Homeಅಂಕಣಗಳು“ಮನ್ನೆ ದಿನ ದೀಪ ಹಚ್ಚಿದೇನಕ್ಕ?": ಕಟ್ಟೆಪುರಾಣದಲ್ಲಿ ಜುಮ್ಮಕ್ಕನ್ನ ಕೇಳಿದ ವಾಟಿಸ್ಸೆ

“ಮನ್ನೆ ದಿನ ದೀಪ ಹಚ್ಚಿದೇನಕ್ಕ?”: ಕಟ್ಟೆಪುರಾಣದಲ್ಲಿ ಜುಮ್ಮಕ್ಕನ್ನ ಕೇಳಿದ ವಾಟಿಸ್ಸೆ

- Advertisement -
- Advertisement -

ಜುಮ್ಮಿ ಮನೆಗೆ ಬಂದ ವಾಟಿಸ್ಸೆ,
‘ಮನ್ನೆ ದಿನ ದೀಪ ಹಚ್ಚಿದ್ದೇನಕ್ಕ’ ಎಂದ.
“ಯಾಕ್ಲ.”
“ಇದೇನಕ್ಕ ಹಿಂಕೇಳ್ತಿ, ಮೋದಿ ದೀಪ ಹಚ್ಚಗಂಡು ಕುಂತಿರಿ ಅಂತ ಹೇಳಿದ್ನ ಮರತುಬುಟ್ಟಾ.”
“ಎಲ್ಲೇಳಿದ್ದಾ.”
“ಟಿವಿಲಿ ಕಾಣಿಸಿಗಂಡು ಹೇಳಿದ್ದ ಕಣಕ್ಕ.”
“ಏನಂತ ಹೇಳಿದ್ದಾ”

ಐದನೆ ತಾರೀಖು ರಾತ್ರಿ ವಂಬತ್ತು ಗಂಟೆಗೆ, ಲೈಟಾಪು ಮಾಡಿಕಂಡು, ದೀಪ ಹಚಗಂಡು ವಂಬತ್ತು ನಿಮಿಸ ಮನೆಲಿ ಕುಂತಿರಿ ಅಂತ ಹೇಳಿದ್ದ.”
“ಅದ್ಯಾಕಂಗೇಳಿದ್ದ.”
“ಈ ಕೊರೊನ ವೈರಸ್ ಅದೆ ನೋಡು ಅದು ಬೆಳಕಲ್ಲಿ ಯಲ್ಲಾ ಕಡಿಕೂ ದುಂಬು ತೇಲಿದಂಗೆ ತೇಳಿಕಂಡು ಹೋಯ್ತದಂತೆ. ಆಗ ಯಲ್ಲಾ ದೀಪನು ಆರಿಸಿ. ಅಣತೆ ಹಚಿದ್ರೆ ಅದರತ್ರ ಬಂದು ಸತ್ತೋದವಂತೆ.”
“ಓಹೊ ಲೈಟ್ ಬೆಳಕಿಗೆ ಈಚಉಳ ಬಂದು ಬೀಳ್ತವೆ ನೋಡು ಅಂಗೆ.”
“ಎಜ್ಲಾಟ್ಳಿ ಕರಟ್ ಕಣಕ್ಕ.”
“ಅದವುನಿಗ್ಯಂಗೆ ಗೊತ್ತಾಯಿತ್ಲ.”
“ಅವುನುನ್ನೆನು ಅನ್ನಕಂಡಿದ್ದಿಯಕ್ಕ ನೀನು, ಪ್ರಧಾನಿನೆ ಆಗದೆಯಿದ್ರೆ ಬಿ.ಜೆ.ಪಿ ವಿಜ್ಞಾನಿಯಾಗಿರತಿದ್ದ.”
“ನಾವು ದೀಪ ಹಚ್ಚಲಿಲ್ಲಕಂಡ್ಳ ವಂಬತ್ತು ಗಂಟಗ್ಯಲ್ಲ ಉಂಡು ಮನಿಕಂಬುಡ್ತಿವಿ.”
“ಓ ಮೋದಿ ಮಾತು ಕೇಳಿಲ್ಲ ನೀನು, ಅಂಗರೆ ದೇಸದ್ರೊಹಿ ಕಣಕ್ಕ ನೀನು.”
“ನಾನ್ಯಾಕ್ಲ ದೇಸದ್ರೊಯಿಯಾಗ್ಲಿ.”
“ಕಾಲ ಬದ್ಲಾಗ್ಯದೆ ಕಣಕ್ಕ, ಮೋದಿ ಮಾತು ಕೇಳದೊರ್ಯಲ್ಲ ದೇಸದ್ರೊಹಿಗಳು, ಇಡೀ ದೇಸನೆ ದೀಪ ಹಚಿದಾಗ ನೀನು ಮನಗಿದ್ದೆ ಅಂತಿಯಲ್ಲ. ಕೊರೋನ ಬರದಿಲವ ನಿನ್ನ ಮನಿಗೆ.”
“ಇಡೀ ದೇಸನೆ ದೀಪ ಹಚ್ಚಿದ ಮ್ಯಾಲೆ ಅದು ವಂಟೋಗಿರದಿಲವೇನ್ಲ.”
“ಹೋಗಿಲವಂತೆ ಕಣಕ್ಕ. ಸುಮಾರು ಐದು ಪರಸೆಂಟು ಜನ ದೀಪ ಹಚ್ಚಿರಲಿಲವಂತೆ, ಅಂಗಾಗಿ ಉಳಕಂಡದಂತೆ.”
“ಸಾಬರ್ಯಾರೂ ದೀಪ ಹಚ್ಚಿರಲಿಲವಂತೆ ಕಣೊ” ಎಂದ ಉಗ್ರಿ.
“ಸಾಬರ್ಯಾರು ಮೋದಿ ಮಾತ ಕೇಳ್ಯರು.”
“ಅಂಗರವುನ ಮಾತ ಕೇಳದಿಲವೇನ್ಲ ಸಾಬ್ರು.”
“ಇಲ್ಲ ಕಣಕ್ಕ, ಮೋದಿ ಇಡೀ ದೇಸಕೆ ಪ್ರಧಾನಮಂತ್ರಿಯಾಗಿದ್ರೆ ಕೇಳತಿದ್ರು. ಆದ್ರವುನು ಬಿಜೆಪಿ ಪ್ರಧಾನಿಯಾಗಿದ್ದಕಂಡು, ಆರೆಸೆಸ್ ಹೇಳಿದಂಗೆ ಕೇಳ್ತನೆ ಆಂತ ಸಾಬರು ಅವುನೇಳಿದ್ದ ಮಾತ ಕೇಳದಿಲ್ಲ.”
“ಸಾಬರೇನು ಮೋದಿಗೆ ಸಮಸ್ಯೆ ಅಲ್ಲ ಕಣೊ. ಅವುರು ಗಾಂಧೀಜಿ ಕಾಲದಿಂದ ಸಮಸ್ಸೆನೆ. ಪ್ರಪಂಚಕೆ ಸಮಸ್ಯಾದೋರು ಮೋದಿಗೆ ಯಾವ ಲ್ಯಕ್ಕ.”
“ಅದ್ಯಾಕ್ಲ ಸಾಬರಿಗೆ ಬೈತಿರಿ.”
“ಅವುರು ಡೆಲ್ಲಿಲಿ ಸಭೆ ಮಾಡಿದ್ರಂತೆ, ಅಲ್ಲಿಗೆ ಕೊರೋನಾ ಇದ್ದೊರ ಕರಿಸಿ, ಯಲ್ಲಾರಾ ತಬ್ಬಿಕಂಡು ಕ್ಯಾಕರಿಸಿ ಕೆಮ್ಮಿಕಂಡು ದೇಸದ ತುಂಬ ಚಲ್ಲಾಪಿಲ್ಲಿಯಾಗಿ ಹೋಗಿ ಹರಡಿದರಂತೆ ಕೊರೋನಾವಾ.”
“ಮತ್ತೆ ಚೀಣಾ ದೇಸದಿಂದ ಬತ್ತು ಅಂತಿದ್ರು.”
“ಅದು ಮದ್ಲು, ಈಗ ಬಿಜೆಪಿಗಳಿಗೆ ಸಾಬರು ಸಿಕ್ಕಿರದ್ರಿಂದ ಅವುರ ತಲಿಗಾ ಕಟ್ಟಿ ತಮಾಸಿ ನೋಡ್ತ ಅವುರೆ.”
“ಥೂ ಅಂಗೆ ಮಾಡಬಾರ್ದು ಕಂಡ್ಳ.”
“ಅವು ಅಂಗೆ ಮಾಡ್ತವೆ ಕಣ.., ಅವುಸ್ತಿಕೊಡಕ್ಕೊದ ದಾಗುಟ್ರು ಕಾಂಪೌಡ್ರಗ್ಯಲ್ಲ ವಡದೋಡಿಸ್ಯವೆ.”
“ಅವು ಮಲ್ಲಾಗ್ರು ಬರ ಅವುಕೇನು ಬತ್ಲ.”
“ನೋಡಕ್ಕ, ಸಾಬರ ಮ್ಯಾಲೆ ಈ ಮೋದಿ ಕಡಿಯೋರು ಯರಡು ಮೂರು ಕಾನೂನು ತಂದು ನೀವು ನಮ್ಮ ದೇಸದೋರಲ್ಲ, ಪಾಕಿಸ್ತಾನದೊರು, ಬಾಗ್ಲಾದೇಸದೊರು, ಅಲ್ಲಿಗೆ ರವಾನಿಸ್ತೀವಿ ಅಂತ ಹೆದರಿಸಿದ್ರು. ಆಗ ಅವುರ್ಯಲ್ಲ ಡೆಲ್ಲಿಲಿ ಸಭೆ ಸೇರಿ, ಗಲಾಟೆ ಮಾಡಿದ್ರು. ಅವುರ ಮ್ಯಾಲೆ ಗೂಂಡಾಗಳ ಚೂ ಬಿಟ್ಟು ಗುಂಡಾರಿಸಿ ಐವತ್ತು ಜನ ಕೊಂದಾಕಿದ್ರು ಇದು ಸರಿಯೇನಕ್ಕ.”
“ತೆಪ್ಪು. ಅಂಗೆ ಮಾಡಿದ್ರೆ ಅವುರೆಲ್ಲಿಗೋಗಬೇಕ್ಲ.”
“ಇರುವೆನೂ ಸುಮ್ಮನೆ ಸಾಯದಿಲ್ಲ ಕಣಕ್ಕ. ಕಚ್ಚಿಬುಟ್ಟೆ ಸಾಯ್ತದೆ. ಅಂತಾದ್ರಲ್ಲಿ, ಯಾವ ಸಾಬಿನೂ ಸುಮ್ಮನೆ ಸಾಯದಿಲ್ಲ. ನಾಕುಜನ ತಗದೆ ಹೋಗನ ಅಂತ ತೀರ್ಮಾನ ತಗತನೆ. ಅಂತದ್ಯಾವೊ ವಸಿ ಪೋಲಿ ಬಡ್ಡೆತ್ತವು, ದಾಗುಟ್ರು ಮ್ಯಾಲೆ ಹಲ್ಲೆ ಮಾಡ್ಯವೆ.”
“ಅಂತು ಸಾಬರಿಗೆ ಕ್ಯಟ್ಟೆಸರು ತಂದವೆ ಅನ್ನು.”
“ತರದೇನು ಸಾಬರನ ಅಗಚಿಬುಟ್ರು ಅತ್ತಗೆ” ಎಂದ ಉಗ್ರೀ.
“ಅವುರಿಗೆ ಅಗಚಿಗಂಡರೂ ಸಗತಿನೂ ಅದೆ ಕಣೊ ಉಗ್ರಿ. ಅವುರ ಧರ್ಮನೆ ಅಂಗದೆ.”
“ಕ್ಯರೋನ ಬಂದು ಯಲ್ಲಾರ್ನು ಕ್ಯರಕಂಡೊಯ್ತಾಯಿರುವಾಗ ಧರಮ ಕಡಿಗಂಡೇನ್ಲ.” ಎಂದು ಜುಮ್ಮಿ ಹೇಳುವಾಗ ಸೀರ ಕಾಣಿಸಿಕೊಂಡ.
“ಬಾ ಚಿಗಪ್ಪ. ಈ ಕರೊನ ಬಂದು ಅಮೇರಿಕದಲ್ಲಿ ಲಕ್ಷಾಂತರ ಜನ ಸಾಯ್ತ ಅವುರೆ, ನಮ್ಮ ದೇಸಕ್ಕು ಬಂದ್ರೆ ಕತಿಯೇನು.”
“ಬರ್ಲಿ ಬುಡ್ಳ., ಆಗಿನ ಕಾಲದಲ್ಲಿ ನಮ್ಮಪ್ಪಯಲ್ಲ ಪ್ಳೇಗಿನಲ್ಲಿ ಸತ್ತೋದ್ರು. ಈಗ್ಲು ಅಂಥದೊಂದು ಬಂದದೆ ಒದಿರೋಗ್ಲಿ ಬುಡು.”
‘ಇದೇನು ಚಿಗಪ್ಪ ಹಿಂಗಂತಿ.”
“ಮತ್ತೆ, ಈಗಿನುಡ್ರು ಮಾತ ಕೇಳ್ತವೇನ್ಲ ಹಿರಿಯರೆಗೆ ಗೌರವಕೊಟ್ಟವೇನ್ಲ. ಅದೇನು ಧಿಮಾಕು, ಅದೇನು ಜಂಬಾ, ಅವುರನೇನಾರ ಮಾತಾಡಿಸಕ್ಕಾದತೆ, ಇಂಥ ನನಮಗನವು ಇದ್ರೆಷ್ಟು ಹೋದರೆಷ್ಟು. ಇದು ಬಂದಿದ್ದು ವಳ್ಳೆದೆ ಸುಂಕಿರು. ಜಳ್ಯಲ್ಲ ಹೋಗಿ ಗಟ್ಟಿದು ಉಳಕತ್ತದೆ” ಎಂದು ಸೀರ ನಕ್ಕ.
“ನಗತಿಯಲ್ಲೊ ಚಿಗಪ್ಪ. ವಸ ಜನ ನಿನಿಗೆ ಗೌರವ ಕೊಡಲಿಲ್ಲ ಅಂತ ಕೊರೋನ ಬಂದು ತೂರಿಕಂಡೋಗ್ಲಿ ಅಂತಿಯಲ್ಲಾ. ಲೇ ಉಗ್ರಿ ಸಾಬರ ಬೈತಿಯಲ್ಲೊ ನೋಡಿಲ್ಲೆ ಅವುನೆ ಕೊರೋನಾ ಚಿಗಪ್ಪ.”
“ಅವುಂದೇನ್ಯಲ್ಲ ಆಯ್ತಲ್ಲ ಅಯ್ಯನ ಮಿಸೇನು ನಿಂತೂಗ್ಯದೆ ಚಿಗವ್ವನೂ ಮುದುಕಿಯಾದ್ಲು ಅದ್ಕೆ ಕೊರೋನ ಬರ್ಲಿ ಅಂತ ಕಾಯ್ತ ಕುಂತವನೆ.”
“..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...