತ್ತು ಮನೆಗಳಿರುವ ನನ್ನ `ಕಾವಲು’ ತನ್ನ ಅಸ್ತಿತ್ವವನ್ನು ಗುರುತಿಸಿಕೊಳ್ಳೋದು ಹೆಚ್ಚೂಕಮ್ಮಿ ಸಾವಿರ ಮನೆಗಳಿರುವ ಇದೇ ತಾಳಿಕಟ್ಟೆಯ ಮೂಲಕ. ಈ ತಾಳಿಕಟ್ಟೆಯ ಬಗ್ಗೆ, ಈ ಊರಿನ ಸೌಹಾರ್ದ ಪರಂಪರೆಯ ಬಗ್ಗೆ ಇಲ್ಲಿಗೆ ಮೂವತ್ತು ವರ್ಷಗಳ ಹಿಂದೆಯೇ ಲಂಕೇಶ್ ಮೇಷ್ಟ್ರು ತಮ್ಮ ಮರೆಯುವ ಮುನ್ನ ಅಂಕಣದಲ್ಲಿ ಬರೆದಿದ್ದರು. ಕಾಕತಾಳೀಯವೊ ಏನೊ, ಮುಂದೆ ಲಂಕೇಶ್ ಅವರು ಕನ್ನಡದ ಜಾಣಜಾಣೆಯರನ್ನೆ ಮುಂದಿಟ್ಟುಕೊಂಡು `ಪ್ರಗತಿರಂಗ’ ಕಟ್ಟಿದಾಗ ಅದರ ಮೊದಲ ಸಭೆ ನಡೆಸಿದ್ದು ಕೂಡಾ ಇದೇ ತಾಳಿಕಟ್ಟೆಯಲ್ಲಿ. ಇಲ್ಲಿ ಸರ್ ಸೈಯದ್ ಮಹಮದ್ ಇಸ್ಮಾಯಿಲ್ ಖಾದ್ರಿ ಎಂಬ ಸೂಫಿ ಸಂತರ ದರ್ಗಾ ಇದೆ. ಆದರು ಈ ಊರಿನಲ್ಲಿ ಇವತ್ತಿಗು ಒಂದು ಮುಸ್ಲಿಂ ಕುಟುಂಬ ಬಿಟ್ಟರೆ ಎರಡನೆಯ ಮನೆಯಿಲ್ಲ. ಈ ದರ್ಗಾದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳೋದು ಹಿಂದೂಗಳೆ. ವರ್ಷಕ್ಕೊಮ್ಮೆ ನಡೆಯುವ ಉರುಸಿನ ನೇತಾರಿಕೆ ಕೂಡಾ ಇಲ್ಲಿನ ಶೂದ್ರ ಸಮುದಾಯಗಳದ್ದೆ. ಬೇರೆ ಕಡೆಯಿಂದ ಉರುಸಿಗೆಂದು ಬರುವ ಮುಸ್ಲಿಂ ಜನರ ದೇಖರೇಖಿಯನ್ನು ಹಿಂದೂಗಳು ಮುತುವರ್ಜಿಯಿಂದ ನೋಡಿಕೊಳ್ಳುತ್ತಾರೆ.

ಈ ಸೌಹಾರ್ದತೆಯ ಬಗ್ಗೆ ಬರೆಯುತ್ತಾ ಲಂಕೇಶ್ ಮೇಷ್ಟ್ರು `ಜಾತಿ ಜಗಳದಲ್ಲಿ ಮನುಷ್ಯತ್ವವನ್ನೆ ಬಲಿತೆಗೆದುಕೊಳ್ಳುವ ನೀಚರೆಲ್ಲರು ಈ ಊರಿನ ಕುರುಬರಿಂದ ಕಲಿಯಬೇಕು ಎನ್ನುವುದೇ ನನ್ನ ಅನಿಸಿಕೆ’ ಎಂದು ಹೆಮ್ಮೆಯಿಂದ ದಾಖಲಿಸಿದ್ದರು. ಇಂಥಾ ಸೌಹಾರ್ದತೆಗೆ ಹೆಸರಾಗಿದ್ದ ಈ ಊರು, ಇವತ್ತು ದರ್ಗಾಕ್ಕೆ ಬರುವ ಮುಸ್ಲಿಂ ಭಕ್ತರ ಮಾತು ಒತ್ತಟ್ಟಿಗಿರಲಿ, ಮುಸಲ್ಮಾನ ವ್ಯಾಪಾರಿಗಳನ್ನೂ ತನ್ನೊಳಗೆ ಬಿಡಿಸಿಕೊಳ್ಳಬಾರದೆಂಬ ಅಲಿಖಿತ ಫರ್ಮಾನು ಧರಿಸಿಕೊಂಡು ಕೂತಿದೆ. ಮೂಲತಃ ಮನುಷ್ಯನೆ ಅಲ್ಲದ ಕ್ಷುದ್ರ ಕ್ರಿಮಿಯೊಂದು ತಂದೊಡ್ಡುವ ಕೊರೊನಾ ಎಂಬ ರೋಗದಲ್ಲು ಧರ್ಮದ ನಂಜು ಹುಡುಕಿ ಸಮಾಜವನ್ನೆ ಸೋಂಕುಗೊಳಿಸಿದ `ಪುಣ್ಯಾತ್ಮ?ರ ಪ್ರಭಾವಕ್ಕೆ ಈ ಊರಿನ ಸೌಹಾರ್ದತೆಯೂ ಬಲಿಯಾದುದರ ದ್ಯೋತಕ ಇದು.

ಈ ಕುರಿತಂತೆ ನನಗೆ ನನ್ನ ಜನರ ಬಗ್ಗೆ ಬೇಸರವಿಲ್ಲ, ಆಕ್ಷೇಪಗಳೂ ಇಲ್ಲ. ಯಾಕೆಂದರೆ ಈ ಒಂದು ಕಾರಣಕ್ಕೆ ನನ್ನ ಜನ ಸಂಪೂರ್ಣ ಕೋಮುವಾದಿಗಳಾಗಿಬಿಟ್ಟಿದ್ದಾರೆ, ಮೋದಿ ಭಜನಾ ಮಂಡಳಿ ಸೇರಿಕೊಂಡಿದ್ದಾರೆ, ಹೊಸದಾಗಿ ಅಜ್ಞಾನಿಗಳಾಗಿಬಿಟ್ಟಿದ್ದಾರೆ ಎಂದು ಆರೋಪಿಸಲಾರೆ. ಅಜ್ಞಾನ ಮತ್ತು ಮುಗ್ಧತೆ, ಇವೆರಡೂ ನಮ್ಮ ಜನರ ನಿತ್ಯಾಚರಣೆಗಳು. ಅವಕಾಶ ತಮ್ಮ ಕೈಯಲ್ಲಿದ್ದಾಗ ವಿವೇಕವನ್ನು ಜನರಿಗೆ ತಲುಪಿಸುವ ಹೊಣೆಯನ್ನು ಸಮರ್ಪಕವಾಗಿ ನಿಭಾಯಿಸಲಾಗದ ಈ ದೇಶದ ಜಾತ್ಯತೀತ ವಾರಸುದಾರರು ಇವತ್ತು ಇಂಥಾ ಘಟನೆಗಳನ್ನು ನೆಪ ಮಾಡಿಕೊಂಡು `ಜನ’ರನ್ನು ದೂಷಿಸುವುದರ ಬಗ್ಗೆ ನನಗೆ ಅನೇಕ ಆಕ್ಷೇಪಣೆಗಳಿವೆ. ವಾಸ್ತವಗಳನ್ನು ಧಿಕ್ಕರಿಸಿ ಆದರ್ಶಗಳನ್ನು ಕಟ್ಟಲಾಗುವುದಿಲ್ಲ!

ಇಷ್ಟೆಲ್ಲ ಬದಲಾದ ನಮ್ಮ ಜನ ಮುಂದಿನ ವರ್ಷದಿಂದ ಉರುಸ್ ನಿಲ್ಲಿಸಿಬಿಡುತ್ತಾರೆಯೇ? ಖಂಡಿತ ಇಲ್ಲ. ಯಾಕೆಂದರೆ ಪ್ರತಿವರ್ಷ ತಾವು ಆಚರಿಸುವ ಗುಳ್ಳಮ್ಮ, ಬೀರಪ್ಪ ದೇವರುಗಳ ಉತ್ಸವದಷ್ಟೆ ಕಟಿಬದ್ಧರಾಗಿ ಆ ಉರುಸ್ ನಡೆಸುತ್ತಾರೆ. ಅದು ಅವರಿಗೆ ತಮ್ಮದೇ ಎನ್ನುವಷ್ಟು ಸಹಜವಾಗಿ ಒಗ್ಗಿಹೋಗಿದೆ. ಆದರು ಸಂದರ್ಭ ಮತ್ತು ಸಮೂಹಸನ್ನಿಗೆ ದನಿಗೂಡಿಸುವ ದೌರ್ಬಲ್ಯಕ್ಕೆ ಜನ ಮಾರುಹೋಗಿದ್ದಾರೆ. ನಾವಿಲ್ಲಿ ದೂಷಿಸಲೇಬೇಕೆಂದಿದ್ದರೆ ಅದು ಜನರನ್ನಲ್ಲ, ಸ್ವತಃ ಸೌಹಾರ್ದತೆ ಸ್ವಭಾವದ ನಮ್ಮ ಜನರನ್ನು ಅದಕ್ಕೆ ಕಮಿಟ್ ಮಾಡಿಸುವಲ್ಲಿ ಸೋತುಹೋದ ಇಷ್ಟುದಿನಗಳ ಅಧಿಕಾರಸ್ಥ-ಹೋರಾಟನಿರತ ಜಾತ್ಯತೀತ ವಾರಸುದಾರರನ್ನು ಮತ್ತು ಈ ವಾರಸುದಾರರ ಲೋಪಗಳ ಲಾಭ ಪಡೆದು ಕೋಮುಸನ್ನಿಗಳನ್ನು ಹುಟ್ಟುಹಾಕುತ್ತಿರುವ ಮನುಷ್ಯ ಕ್ರಿಮಿಗಳನ್ನು.

ಕೇವಲ ವಿಚಾರವಂತಿಕೆಗಷ್ಟೆ ಅಲ್ಲ, ಆರ್ಥಿಕತೆಯಲ್ಲು ನಮ್ಮ ಜನ ಇಂಥಾ ಸನ್ನಿಗಳಿಂದಾಗಿ ದೊಡ್ಡ ಗೊಂದಲಕ್ಕೆ ಬಿದ್ದಿದ್ದಾರೆ. ಫಲವತ್ತಾದ ಕಪ್ಪುಮಣ್ಣು ಹೊಂದಿರುವ ನಮ್ಮ ಜನರಿಗೆ ಈರುಳ್ಳಿಯೆ ಪ್ರಧಾನ ಆರ್ಥಿಕ ಬೆಳೆ. ಹೊಲಗಳನ್ನು ಅಣಿಗೊಳಿಸಿಕೊಂಡು ಕೂತಿರುವ ಜನ, ಒಂದೆರಡು ಮಳೆ ಬಿದ್ದು ನೆಲ ಹಸನಾದರೆ ಬಿತ್ತನೆಗೆ ದಿನ ಎಣಿಸುತ್ತಿದ್ದಾರೆ. ಸಾಬರ ಮೇಲಿನ ಈ ಅಘೋಷಿತ ಸಮೂಹಸನ್ನಿಯಂತಹ ಗ್ರಾಮೀಣ ನಿಷೇಧ ಈಗ ಅವರನ್ನು ದೊಡ್ಡ ಸಂಕಟಕ್ಕೆ ತಳ್ಳಿದೆ. ಬೆಳೆದ ಈರುಳ್ಳಿಯನ್ನು ಬೆಂಗಳೂರಿಗೊ, ಹಾಸನಕ್ಕೊ ತಂದು ಮಾರಾಟ ಮಾಡುವ ಪರಿಪಾಟ ಇದೆಯಾದರು, ಈರುಳ್ಳಿ ರೇಟು ಕುಸಿದಂತಹ ಸಂದರ್ಭದಲ್ಲಿ ನಮ್ಮೂರಿನ ರೈತರಿಗೆ ಆಸರೆಯಾಗಿ ನಿಲ್ಲೋದು `ಈರುಳ್ಳಿ ಸಾಬರು’. ಹತ್ತಿರದ ಪಟ್ಟಣಗಳ ಮುಸ್ಲಿಂ ವರ್ತಕರು ಮನೆ ಬಾಗಿಲಿಗೇ ಬಂದು ಒಂದಷ್ಟು ಚೌಕಾಸಿ ನಡೆಸಿ, ಚೂರು ಲಾಭವನ್ನೂ ಇಟ್ಟುಕೊಂಡು ಲೋಡುಗಟ್ಟಲೆ ಈರುಳ್ಳಿ ಖರೀದಿಸಿ ಒಯ್ಯುತ್ತಾರೆ. ಮೊದಲೇ ರೇಟು ಕಡಿಮೆ ಇರುವಾಗ ಖಾಲಿ ಚೀಲ, ಹಮಾಲಿ ಮತ್ತು ಲಾರಿ ಬಾಡಿಗೆಯಂತಹ ಹೆಚ್ಚಿನ ಹೊರೆ ತಪ್ಪಿಸಿಕೊಳ್ಳಲು ಜನ ಈರುಳ್ಳಿ ಸಾಬರಿಗೇ ತಮ್ಮ ಬೆಳೆ ಮಾರಾಟ ಮಾಡಿ ಕೈತೊಳೆದುಕೊಳ್ಳುತ್ತಾರೆ.

ಆದರೆ ಈ ಸಲ ಕೊರೊನಾ ಕಾಯಿಲೆ ಯಾವಾಗ ಸಂಪೂರ್ಣ ಸಮಾಪ್ತಿಯಾಗುತ್ತೆ ಎಂಬ ಖಾತ್ರಿಯಿಲ್ಲ. ಕಳೆದ ಸಲವೇ ಆರಂಭದಲ್ಲಿ ಒಳ್ಳೆಯ ಬೆಲೆ ಸಿಕ್ಕರು, ಆಮೇಲೆ ಏಕಾಏಕಿ ರೇಟು ಕುಸಿದು ಕಣ್ಣೀರಿಟ್ಟ ರೈತರು ಸಾಕಷ್ಟಿದ್ದಾರೆ. ಕೊರೊನಾ ಕಾರಣದಿಂದ ಹೊರ ದೇಶಕ್ಕೆ ಈರುಳ್ಳಿ ಎಕ್ಸ್ಪೋರ್ಟ್ ಅನುಮತಿ ಸಿಗದೆ ಹೋದರೆ ರೇಟು ಕೈಗತ್ತುವುದಿಲ್ಲ ಎಂಬ ಆತಂಕ ರೈತರನ್ನು ಕಾಡುತ್ತಿದೆ. ಅಂಥಾ ಹೊತ್ತಲ್ಲಿ ಸಾಬರಿಗು ನಾವು ಹೀಗೆ ನಿಷೇಧ ಹೇರಿಕೊಂಡು ಕೂತರೆ ಈರುಳ್ಳಿಯ ಗತಿಯೇನು? ಎಂಬ ಚಿಂತೆಯೂ ಇದೇ ಜನರನ್ನು ಕಾಡುತ್ತಿದೆ. ಬೇರೆ ಬೆಳೆಗಳಂತೆ ಈರುಳ್ಳಿಯನ್ನು ದಾಸ್ತಾನು ಇಡಲಾಗದು.

ಬಿದ್ದ ಆರ್ಥಿಕತೆ, ಕುಂಠಿತಗೊಂಡ ಕೃಷಿ ಚಟುವಟಿಕೆಯಿಂದಾಗಿ ಈರುಳ್ಳಿ ಬೀಜಗಳು ಹಿಂದೆಂದು ಕಂಡರಿಯದಷ್ಟು ದುಬಾರಿಯಾಗಿವೆ. ಪ್ರತಿ ಸೇರಿಗೆ ಏಳುನೂರರಿಂದ ಎಂಟುನೂರು ರೂಪಾಯಿ ಇರುತ್ತಿದ್ದ ಬೀಜ, ಈಗಾಗಲೆ ಒಂದು ಸಾವಿರದ ಮುನ್ನೂರರಿಂದ ಒಂದೂವರೆ ಸಾವಿರ ರೂಪಾಯಿಯಾಗಿದೆ. ಬಿತ್ತನೆ ಕಾಲ ಸಮೀಪಿಸಿದಂತೆ ಅದು ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಈ ಸಲ ಕೃಷಿ ಚಟುವಟಿಕೆಯ ಇನ್ನಿತರೆ ಖರ್ಚೂ ದುಬಾರಿಯಾಗುವ ಸಾಧ್ಯತೆ ಇದೆ. ಹೀಗೆ ಎಕರೆಗೆ ಮೂವತ್ತರಿಂದ ನಲವತ್ತು ಸಾವಿರ ಖರ್ಚು ಮಾಡಿ ಕೊಳ್ಳುವವರೇ ಇಲ್ಲವಾದರೆ ಏನು ಗತಿ? ಎಂಬ ಆತಂಕವೂ ಇದೇ ಜನರನ್ನು ಕಾಡುತ್ತಿದೆ.

ಇದು ಕೇವಲ ಒಂದು ಊರಿನ ಕಥೆಯಲ್ಲ. ಹಿಂದೂಗಳು ಮಾತ್ರವಲ್ಲದೇ ಮುಸಲ್ಮಾನರು, ಸಿಖ್ಖರು, ಪಾರಸಿಗಳು, ಜೈನರು, ಬೌದ್ಧರು, ಕಿರಸ್ತಾನರು ಹೀಗೆ ಎಲ್ಲಾ ಧರ್ಮ ವರ್ಗಗಳನ್ನು ತನ್ನವರೆಂದು ಭಾವಿಸಿರುವ ಈ ನಮ್ಮ ದೇಶ ಈ ಎಲ್ಲರ ಆರ್ಥಿಕ ಪಾಲುದಾರಿಕೆಯಿಂದ ತನ್ನ ಆರ್ಥಿಕಶಕ್ತಿಯನ್ನು ಅರ್ಥಾತ್ ಜಿಡಿಪಿಯನ್ನು ಸೃಷ್ಟಿಸಿಕೊಂಡಿದೆ. ಇದೊಂಥರ ಆರ್ಥಿಕ ಸರಪಳಿಯಿದ್ದಂತೆ. ಯಾವುದೊ ರಾಜಕೀಯ ಅಥವಾ ಸೈದ್ದಾಂತಿಕ ದುರುದ್ದೇಶಕ್ಕಾಗಿ ಇವರಲ್ಲಿ ಒಬ್ಬರನ್ನು ಹೊರಗಿಡುವ ಹುನ್ನಾರ ನಡೆಸಿದರು, ಇಡೀ ಆರ್ಥಿಕ ಚಕ್ರವೆ ಕೊಂಡಿ ಕಳಚಿಕೊಂಡ ಸರಪಳಿಯಂತೆ ಅಸ್ತವ್ಯಸ್ತವಾಗಿ ಬಿದ್ದುಹೋಗುತ್ತೆ. ನನ್ನೂರು ಅನುಭವಿಸುತ್ತಿರುವ ಗೊಂದಲ ಇದಕ್ಕೊಂದು ನಿದರ್ಶನವಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. This is baseless. You haven’t addressed other problems happening around us. Our country remains secular only till Hindu’s are in majority. Please look at what happened in Pak and Bangladesh or even in West Bengal.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...