Homeಅಂಕಣಗಳು“ಮನ್ನೆ ದಿನ ದೀಪ ಹಚ್ಚಿದೇನಕ್ಕ?": ಕಟ್ಟೆಪುರಾಣದಲ್ಲಿ ಜುಮ್ಮಕ್ಕನ್ನ ಕೇಳಿದ ವಾಟಿಸ್ಸೆ

“ಮನ್ನೆ ದಿನ ದೀಪ ಹಚ್ಚಿದೇನಕ್ಕ?”: ಕಟ್ಟೆಪುರಾಣದಲ್ಲಿ ಜುಮ್ಮಕ್ಕನ್ನ ಕೇಳಿದ ವಾಟಿಸ್ಸೆ

- Advertisement -
- Advertisement -

ಜುಮ್ಮಿ ಮನೆಗೆ ಬಂದ ವಾಟಿಸ್ಸೆ,
‘ಮನ್ನೆ ದಿನ ದೀಪ ಹಚ್ಚಿದ್ದೇನಕ್ಕ’ ಎಂದ.
“ಯಾಕ್ಲ.”
“ಇದೇನಕ್ಕ ಹಿಂಕೇಳ್ತಿ, ಮೋದಿ ದೀಪ ಹಚ್ಚಗಂಡು ಕುಂತಿರಿ ಅಂತ ಹೇಳಿದ್ನ ಮರತುಬುಟ್ಟಾ.”
“ಎಲ್ಲೇಳಿದ್ದಾ.”
“ಟಿವಿಲಿ ಕಾಣಿಸಿಗಂಡು ಹೇಳಿದ್ದ ಕಣಕ್ಕ.”
“ಏನಂತ ಹೇಳಿದ್ದಾ”

ಐದನೆ ತಾರೀಖು ರಾತ್ರಿ ವಂಬತ್ತು ಗಂಟೆಗೆ, ಲೈಟಾಪು ಮಾಡಿಕಂಡು, ದೀಪ ಹಚಗಂಡು ವಂಬತ್ತು ನಿಮಿಸ ಮನೆಲಿ ಕುಂತಿರಿ ಅಂತ ಹೇಳಿದ್ದ.”
“ಅದ್ಯಾಕಂಗೇಳಿದ್ದ.”
“ಈ ಕೊರೊನ ವೈರಸ್ ಅದೆ ನೋಡು ಅದು ಬೆಳಕಲ್ಲಿ ಯಲ್ಲಾ ಕಡಿಕೂ ದುಂಬು ತೇಲಿದಂಗೆ ತೇಳಿಕಂಡು ಹೋಯ್ತದಂತೆ. ಆಗ ಯಲ್ಲಾ ದೀಪನು ಆರಿಸಿ. ಅಣತೆ ಹಚಿದ್ರೆ ಅದರತ್ರ ಬಂದು ಸತ್ತೋದವಂತೆ.”
“ಓಹೊ ಲೈಟ್ ಬೆಳಕಿಗೆ ಈಚಉಳ ಬಂದು ಬೀಳ್ತವೆ ನೋಡು ಅಂಗೆ.”
“ಎಜ್ಲಾಟ್ಳಿ ಕರಟ್ ಕಣಕ್ಕ.”
“ಅದವುನಿಗ್ಯಂಗೆ ಗೊತ್ತಾಯಿತ್ಲ.”
“ಅವುನುನ್ನೆನು ಅನ್ನಕಂಡಿದ್ದಿಯಕ್ಕ ನೀನು, ಪ್ರಧಾನಿನೆ ಆಗದೆಯಿದ್ರೆ ಬಿ.ಜೆ.ಪಿ ವಿಜ್ಞಾನಿಯಾಗಿರತಿದ್ದ.”
“ನಾವು ದೀಪ ಹಚ್ಚಲಿಲ್ಲಕಂಡ್ಳ ವಂಬತ್ತು ಗಂಟಗ್ಯಲ್ಲ ಉಂಡು ಮನಿಕಂಬುಡ್ತಿವಿ.”
“ಓ ಮೋದಿ ಮಾತು ಕೇಳಿಲ್ಲ ನೀನು, ಅಂಗರೆ ದೇಸದ್ರೊಹಿ ಕಣಕ್ಕ ನೀನು.”
“ನಾನ್ಯಾಕ್ಲ ದೇಸದ್ರೊಯಿಯಾಗ್ಲಿ.”
“ಕಾಲ ಬದ್ಲಾಗ್ಯದೆ ಕಣಕ್ಕ, ಮೋದಿ ಮಾತು ಕೇಳದೊರ್ಯಲ್ಲ ದೇಸದ್ರೊಹಿಗಳು, ಇಡೀ ದೇಸನೆ ದೀಪ ಹಚಿದಾಗ ನೀನು ಮನಗಿದ್ದೆ ಅಂತಿಯಲ್ಲ. ಕೊರೋನ ಬರದಿಲವ ನಿನ್ನ ಮನಿಗೆ.”
“ಇಡೀ ದೇಸನೆ ದೀಪ ಹಚ್ಚಿದ ಮ್ಯಾಲೆ ಅದು ವಂಟೋಗಿರದಿಲವೇನ್ಲ.”
“ಹೋಗಿಲವಂತೆ ಕಣಕ್ಕ. ಸುಮಾರು ಐದು ಪರಸೆಂಟು ಜನ ದೀಪ ಹಚ್ಚಿರಲಿಲವಂತೆ, ಅಂಗಾಗಿ ಉಳಕಂಡದಂತೆ.”
“ಸಾಬರ್ಯಾರೂ ದೀಪ ಹಚ್ಚಿರಲಿಲವಂತೆ ಕಣೊ” ಎಂದ ಉಗ್ರಿ.
“ಸಾಬರ್ಯಾರು ಮೋದಿ ಮಾತ ಕೇಳ್ಯರು.”
“ಅಂಗರವುನ ಮಾತ ಕೇಳದಿಲವೇನ್ಲ ಸಾಬ್ರು.”
“ಇಲ್ಲ ಕಣಕ್ಕ, ಮೋದಿ ಇಡೀ ದೇಸಕೆ ಪ್ರಧಾನಮಂತ್ರಿಯಾಗಿದ್ರೆ ಕೇಳತಿದ್ರು. ಆದ್ರವುನು ಬಿಜೆಪಿ ಪ್ರಧಾನಿಯಾಗಿದ್ದಕಂಡು, ಆರೆಸೆಸ್ ಹೇಳಿದಂಗೆ ಕೇಳ್ತನೆ ಆಂತ ಸಾಬರು ಅವುನೇಳಿದ್ದ ಮಾತ ಕೇಳದಿಲ್ಲ.”
“ಸಾಬರೇನು ಮೋದಿಗೆ ಸಮಸ್ಯೆ ಅಲ್ಲ ಕಣೊ. ಅವುರು ಗಾಂಧೀಜಿ ಕಾಲದಿಂದ ಸಮಸ್ಸೆನೆ. ಪ್ರಪಂಚಕೆ ಸಮಸ್ಯಾದೋರು ಮೋದಿಗೆ ಯಾವ ಲ್ಯಕ್ಕ.”
“ಅದ್ಯಾಕ್ಲ ಸಾಬರಿಗೆ ಬೈತಿರಿ.”
“ಅವುರು ಡೆಲ್ಲಿಲಿ ಸಭೆ ಮಾಡಿದ್ರಂತೆ, ಅಲ್ಲಿಗೆ ಕೊರೋನಾ ಇದ್ದೊರ ಕರಿಸಿ, ಯಲ್ಲಾರಾ ತಬ್ಬಿಕಂಡು ಕ್ಯಾಕರಿಸಿ ಕೆಮ್ಮಿಕಂಡು ದೇಸದ ತುಂಬ ಚಲ್ಲಾಪಿಲ್ಲಿಯಾಗಿ ಹೋಗಿ ಹರಡಿದರಂತೆ ಕೊರೋನಾವಾ.”
“ಮತ್ತೆ ಚೀಣಾ ದೇಸದಿಂದ ಬತ್ತು ಅಂತಿದ್ರು.”
“ಅದು ಮದ್ಲು, ಈಗ ಬಿಜೆಪಿಗಳಿಗೆ ಸಾಬರು ಸಿಕ್ಕಿರದ್ರಿಂದ ಅವುರ ತಲಿಗಾ ಕಟ್ಟಿ ತಮಾಸಿ ನೋಡ್ತ ಅವುರೆ.”
“ಥೂ ಅಂಗೆ ಮಾಡಬಾರ್ದು ಕಂಡ್ಳ.”
“ಅವು ಅಂಗೆ ಮಾಡ್ತವೆ ಕಣ.., ಅವುಸ್ತಿಕೊಡಕ್ಕೊದ ದಾಗುಟ್ರು ಕಾಂಪೌಡ್ರಗ್ಯಲ್ಲ ವಡದೋಡಿಸ್ಯವೆ.”
“ಅವು ಮಲ್ಲಾಗ್ರು ಬರ ಅವುಕೇನು ಬತ್ಲ.”
“ನೋಡಕ್ಕ, ಸಾಬರ ಮ್ಯಾಲೆ ಈ ಮೋದಿ ಕಡಿಯೋರು ಯರಡು ಮೂರು ಕಾನೂನು ತಂದು ನೀವು ನಮ್ಮ ದೇಸದೋರಲ್ಲ, ಪಾಕಿಸ್ತಾನದೊರು, ಬಾಗ್ಲಾದೇಸದೊರು, ಅಲ್ಲಿಗೆ ರವಾನಿಸ್ತೀವಿ ಅಂತ ಹೆದರಿಸಿದ್ರು. ಆಗ ಅವುರ್ಯಲ್ಲ ಡೆಲ್ಲಿಲಿ ಸಭೆ ಸೇರಿ, ಗಲಾಟೆ ಮಾಡಿದ್ರು. ಅವುರ ಮ್ಯಾಲೆ ಗೂಂಡಾಗಳ ಚೂ ಬಿಟ್ಟು ಗುಂಡಾರಿಸಿ ಐವತ್ತು ಜನ ಕೊಂದಾಕಿದ್ರು ಇದು ಸರಿಯೇನಕ್ಕ.”
“ತೆಪ್ಪು. ಅಂಗೆ ಮಾಡಿದ್ರೆ ಅವುರೆಲ್ಲಿಗೋಗಬೇಕ್ಲ.”
“ಇರುವೆನೂ ಸುಮ್ಮನೆ ಸಾಯದಿಲ್ಲ ಕಣಕ್ಕ. ಕಚ್ಚಿಬುಟ್ಟೆ ಸಾಯ್ತದೆ. ಅಂತಾದ್ರಲ್ಲಿ, ಯಾವ ಸಾಬಿನೂ ಸುಮ್ಮನೆ ಸಾಯದಿಲ್ಲ. ನಾಕುಜನ ತಗದೆ ಹೋಗನ ಅಂತ ತೀರ್ಮಾನ ತಗತನೆ. ಅಂತದ್ಯಾವೊ ವಸಿ ಪೋಲಿ ಬಡ್ಡೆತ್ತವು, ದಾಗುಟ್ರು ಮ್ಯಾಲೆ ಹಲ್ಲೆ ಮಾಡ್ಯವೆ.”
“ಅಂತು ಸಾಬರಿಗೆ ಕ್ಯಟ್ಟೆಸರು ತಂದವೆ ಅನ್ನು.”
“ತರದೇನು ಸಾಬರನ ಅಗಚಿಬುಟ್ರು ಅತ್ತಗೆ” ಎಂದ ಉಗ್ರೀ.
“ಅವುರಿಗೆ ಅಗಚಿಗಂಡರೂ ಸಗತಿನೂ ಅದೆ ಕಣೊ ಉಗ್ರಿ. ಅವುರ ಧರ್ಮನೆ ಅಂಗದೆ.”
“ಕ್ಯರೋನ ಬಂದು ಯಲ್ಲಾರ್ನು ಕ್ಯರಕಂಡೊಯ್ತಾಯಿರುವಾಗ ಧರಮ ಕಡಿಗಂಡೇನ್ಲ.” ಎಂದು ಜುಮ್ಮಿ ಹೇಳುವಾಗ ಸೀರ ಕಾಣಿಸಿಕೊಂಡ.
“ಬಾ ಚಿಗಪ್ಪ. ಈ ಕರೊನ ಬಂದು ಅಮೇರಿಕದಲ್ಲಿ ಲಕ್ಷಾಂತರ ಜನ ಸಾಯ್ತ ಅವುರೆ, ನಮ್ಮ ದೇಸಕ್ಕು ಬಂದ್ರೆ ಕತಿಯೇನು.”
“ಬರ್ಲಿ ಬುಡ್ಳ., ಆಗಿನ ಕಾಲದಲ್ಲಿ ನಮ್ಮಪ್ಪಯಲ್ಲ ಪ್ಳೇಗಿನಲ್ಲಿ ಸತ್ತೋದ್ರು. ಈಗ್ಲು ಅಂಥದೊಂದು ಬಂದದೆ ಒದಿರೋಗ್ಲಿ ಬುಡು.”
‘ಇದೇನು ಚಿಗಪ್ಪ ಹಿಂಗಂತಿ.”
“ಮತ್ತೆ, ಈಗಿನುಡ್ರು ಮಾತ ಕೇಳ್ತವೇನ್ಲ ಹಿರಿಯರೆಗೆ ಗೌರವಕೊಟ್ಟವೇನ್ಲ. ಅದೇನು ಧಿಮಾಕು, ಅದೇನು ಜಂಬಾ, ಅವುರನೇನಾರ ಮಾತಾಡಿಸಕ್ಕಾದತೆ, ಇಂಥ ನನಮಗನವು ಇದ್ರೆಷ್ಟು ಹೋದರೆಷ್ಟು. ಇದು ಬಂದಿದ್ದು ವಳ್ಳೆದೆ ಸುಂಕಿರು. ಜಳ್ಯಲ್ಲ ಹೋಗಿ ಗಟ್ಟಿದು ಉಳಕತ್ತದೆ” ಎಂದು ಸೀರ ನಕ್ಕ.
“ನಗತಿಯಲ್ಲೊ ಚಿಗಪ್ಪ. ವಸ ಜನ ನಿನಿಗೆ ಗೌರವ ಕೊಡಲಿಲ್ಲ ಅಂತ ಕೊರೋನ ಬಂದು ತೂರಿಕಂಡೋಗ್ಲಿ ಅಂತಿಯಲ್ಲಾ. ಲೇ ಉಗ್ರಿ ಸಾಬರ ಬೈತಿಯಲ್ಲೊ ನೋಡಿಲ್ಲೆ ಅವುನೆ ಕೊರೋನಾ ಚಿಗಪ್ಪ.”
“ಅವುಂದೇನ್ಯಲ್ಲ ಆಯ್ತಲ್ಲ ಅಯ್ಯನ ಮಿಸೇನು ನಿಂತೂಗ್ಯದೆ ಚಿಗವ್ವನೂ ಮುದುಕಿಯಾದ್ಲು ಅದ್ಕೆ ಕೊರೋನ ಬರ್ಲಿ ಅಂತ ಕಾಯ್ತ ಕುಂತವನೆ.”
“..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...