Homeಅಂಕಣಗಳು“ಮನ್ನೆ ದಿನ ದೀಪ ಹಚ್ಚಿದೇನಕ್ಕ?": ಕಟ್ಟೆಪುರಾಣದಲ್ಲಿ ಜುಮ್ಮಕ್ಕನ್ನ ಕೇಳಿದ ವಾಟಿಸ್ಸೆ

“ಮನ್ನೆ ದಿನ ದೀಪ ಹಚ್ಚಿದೇನಕ್ಕ?”: ಕಟ್ಟೆಪುರಾಣದಲ್ಲಿ ಜುಮ್ಮಕ್ಕನ್ನ ಕೇಳಿದ ವಾಟಿಸ್ಸೆ

- Advertisement -
- Advertisement -

ಜುಮ್ಮಿ ಮನೆಗೆ ಬಂದ ವಾಟಿಸ್ಸೆ,
‘ಮನ್ನೆ ದಿನ ದೀಪ ಹಚ್ಚಿದ್ದೇನಕ್ಕ’ ಎಂದ.
“ಯಾಕ್ಲ.”
“ಇದೇನಕ್ಕ ಹಿಂಕೇಳ್ತಿ, ಮೋದಿ ದೀಪ ಹಚ್ಚಗಂಡು ಕುಂತಿರಿ ಅಂತ ಹೇಳಿದ್ನ ಮರತುಬುಟ್ಟಾ.”
“ಎಲ್ಲೇಳಿದ್ದಾ.”
“ಟಿವಿಲಿ ಕಾಣಿಸಿಗಂಡು ಹೇಳಿದ್ದ ಕಣಕ್ಕ.”
“ಏನಂತ ಹೇಳಿದ್ದಾ”

ಐದನೆ ತಾರೀಖು ರಾತ್ರಿ ವಂಬತ್ತು ಗಂಟೆಗೆ, ಲೈಟಾಪು ಮಾಡಿಕಂಡು, ದೀಪ ಹಚಗಂಡು ವಂಬತ್ತು ನಿಮಿಸ ಮನೆಲಿ ಕುಂತಿರಿ ಅಂತ ಹೇಳಿದ್ದ.”
“ಅದ್ಯಾಕಂಗೇಳಿದ್ದ.”
“ಈ ಕೊರೊನ ವೈರಸ್ ಅದೆ ನೋಡು ಅದು ಬೆಳಕಲ್ಲಿ ಯಲ್ಲಾ ಕಡಿಕೂ ದುಂಬು ತೇಲಿದಂಗೆ ತೇಳಿಕಂಡು ಹೋಯ್ತದಂತೆ. ಆಗ ಯಲ್ಲಾ ದೀಪನು ಆರಿಸಿ. ಅಣತೆ ಹಚಿದ್ರೆ ಅದರತ್ರ ಬಂದು ಸತ್ತೋದವಂತೆ.”
“ಓಹೊ ಲೈಟ್ ಬೆಳಕಿಗೆ ಈಚಉಳ ಬಂದು ಬೀಳ್ತವೆ ನೋಡು ಅಂಗೆ.”
“ಎಜ್ಲಾಟ್ಳಿ ಕರಟ್ ಕಣಕ್ಕ.”
“ಅದವುನಿಗ್ಯಂಗೆ ಗೊತ್ತಾಯಿತ್ಲ.”
“ಅವುನುನ್ನೆನು ಅನ್ನಕಂಡಿದ್ದಿಯಕ್ಕ ನೀನು, ಪ್ರಧಾನಿನೆ ಆಗದೆಯಿದ್ರೆ ಬಿ.ಜೆ.ಪಿ ವಿಜ್ಞಾನಿಯಾಗಿರತಿದ್ದ.”
“ನಾವು ದೀಪ ಹಚ್ಚಲಿಲ್ಲಕಂಡ್ಳ ವಂಬತ್ತು ಗಂಟಗ್ಯಲ್ಲ ಉಂಡು ಮನಿಕಂಬುಡ್ತಿವಿ.”
“ಓ ಮೋದಿ ಮಾತು ಕೇಳಿಲ್ಲ ನೀನು, ಅಂಗರೆ ದೇಸದ್ರೊಹಿ ಕಣಕ್ಕ ನೀನು.”
“ನಾನ್ಯಾಕ್ಲ ದೇಸದ್ರೊಯಿಯಾಗ್ಲಿ.”
“ಕಾಲ ಬದ್ಲಾಗ್ಯದೆ ಕಣಕ್ಕ, ಮೋದಿ ಮಾತು ಕೇಳದೊರ್ಯಲ್ಲ ದೇಸದ್ರೊಹಿಗಳು, ಇಡೀ ದೇಸನೆ ದೀಪ ಹಚಿದಾಗ ನೀನು ಮನಗಿದ್ದೆ ಅಂತಿಯಲ್ಲ. ಕೊರೋನ ಬರದಿಲವ ನಿನ್ನ ಮನಿಗೆ.”
“ಇಡೀ ದೇಸನೆ ದೀಪ ಹಚ್ಚಿದ ಮ್ಯಾಲೆ ಅದು ವಂಟೋಗಿರದಿಲವೇನ್ಲ.”
“ಹೋಗಿಲವಂತೆ ಕಣಕ್ಕ. ಸುಮಾರು ಐದು ಪರಸೆಂಟು ಜನ ದೀಪ ಹಚ್ಚಿರಲಿಲವಂತೆ, ಅಂಗಾಗಿ ಉಳಕಂಡದಂತೆ.”
“ಸಾಬರ್ಯಾರೂ ದೀಪ ಹಚ್ಚಿರಲಿಲವಂತೆ ಕಣೊ” ಎಂದ ಉಗ್ರಿ.
“ಸಾಬರ್ಯಾರು ಮೋದಿ ಮಾತ ಕೇಳ್ಯರು.”
“ಅಂಗರವುನ ಮಾತ ಕೇಳದಿಲವೇನ್ಲ ಸಾಬ್ರು.”
“ಇಲ್ಲ ಕಣಕ್ಕ, ಮೋದಿ ಇಡೀ ದೇಸಕೆ ಪ್ರಧಾನಮಂತ್ರಿಯಾಗಿದ್ರೆ ಕೇಳತಿದ್ರು. ಆದ್ರವುನು ಬಿಜೆಪಿ ಪ್ರಧಾನಿಯಾಗಿದ್ದಕಂಡು, ಆರೆಸೆಸ್ ಹೇಳಿದಂಗೆ ಕೇಳ್ತನೆ ಆಂತ ಸಾಬರು ಅವುನೇಳಿದ್ದ ಮಾತ ಕೇಳದಿಲ್ಲ.”
“ಸಾಬರೇನು ಮೋದಿಗೆ ಸಮಸ್ಯೆ ಅಲ್ಲ ಕಣೊ. ಅವುರು ಗಾಂಧೀಜಿ ಕಾಲದಿಂದ ಸಮಸ್ಸೆನೆ. ಪ್ರಪಂಚಕೆ ಸಮಸ್ಯಾದೋರು ಮೋದಿಗೆ ಯಾವ ಲ್ಯಕ್ಕ.”
“ಅದ್ಯಾಕ್ಲ ಸಾಬರಿಗೆ ಬೈತಿರಿ.”
“ಅವುರು ಡೆಲ್ಲಿಲಿ ಸಭೆ ಮಾಡಿದ್ರಂತೆ, ಅಲ್ಲಿಗೆ ಕೊರೋನಾ ಇದ್ದೊರ ಕರಿಸಿ, ಯಲ್ಲಾರಾ ತಬ್ಬಿಕಂಡು ಕ್ಯಾಕರಿಸಿ ಕೆಮ್ಮಿಕಂಡು ದೇಸದ ತುಂಬ ಚಲ್ಲಾಪಿಲ್ಲಿಯಾಗಿ ಹೋಗಿ ಹರಡಿದರಂತೆ ಕೊರೋನಾವಾ.”
“ಮತ್ತೆ ಚೀಣಾ ದೇಸದಿಂದ ಬತ್ತು ಅಂತಿದ್ರು.”
“ಅದು ಮದ್ಲು, ಈಗ ಬಿಜೆಪಿಗಳಿಗೆ ಸಾಬರು ಸಿಕ್ಕಿರದ್ರಿಂದ ಅವುರ ತಲಿಗಾ ಕಟ್ಟಿ ತಮಾಸಿ ನೋಡ್ತ ಅವುರೆ.”
“ಥೂ ಅಂಗೆ ಮಾಡಬಾರ್ದು ಕಂಡ್ಳ.”
“ಅವು ಅಂಗೆ ಮಾಡ್ತವೆ ಕಣ.., ಅವುಸ್ತಿಕೊಡಕ್ಕೊದ ದಾಗುಟ್ರು ಕಾಂಪೌಡ್ರಗ್ಯಲ್ಲ ವಡದೋಡಿಸ್ಯವೆ.”
“ಅವು ಮಲ್ಲಾಗ್ರು ಬರ ಅವುಕೇನು ಬತ್ಲ.”
“ನೋಡಕ್ಕ, ಸಾಬರ ಮ್ಯಾಲೆ ಈ ಮೋದಿ ಕಡಿಯೋರು ಯರಡು ಮೂರು ಕಾನೂನು ತಂದು ನೀವು ನಮ್ಮ ದೇಸದೋರಲ್ಲ, ಪಾಕಿಸ್ತಾನದೊರು, ಬಾಗ್ಲಾದೇಸದೊರು, ಅಲ್ಲಿಗೆ ರವಾನಿಸ್ತೀವಿ ಅಂತ ಹೆದರಿಸಿದ್ರು. ಆಗ ಅವುರ್ಯಲ್ಲ ಡೆಲ್ಲಿಲಿ ಸಭೆ ಸೇರಿ, ಗಲಾಟೆ ಮಾಡಿದ್ರು. ಅವುರ ಮ್ಯಾಲೆ ಗೂಂಡಾಗಳ ಚೂ ಬಿಟ್ಟು ಗುಂಡಾರಿಸಿ ಐವತ್ತು ಜನ ಕೊಂದಾಕಿದ್ರು ಇದು ಸರಿಯೇನಕ್ಕ.”
“ತೆಪ್ಪು. ಅಂಗೆ ಮಾಡಿದ್ರೆ ಅವುರೆಲ್ಲಿಗೋಗಬೇಕ್ಲ.”
“ಇರುವೆನೂ ಸುಮ್ಮನೆ ಸಾಯದಿಲ್ಲ ಕಣಕ್ಕ. ಕಚ್ಚಿಬುಟ್ಟೆ ಸಾಯ್ತದೆ. ಅಂತಾದ್ರಲ್ಲಿ, ಯಾವ ಸಾಬಿನೂ ಸುಮ್ಮನೆ ಸಾಯದಿಲ್ಲ. ನಾಕುಜನ ತಗದೆ ಹೋಗನ ಅಂತ ತೀರ್ಮಾನ ತಗತನೆ. ಅಂತದ್ಯಾವೊ ವಸಿ ಪೋಲಿ ಬಡ್ಡೆತ್ತವು, ದಾಗುಟ್ರು ಮ್ಯಾಲೆ ಹಲ್ಲೆ ಮಾಡ್ಯವೆ.”
“ಅಂತು ಸಾಬರಿಗೆ ಕ್ಯಟ್ಟೆಸರು ತಂದವೆ ಅನ್ನು.”
“ತರದೇನು ಸಾಬರನ ಅಗಚಿಬುಟ್ರು ಅತ್ತಗೆ” ಎಂದ ಉಗ್ರೀ.
“ಅವುರಿಗೆ ಅಗಚಿಗಂಡರೂ ಸಗತಿನೂ ಅದೆ ಕಣೊ ಉಗ್ರಿ. ಅವುರ ಧರ್ಮನೆ ಅಂಗದೆ.”
“ಕ್ಯರೋನ ಬಂದು ಯಲ್ಲಾರ್ನು ಕ್ಯರಕಂಡೊಯ್ತಾಯಿರುವಾಗ ಧರಮ ಕಡಿಗಂಡೇನ್ಲ.” ಎಂದು ಜುಮ್ಮಿ ಹೇಳುವಾಗ ಸೀರ ಕಾಣಿಸಿಕೊಂಡ.
“ಬಾ ಚಿಗಪ್ಪ. ಈ ಕರೊನ ಬಂದು ಅಮೇರಿಕದಲ್ಲಿ ಲಕ್ಷಾಂತರ ಜನ ಸಾಯ್ತ ಅವುರೆ, ನಮ್ಮ ದೇಸಕ್ಕು ಬಂದ್ರೆ ಕತಿಯೇನು.”
“ಬರ್ಲಿ ಬುಡ್ಳ., ಆಗಿನ ಕಾಲದಲ್ಲಿ ನಮ್ಮಪ್ಪಯಲ್ಲ ಪ್ಳೇಗಿನಲ್ಲಿ ಸತ್ತೋದ್ರು. ಈಗ್ಲು ಅಂಥದೊಂದು ಬಂದದೆ ಒದಿರೋಗ್ಲಿ ಬುಡು.”
‘ಇದೇನು ಚಿಗಪ್ಪ ಹಿಂಗಂತಿ.”
“ಮತ್ತೆ, ಈಗಿನುಡ್ರು ಮಾತ ಕೇಳ್ತವೇನ್ಲ ಹಿರಿಯರೆಗೆ ಗೌರವಕೊಟ್ಟವೇನ್ಲ. ಅದೇನು ಧಿಮಾಕು, ಅದೇನು ಜಂಬಾ, ಅವುರನೇನಾರ ಮಾತಾಡಿಸಕ್ಕಾದತೆ, ಇಂಥ ನನಮಗನವು ಇದ್ರೆಷ್ಟು ಹೋದರೆಷ್ಟು. ಇದು ಬಂದಿದ್ದು ವಳ್ಳೆದೆ ಸುಂಕಿರು. ಜಳ್ಯಲ್ಲ ಹೋಗಿ ಗಟ್ಟಿದು ಉಳಕತ್ತದೆ” ಎಂದು ಸೀರ ನಕ್ಕ.
“ನಗತಿಯಲ್ಲೊ ಚಿಗಪ್ಪ. ವಸ ಜನ ನಿನಿಗೆ ಗೌರವ ಕೊಡಲಿಲ್ಲ ಅಂತ ಕೊರೋನ ಬಂದು ತೂರಿಕಂಡೋಗ್ಲಿ ಅಂತಿಯಲ್ಲಾ. ಲೇ ಉಗ್ರಿ ಸಾಬರ ಬೈತಿಯಲ್ಲೊ ನೋಡಿಲ್ಲೆ ಅವುನೆ ಕೊರೋನಾ ಚಿಗಪ್ಪ.”
“ಅವುಂದೇನ್ಯಲ್ಲ ಆಯ್ತಲ್ಲ ಅಯ್ಯನ ಮಿಸೇನು ನಿಂತೂಗ್ಯದೆ ಚಿಗವ್ವನೂ ಮುದುಕಿಯಾದ್ಲು ಅದ್ಕೆ ಕೊರೋನ ಬರ್ಲಿ ಅಂತ ಕಾಯ್ತ ಕುಂತವನೆ.”
“..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...