Homeಮುಖಪುಟ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ ಎಂದು ಶರದ್ ಪವಾರ್‌ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’’ನೀವು ಜಾತ್ಯಾತೀತರಾಗಿ ಮಾರ್ಪಾಡಾಗಿದ್ದೀರಾ’’ ಎಂದು ಪ್ರಶ್ನಿಸಿದ್ದು, ಇದಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಶರದ್ ಪವಾರ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರದಲ್ಲಿ, ”ರಾಜ್ಯಪಾಲರು ಬಳಸಿದ ಭಾಷೆಯನ್ನು ನೋಡಿ ಆಘಾತಕ್ಕೊಳಗಾದೆ” ಎಂದು ಹೇಳಿದ್ದಾರೆ.

“ಗೌರವಾನ್ವಿತ ರಾಜ್ಯಪಾಲರು ಈ ವಿಷಯದ ಬಗ್ಗೆ ತಮ್ಮ ಸ್ವಂತ ದೃಷ್ಟಿಕೋನಗಳನ್ನು ಮತ್ತು ಅಭಿಪ್ರಾಯಗಳನ್ನು ಹೊಂದಬಹುದು ಎಂದು ನಾನು ಒಪ್ಪಿಕೊಳ್ಳುತ್ತೇನೆ. ಮುಖ್ಯಮಂತ್ರಿಗೆ ಅವರು ತಮ್ಮ ಸಲಹೆಗಳನ್ನು ತಿಳಿಸುವ ಅಧಿಕಾರವನ್ನು ನಾನು ಪ್ರಶಂಸಿಸುತ್ತೇನೆ. ಆದಾಗ್ಯೂ, ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ” ಎಂದು ಅವರು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ರಾಜ್ಯಪಾಲರು ಉದ್ಧವ್ ಠಾಕ್ರೆಗೆ ಸೋಮವಾರ ಬರೆದ ಪತ್ರದಲ್ಲಿ, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪೂಜಾ ಸ್ಥಳಗಳನ್ನು ಕೂಡಲೇ ಪುನಃ ತೆರೆಯಲು ಆದೇಶವನ್ನು ನೀಡುವಂತೆ ಕೋರಿದ್ದರು. “ನೀವು ಹಿಂದುತ್ವದ ಕಟ್ಟಾ ಸಮರ್ಥಕರಾಗಿದ್ದೀರಿ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಯೋಧ್ಯೆಗೆ ಭೇಟಿ ನೀಡುವ ಮೂಲಕ ನೀವು ಭಗವಾನ್ ರಾಮನ ಬಗ್ಗೆ ನಿಮ್ಮ ಭಕ್ತಿಯನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದೀರಿ. ನೀವು ಪಂಡರಪುರದ ವಿಠಲ ರುಕ್ಮಿಣಿ ಮಂದಿರಕ್ಕೆ ಭೇಟಿ ನೀಡಿ ಆಶಾಡಿ ಏಕಾದಶಿಯ ಪೂಜೆ ನಡೆಸಿದ್ದೀರಿ” ಎಂದು ರಾಜ್ಯಪಾಲರು ಪತ್ರದಲ್ಲಿ ಬರೆದ್ದರು.

“ಪೂಜಾ ಸ್ಥಳಗಳ ಪುನರಾರಂಭವನ್ನು ಮತ್ತೆ ಮತ್ತೆ ಮುಂದೂಡಲು ನೀವು ಯಾವುದೇ ದೈವಿಕ ಮುನ್ಸೂಚನೆಯನ್ನು ಪಡೆದಿದ್ದೀರ ? ಅಥವಾ ನೀವು ‘ಜಾತ್ಯತೀತ’ರಾಗಿ ಮಾರ್ಪಟ್ಟಿದ್ದೀರಾ, ಹಿಂದೆ ನೀವು ಆ ಪದವನ್ನು ದ್ವೇಷಿಸುತ್ತಿದ್ದಿರಿ”

-ಭಗತ್‌ ಸಿಂಗ್ ಕೋಶ್ಯರಿ, ಮಹಾರಾಷ್ಟ್ರ ರಾಜ್ಯಪಾಲ

ಈ ಪತ್ರಕ್ಕೆ ಮುಖ್ಯಮಂತ್ರಿ ಠಾಕ್ರೆ ಪ್ರತಿಕ್ರಿಯಿಸಿದ್ದು, ತಮ್ಮ ಹಿಂದುತ್ವಕ್ಕೆ ರಾಜ್ಯಪಾಲರಿಂದ ಅಥವಾ ಯಾರಿಂದಲೂ ಪ್ರಮಾಣಪತ್ರ ಅಗತ್ಯವಿಲ್ಲ. ತಾನು ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿರುವ ಅವರು, “ನಾನು ದೈವಿಕ ಮುನ್ಸೂಚನೆಗಳನ್ನು ಪಡೆಯುತ್ತಿದ್ದೇನೆ ಎಂದು ನೀವು ಹೇಳಿದ್ದೀರಾ? ಬಹುಶಃ ನೀವು ಅವುಗಳನ್ನು ಪಡೆದುಕೊಂಡಿರಬಹುದು ಆದರೆ ನಾನು ಅಷ್ಟು ದೊಡ್ಡವನಲ್ಲ” ಎಂದು ಬರೆದಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವುದು ಅಥವಾ ವಿಳಂಬ ಮಾಡುವುದು “ಜಾತ್ಯತೀತತೆಯ ಪ್ರಶ್ನೆಯಲ್ಲ” ಎಂದು ಠಾಕ್ರೆ ರಾಜ್ಯಪಾಲರಿಗೆ ನೆನಪಿಸಿದ್ದು, ಕೊಶ್ಯರಿ ಅವರು ತಮ್ಮದೇ ಆದ ಸಾಂವಿಧಾನಿಕ ಪ್ರಮಾಣವನ್ನು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

“ನೀವು ಕೂಡ ‘ಜಾತ್ಯತೀತ’ ಪದವನ್ನು ಹೊಂದಿರುವ ಸಂವಿಧಾನದ ಮೂಲಕ ಪ್ರತಿಜ್ಞೆ ಮಾಡಿದ್ದೀರಿ ಎಂಬುದನ್ನು ನೀವು ಮರೆತಿದ್ದೀರಾ? ನೀವು ಅದನ್ನು ತಿರಸ್ಕರಿಸುತ್ತೀರಾ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...