Homeಅಂಕಣಗಳು“ಮನ್ನೆ ದಿನ ದೀಪ ಹಚ್ಚಿದೇನಕ್ಕ?": ಕಟ್ಟೆಪುರಾಣದಲ್ಲಿ ಜುಮ್ಮಕ್ಕನ್ನ ಕೇಳಿದ ವಾಟಿಸ್ಸೆ

“ಮನ್ನೆ ದಿನ ದೀಪ ಹಚ್ಚಿದೇನಕ್ಕ?”: ಕಟ್ಟೆಪುರಾಣದಲ್ಲಿ ಜುಮ್ಮಕ್ಕನ್ನ ಕೇಳಿದ ವಾಟಿಸ್ಸೆ

- Advertisement -
- Advertisement -

ಜುಮ್ಮಿ ಮನೆಗೆ ಬಂದ ವಾಟಿಸ್ಸೆ,
‘ಮನ್ನೆ ದಿನ ದೀಪ ಹಚ್ಚಿದ್ದೇನಕ್ಕ’ ಎಂದ.
“ಯಾಕ್ಲ.”
“ಇದೇನಕ್ಕ ಹಿಂಕೇಳ್ತಿ, ಮೋದಿ ದೀಪ ಹಚ್ಚಗಂಡು ಕುಂತಿರಿ ಅಂತ ಹೇಳಿದ್ನ ಮರತುಬುಟ್ಟಾ.”
“ಎಲ್ಲೇಳಿದ್ದಾ.”
“ಟಿವಿಲಿ ಕಾಣಿಸಿಗಂಡು ಹೇಳಿದ್ದ ಕಣಕ್ಕ.”
“ಏನಂತ ಹೇಳಿದ್ದಾ”

ಐದನೆ ತಾರೀಖು ರಾತ್ರಿ ವಂಬತ್ತು ಗಂಟೆಗೆ, ಲೈಟಾಪು ಮಾಡಿಕಂಡು, ದೀಪ ಹಚಗಂಡು ವಂಬತ್ತು ನಿಮಿಸ ಮನೆಲಿ ಕುಂತಿರಿ ಅಂತ ಹೇಳಿದ್ದ.”
“ಅದ್ಯಾಕಂಗೇಳಿದ್ದ.”
“ಈ ಕೊರೊನ ವೈರಸ್ ಅದೆ ನೋಡು ಅದು ಬೆಳಕಲ್ಲಿ ಯಲ್ಲಾ ಕಡಿಕೂ ದುಂಬು ತೇಲಿದಂಗೆ ತೇಳಿಕಂಡು ಹೋಯ್ತದಂತೆ. ಆಗ ಯಲ್ಲಾ ದೀಪನು ಆರಿಸಿ. ಅಣತೆ ಹಚಿದ್ರೆ ಅದರತ್ರ ಬಂದು ಸತ್ತೋದವಂತೆ.”
“ಓಹೊ ಲೈಟ್ ಬೆಳಕಿಗೆ ಈಚಉಳ ಬಂದು ಬೀಳ್ತವೆ ನೋಡು ಅಂಗೆ.”
“ಎಜ್ಲಾಟ್ಳಿ ಕರಟ್ ಕಣಕ್ಕ.”
“ಅದವುನಿಗ್ಯಂಗೆ ಗೊತ್ತಾಯಿತ್ಲ.”
“ಅವುನುನ್ನೆನು ಅನ್ನಕಂಡಿದ್ದಿಯಕ್ಕ ನೀನು, ಪ್ರಧಾನಿನೆ ಆಗದೆಯಿದ್ರೆ ಬಿ.ಜೆ.ಪಿ ವಿಜ್ಞಾನಿಯಾಗಿರತಿದ್ದ.”
“ನಾವು ದೀಪ ಹಚ್ಚಲಿಲ್ಲಕಂಡ್ಳ ವಂಬತ್ತು ಗಂಟಗ್ಯಲ್ಲ ಉಂಡು ಮನಿಕಂಬುಡ್ತಿವಿ.”
“ಓ ಮೋದಿ ಮಾತು ಕೇಳಿಲ್ಲ ನೀನು, ಅಂಗರೆ ದೇಸದ್ರೊಹಿ ಕಣಕ್ಕ ನೀನು.”
“ನಾನ್ಯಾಕ್ಲ ದೇಸದ್ರೊಯಿಯಾಗ್ಲಿ.”
“ಕಾಲ ಬದ್ಲಾಗ್ಯದೆ ಕಣಕ್ಕ, ಮೋದಿ ಮಾತು ಕೇಳದೊರ್ಯಲ್ಲ ದೇಸದ್ರೊಹಿಗಳು, ಇಡೀ ದೇಸನೆ ದೀಪ ಹಚಿದಾಗ ನೀನು ಮನಗಿದ್ದೆ ಅಂತಿಯಲ್ಲ. ಕೊರೋನ ಬರದಿಲವ ನಿನ್ನ ಮನಿಗೆ.”
“ಇಡೀ ದೇಸನೆ ದೀಪ ಹಚ್ಚಿದ ಮ್ಯಾಲೆ ಅದು ವಂಟೋಗಿರದಿಲವೇನ್ಲ.”
“ಹೋಗಿಲವಂತೆ ಕಣಕ್ಕ. ಸುಮಾರು ಐದು ಪರಸೆಂಟು ಜನ ದೀಪ ಹಚ್ಚಿರಲಿಲವಂತೆ, ಅಂಗಾಗಿ ಉಳಕಂಡದಂತೆ.”
“ಸಾಬರ್ಯಾರೂ ದೀಪ ಹಚ್ಚಿರಲಿಲವಂತೆ ಕಣೊ” ಎಂದ ಉಗ್ರಿ.
“ಸಾಬರ್ಯಾರು ಮೋದಿ ಮಾತ ಕೇಳ್ಯರು.”
“ಅಂಗರವುನ ಮಾತ ಕೇಳದಿಲವೇನ್ಲ ಸಾಬ್ರು.”
“ಇಲ್ಲ ಕಣಕ್ಕ, ಮೋದಿ ಇಡೀ ದೇಸಕೆ ಪ್ರಧಾನಮಂತ್ರಿಯಾಗಿದ್ರೆ ಕೇಳತಿದ್ರು. ಆದ್ರವುನು ಬಿಜೆಪಿ ಪ್ರಧಾನಿಯಾಗಿದ್ದಕಂಡು, ಆರೆಸೆಸ್ ಹೇಳಿದಂಗೆ ಕೇಳ್ತನೆ ಆಂತ ಸಾಬರು ಅವುನೇಳಿದ್ದ ಮಾತ ಕೇಳದಿಲ್ಲ.”
“ಸಾಬರೇನು ಮೋದಿಗೆ ಸಮಸ್ಯೆ ಅಲ್ಲ ಕಣೊ. ಅವುರು ಗಾಂಧೀಜಿ ಕಾಲದಿಂದ ಸಮಸ್ಸೆನೆ. ಪ್ರಪಂಚಕೆ ಸಮಸ್ಯಾದೋರು ಮೋದಿಗೆ ಯಾವ ಲ್ಯಕ್ಕ.”
“ಅದ್ಯಾಕ್ಲ ಸಾಬರಿಗೆ ಬೈತಿರಿ.”
“ಅವುರು ಡೆಲ್ಲಿಲಿ ಸಭೆ ಮಾಡಿದ್ರಂತೆ, ಅಲ್ಲಿಗೆ ಕೊರೋನಾ ಇದ್ದೊರ ಕರಿಸಿ, ಯಲ್ಲಾರಾ ತಬ್ಬಿಕಂಡು ಕ್ಯಾಕರಿಸಿ ಕೆಮ್ಮಿಕಂಡು ದೇಸದ ತುಂಬ ಚಲ್ಲಾಪಿಲ್ಲಿಯಾಗಿ ಹೋಗಿ ಹರಡಿದರಂತೆ ಕೊರೋನಾವಾ.”
“ಮತ್ತೆ ಚೀಣಾ ದೇಸದಿಂದ ಬತ್ತು ಅಂತಿದ್ರು.”
“ಅದು ಮದ್ಲು, ಈಗ ಬಿಜೆಪಿಗಳಿಗೆ ಸಾಬರು ಸಿಕ್ಕಿರದ್ರಿಂದ ಅವುರ ತಲಿಗಾ ಕಟ್ಟಿ ತಮಾಸಿ ನೋಡ್ತ ಅವುರೆ.”
“ಥೂ ಅಂಗೆ ಮಾಡಬಾರ್ದು ಕಂಡ್ಳ.”
“ಅವು ಅಂಗೆ ಮಾಡ್ತವೆ ಕಣ.., ಅವುಸ್ತಿಕೊಡಕ್ಕೊದ ದಾಗುಟ್ರು ಕಾಂಪೌಡ್ರಗ್ಯಲ್ಲ ವಡದೋಡಿಸ್ಯವೆ.”
“ಅವು ಮಲ್ಲಾಗ್ರು ಬರ ಅವುಕೇನು ಬತ್ಲ.”
“ನೋಡಕ್ಕ, ಸಾಬರ ಮ್ಯಾಲೆ ಈ ಮೋದಿ ಕಡಿಯೋರು ಯರಡು ಮೂರು ಕಾನೂನು ತಂದು ನೀವು ನಮ್ಮ ದೇಸದೋರಲ್ಲ, ಪಾಕಿಸ್ತಾನದೊರು, ಬಾಗ್ಲಾದೇಸದೊರು, ಅಲ್ಲಿಗೆ ರವಾನಿಸ್ತೀವಿ ಅಂತ ಹೆದರಿಸಿದ್ರು. ಆಗ ಅವುರ್ಯಲ್ಲ ಡೆಲ್ಲಿಲಿ ಸಭೆ ಸೇರಿ, ಗಲಾಟೆ ಮಾಡಿದ್ರು. ಅವುರ ಮ್ಯಾಲೆ ಗೂಂಡಾಗಳ ಚೂ ಬಿಟ್ಟು ಗುಂಡಾರಿಸಿ ಐವತ್ತು ಜನ ಕೊಂದಾಕಿದ್ರು ಇದು ಸರಿಯೇನಕ್ಕ.”
“ತೆಪ್ಪು. ಅಂಗೆ ಮಾಡಿದ್ರೆ ಅವುರೆಲ್ಲಿಗೋಗಬೇಕ್ಲ.”
“ಇರುವೆನೂ ಸುಮ್ಮನೆ ಸಾಯದಿಲ್ಲ ಕಣಕ್ಕ. ಕಚ್ಚಿಬುಟ್ಟೆ ಸಾಯ್ತದೆ. ಅಂತಾದ್ರಲ್ಲಿ, ಯಾವ ಸಾಬಿನೂ ಸುಮ್ಮನೆ ಸಾಯದಿಲ್ಲ. ನಾಕುಜನ ತಗದೆ ಹೋಗನ ಅಂತ ತೀರ್ಮಾನ ತಗತನೆ. ಅಂತದ್ಯಾವೊ ವಸಿ ಪೋಲಿ ಬಡ್ಡೆತ್ತವು, ದಾಗುಟ್ರು ಮ್ಯಾಲೆ ಹಲ್ಲೆ ಮಾಡ್ಯವೆ.”
“ಅಂತು ಸಾಬರಿಗೆ ಕ್ಯಟ್ಟೆಸರು ತಂದವೆ ಅನ್ನು.”
“ತರದೇನು ಸಾಬರನ ಅಗಚಿಬುಟ್ರು ಅತ್ತಗೆ” ಎಂದ ಉಗ್ರೀ.
“ಅವುರಿಗೆ ಅಗಚಿಗಂಡರೂ ಸಗತಿನೂ ಅದೆ ಕಣೊ ಉಗ್ರಿ. ಅವುರ ಧರ್ಮನೆ ಅಂಗದೆ.”
“ಕ್ಯರೋನ ಬಂದು ಯಲ್ಲಾರ್ನು ಕ್ಯರಕಂಡೊಯ್ತಾಯಿರುವಾಗ ಧರಮ ಕಡಿಗಂಡೇನ್ಲ.” ಎಂದು ಜುಮ್ಮಿ ಹೇಳುವಾಗ ಸೀರ ಕಾಣಿಸಿಕೊಂಡ.
“ಬಾ ಚಿಗಪ್ಪ. ಈ ಕರೊನ ಬಂದು ಅಮೇರಿಕದಲ್ಲಿ ಲಕ್ಷಾಂತರ ಜನ ಸಾಯ್ತ ಅವುರೆ, ನಮ್ಮ ದೇಸಕ್ಕು ಬಂದ್ರೆ ಕತಿಯೇನು.”
“ಬರ್ಲಿ ಬುಡ್ಳ., ಆಗಿನ ಕಾಲದಲ್ಲಿ ನಮ್ಮಪ್ಪಯಲ್ಲ ಪ್ಳೇಗಿನಲ್ಲಿ ಸತ್ತೋದ್ರು. ಈಗ್ಲು ಅಂಥದೊಂದು ಬಂದದೆ ಒದಿರೋಗ್ಲಿ ಬುಡು.”
‘ಇದೇನು ಚಿಗಪ್ಪ ಹಿಂಗಂತಿ.”
“ಮತ್ತೆ, ಈಗಿನುಡ್ರು ಮಾತ ಕೇಳ್ತವೇನ್ಲ ಹಿರಿಯರೆಗೆ ಗೌರವಕೊಟ್ಟವೇನ್ಲ. ಅದೇನು ಧಿಮಾಕು, ಅದೇನು ಜಂಬಾ, ಅವುರನೇನಾರ ಮಾತಾಡಿಸಕ್ಕಾದತೆ, ಇಂಥ ನನಮಗನವು ಇದ್ರೆಷ್ಟು ಹೋದರೆಷ್ಟು. ಇದು ಬಂದಿದ್ದು ವಳ್ಳೆದೆ ಸುಂಕಿರು. ಜಳ್ಯಲ್ಲ ಹೋಗಿ ಗಟ್ಟಿದು ಉಳಕತ್ತದೆ” ಎಂದು ಸೀರ ನಕ್ಕ.
“ನಗತಿಯಲ್ಲೊ ಚಿಗಪ್ಪ. ವಸ ಜನ ನಿನಿಗೆ ಗೌರವ ಕೊಡಲಿಲ್ಲ ಅಂತ ಕೊರೋನ ಬಂದು ತೂರಿಕಂಡೋಗ್ಲಿ ಅಂತಿಯಲ್ಲಾ. ಲೇ ಉಗ್ರಿ ಸಾಬರ ಬೈತಿಯಲ್ಲೊ ನೋಡಿಲ್ಲೆ ಅವುನೆ ಕೊರೋನಾ ಚಿಗಪ್ಪ.”
“ಅವುಂದೇನ್ಯಲ್ಲ ಆಯ್ತಲ್ಲ ಅಯ್ಯನ ಮಿಸೇನು ನಿಂತೂಗ್ಯದೆ ಚಿಗವ್ವನೂ ಮುದುಕಿಯಾದ್ಲು ಅದ್ಕೆ ಕೊರೋನ ಬರ್ಲಿ ಅಂತ ಕಾಯ್ತ ಕುಂತವನೆ.”
“..!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...