Homeಮುಖಪುಟ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ ಎಂದು ಶರದ್ ಪವಾರ್‌ ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

- Advertisement -
- Advertisement -

ಪೂಜಾ ಸ್ಥಳಗಳನ್ನು ಪುನಃ ತೆರೆಯುವ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ’’ನೀವು ಜಾತ್ಯಾತೀತರಾಗಿ ಮಾರ್ಪಾಡಾಗಿದ್ದೀರಾ’’ ಎಂದು ಪ್ರಶ್ನಿಸಿದ್ದು, ಇದಕ್ಕೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಶರದ್ ಪವಾರ್‌ ಪ್ರಧಾನಿ ನರೇಂದ್ರ ಮೋದಿಗೆ ಪತ್ರದಲ್ಲಿ, ”ರಾಜ್ಯಪಾಲರು ಬಳಸಿದ ಭಾಷೆಯನ್ನು ನೋಡಿ ಆಘಾತಕ್ಕೊಳಗಾದೆ” ಎಂದು ಹೇಳಿದ್ದಾರೆ.

“ಗೌರವಾನ್ವಿತ ರಾಜ್ಯಪಾಲರು ಈ ವಿಷಯದ ಬಗ್ಗೆ ತಮ್ಮ ಸ್ವಂತ ದೃಷ್ಟಿಕೋನಗಳನ್ನು ಮತ್ತು ಅಭಿಪ್ರಾಯಗಳನ್ನು ಹೊಂದಬಹುದು ಎಂದು ನಾನು ಒಪ್ಪಿಕೊಳ್ಳುತ್ತೇನೆ. ಮುಖ್ಯಮಂತ್ರಿಗೆ ಅವರು ತಮ್ಮ ಸಲಹೆಗಳನ್ನು ತಿಳಿಸುವ ಅಧಿಕಾರವನ್ನು ನಾನು ಪ್ರಶಂಸಿಸುತ್ತೇನೆ. ಆದಾಗ್ಯೂ, ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ರಾಜ್ಯಪಾಲರ ಪತ್ರ ಮತ್ತು ಪತ್ರದಲ್ಲಿನ ಭಾಷೆಯ ಬಳಕೆಯನ್ನು ನೋಡಿ ನಾನು ಆಘಾತ ಮತ್ತು ಆಶ್ಚರ್ಯಕ್ಕೊಳಗಾಗಿದ್ದೇನೆ” ಎಂದು ಅವರು ಪ್ರಧಾನ ಮಂತ್ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ರಾಜ್ಯಪಾಲರು ಉದ್ಧವ್ ಠಾಕ್ರೆಗೆ ಸೋಮವಾರ ಬರೆದ ಪತ್ರದಲ್ಲಿ, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪೂಜಾ ಸ್ಥಳಗಳನ್ನು ಕೂಡಲೇ ಪುನಃ ತೆರೆಯಲು ಆದೇಶವನ್ನು ನೀಡುವಂತೆ ಕೋರಿದ್ದರು. “ನೀವು ಹಿಂದುತ್ವದ ಕಟ್ಟಾ ಸಮರ್ಥಕರಾಗಿದ್ದೀರಿ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಅಯೋಧ್ಯೆಗೆ ಭೇಟಿ ನೀಡುವ ಮೂಲಕ ನೀವು ಭಗವಾನ್ ರಾಮನ ಬಗ್ಗೆ ನಿಮ್ಮ ಭಕ್ತಿಯನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದೀರಿ. ನೀವು ಪಂಡರಪುರದ ವಿಠಲ ರುಕ್ಮಿಣಿ ಮಂದಿರಕ್ಕೆ ಭೇಟಿ ನೀಡಿ ಆಶಾಡಿ ಏಕಾದಶಿಯ ಪೂಜೆ ನಡೆಸಿದ್ದೀರಿ” ಎಂದು ರಾಜ್ಯಪಾಲರು ಪತ್ರದಲ್ಲಿ ಬರೆದ್ದರು.

“ಪೂಜಾ ಸ್ಥಳಗಳ ಪುನರಾರಂಭವನ್ನು ಮತ್ತೆ ಮತ್ತೆ ಮುಂದೂಡಲು ನೀವು ಯಾವುದೇ ದೈವಿಕ ಮುನ್ಸೂಚನೆಯನ್ನು ಪಡೆದಿದ್ದೀರ ? ಅಥವಾ ನೀವು ‘ಜಾತ್ಯತೀತ’ರಾಗಿ ಮಾರ್ಪಟ್ಟಿದ್ದೀರಾ, ಹಿಂದೆ ನೀವು ಆ ಪದವನ್ನು ದ್ವೇಷಿಸುತ್ತಿದ್ದಿರಿ”

-ಭಗತ್‌ ಸಿಂಗ್ ಕೋಶ್ಯರಿ, ಮಹಾರಾಷ್ಟ್ರ ರಾಜ್ಯಪಾಲ

ಈ ಪತ್ರಕ್ಕೆ ಮುಖ್ಯಮಂತ್ರಿ ಠಾಕ್ರೆ ಪ್ರತಿಕ್ರಿಯಿಸಿದ್ದು, ತಮ್ಮ ಹಿಂದುತ್ವಕ್ಕೆ ರಾಜ್ಯಪಾಲರಿಂದ ಅಥವಾ ಯಾರಿಂದಲೂ ಪ್ರಮಾಣಪತ್ರ ಅಗತ್ಯವಿಲ್ಲ. ತಾನು ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿರುವ ಅವರು, “ನಾನು ದೈವಿಕ ಮುನ್ಸೂಚನೆಗಳನ್ನು ಪಡೆಯುತ್ತಿದ್ದೇನೆ ಎಂದು ನೀವು ಹೇಳಿದ್ದೀರಾ? ಬಹುಶಃ ನೀವು ಅವುಗಳನ್ನು ಪಡೆದುಕೊಂಡಿರಬಹುದು ಆದರೆ ನಾನು ಅಷ್ಟು ದೊಡ್ಡವನಲ್ಲ” ಎಂದು ಬರೆದಿದ್ದಾರೆ.

ದೇವಾಲಯಗಳನ್ನು ಪುನಃ ತೆರೆಯುವುದು ಅಥವಾ ವಿಳಂಬ ಮಾಡುವುದು “ಜಾತ್ಯತೀತತೆಯ ಪ್ರಶ್ನೆಯಲ್ಲ” ಎಂದು ಠಾಕ್ರೆ ರಾಜ್ಯಪಾಲರಿಗೆ ನೆನಪಿಸಿದ್ದು, ಕೊಶ್ಯರಿ ಅವರು ತಮ್ಮದೇ ಆದ ಸಾಂವಿಧಾನಿಕ ಪ್ರಮಾಣವನ್ನು ಮರೆತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

“ನೀವು ಕೂಡ ‘ಜಾತ್ಯತೀತ’ ಪದವನ್ನು ಹೊಂದಿರುವ ಸಂವಿಧಾನದ ಮೂಲಕ ಪ್ರತಿಜ್ಞೆ ಮಾಡಿದ್ದೀರಿ ಎಂಬುದನ್ನು ನೀವು ಮರೆತಿದ್ದೀರಾ? ನೀವು ಅದನ್ನು ತಿರಸ್ಕರಿಸುತ್ತೀರಾ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ರಕ್ತದಲ್ಲಿ ತೊಯ್ದ ‘ಉತ್ತಮ’ಪ್ರದೇಶ : ಶಿವಸೇನೆ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...