Homeಮುಖಪುಟ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ ಎಂದು ಶರದ್ ಪವಾರ್‌ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’’ನೀವು ಜಾತ್ಯಾತೀತರಾಗಿ ಮಾರ್ಪಾಡಾಗಿದ್ದೀರಾ’’ ಎಂದು ಪ್ರಶ್ನಿಸಿದ್ದು, ಇದಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಶರದ್ ಪವಾರ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರದಲ್ಲಿ, ”ರಾಜ್ಯಪಾಲರು ಬಳಸಿದ ಭಾಷೆಯನ್ನು ನೋಡಿ ಆಘಾತಕ್ಕೊಳಗಾದೆ” ಎಂದು ಹೇಳಿದ್ದಾರೆ.

“ಗೌರವಾನ್ವಿತ ರಾಜ್ಯಪಾಲರು ಈ ವಿಷಯದ ಬಗ್ಗೆ ತಮ್ಮ ಸ್ವಂತ ದೃಷ್ಟಿಕೋನಗಳನ್ನು ಮತ್ತು ಅಭಿಪ್ರಾಯಗಳನ್ನು ಹೊಂದಬಹುದು ಎಂದು ನಾನು ಒಪ್ಪಿಕೊಳ್ಳುತ್ತೇನೆ. ಮುಖ್ಯಮಂತ್ರಿಗೆ ಅವರು ತಮ್ಮ ಸಲಹೆಗಳನ್ನು ತಿಳಿಸುವ ಅಧಿಕಾರವನ್ನು ನಾನು ಪ್ರಶಂಸಿಸುತ್ತೇನೆ. ಆದಾಗ್ಯೂ, ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ” ಎಂದು ಅವರು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ರಾಜ್ಯಪಾಲರು ಉದ್ಧವ್ ಠಾಕ್ರೆಗೆ ಸೋಮವಾರ ಬರೆದ ಪತ್ರದಲ್ಲಿ, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪೂಜಾ ಸ್ಥಳಗಳನ್ನು ಕೂಡಲೇ ಪುನಃ ತೆರೆಯಲು ಆದೇಶವನ್ನು ನೀಡುವಂತೆ ಕೋರಿದ್ದರು. “ನೀವು ಹಿಂದುತ್ವದ ಕಟ್ಟಾ ಸಮರ್ಥಕರಾಗಿದ್ದೀರಿ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಯೋಧ್ಯೆಗೆ ಭೇಟಿ ನೀಡುವ ಮೂಲಕ ನೀವು ಭಗವಾನ್ ರಾಮನ ಬಗ್ಗೆ ನಿಮ್ಮ ಭಕ್ತಿಯನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದೀರಿ. ನೀವು ಪಂಡರಪುರದ ವಿಠಲ ರುಕ್ಮಿಣಿ ಮಂದಿರಕ್ಕೆ ಭೇಟಿ ನೀಡಿ ಆಶಾಡಿ ಏಕಾದಶಿಯ ಪೂಜೆ ನಡೆಸಿದ್ದೀರಿ” ಎಂದು ರಾಜ್ಯಪಾಲರು ಪತ್ರದಲ್ಲಿ ಬರೆದ್ದರು.

“ಪೂಜಾ ಸ್ಥಳಗಳ ಪುನರಾರಂಭವನ್ನು ಮತ್ತೆ ಮತ್ತೆ ಮುಂದೂಡಲು ನೀವು ಯಾವುದೇ ದೈವಿಕ ಮುನ್ಸೂಚನೆಯನ್ನು ಪಡೆದಿದ್ದೀರ ? ಅಥವಾ ನೀವು ‘ಜಾತ್ಯತೀತ’ರಾಗಿ ಮಾರ್ಪಟ್ಟಿದ್ದೀರಾ, ಹಿಂದೆ ನೀವು ಆ ಪದವನ್ನು ದ್ವೇಷಿಸುತ್ತಿದ್ದಿರಿ”

-ಭಗತ್‌ ಸಿಂಗ್ ಕೋಶ್ಯರಿ, ಮಹಾರಾಷ್ಟ್ರ ರಾಜ್ಯಪಾಲ

ಈ ಪತ್ರಕ್ಕೆ ಮುಖ್ಯಮಂತ್ರಿ ಠಾಕ್ರೆ ಪ್ರತಿಕ್ರಿಯಿಸಿದ್ದು, ತಮ್ಮ ಹಿಂದುತ್ವಕ್ಕೆ ರಾಜ್ಯಪಾಲರಿಂದ ಅಥವಾ ಯಾರಿಂದಲೂ ಪ್ರಮಾಣಪತ್ರ ಅಗತ್ಯವಿಲ್ಲ. ತಾನು ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿರುವ ಅವರು, “ನಾನು ದೈವಿಕ ಮುನ್ಸೂಚನೆಗಳನ್ನು ಪಡೆಯುತ್ತಿದ್ದೇನೆ ಎಂದು ನೀವು ಹೇಳಿದ್ದೀರಾ? ಬಹುಶಃ ನೀವು ಅವುಗಳನ್ನು ಪಡೆದುಕೊಂಡಿರಬಹುದು ಆದರೆ ನಾನು ಅಷ್ಟು ದೊಡ್ಡವನಲ್ಲ” ಎಂದು ಬರೆದಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವುದು ಅಥವಾ ವಿಳಂಬ ಮಾಡುವುದು “ಜಾತ್ಯತೀತತೆಯ ಪ್ರಶ್ನೆಯಲ್ಲ” ಎಂದು ಠಾಕ್ರೆ ರಾಜ್ಯಪಾಲರಿಗೆ ನೆನಪಿಸಿದ್ದು, ಕೊಶ್ಯರಿ ಅವರು ತಮ್ಮದೇ ಆದ ಸಾಂವಿಧಾನಿಕ ಪ್ರಮಾಣವನ್ನು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

“ನೀವು ಕೂಡ ‘ಜಾತ್ಯತೀತ’ ಪದವನ್ನು ಹೊಂದಿರುವ ಸಂವಿಧಾನದ ಮೂಲಕ ಪ್ರತಿಜ್ಞೆ ಮಾಡಿದ್ದೀರಿ ಎಂಬುದನ್ನು ನೀವು ಮರೆತಿದ್ದೀರಾ? ನೀವು ಅದನ್ನು ತಿರಸ್ಕರಿಸುತ್ತೀರಾ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...