Homeಮುಖಪುಟ'ನೀವು ಭಾಷಾತಜ್ಞರೋ?'..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

‘ನೀವು ಭಾಷಾತಜ್ಞರೋ?’..ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್‌ ಹಾಸನ್‌ಗೆ ಹೈಕೋರ್ಟ್ ತರಾಟೆ

- Advertisement -
- Advertisement -

“ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ” ಎಂದು ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ (ಜೂ.3) ತರಾಟೆಗೆ ತೆಗೆದುಕೊಂಡಿದೆ. ತನ್ನ ಹೇಳಿಕೆಗೆ ಕ್ಷಮೆಯಾಚಿಸಲು ಕಮಲ್ ಹಾಸನ್ ನಿರಾಕರಿಸಿದ್ದನ್ನು ಪ್ರಶ್ನಿಸಿದ ನ್ಯಾಯಾಲಯ, ಒಂದೇ ಒಂದು ಕ್ಷಮೆಯಾಚನೆಯಿಂದ ಸಮಸ್ಯೆ ಬಗೆಹರಿಯುತ್ತಿತ್ತು ಎಂದು ಹೇಳಿದೆ.

ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅವರ ಮುಂಬರುವ ಚಿತ್ರ ‘ಥಗ್ ಲೈಫ್’ ಬಿಡುಗಡೆಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಕನ್ನಡಿಗರು ಹೇಳುತ್ತಿದ್ದಾರೆ. ಈ ಹಿನ್ನೆಲೆ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಅವಕಾಶ ಮತ್ತು ಸೂಕ್ತ ರಕ್ಷಣೆ ಕೋರಿ ‘ರಾಜ್‌ಕಮಲ್ ಫಿಲ್ಮ್ಸ್’ ನ್ಯಾಯಾಲಯದ ಮೊರೆ ಹೋಗಿತ್ತು.

ಸಾರ್ವಜನಿಕ ವ್ಯಕ್ತಿಯಾಗಿ ಕಮಲ್ ಹಾಸನ್ ಅವರ ಜವಾಬ್ದಾರಿಗಳ ಬಗ್ಗೆ ನ್ಯಾಯಾಧೀಶರು ಕಳವಳ ವ್ಯಕ್ತಪಡಿಸುತ್ತಾ, “ನೀವು ಕಮಲ್ ಹಾಸನ್ ಆಗಿರಬಹುದು ಅಥವಾ ಯಾರಾದರೂ ಆಗಿರಬಹುದು, ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

ಈ ದೇಶ ಭಾಷಾವಾರು ವಿಭಜನೆಯಾಗಿದೆ. ಹಾಗಾಗಿ, ಸಾರ್ವಜನಿಕ ವ್ಯಕ್ತಿಯೊಬ್ಬರು ಅಂತಹ ಹೇಳಿಕೆ ನೀಡಲು ಸಾಧ್ಯವಿಲ್ಲ. ಈ ಹೇಳಿಕೆಯಿಂದ ಆಗಿರುವುದು ಏನು? ಅಶಾಂತಿ, ಅಸಂಗತತೆ ಅಲ್ಲವೇ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ಕರ್ನಾಟಕದ ಜನರು ನಿಮ್ಮಿಂದ ಕ್ಷಮೆ ಬಯಸಿದ್ದಾರೆ. ನೀವು ರಕ್ಷಣೆ ಕೋರಿ ಇಲ್ಲಿಗೆ ಬಂದಿದ್ದೀರಿ. ನೀವು ಯಾವ ಆಧಾರದ ಮೇಲೆ ಹೇಳಿಕೆ ನೀಡಿದ್ದೀರಿ? ನೀವು ಇತಿಹಾಸಕಾರರೇ, ಭಾಷಾಶಾಸ್ತ್ರಜ್ಞರೇ? ಎಂದು ನ್ಯಾಯಾಧೀಶರು ಖಾರವಾಗಿ ಕೇಳಿದ್ದಾರೆ.

ಅರ್ಜಿದಾರರಾದ ರಾಜ್‌ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್ ಪರವಾಗಿ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದ ಮಂಡಿಸಿ, “ಕಮಲ್ ಹಾಸನ್ ಬೇರೆಯೇ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ. ದಯವಿಟ್ಟು ಈ ಹೇಳಿಕೆಯನ್ನು ಯಾವ ಸಂದರ್ಭದಲ್ಲಿ ನೀಡಲಾಗಿದೆ ಎಂಬುದನ್ನು ನೋಡಿ” ಎಂದು ಮನವಿ ಮಾಡಿದ್ದಾರೆ.

ಮುಂದುವರಿದು, “ಆ ಕಾರ್ಯಕ್ರಮದಲ್ಲಿ ಕನ್ನಡ ಚಲನಚಿತ್ರೋದ್ಯಮದ ಸೂಪರ್‌ಸ್ಟಾರ್ ಕೂಡ ಉಪಸ್ಥಿತರಿದ್ದರು. ಅವರು (ಕಮಲ್ ಹಾಸನ್) ನೀಡಿದ ಹೇಳಿಕೆಯನ್ನು ಕನ್ನಡ ಭಾಷೆಯ ವಿರುದ್ಧ ಮಾತನಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ” ಎಂದು ಚಿನ್ನಪ್ಪ ವಾದಿಸಿದ್ದಾರೆ. ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡ ನಂತರ ಕಮಲ್ ಹಾಸನ್ ನೀಡಿದ ಉತ್ತರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಈ ವೇಳೆ ನ್ಯಾಯಾಲಯ, 75 ವರ್ಷಗಳ ಹಿಂದೆ ಇದೇ ರೀತಿಯ ಹೇಳಿಕೆ ನೀಡಿದ್ದ ರಾಜಗೋಪಾಲ್ ಆಚಾರ್ಯ ಅವರ ಉದಾಹರಣೆಯನ್ನು ಉಲ್ಲೇಖಿಸಿದೆ.

“ರಾಜಗೋಪಾಲ್ ಅವರು 75 ವರ್ಷಗಳ ಹಿಂದೆ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ನಂತರ ಅವರು ಕ್ಷಮೆಯಾಚಿಸಿದರು. ಈಗ ನೀವು ನಿಮ್ಮ ಚಿತ್ರದ ಬಿಡುಗಡೆಗೆ ರಕ್ಷಣೆ ಕೋರುತ್ತಿದ್ದೀರಿ. ಕ್ಷಮೆಯಾಚಿಸಬೇಕಾಗಿತ್ತು” ಎಂದು ನ್ಯಾಯಾಲಯವು ಮೌಖಿಕವಾಗಿ ಹೇಳಿದೆ.

ಭಾರತದ ರಾಷ್ಟ್ರ ಭಾಷೆ ಯಾವುದು?…ಸಂಸದೆ ಕನಿಮೋಳಿ ಕೊಟ್ಟ ಉತ್ತರ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...