Homeಮುಖಪುಟ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ ಎಂದು ಶರದ್ ಪವಾರ್‌ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’’ನೀವು ಜಾತ್ಯಾತೀತರಾಗಿ ಮಾರ್ಪಾಡಾಗಿದ್ದೀರಾ’’ ಎಂದು ಪ್ರಶ್ನಿಸಿದ್ದು, ಇದಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಶರದ್ ಪವಾರ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರದಲ್ಲಿ, ”ರಾಜ್ಯಪಾಲರು ಬಳಸಿದ ಭಾಷೆಯನ್ನು ನೋಡಿ ಆಘಾತಕ್ಕೊಳಗಾದೆ” ಎಂದು ಹೇಳಿದ್ದಾರೆ.

“ಗೌರವಾನ್ವಿತ ರಾಜ್ಯಪಾಲರು ಈ ವಿಷಯದ ಬಗ್ಗೆ ತಮ್ಮ ಸ್ವಂತ ದೃಷ್ಟಿಕೋನಗಳನ್ನು ಮತ್ತು ಅಭಿಪ್ರಾಯಗಳನ್ನು ಹೊಂದಬಹುದು ಎಂದು ನಾನು ಒಪ್ಪಿಕೊಳ್ಳುತ್ತೇನೆ. ಮುಖ್ಯಮಂತ್ರಿಗೆ ಅವರು ತಮ್ಮ ಸಲಹೆಗಳನ್ನು ತಿಳಿಸುವ ಅಧಿಕಾರವನ್ನು ನಾನು ಪ್ರಶಂಸಿಸುತ್ತೇನೆ. ಆದಾಗ್ಯೂ, ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ” ಎಂದು ಅವರು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ರಾಜ್ಯಪಾಲರು ಉದ್ಧವ್ ಠಾಕ್ರೆಗೆ ಸೋಮವಾರ ಬರೆದ ಪತ್ರದಲ್ಲಿ, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪೂಜಾ ಸ್ಥಳಗಳನ್ನು ಕೂಡಲೇ ಪುನಃ ತೆರೆಯಲು ಆದೇಶವನ್ನು ನೀಡುವಂತೆ ಕೋರಿದ್ದರು. “ನೀವು ಹಿಂದುತ್ವದ ಕಟ್ಟಾ ಸಮರ್ಥಕರಾಗಿದ್ದೀರಿ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಯೋಧ್ಯೆಗೆ ಭೇಟಿ ನೀಡುವ ಮೂಲಕ ನೀವು ಭಗವಾನ್ ರಾಮನ ಬಗ್ಗೆ ನಿಮ್ಮ ಭಕ್ತಿಯನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದೀರಿ. ನೀವು ಪಂಡರಪುರದ ವಿಠಲ ರುಕ್ಮಿಣಿ ಮಂದಿರಕ್ಕೆ ಭೇಟಿ ನೀಡಿ ಆಶಾಡಿ ಏಕಾದಶಿಯ ಪೂಜೆ ನಡೆಸಿದ್ದೀರಿ” ಎಂದು ರಾಜ್ಯಪಾಲರು ಪತ್ರದಲ್ಲಿ ಬರೆದ್ದರು.

“ಪೂಜಾ ಸ್ಥಳಗಳ ಪುನರಾರಂಭವನ್ನು ಮತ್ತೆ ಮತ್ತೆ ಮುಂದೂಡಲು ನೀವು ಯಾವುದೇ ದೈವಿಕ ಮುನ್ಸೂಚನೆಯನ್ನು ಪಡೆದಿದ್ದೀರ ? ಅಥವಾ ನೀವು ‘ಜಾತ್ಯತೀತ’ರಾಗಿ ಮಾರ್ಪಟ್ಟಿದ್ದೀರಾ, ಹಿಂದೆ ನೀವು ಆ ಪದವನ್ನು ದ್ವೇಷಿಸುತ್ತಿದ್ದಿರಿ”

-ಭಗತ್‌ ಸಿಂಗ್ ಕೋಶ್ಯರಿ, ಮಹಾರಾಷ್ಟ್ರ ರಾಜ್ಯಪಾಲ

ಈ ಪತ್ರಕ್ಕೆ ಮುಖ್ಯಮಂತ್ರಿ ಠಾಕ್ರೆ ಪ್ರತಿಕ್ರಿಯಿಸಿದ್ದು, ತಮ್ಮ ಹಿಂದುತ್ವಕ್ಕೆ ರಾಜ್ಯಪಾಲರಿಂದ ಅಥವಾ ಯಾರಿಂದಲೂ ಪ್ರಮಾಣಪತ್ರ ಅಗತ್ಯವಿಲ್ಲ. ತಾನು ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿರುವ ಅವರು, “ನಾನು ದೈವಿಕ ಮುನ್ಸೂಚನೆಗಳನ್ನು ಪಡೆಯುತ್ತಿದ್ದೇನೆ ಎಂದು ನೀವು ಹೇಳಿದ್ದೀರಾ? ಬಹುಶಃ ನೀವು ಅವುಗಳನ್ನು ಪಡೆದುಕೊಂಡಿರಬಹುದು ಆದರೆ ನಾನು ಅಷ್ಟು ದೊಡ್ಡವನಲ್ಲ” ಎಂದು ಬರೆದಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವುದು ಅಥವಾ ವಿಳಂಬ ಮಾಡುವುದು “ಜಾತ್ಯತೀತತೆಯ ಪ್ರಶ್ನೆಯಲ್ಲ” ಎಂದು ಠಾಕ್ರೆ ರಾಜ್ಯಪಾಲರಿಗೆ ನೆನಪಿಸಿದ್ದು, ಕೊಶ್ಯರಿ ಅವರು ತಮ್ಮದೇ ಆದ ಸಾಂವಿಧಾನಿಕ ಪ್ರಮಾಣವನ್ನು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

“ನೀವು ಕೂಡ ‘ಜಾತ್ಯತೀತ’ ಪದವನ್ನು ಹೊಂದಿರುವ ಸಂವಿಧಾನದ ಮೂಲಕ ಪ್ರತಿಜ್ಞೆ ಮಾಡಿದ್ದೀರಿ ಎಂಬುದನ್ನು ನೀವು ಮರೆತಿದ್ದೀರಾ? ನೀವು ಅದನ್ನು ತಿರಸ್ಕರಿಸುತ್ತೀರಾ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...