Homeಮುಖಪುಟ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ ಎಂದು ಶರದ್ ಪವಾರ್‌ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’’ನೀವು ಜಾತ್ಯಾತೀತರಾಗಿ ಮಾರ್ಪಾಡಾಗಿದ್ದೀರಾ’’ ಎಂದು ಪ್ರಶ್ನಿಸಿದ್ದು, ಇದಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಶರದ್ ಪವಾರ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರದಲ್ಲಿ, ”ರಾಜ್ಯಪಾಲರು ಬಳಸಿದ ಭಾಷೆಯನ್ನು ನೋಡಿ ಆಘಾತಕ್ಕೊಳಗಾದೆ” ಎಂದು ಹೇಳಿದ್ದಾರೆ.

“ಗೌರವಾನ್ವಿತ ರಾಜ್ಯಪಾಲರು ಈ ವಿಷಯದ ಬಗ್ಗೆ ತಮ್ಮ ಸ್ವಂತ ದೃಷ್ಟಿಕೋನಗಳನ್ನು ಮತ್ತು ಅಭಿಪ್ರಾಯಗಳನ್ನು ಹೊಂದಬಹುದು ಎಂದು ನಾನು ಒಪ್ಪಿಕೊಳ್ಳುತ್ತೇನೆ. ಮುಖ್ಯಮಂತ್ರಿಗೆ ಅವರು ತಮ್ಮ ಸಲಹೆಗಳನ್ನು ತಿಳಿಸುವ ಅಧಿಕಾರವನ್ನು ನಾನು ಪ್ರಶಂಸಿಸುತ್ತೇನೆ. ಆದಾಗ್ಯೂ, ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ” ಎಂದು ಅವರು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ರಾಜ್ಯಪಾಲರು ಉದ್ಧವ್ ಠಾಕ್ರೆಗೆ ಸೋಮವಾರ ಬರೆದ ಪತ್ರದಲ್ಲಿ, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪೂಜಾ ಸ್ಥಳಗಳನ್ನು ಕೂಡಲೇ ಪುನಃ ತೆರೆಯಲು ಆದೇಶವನ್ನು ನೀಡುವಂತೆ ಕೋರಿದ್ದರು. “ನೀವು ಹಿಂದುತ್ವದ ಕಟ್ಟಾ ಸಮರ್ಥಕರಾಗಿದ್ದೀರಿ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಯೋಧ್ಯೆಗೆ ಭೇಟಿ ನೀಡುವ ಮೂಲಕ ನೀವು ಭಗವಾನ್ ರಾಮನ ಬಗ್ಗೆ ನಿಮ್ಮ ಭಕ್ತಿಯನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದೀರಿ. ನೀವು ಪಂಡರಪುರದ ವಿಠಲ ರುಕ್ಮಿಣಿ ಮಂದಿರಕ್ಕೆ ಭೇಟಿ ನೀಡಿ ಆಶಾಡಿ ಏಕಾದಶಿಯ ಪೂಜೆ ನಡೆಸಿದ್ದೀರಿ” ಎಂದು ರಾಜ್ಯಪಾಲರು ಪತ್ರದಲ್ಲಿ ಬರೆದ್ದರು.

“ಪೂಜಾ ಸ್ಥಳಗಳ ಪುನರಾರಂಭವನ್ನು ಮತ್ತೆ ಮತ್ತೆ ಮುಂದೂಡಲು ನೀವು ಯಾವುದೇ ದೈವಿಕ ಮುನ್ಸೂಚನೆಯನ್ನು ಪಡೆದಿದ್ದೀರ ? ಅಥವಾ ನೀವು ‘ಜಾತ್ಯತೀತ’ರಾಗಿ ಮಾರ್ಪಟ್ಟಿದ್ದೀರಾ, ಹಿಂದೆ ನೀವು ಆ ಪದವನ್ನು ದ್ವೇಷಿಸುತ್ತಿದ್ದಿರಿ”

-ಭಗತ್‌ ಸಿಂಗ್ ಕೋಶ್ಯರಿ, ಮಹಾರಾಷ್ಟ್ರ ರಾಜ್ಯಪಾಲ

ಈ ಪತ್ರಕ್ಕೆ ಮುಖ್ಯಮಂತ್ರಿ ಠಾಕ್ರೆ ಪ್ರತಿಕ್ರಿಯಿಸಿದ್ದು, ತಮ್ಮ ಹಿಂದುತ್ವಕ್ಕೆ ರಾಜ್ಯಪಾಲರಿಂದ ಅಥವಾ ಯಾರಿಂದಲೂ ಪ್ರಮಾಣಪತ್ರ ಅಗತ್ಯವಿಲ್ಲ. ತಾನು ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿರುವ ಅವರು, “ನಾನು ದೈವಿಕ ಮುನ್ಸೂಚನೆಗಳನ್ನು ಪಡೆಯುತ್ತಿದ್ದೇನೆ ಎಂದು ನೀವು ಹೇಳಿದ್ದೀರಾ? ಬಹುಶಃ ನೀವು ಅವುಗಳನ್ನು ಪಡೆದುಕೊಂಡಿರಬಹುದು ಆದರೆ ನಾನು ಅಷ್ಟು ದೊಡ್ಡವನಲ್ಲ” ಎಂದು ಬರೆದಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವುದು ಅಥವಾ ವಿಳಂಬ ಮಾಡುವುದು “ಜಾತ್ಯತೀತತೆಯ ಪ್ರಶ್ನೆಯಲ್ಲ” ಎಂದು ಠಾಕ್ರೆ ರಾಜ್ಯಪಾಲರಿಗೆ ನೆನಪಿಸಿದ್ದು, ಕೊಶ್ಯರಿ ಅವರು ತಮ್ಮದೇ ಆದ ಸಾಂವಿಧಾನಿಕ ಪ್ರಮಾಣವನ್ನು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

“ನೀವು ಕೂಡ ‘ಜಾತ್ಯತೀತ’ ಪದವನ್ನು ಹೊಂದಿರುವ ಸಂವಿಧಾನದ ಮೂಲಕ ಪ್ರತಿಜ್ಞೆ ಮಾಡಿದ್ದೀರಿ ಎಂಬುದನ್ನು ನೀವು ಮರೆತಿದ್ದೀರಾ? ನೀವು ಅದನ್ನು ತಿರಸ್ಕರಿಸುತ್ತೀರಾ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...